ನೇರ ನಡೆಯಿಂದ ವಿರೋಧಿಗಳು ಹೆಚ್ಚಾಗಲಿದ್ದಾರೆ, ಮಕ್ಕಳಿಗೆ ಅನಾರೋಗ್ಯ ಕಾಡಲಿದೆ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
27th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th June 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಗುರುವಾರ
ತಿಥಿ : ಷಷ್ಠಿ ರಾತ್ರಿ 08.25 ರವರೆಗೂ ಇದ್ದು ನಂತರ ಸಪ್ತಮಿ ಆರಂಭವಾಗುತ್ತದೆ.
ನಕ್ಷತ್ರ : ಶತಭಿಷ ನಕ್ಷತ್ರವು 01.54 ರವರೆಗೆ ಇದ್ದು ನಂತರ ಪೂರ್ವಾಭಾದ್ರ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.55
ಸೂರ್ಯಾಸ್ತ: ಸಂಜೆ 06.48
ರಾಹುಕಾಲ: 02.02 ರಿಂದ 03.38
ರಾಶಿಫಲ
ಮೇಷ
ನೀವಾಗಿಯೇ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವಿರಿ. ಎಲ್ಲರಿಂದಲೂ ಹೊಗಳಿಕೆಯ ನಿರೀಕ್ಷೆಯಲ್ಲಿ ಇರುವಿರಿ. ವೇದ ವೇದಾಂತದಲ್ಲಿ ನಂಬಿಕೆ ವಿಶ್ವಾಸವಿರುತ್ತದೆ. ಕಮೀಷನ್ ಆಧಾರದಲ್ಲಿ ನಡೆಸುವ ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಸುತ್ತಮುತ್ತಲಿನ ಪ್ರದೇಶದಲ್ಲಿಯೂ ನಿಮಗೆ ವಿಶೇಷ ಸ್ಥಾನಮಾನ ದೊರೆಯುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಆಕಾಶ ನೀಲಿ
ವೃಷಭ
ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ವಯಸ್ಸಿನ ಮಿತಿ ಇಲ್ಲದೆ ಎಲ್ಲರೊಂದಿಗೆ ನಿಷ್ಠೆಯಿಂದ ವ್ಯವಹರಿಸುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ವಿದ್ಯಾಭ್ಯಾಸ ಮುಗಿಸಿದವರಿಗೆ ಉತ್ತಮ ಫಲ ದೊರೆಯುತ್ತದೆ. ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಪುಟ್ಟ ಮಕ್ಕಳಿಗೆ ಅವರ ಇಚ್ಛೆಯಾನುಸಾರ ಭೋಜನ ವ್ಯವಸ್ಥೆ ಮಾಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು
ಮಿಥುನ
ವೇದಾಂತದ ಬಗ್ಗೆ ದೀರ್ಘ ಭಾಷಣ ಮಾಡುವಿರಿ. ಕೇಳುವವರಿಗೆ ಬೇಸರ ಬರುವಷ್ಟು ಮಾತನಾಡುವಿರಿ. ಜೀವನದಲ್ಲಿ ಏರಿಳಿತಗಳು ಸಾಮಾನ್ಯವಾಗಿರುತ್ತವೆ. ಪಿತ್ತದ ತೊಂದರೆ ಇರುತ್ತದೆ. ಚಿಕ್ಕ ವಯಸ್ಸಿನಲ್ಲಿ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳುವಿರಿ. ಸ್ವಂತ ವಿದ್ಯಾಸಂಸ್ಥೆಯನ್ನು ಆರಂಭಿಸುವ ಆಸೆ ಈಡೇರುತ್ತದೆ. ದಾಂಪತ್ಯ ಜೀವನದಲ್ಲಿ ಪ್ರಮುಖ ಬದಲಾವಣೆಯೊಂದು ಕಂಡುಬರುತ್ತದೆ. ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಎಲೆ ಹಸಿರು
ಕಟಕ
ಸಣ್ಣ ಪ್ರಮಾಣದ ಕೆಲಸ ಕಾರ್ಯವಾದರೂ ಹೆಚ್ಚಿನ ಪ್ರಯತ್ನದಿಂದ ಮಾಡುವಿರಿ. ಆಡುವ ಮಾತಿನಲ್ಲಿ ನಿಮ್ಮನ್ನು ಮೀರಿಸುವವರು ಯಾರು ಇಲ್ಲ. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳುವಲ್ಲಿ ನಿಸ್ಸೀಮರು. ನಿಮ್ಮ ಮಕ್ಕಳಿಗೆ ಉತ್ತಮ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಉದ್ಯೋಗ ದೊರೆಯುತ್ತದೆ. ಸಮಾಜದಲ್ಲಿ ನಿಮ್ಮ ಗೌರವ ಕೀರ್ತಿ ಹೆಚ್ಚಿಸುತ್ತದೆ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ
ಸಿಂಹ
ಹಣಕಾಸಿನ ತೊಂದರೆ ಇರುವುದಿಲ್ಲ. ಆದರೆ ನಿಮ್ಮ ತಪ್ಪಿನಿಂದಲೇ ಹಣಕಾಸಿನ ಕೊರತೆ ಉಂಟಾಗುತ್ತದೆ. ಬುದ್ದಿವಂತಿಕೆಯಿಂದ ಮಾತನಾಡುವಿರಿ. ಧಾರ್ಮಿಕ ಕ್ರಿಯೆಗಳಲ್ಲಿ ನಂಬಿಕೆ ಇರುತ್ತದೆ. ಎಂತಹ ಸಂದರ್ಭ ಎದುರಾದರೂ ಶಾಂತಿ ಸಂಯಮದಿಂದ ವರ್ತಿಸುವಿರಿ. ಕುಟುಂಬದ ಸದಸ್ಯರ ಜೊತೆ ತೀರ್ಥಯಾತ್ರೆಗೆ ತೆರಳುವಿರಿ. ವಿರೋಧಿಗಳೊಂದಿಗೆ ಕೂಡಾ ಸ್ನೇಹ ಬೆಳಸಲು ಬಯಸುವಿರಿ.
ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ
ಕನ್ಯಾ
ಉದ್ಯೋಗದ ವಿಚಾರದಲ್ಲಿ ನಿಮಗಿರುವ ಕಾರ್ಯಶ್ರದ್ದೆಗೆ ಉತ್ತಮ ಪ್ರಶಂಸೆ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆ ಪ್ರವಾಸಕ್ಕೆ ತೆರಳುವುದೆಂದರೆ ಬಲು ಪ್ರೀತಿ. ಹಿರಿಯರ ಸೇವೆಯಲ್ಲಿ ಸಂತಸ ಕಾಣುವಿರಿ. ಆಡುವ ಮಾತು ಮತ್ತು ಮಾಡುವ ಕೆಲಸ ಒಂದೇ ಆಗಿರುತ್ತದೆ. ನಿಮಗೆ ಬಹಳ ಪರೋಪಕಾರಿ ಗುಣವಿದೆ. ವಿದ್ಯಾರ್ಥಿಗಳು ಅಂಜಿಕೆಯಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುತ್ತಾರೆ.
ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 7
ಅಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕೆಂಪು
ತುಲಾ
ಹೊಸ ವಿಚಾರಗಳನ್ನು ಕಲಿತು ಎಲ್ಲರಿಗೂ ಮಾದರಿಯಾಗುವಿರಿ. ಕಷ್ಟಪಟ್ಟು ದುಡಿಯುವವರಿಗೆ ಸಹಾಯ ಮಾಡುವಿರಿ. ಸಾಹಿತ್ಯದಲ್ಲಿ ಉತ್ತಮ ಅಭಿರುಚಿ ಮೂಡಲಿದೆ. ಶಿಕ್ಷಕ ವೃಂದಕ್ಕೆ ವಿಶೇಷವಾದ ಪ್ರಾತಿನಿಧ್ಯ ದೊರಕುತ್ತದೆ. ವಾದದಲ್ಲಿ ನಿಮ್ಮನ್ನು ಮೀರಿಸುವವರು ಯಾರು ಇರುವುದಿಲ್ಲ. ಉದ್ಯೋಗಸ್ಥರಿಗೆ ಹಿರಿಯ ಅಧಿಕಾರಿಗಳ ಕೃಪಾಕಟಾಕ್ಷವಿರುತ್ತದೆ. ಜನಸೇವೆಯನ್ನು ವೃತ್ತಿಯಾಗಿ ಸ್ವೀಕರಿಸುವುದರಲ್ಲಿ ಯಶಸ್ವಿಯಾಗುವಿರಿ.
ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ ಕಿತ್ತಳೆ ಬಣ್ಣ
ವೃಶ್ಚಿಕ
ಗುರು ಹಿರಿಯರ ಸೇವೆ ಮಾಡುವಲ್ಲಿ ಸಂತಸ ಕಾಣುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನಿಮ್ಮಲ್ಲಿಇರುವ ಪ್ರತಿಭೆಯು ಬೇರೆಯವರಿಗೆ ದಾರಿದೀಪವಾಗುತ್ತದೆ. ನೀವು ಕಾಯನಿರ್ವಹಿಸುವ ವಿಧಾನವು ಬೇರೆಯವರಿಗೆ ಸ್ಪೂರ್ತಿಯಾಗುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಅನಿರೀಕ್ಷಿತ ವರಮಾನವಿರುತ್ತದೆ. ಕಷ್ಟಗಳು ಮರೆಯಾಗಿ ಜೀವನದಲ್ಲಿ ಪ್ರಗತಿ ಕಂಡು ಬರುತ್ತದೆ.
ಪರಿಹಾರ : ಹಣೆಗೆ ತಿಲಕ ಹಚ್ಚಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಧನಸ್ಸು
ಅದು ನನಸು ಮಾಡಿಕೊಳ್ಳಲು ಪ್ರಯತ್ನವನ್ನೇ ಪಡುವುದಿಲ್ಲ. ಅಪಾಯದ ಸನ್ನಿವೇಶದಲ್ಲಿ ಬುದ್ಧಿವಂತಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಸುಲಭವಾಗಿ ವಾದ ವಿವಾದಗಳಲ್ಲಿ ಸಿಲುಕುವುದಿಲ್ಲ. ನೀವಿರುವ ಕಡೆ ಹಾಸ್ಯಕ್ಕೆ ಕೊರತೆ ಇರುವುದಿಲ್ಲ. ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ಯಾವುದೇ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಶಕ್ತಿಯ ಕೊರತೆ ಇರುತ್ತದೆ. ಪ್ರಾಣಿಗಳ ಬಗ್ಗೆ ಹೆಚ್ಚಿನ ಆಸಕ್ತಿ ತೋರುವಿರಿ. ಚಿಕ್ಕ ಮಕ್ಕಳಿಗಾಗಿ ಯಾವುದೇ ರೀತಿಯ ಸಹಾಯಕ್ಕೆ ಸಿದ್ಧರಾಗುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಸಿರು
ಮಕರ
ಸದಾ ನೆನಪಿನಲ್ಲಿ ಉಳಿಯುವಂತಹ ಕೆಲಸವೊಂದನ್ನು ಮಾಡುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ಮುಂದುವರೆಯುತ್ತಾರೆ. ಸಂಘ ಸಂಸ್ಥೆಗಳ ನಿರ್ವಹಣೆಯ ಹಕ್ಕು ನಿಮ್ಮದಾಗುತ್ತದೆ. ಯಶಸ್ಸಿನ ಬಗ್ಗೆ ಆಶಾ ಭಾವನೆ ನಿಮಗಿರುತ್ತದೆ. ಆತ್ಮೀಯರ ಕಷ್ಟ ಗಳಿಗೆ ಸೂಕ್ತ ಸಲಹೆಯನ್ನು ನೀಡುವಿರಿ. ಹಣದ ಕೊರತೆ ಇರುತ್ತದೆ. ವ್ಯವಹಾರಗಳಲ್ಲಿ ವಿಶೇಷ ಬುದ್ಧಿಯನ್ನು ತೋರುವಿರಿ.
ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ
ಕುಂಭ
ನಿಮ್ಮ ನೇರವಾದ ನಡೆ ನುಡಿಯಿಂದ ವಿರೋಧಿಗಳು ಹೆಚ್ಚುತ್ತಾರೆ. ನಿಮಗೆ ತಿಳಿಯದ ವಿಚಾರವಾದರೂ ವಾದ ವಿವಾದದಲ್ಲಿ ತೊಡಗುವಿರಿ. ಸೋಲಿನ ಸಮಯದಲ್ಲಿ ಸಿಡುಕಿನಿಂದ ವರ್ತಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಜ್ಞಾನ ವಿರುತ್ತದೆ. ಮಕ್ಕಳಿಗೆ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಗರ್ಭಿಣಿಯರು ಹೆಚ್ಚಿನ ವಿಶ್ರಾಂತಿ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಪರಸ್ಪರ ವಿಶ್ವಾಸ ಹೆಚ್ಚುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮೀನ
ಸ್ತ್ರೀಯರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ವಿದ್ಯಾರ್ಥಿಗಳು ವಿಶೇಷ ಸಾಧನೆಗೆ ಪಾತ್ರರಾಗುತ್ತಾರೆ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗ ಬದಲಿಸುವಿರಿ. ಆಮದು ರಫ್ತು ವ್ಯಾಪಾರವಿದ್ದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಪುಟ್ಟ ಮಕ್ಕಳಿಗೆ ನೀರಿನ ತೊಂದರೆ ಇರುತ್ತದೆ. ಮಕ್ಕಳ ಆಸೆ ಆಕಾಂಕ್ಷೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ.
ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 9
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಗುಲಾಬಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
