ನೇರವಾದ ನಡೆ ನುಡಿ ಸಹೋದ್ಯೋಗಿಗಳ ವಿರೋಧಕ್ಕೆ ಕಾರಣವಾಗುತ್ತದೆ, ಸ್ವಾರ್ಥದ ಜನರಿಂದ ದೂರ ಇರಿ; ನಾಳೆಯ ದಿನ ಭವಿಷ್ಯ
28th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th May 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಮಂಗಳವಾರ
ತಿಥಿ: ಪಂಚಮಿ 02.54 ರವರೆಗೂ ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.
ನಕ್ಷತ್ರ : ಉತ್ತರಾಷಾಢ ನಕ್ಷತ್ರವು ಬೆಳಗ್ಗೆ 09.29 ರವರೆಗು ಇರುತ್ತದೆ. ಆನಂತರ ಶ್ರವಣ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ05.52
ಸೂರ್ಯಾಸ್ತ: ಸಂಜೆ 06.41
ರಾಹುಕಾಲ: 03.32 ರಿಂದ 05.08
ರಾಶಿ ಫಲ
ಮೇಷ
ಸಮಾಜದಲ್ಲಿ ಗೌರವಯುತ ಸ್ಥಾನ ಲಭಿಸುತ್ತದೆ. ನಿಮ್ಮಲ್ಲಿ ಕೆಟ್ಟ ಹವ್ಯಾಸಗಳಿದ್ದರೆ ಅದನ್ನು ಮರೆತು ಬಾಳುವಿರಿ. ನೀವು ಇಷ್ಟ ಪಡುವ ಬೆಲೆ ಬಾಳುವ ವಸ್ತುವೊಂದು ಕಳೆದುಹೋಗಬಹುದು. ಕುಟುಂಬದ ವಿದ್ಯಾರ್ಥಿಗಳ ಮನದಾಳವನ್ನು ಅರಿತು ನಡೆವ ಅವಶ್ಯಕತೆ ಇದೆ. ಮಕ್ಕಳ ಬೇಡಿಕೆಗಳ ಈಡೇರಿಸಲು ಹೆಚ್ಚಿನ ಹಣ ವೆಚ್ಚವಾಗಲಿದೆ. ಸಂಗಾತಿಗೆ ನಿಮ್ಮ ಬಗ್ಗೆ ಬೇಸರ ಉಂಟಾಗುತ್ತದೆ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರ ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು
ವೃಷಭ
ಸಂಗಾತಿಯ ಜೊತೆ ಇದ್ದ ವಿರಸ ಮರೆಯಾಗುತ್ತದೆ. ಉದ್ಯೋಗದಲ್ಲಿ ವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಕುಟುಂಬದಲ್ಲಿನ ಹಿರಿಯರಿಗೆ ವಿಶ್ರಾಂತಿಯ ಅವಶ್ಯಕತೆ ಇದೆ. ಉತ್ತಮ ಆದಾಯದಿಂದ ನಿಮ್ಮ ಸಮಸ್ಯೆಗಳು ದೂರವಾಗಲಿವೆ. ಕುಟುಂಬದಲ್ಲಿನ ಮಕ್ಕಳ ಅನಾರೋಗ್ಯ ಚಿಂತೆಗೆ ಕಾರಣವಾಗುತ್ತದೆ. ಆತ್ಮೀಯರ ಬುದ್ಧಿವಾದ ಹೊಸ ಚೈತನ್ಯ ಉಂಟುಮಾಡುತ್ತದೆ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ
ಮಿಥುನ
ನಕಾರಾತ್ಮಕ ಭಾವನೆಗಳಿಂದ ದೂರ ಉಳಿಯಲು ಪ್ರಯತ್ನಿಸಿ. ಉಳಿತಾಯ ಮಾಡಿದ ಹಣ ಸದ್ವಿನಿಯೋಗವಾಗುತ್ತದೆ. ಮನಸ್ಸಿನಲ್ಲಿ ಬೇಸರ ಉಂಟಾಗಲಿದೆ. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಭಾಗವಹಿಸುವಿರಿ. ಹಾಸ್ಯದ ಮನೋಭಾವನೆಯಿಂದ ಜನಮನ ಗೆಲ್ಲುವಿರಿ. ಸಂಗಾತಿಯ ಪ್ರೀತಿ ವಿಶ್ವಾಸ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನೇರವಾದ ನಡೆ ನುಡಿ ಸಹೋದ್ಯೋಗಿಗಳ ವಿರೋಧಕ್ಕೆ ಕಾರಣವಾಗುತ್ತದೆ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೇರಳೆ
ಕಟಕ
ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ತುಂಬಿರುತ್ತದೆ. ನಿಮ್ಮಲ್ಲಿನ ಆಕರ್ಷಕ ಭಾಷಾ ಪ್ರಾವಿಣ್ಯತೆ ಎಲ್ಲರ ಗಮನ ಸೆಳೆಯುತ್ತದೆ. ಆರ್ಥಿಕಸ್ಥಿತಿಯಲ್ಲಿ ಪ್ಲ್ರಗತಿ ಕಂಡುಬರುತ್ತದೆ. ಆತ್ಮೀಯರಿಗೆ ನೀಡಿದ ಹಣವನ್ನು ಮರಳಿ ಪಡೆಯುತ್ತೀರಿ.ಕುಟುಂಬದಲ್ಲಿನ ಬದಲಾವಣೆಗಳು ನಿಮ್ಮಲ್ಲಿ ಅತೃಪ್ತಿ ಉಂಟು ಮಾಡುತ್ತದೆ. ಸಂಗಾತಿಯ ಮನದ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಿರಿ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ
ಸಿಂಹ
ಕೆಲಸದ ಕಾರಣ ಮನೆಯ ಸದಸ್ಯರಿಂದ ದೂರವಿರಬೇಕಾಗುತ್ತದೆ. ಹಿರಿಯರ ಸಲಹೆಯಂತೆ ಉದ್ಯೋಗ ಬದಲಿಸುವಿರಿ. ಸೋಲಿನ ವೇಳೆ ಕೋಪದಿಂದ ವರ್ತಿಸುವಿರಿ. ಅವಿವಾಹಿತರಿಗೆ ವಿವಾಹ ಕೂಡಿಬರುತ್ತದೆ. ಅನಿರೀಕ್ಷಿತ ಲಾಭ ಹೊಸ ಆಶಾಭಾವನೆ ಮೂಡಿಸುತ್ತದೆ. ಆದಾಯಕ್ಕೆ ಸಮನಾದ ಖರ್ಚು ವೆಚ್ಚಗಳು ಇರಲಿವೆ. ಸಂಗಾತಿಯ ಜೊತೆ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಶಾಂತಿ ಸಹನೆಯಿಂದ ವರ್ತಿಸಿ.
ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಬಿಳಿ
ಕನ್ಯಾ
ಅನಿರೀಕ್ಷಿತವಾಗಿ ಉದ್ಯೋಗದ ಸಲುವಾಗಿ ದೂರದ ಸ್ಥಳಕ್ಕೆ ತೆರಳುವಿರಿ. ಪ್ರೀತಿ ವಿಶ್ವಾಸದಿಂದ ಸಹೋದ್ಯೋಗಿಗಳ ಮನಸ್ಸನ್ನು ಗೆಲ್ಲುವಿರಿ. ಜೀವನವನ್ನು ಹಗುರವಾಗಿ ಸ್ವೀಕರಿಸುವಿರಿ. ಚಾಡಿ ಮಾತುಗಳನ್ನು ನಂಬದಿರಿ. ಪ್ರೀತಿಪಾತ್ರರ ಬಗ್ಗೆ ತಪ್ಪು ನಿರ್ಧಾರವನ್ನು ಕೈಗೊಳ್ಳುವಿರಿ. ಹಣಕಾಸಿನ ವ್ಯವಹಾರದ ವಿಚಾರದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಮಕ್ಕಳ ಸಾಧನೆಗಳಿಂದ ಎಲ್ಲರ ಗಮನ ಸೆಳೆಯುತ್ತಾರೆ.
ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು ಈಶಾನ್ಯ
ಅದೃಷ್ಟದ ಬಣ್ಣ : ಬೂದು ಬಣ್ಣ
ತುಲಾ
ಸುಲಭವಾಗಿ ಬೇರೆಯವರ ಪ್ರಭಾವಕ್ಕೆ ಒಳಗಾಗುವಿರಿ. ಕಷ್ಟ ಪಟ್ಟು ದುಡಿದ ಹಣವನ್ನು ಮಕ್ಕಳ ಅಭಿವೃದ್ಧಿಗೆ ಖರ್ಚು ಮಾಡುವಿರಿ. ನಿಮ್ಮದೇ ಆದ ತಪ್ಪಿನಿಂದಾಗಿ ಸ್ವಂತ ಹಿತಾಸಕ್ತಿಯನ್ನು ಮರೆ ಮಾಚುವಿರಿ. ಮಕ್ಕಳ ಅನುಕೂಲಕ್ಕಾಗಿ ವಿವಿಧ ಯೋಜನೆಯಲ್ಲಿ ಹಣವನ್ನು ವಿನಿಯೋಗಿಸುವಿರಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿದರೆ ಯಶಸ್ಸು ದೊರೆಯುತ್ತದೆ.
ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಂದು
ವೃಶ್ಚಿಕ
ಸಂಬಂಧಿಕರ ಸಹಕಾರದಿಂದ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ಕುಟುಂಬದ ಆರ್ಥಿಕ ಸ್ಥಿತಿಯು ಉತ್ತಮಗೊಳ್ಳಲಿದೆ. ಲಾಭವಿಲ್ಲದ ಕೆಲಸವನ್ನು ಮಾಡಲಿಚ್ಚಿಸುವುದಿಲ್ಲ. ಸ್ನೇಹಿತರ ಸಹಾಯದಿಂದ ಉದ್ಯೋಗ ಬದಲಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಸಹವರ್ತಿಗಳ ಸಹಾಯ ದೊರೆಯುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸುವಿರಿ.
ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು
ಧನಸ್ಸು
ಹಣಕಾಸಿನ ಯೋಜನೆಯಲ್ಲಿ ಹಣ ವಿನಿಯೋಗಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವಿರಿ. ಮಕ್ಕಳ ಜೊತೆಯಲ್ಲಿ ಹೆಚ್ಚಿನ ವೇಳೆ ಕಳೆಯುವಿರಿ. ತಾಯಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಸಂಗಾತಿಯ ಸಹಾಯದಿಂದ ಹೊಸ ವಾಹನ ಕೊಳ್ಳುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ತಿಳಿ ಹಸಿರು
ಮಕರ
ಲಾಭವಿಲ್ಲದ ಕೆಲಸವನ್ನು ಮಾಡುವುದಿಲ್ಲ. ನೀವು ಅಂದುಕೊಂಡಂತೆ ಮಕ್ಕಳ ಜೀವನವನ್ನು ರೂಪಿಸುವಿರಿ. ಅತಿಯಾದ ವಾದ ವಿವಾದಗಳ ಕಾರಣ ಶಾಂತಿ ಕಳೆದುಕೊಳ್ಳುವಿರಿ. ದುಡುಕಿ ಮಾತನಾಡುವ ಮೊದಲು ಯೋಚಿಸಿ. ಸಂಗಾತಿಯೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸಿ. ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮ ಪ್ರಗತಿ ಉಂಟಾಗುತ್ತದೆ.. ಕುಟುಂಬದ ಕಿರಿಯ ಸದಸ್ಯರೊಂದಿಗೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನಸು ಗೆಂಪು
ಕುಂಭ
ಆತಂಕದ ಪರಿಸ್ಥಿತಿಯಲ್ಲಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ಕುಟುಂಬದವರ ಸಲಹೆಯನ್ನು ಪಾಲಿಸಿದಲ್ಲಿ ತೊಂದರೆಯಿಂದ ಪಾರಾಗುವಿರಿ. ನಿಮ್ಮ ಮಕ್ಕಳ ಗುರುತರ ಸಾಧನೆ ಸಂತೋಷಕ್ಕೆ ಕಾರಣವಾಗುತ್ತದೆ. ನಿಮ್ಮ ನಿರೀಕ್ಷೆಯಂತೆ ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ನಿಮ್ಮ ಹೆಸರನ್ನು ತಮ್ಮ ಸ್ವಾರ್ಥಕ್ಕೆ ಬಳಸುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಸಾಲದ ವ್ಯವಹಾರದಲ್ಲಿ ಜಾಗರೂಕರಾಗಿರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಮೀನ
ಆತ್ಮೀಯರು ನಿಮ್ಮೊಂದಿಗೆ ಪಾಲುದಾರಿಕೆಯ ವ್ಯಾಪಾರ ಆರಂಭಿಸುತ್ತಾರೆ. ಮನಸ್ಸಿನ ಶಾಂತಿ ಒಳ್ಳೆಯ ಕೆಲಸಗಳನ್ನು ಮಾಡಲು ನಿಮ್ಮನ್ನು ಪ್ರೇರೇಪಿಸುತ್ತದೆ. ರಾತ್ರಿಯ ಪ್ರಯಾಣ ಮಾಡುವುದರಿಂದ ದೂರವಿರಿ. ಏಕಾಂಗಿಯಾಗಿ ಇರುವವರು ಕುಟುಂಬದವರೊಡನೆ ಬಾಳಲು ಇಚ್ಚಿಸುತ್ತಾರೆ. ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಅವಕಾಶ ದೊರೆಯುತ್ತದೆ. ಕುಟುಂಬದ ಹಿರಿಯರ ಸಹಾಯ ದೊರೆಯುತ್ತದೆ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 9
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ನಸು ಗೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
