ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕೋಪಕ್ಕೆ ಕಡಿವಾಣ ಹಾಕಿ ಸಹನೆಯಿಂದ ವರ್ತಿಸಿದರೆ ಎಲ್ಲಾ ಕೆಲಸದಲ್ಲೂ ಯಶಸ್ಸು; ನಾಳೆಯ ದಿನ ಭವಿಷ್ಯ

Tomorrow Horoscope: ಕೋಪಕ್ಕೆ ಕಡಿವಾಣ ಹಾಕಿ ಸಹನೆಯಿಂದ ವರ್ತಿಸಿದರೆ ಎಲ್ಲಾ ಕೆಲಸದಲ್ಲೂ ಯಶಸ್ಸು; ನಾಳೆಯ ದಿನ ಭವಿಷ್ಯ

2nd May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd May 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಗುರುವಾರ

ತಿಥಿ: ನವಮಿ ರಾತ್ರಿ 10.35 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಧನಿಷ್ಠ ನಕ್ಷತ್ರವು ರಾತ್ರಿ 10.55 ರವರೆಗೂ ಇದ್ದು ನಂತರ ಶತಭಿಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.34

ರಾಹುಕಾಲ: 01.54 ರಿಂದ 03.28

ರಾಶಿಫಲ

ಮೇಷ

ವಿದ್ಯಾರ್ಥಿಗಳಿಗೆ ಜವಾಬ್ದಾರಿ ಕಡಿಮೆ ಆದರೂ ಒತ್ತಡ ಇರುತ್ತದೆ. ಆತ್ಮೀಯರ ಸಹಾಯದಿಂದ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಾಗುತ್ತದೆ. ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮುನ್ನ ಎಲ್ಲರೊಂದಿಗೆ ಚರ್ಚಿಸುವಿರಿ. ತಂದೆಯಿಂದ ನಿಮಗೆ ಹಣದ ಸಹಾಯ ದೊರಲಿದೆ. ಸ್ಟಾಕ್ ಮತ್ತು ಷೇರಿನಲ್ಲಿನ ಹಣದ ಹೂಡಿಕೆ ಉತ್ತಮ ಆದಾಯವನ್ನು ನೀಡುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ

ವೃಷಭ

ಕುಟುಂಬದ ಅಸ್ತಿಯನ್ನುಸಮಾನವಾಗಿ ಹಂಚುವ ಕಾರ್ಯ ನಡೆಯುತ್ತದೆ. ಮಕ್ಕಳಿಗೆ ಎಲ್ಲಾ ಕೆಲಸದಲ್ಲೂ ಉತ್ತೇಜನ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಅನ್ಯೋನ್ಯತೆ ಉಂಟಾಗಲಿದೆ. ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಬಂಡವಾಳದ ಅವಶ್ಯಕತೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಎಲ್ಲರ ಮನ ಗೆಲ್ಲುತ್ತಾರೆ. ಒಂಟಿ ಎಂಬ ಭಾವನೆ ಮನದಲ್ಲಿ ಮೂಡುತ್ತದೆ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಗುಲಾಬಿ

ಮಿಥುನ

ಅನುಕರಣೀಯ ಮನೋಭಾವನೆಯಿಂದ ಎಲ್ಲರ ಮನ ಗೆಲ್ಲುವಿರಿ. ವ್ಯಾಪಾರ ವ್ಯವಹಾರವು ಸರಾಗವಾಗಿ ಮುಂದುವರೆಯುತ್ತದೆ. ಕುಟುಂಬದ ಸದಸ್ಯರಿಂದ ಹಣದ ಸಹಾಯ ದೊರೆಯುತ್ತದೆ. ಕಾನೂನು ಪ್ರಕರಣದಲ್ಲಿ ಜಯ ಲಭಿಸುತ್ತದೆ. ನೀವು ಪ್ರೀತಿಪಾತ್ರರ ಜೊತೆ ವಿವಾಹವಾಗುವ ಸೂಚನೆಗಳಿವೆ. ಯಾವುದೆ ತೊಂದರೆ ಇರದು ಆದರೂ ಎಚ್ಚರಿಕೆ ಇರಲಿ. ಜೀವನದ ಪ್ರಮುಖ ವಿಷಯದ ಬಗ್ಗೆ ಕುಟುಂಬದಲ್ಲಿ ಚರ್ಚಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ಕಟಕ

ದಿನ ನಿತ್ಯದ ಖರ್ಚು ವೆಚ್ಚಗಳು ಕಡಿಮೆ ಆಗಲಿದೆ. ಬಂದು ಬಳಗದವರಿಂದ ಪಡೆದ ಸಾಲದ ಹಣವನ್ನು ಮರುಪಾವತಿ ಮಾಡುವಿರಿ. ಭೂವಿವಾದದಲ್ಲಿ ಕಾನೂನು ರೀತ್ಯಾ ಜಯವಿದೆ. ವಿವಾದಾತ್ಮಕ ವಿಷಯಗಳಿಂದ ದೂರ ಉಳಿಯುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಲಭಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿನ ಆದಾಯ ಹೆಚ್ಚುತ್ತದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸಿಕೊಳ್ಳಲಿದ್ದಾರೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು

ಸಿಂಹ

ವ್ಯಾಪಾರ ವ್ಯವಹಾರದಲ್ಲಿ ಹಣಕಾಸಿನ ತೊಂದರೆ ಕಾಣದು. ವಿದ್ಯಾರ್ಥಿಗಳು ಬದಲಾದ ಸನ್ನಿವೇಶದ ಲಾಭವನ್ನು ಪಡೆಯುವರು. ಸೋದರ ಮಾವನಿಂದ ಆರ್ಥಿಕ ಬೆಂಬಲ ದೊರೆಯುತ್ತದೆ. ವ್ಯಾಪಾರದ ವಿಚಾರವಾಗಿ ಅವಸರದ ತೀರ್ಮಾನ ಕೈಗೊಳ್ಳುವಿರಿ. ಹಿರಿಯರ ಸಹಾನುಭೂತಿ ದೊರೆಯುತ್ತದೆ. ಆತ್ಮೀಯರ ತಿಳುವಳಿಕೆಯ ಲಾಭ ಪಡೆಯುವಿರಿ.  

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ. 

ಅದೃಷ್ಟದ ಸಂಖ್ಯೆ 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ಕಂದು

ಕನ್ಯಾ

ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸದಿರಿ. ಬ್ಯಾಂಕ್ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಸ್ನೇಹಿತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಸಕ್ತಿ ವಹಿಸುವಿರಿ. ವಿದ್ಯಾರ್ಥಿಗಳಿಗೆ ಯಾವ ವಿಚಾರವೂ ಅಸಾಧ್ಯವಲ್ಲ. ಸಂಗಾತಿಯ ಜೊತೆ ಹಣಕಾಸಿನ ವಿಚಾರದಲ್ಲಿ ಅಸಮಾಧಾನ ಉಂಟಾಗುತ್ತದೆ. ವ್ಯಾಪಾರಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕಪ್ಪು

ತುಲಾ

ತಾಯಿಯ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ವಿದ್ಯಾರ್ಥಿಗಳು ಅಭ್ಯಾಸದ ಒತ್ತಡವನ್ನು ಮರೆತು ಕ್ರೀಡೆ ಮನರಂಜನೆಯಲ್ಲಿ ಪಾಲ್ಗೊಳ್ಳುತ್ತಾರೆ. ಕಷ್ಟ ನಷ್ಟಗಳಿಗೆ ಹೆದರದ ಮನಸ್ಥಿತಿ ಇರುತ್ತದೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ವ್ಯವಸಾಯ ಮತ್ತು ಪಶು ಸಂಗೋಪನೆಯಲ್ಲಿ ಆಸಕ್ತಿ ಮೂಡಲಿದೆ. ಮನೆಮಂದಿಯೊಡನೆ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಶ್ಚಿಕ

ವಿದ್ಯಾರ್ಥಿಗಳು ಹೆತ್ತವರ ನಿರೀಕ್ಷೆಯಂತೆ ಉನ್ನತ ಮಟ್ಟ ತಲುಪಲ್ಲಿದ್ದಾರೆ. ಬೇಸರ ಕಳೆಯಲು ದೂರದ ಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವಿರಿ. ಸಾಮಾಜಿಕ ಸಮಾರಂಭಗಳಲ್ಲಿ ಮುಂದಾಳತ್ವ ವಹಿಸುವಿರಿ. ಪ್ರಭಾವಿ ಜನರ ಸ್ನೇಹ ಲಭಿಸುತ್ತದೆ. ನಿಮಗೆ ಇಷ್ಟವೆನಿಸುವ ಚಿನ್ನ ಬೆಳ್ಳಿಯ ವಸ್ತುಗಳಿಗಾಗಿ ಹಣ ವಿನಿಯೋಗಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಧನಸ್ಸು

ದಾಂಪತ್ಯದಲ್ಲಿ ವಾದ ವಿವಾದ ಎದುರಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ದುಡುಕದೆ ಆಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳಿರಿ. ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವಿರಿ. ತಂದೆಯವರ ಸಹಾಯ ದೊರೆಯುತ್ತದೆ. ದೂರದ ಸಂಬಂಧದಲ್ಲಿ ನಿಮ್ಮ ವಿವಾಹ ಆಗಲಿದೆ. ಮಾನಸಿಕವಾಗಿ ಸದೃಢಗೊಳ್ಳಲು ಧ್ಯಾನ ಯೋಗದ ಮಾರ್ಗ ಅನುಸರಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಕರ

ದೃಢವಾದ ನಿರ್ಧಾರದಿಂದ ವಾಸಸ್ಥಳವನ್ನು ಬದಲಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ವರಮಾನ ದೊರೆಯುತ್ತದೆ. ಹಣಕಾಸಿನ ಯೋಜನೆಗಳಲ್ಲಿ ಹಣವನ್ನು ಹೂಡುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ. ಪ್ರೀತಿಪಾತ್ರರ ಜೊತೆ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ನೇರವಾದ ನಡೆ ನುಡಿ ಬಂಧುವರ್ಗದಲ್ಲಿ ಕಿರಿಕಿರಿ ಉಂಟುಮಾಡುತ್ತದೆ. .

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ಕುಂಭ

ಹೊಸ ಉದ್ಯೋಗದ ಅವಕಾಶ ದೊರೆಯಲಿದೆ. ಕೆಲಸದ ನಡುವೆ ಆರೋಗ್ಯದ ಬಗ್ಗೆ ಗಮನ ನೀಡಲು ಸಾಧ್ಯವಾಗದು. ಅನಾವಶ್ಯಕ ಖರ್ಚು ವೆಚ್ಚದ ಕಾರಣ ಹಣದ ಕೊರತೆ ಎದುರಾಗುತ್ತದೆ. ವಿದ್ಯಾರ್ಥಿಗಳು ಮೌನದಿಂದ ಕೆಲಸ ಸಾಧಿಸುತ್ತಾರೆ. ವಂಶಾನುಗತವಾಗಿ ಬಂದ ಆಸ್ತಿಯ ಪ್ರಕರಣದಲ್ಲಿ ಜಯ ಲಭಿಸುತ್ತದೆ. ಅಕಸ್ಮಿಕವಾಗಿ ದೊರೆಯುವ ಹಣ, ಸಂತಸಕ್ಕೆ ಕಾರಣವಾಗಲಿದೆ. ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಉದ್ಯೋಗದಲ್ಲಿ ನಿರತರಾಗುತ್ತಾರೆ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮೀನ

ವಿದ್ಯಾರ್ಥಿಗಳ ಮನದಾಸೆಗಳು ಪೂರೈಸಲ್ಪಡುತ್ತವೆ. ಹಿರಿಯರ ಪ್ರಯತ್ನದ ಫಲವಾಗಿ ಕುಟುಂಬದ ನೆಮ್ಮದಿ ಮರು ಕಳಿಸುತ್ತದೆ. ಸಂಗಾತಿಯ ಜೊತೆ ಸಂತೋಷದ ಜೀವನ ಇರುತ್ತದೆ. ಕೋಪಕ್ಕೆ ಕಡಿವಾಣ ಹಾಕಿ. ಸಹನೆಯಿಂದ ವರ್ತಿಸಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಹೊಸ ಆಭರಣಗಳನ್ನು ಕೊಳ್ಳುವಿರಿ. ಬೇಸರ ಕಳೆಯಲು ಮನರಂಜನಾ ಸ್ಥಳಕ್ಕೆ ಪ್ರವಾಸ ಏರ್ಪಡಿಸುವಿರಿ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ..

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).