Tomorrow Horoscope: ಸ್ಥಳ ಬದಲಾವಣೆಯ ಕಾರಣ ಅನಾರೋಗ್ಯ ಕಾಡಲಿದೆ, ಸಾಹಸ ಕಲಾವಿದರು ಉತ್ತಮ ಅವಕಾಶ ಪಡೆಯಲಿದ್ದಾರೆ, ನಾಳಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಸ್ಥಳ ಬದಲಾವಣೆಯ ಕಾರಣ ಅನಾರೋಗ್ಯ ಕಾಡಲಿದೆ, ಸಾಹಸ ಕಲಾವಿದರು ಉತ್ತಮ ಅವಕಾಶ ಪಡೆಯಲಿದ್ದಾರೆ, ನಾಳಿನ ದಿನಭವಿಷ್ಯ

Tomorrow Horoscope: ಸ್ಥಳ ಬದಲಾವಣೆಯ ಕಾರಣ ಅನಾರೋಗ್ಯ ಕಾಡಲಿದೆ, ಸಾಹಸ ಕಲಾವಿದರು ಉತ್ತಮ ಅವಕಾಶ ಪಡೆಯಲಿದ್ದಾರೆ, ನಾಳಿನ ದಿನಭವಿಷ್ಯ

19th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 19ರ ದಿನಭವಿಷ್ಯ
ಏಪ್ರಿಲ್‌ 19ರ ದಿನಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th April 2024 Horoscope).

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಶುಕ್ರವಾರ,

ತಿಥಿ: ಏಕಾದಶಿ ರಾತ್ರಿ 8.25 ರವರೆಗೂ ಇರುತ್ತದೆ. ಅನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ: ಮಖೆ ನಕ್ಷತ್ರವು ಬೆಳಿಗ್ಗೆ 11.38 ರವರೆಗೂ ಇರುತ್ತದೆ. ಅನಂತರ ಪುಬ್ಬ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.03

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 10.30 ರಿಂದ ಬೆಳಿಗ್ಗೆ 12.00

ಮೇಷ

ಸ್ಥಳ ಬದಲಾವಣೆಯ ಕಾರಣ ಅನಾರೋಗ್ಯ ಉಂಟಾಗುತ್ತದೆ. ವಿಶ್ರಾಂತಿಗಾಗಿ ಬಂಧುವೊಬ್ಬರ ಮನೆಗೆ ತೆರಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಹೊಸಬರ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ಪಾಲುದಾರಿಕೆಯ ವ್ಯಾಪಾರ ಆರಂಭಿಸುವಿರಿ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಷಭ

ಅನಾವಶ್ಯಕವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೆ ತಕ್ಕ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲಿದ್ದಾರೆ. ವಾಸಸ್ಥಳ ಬದಲಾಯಿಸುವ ಸಾಧ್ಯತೆಗಳಿವೆ. ಸರ್ಕಾರಿ ನೌಕರರಿಗೆ ಬಡ್ತಿ ದೊರೆಯುತ್ತದೆ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬೂದು ಬಣ್ಣ

ಮಿಥುನ

ನಿಧಾನಗತಿಯಲ್ಲಿ ದಿನದ ಕೆಲಸಕಾರ್ಯಗಳನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಇದ್ದರೂ ಸಂಯಮದಿಂದ ವರ್ತಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭಾಂಶ ಹೆಚ್ಚುತ್ತದೆ. ಕುಟುಂಬ ಸಮೇತ ಕಿರುಪ್ರವಾಸಕ್ಕೆ ತೆರಳುವಿರಿ. ಅವಿವಾಹಿತರಿಗೆ ವಿವಾಹಯೋಗ ಇದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

ಕಟಕ

ನೇರ ನಿಷ್ಠುರತೆಯ ಮಾತುಕತೆ ವಿರೋಧಿಗಳನ್ನು ಹೆಚ್ಚಿಸುತ್ತದೆ. ಅನಾವಶ್ಯಕ ವಾದ ವಿವಾದಗಳನ್ನು ಇಷ್ಟಪಡುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ಸಹಪಾಠಿಗಳನ್ನು ಅವಲಂಬಿಸುತ್ತಾರೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ವಂಶಕ್ಕೆ ಸಂಬಂಧಿಸಿದ ಉಪವೃತ್ತಿಯನ್ನು ಆರಂಭಿಸುವಿರಿ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಸಿಂಹ

ಕಷ್ಟವೆನಿಸಿದರೂ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ನಿಮ್ಮ ಹಠದ ನಡೆನುಡಿ ಮನೆಯಲ್ಲಿ ಅಸಹನೆಯ ವಾತಾವರಣ ಸೃಷ್ಟಿಸುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಅನುಕೂಲಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಇರುವುದಿಲ್ಲ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ.

ಪರಿಹಾರ: ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ

ಕನ್ಯಾ

ಮನಸ್ಸು ನಿಮ್ಮ ಹಿಡಿತದಲ್ಲಿ ಇರುವುದಿಲ್ಲ. ಸವಿಮಾತಿನಿಂದ ಅನ್ಯರ ಮನಸ್ಸನ್ನು ಗೆಲ್ಲಲು ಪ್ರಯತ್ನಿಸಿ. ಉದ್ಯೋಗದಲ್ಲಿ ಅಸಹಜ ವಾತಾವರಣ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆದಾಯದಲ್ಲಿ ಹೆಚ್ಚಳ ಕಾಣುತ್ತದೆ. ಜೀವನದಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸುತ್ತದೆ. ನಿಮ್ಮ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ರೂಪಿಸುವಿರಿ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ನಸುಗೆಂಪು ಬಣ್ಣ

ತುಲಾ

ಸಂಗಾತಿಯ ಸಹಾಯದಿಂದ ಸ್ವಂತ ಮನೆಯ ಕನಸು ನನಸಾಗಲಿದೆ. ಅತಿಯಾದ ಆಸೆ ಮತ್ತು ಉತ್ಸಾಹ ಸಮಸ್ಯೆಯನ್ನು ಉಂಟುಮಾಡಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ಭೂವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಸಾಲದ ವ್ಯವಹಾರ ಮಾಡದಿರಿ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ವೃಶ್ಚಿಕ

ವಂಶಾಧಾರಿತ ವ್ಯಾಪಾರವೊಂದನ್ನು ಹವ್ಯಾಸಕ್ಕಾಗಿ ಆರಂಭಿಸುವಿರಿ. ಬೇರೆಯವರು ಮಾಡುವ ಸಣ್ಣ ತಪ್ಪಿಗೂ ಸಿಡುಕುವಿರಿ. ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಅತಿಯಾದ ಊಹೆಗಳು ನಿರಾಸೆಯನ್ನು ಉಂಟು ಮಾಡಲಿದೆ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನದ ಅವಕಾಶ ಪಡೆಯುತ್ತಾರೆ. ಆರೋಗ್ಯವನ್ನು ಸ್ಥಿರವಾಗಿರಿಸಿಕೊಳ್ಳಲು ಪ್ರಯತ್ನಿಸಿ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಧನಸ್ಸು

ನೆಮ್ಮದಿಯ ಜೀವನ ನಡೆಸುವಿರಿ. ಇಲ್ಲದ ಹಣವನ್ನು ನೆಚ್ಚಿಕೊಂಡು ಅನಾವಶ್ಯಕ ಖರ್ಚು ವೆಚ್ಚಗಳನ್ನು ಮಾಡುವಿರಿ. ಆತ್ಮೀಯರೊಬ್ಬರು ಹಣಕಾಸಿನ ಸಹಾಯ ಮಾಡಲಿದ್ದಾರೆ. ದುಡುಕದೆ ತೆಗೆದುಕೊಳ್ಳುವ ನಿರ್ಧಾರವೊಂದು ಅವಘಡದಿಂದ ಪಾರು ಮಾಡುತ್ತದೆ. ಸಂಗಾತಿಯ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಕರ

ಶಾಂತಿಯಿಲ್ಲದೆ ಯೋಚನೆಗೆ ಒಳಗಾಗುವಿರಿ. ಆತುರದ ನಿರ್ಧಾರದಿಂದ ಉದ್ಯೋಗವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿನ ಜವಾಬ್ದಾರಿಯು ಹೆಚ್ಚುತ್ತದೆ. ಸಂಬಂಧಿಕರಿಂದ ದೂರ ಉಳಿಯಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ಶುಭಕಾರ್ಯದ ಏರ್ಪಾಟು ನಡೆಯಲಿದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕುಂಭ

ಹಠದ ಗುಣ ಕಡಿಮೆ ಆದಲ್ಲಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಕ್ರಮೇಣವಾಗಿ ಲಾಭ ದೊರೆಯುತ್ತದೆ. ಆತ್ಮೀಯರಿಗೆ ಹಣವನ್ನು ಸಾಲವಾಗಿ ನೀಡಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಹುದುಗಿರುವ ಪ್ರತಿಭೆಯ ಪರಿಚಯ ಎಲ್ಲರಿಗೂ ಆಗಲಿದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮೀನ

ಮನದಲ್ಲಿ ಯೋಚನೆಯೊಂದು ಮನೆಮಾಡಲಿದೆ. ಶಾಂತಿಯಿಂದ ಇದ್ದಷ್ಟೂ ಆತ್ಮೀಯರಿಂದ ಸಹಾಯ ಸಹಕಾರ ದೊರೆಯುತ್ತದೆ. ಕಷ್ಟ ನಷ್ಟವನ್ನು ಎದುರಿಸಿ ಗೆಲ್ಲುವಿರಿ. ವಿದ್ಯಾರ್ಥಿಗಳು ಕಲಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ತಪ್ಪನ್ನು ಒಪ್ಪದಿದ್ದರೂ ವಿಧಿ ಇಲ್ಲದೆ ಕ್ಷಮಿಸುವಿರಿ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.