Tomorrow Horoscope: ಸೋದರಿಯ ಮದುವೆ ನಿಶ್ಚಯ, ಕೌಟುಂಬಿಕ ಜೀವನದಲ್ಲಿ ಹೊಸ ತಿರುವು; ನಾಳೆಯ ದಿನ ಭವಿಷ್ಯ
31st March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (31st March 2024 Horoscope).
ನಾಳೆಯ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯನ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಭಾನುವಾರ
ತಿಥಿ : ಷಷ್ಠಿ ಸಂಜೆ 05.04 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗಲಿದೆ.
ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.55 ರವರೆಗೂ ಇರುತ್ತದೆ. ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 06.17
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: ಸಂಜೆ 04.30 ರಿಂದ 06.00
ರಾಶಿಫಲ
ಮೇಷ
ಉದ್ಯೋಗದಲ್ಲಿ ಕೆಲಸದ ಒತ್ತಡ ಇರಲಿದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಮುಂದುವರೆಯುತ್ತಾರೆ. ಕ್ರಿಯಾಶೀಲ ವ್ಯಕ್ತಿತ್ವ ಸಾಮಾಜಿಕ ಬದ್ಧತೆಯನ್ನು ಹೆಚ್ಚಿಸುತ್ತದೆ. ಷೇರಿನ ಮೂಲಕ ಹಣವನ್ನು ಉಳಿಸಲು ಯಶಸ್ವಿಯಾಗುವಿರಿ. ಸೋದರಿಯ ದಾಂಪತ್ಯದ ವಿವಾದ ಬಗೆಹರಿಯುತ್ತದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಬಯಸದೇ ಹೋದರೂ ಉಡುಗೊರೆಗಳು ದೊರೆಯುತ್ತವೆ.
ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಧರಿಸುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ವೃಷಭ
ವ್ಯಾಪಾರ ವ್ಯವಹಾರದಲ್ಲಿನ ನಿರ್ಧಾರ ಬದಲಾಯಿಸದಿರಿ. ಉದ್ಯೋಗದಲ್ಲಿ ಅನಾವಶ್ಯಕ ಒತ್ತಡ ಉಂಟಾಗಲಿದೆ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ಪ್ರೀತಿ ವಿಶ್ವಾಸದಿಂದ ಇರುವಿರಿ. ಅನಿರೀಕ್ಷಿತ ಆದಾಯ ಆತ್ಮವಿಶ್ವಾಸ ಮೂಡಿಸುತ್ತದೆ. ಆಸಕ್ತಿಯಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ಕೌಟುಂಬಿಕ ಜೀವನದಲ್ಲಿ ಹೊಸ ತಿರುವು ಉಂಟಾಗಲಿದೆ. ಸೋದರಿಯ ಮದುವೆ ನಿಶ್ಚಯವಾಗಲಿದೆ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು ಪೂರ್ವ
ಅದೃಷ್ಟದ ಬಣ್ಣ : ಹಳದಿ ಬಣ್ಣ
ಮಿಥುನ
ಉದ್ಯೋಗದ ಸಂಪೂರ್ಣ ಜವಾಬ್ದಾರಿ ದೊರೆತು ಮಾನಸಿಕ ತೃಪ್ತಿ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಸದ್ಗುಣ ಬೆಳೆಸಿಕೊಳ್ಳುತ್ತಾರೆ. ದಾನ, ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವ ಕಾರಣ ನೆಮ್ಮದಿ ಇರುತ್ತದೆ. ದುಂದು ವೆಚ್ಚದಿಂದ ಹಣದ ಕೊರತೆ ಉಂಟಾಗುತ್ತದೆ. ಆರ್ಥಿಕ ಸಹಾಯದಿಂದ ಸಂಬಂಧಿಕರ ಮನಸ್ಸನ್ನು ಗೆಲ್ಲುವಿರಿ. ನಿಮ್ಮಲ್ಲಿನ ಪ್ರತಿಭೆಯನ್ನು ಪರಿಣಾಮಕಾರಿಯಾಗಿ ಬಳಸಲು ಪ್ರಯತ್ನಿಸಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಸಿರುಬಣ್ಣ
ಕಟಕ
ಉದ್ಯೋಗದಲ್ಲಿನ ಅನುಕೂಲತೆಗಳು ನೆಮ್ಮದಿಯ ಸನ್ನಿವೇಶವನ್ನು ಸೃಷ್ಠಿಸುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ತೆಗೆದುಕೊಳ್ಳುವ ತೀರ್ಮಾನ ಯಶಸ್ಸು ನೀಡುತ್ತದೆ. ಎಲ್ಲರಿಗೂ ಜೀವನದ ಮೌಲ್ಯವನ್ನುಅರ್ಥ ಮಾಡಿಸಲು ಕಾರ್ಯಕ್ರಮವೊಂದನ್ನು ಆಯೋಜಿಸುವಿರಿ. ಸಾಮಾನ್ಯ ಜನರ ಆಶೋತ್ತರಗಳನ್ನು ಈಡೇರಿಸಲು ರಾಜಕೀಯವನ್ನು ಆಶ್ರಯಿಸುವಿರಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಸಿಂಹ
ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿನ ಹಠಾತ್ ಬದಲಾವಣೆಗಳಿಗೆ ಹೊಂದಿಕೊಳ್ಳುವಿರಿ. ಅಧಿಕಾರ ದೊರೆತಾಗ ಮನದಲ್ಲಿ ಹೊಸ ಚೈತನ್ಯ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಒತ್ತಡ ಅಧಿಕವಾಗಿರುತ್ತದೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ಸಾಲ ತೆಗೆದುಕೊಳ್ಳಬೇಕಾಗುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ದೀರ್ಘಕಾಲದ ಒಡಂಬಡಿಕೆ ಉಂಟಾಗುತ್ತದೆ.
ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು ಪಶ್ಚಿಮ
ಅದೃಷ್ಟದ ಬಣ್ಣ : ನೇರಳೆ ಬಣ್ಣ
ಕನ್ಯಾ
ಉದ್ಯೋಗದಲ್ಲಿ ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಬಹುದು, ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳ ಸಮಸ್ಯೆಗಳು ಸಹಪಾಠಿಗಳ ಸಹಾಯದಿಂದ ಪರಿಹಾರವಾಗುತ್ತದೆ. ಹಣಕಾಸಿನ ಬಗ್ಗೆ ಕುಟುಂಬದ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಆರೋಗ್ಯದ ವಿಚಾರವನ್ನು ಕಡೆಗಣಿಸುವ ಗುಣ ಒಳ್ಳೆಯದಲ್ಲ.
ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು ಉತ್ತರ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ತುಲಾ
ಶಾಂತಮನಸ್ಕರಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುವಿರಿ. ವ್ಯಾಪಾರ ವಹಿವಾಟಿನಲ್ಲಿ ನಷ್ಟ ತಡೆಗಟ್ಟುವಲ್ಲಿ ಯಶಸ್ವಿಯಾಗುವಿರಿ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಗುರಿ ತಲುಪಲಿದ್ದಾರೆ. ಮಕ್ಕಳ ಮನದಲ್ಲಿನ ಆಸೆಗಳನ್ನು ಪೂರೈಸುವಿರಿ. ಪ್ರೀತಿಪಾತ್ರರೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಧೀರ್ಘಕಾಲದಿಂದ ಉಳಿದಿರುವ ಪ್ರಮುಖ ಯೋಜನೆ ಕಾರ್ಯಗತವಾಗುತ್ತದೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ವೃಶ್ಚಿಕ
ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಲಹೆಯಂತೆ ನಡೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರದಲ್ಲಿ ಹಣದ ಕೊರತೆ ಕಾಣದು. ದಿನ ಕಳೆದಂತೆ ಕುಟುಂಬದ ಸದಸ್ಯರು ಪ್ರೀತಿಯಿಂದ ವರ್ತಿಸುತ್ತಾರೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ದೂರವಾಗಬೇಕು. ಸಂಗಾತಿಯ ಜೊತೆ ಹಣದ ವಿಚಾರವಾಗಿ ವಿವಾದ ಉಂಟಾಗುತ್ತದೆ. ಸಾಲದ ವಿಚಾರದಲ್ಲಿ ಜಾಗರೂಕತೆಯಿಂದ ವರ್ತಿಸಿ. ಮಕ್ಕಳ ವಿಚಾರವಾಗಿ ಅನಾವಶ್ಯಕ ಚಿಂತೆ ಮಾಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದು ಬಣ್ಣ
ಧನಸ್ಸು
ಉದ್ಯಮಿಗಳಿಗೆ ತೊಂದರೆಗಳು ಎದುರಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳದಿರಿ. ವಿದ್ಯಾರ್ಥಿಗಳು ತಪ್ಪಿಲ್ಲದೇ ಹೋದರು ಸಂದಿಗ್ದತೆಗೆ ಸಿಲುಕುವರು. ದಿನನಿತ್ಯದ ಜೀವನಕ್ಕೆ ಹೆಚ್ಚಿನ ಹಣದ ಅಗತ್ಯವಿರುತ್ತದೆ. ಅನಗತ್ಯ ಖರ್ಚುಗಳ ಕಾರಣ ಸಹನೆ ಕಳೆದುಕೊಳ್ಳುವಿರಿ. ಪರಿಸರವನ್ನು ಬದಲಿಸಲು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ
ಮಕರ
ವ್ಯಾಪಾರ ವ್ಯವಹಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಸಂಬಂಧಿಕರ ಭೇಟಿ ಹೊಸ ಬದಲಾವಣೆಗೆ ಕಾರಣವಾಗುತ್ತದೆ. ಮಕ್ಕಳ ಜೊತೆ ಪ್ರೀತಿ ಸಂತೋಷದಿಂದ ಬಾಳುವಿರಿ. ಜನರಿಂದ ದೂರವಿರಲು ಪ್ರಯತ್ನಿಸುವಿರಿ. ತಪ್ಪು ನಿರ್ಧಾರದ ಕಾರಣ ತೊಂದರೆಗೊಳಗಾಗಬಹುದು. ಸಂಗಾತಿಗೆ ಇಷ್ಟವಾದ ಉಡುಗೊರೆ ನೀಡಿ ದಿನದ ಕೆಲಸ ಆರಂಭಿಸಿರಿ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಕುಂಭ
ಉದ್ಯೋಗದಲ್ಲಿ ಯಾವುದೇ ಪ್ರಗತಿ ಇರುವುದಿಲ್ಲ. ಮಕ್ಕಳ ಅಧ್ಯಯನದ ಮೇಲೆ ಹೆಚ್ಚು ಗಮನ ನೀಡುವಿರಿ. ವ್ಯಾಪಾರ ವ್ಯವಹಾರದಲ್ಲಿ ನಷ್ಟವಿರದು. ವಿದ್ಯಾರ್ಥಿಗಳಿಗೆ ಉಡುಗೊರೆಗಳ ಮಹಾಪೂರವೇ ದೊರೆಯಲಿದೆ. ತಪ್ಪನ್ನು ಒಪ್ಪಿ ಸರಿದಾರಿಗೆ ಮರಳುವಿರಿ. ಅರ್ಥಪೂರ್ಣ ಮಾತಿನ ಮೂಲಕ ಎಲ್ಲರ ಗಮನ ಸೆಳೆಯುವಿರಿ. ವಿಚಾರಗೋಷ್ಠಿಗಳಲ್ಲಿ ಭಾಗವಹಿಸುವಿರಿ. ಸಮಾಜಸೇವೆಗೆ ಮನಸ್ಸು ಹಾತೊರೆಯುತ್ತದೆ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮೀನ
ವ್ಯಾಪಾರ ವಹಿವಾಟಿನಲ್ಲಿ ಹೂಡಿದ ಬಂಡವಾಳಕ್ಕೆ ಮೋಸ ಆಗದು. ಆದಾಯಕ್ಕೆ ತಕ್ಕ ಖರ್ಚು ವೆಚ್ಚಗಳು ಇರಲಿವೆ. ಆರೋಗ್ಯದಲ್ಲಿ ತೊಂದರೆ ಕಾಣದು. ಆತ್ಮವಿಶ್ವಾಸದ ಕೊರತೆ ಕಾಡುತ್ತದೆ. ದೈಹಿಕ ಸಬಲತೆ ಕಡಿಮೆ. ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ತಮ್ಮ ಕಾರ್ಯ ಸಾಧಿಸುವರು. ಕೋಪವನ್ನು ನಿಯಂತ್ರಿಸಿ. ನಿಮಗೆ ಅಸಾಧ್ಯವಾದುದು ಯಾವುದೂ ಇಲ್ಲ. ಪ್ರೀತಿ ಮತ್ತು ಸಕಾರಾತ್ಮಕ ದೃಷ್ಟಿಯಿಂದ ಹೆಚ್ಚಿನ ಲಾಭ ಗಳಿಸುವಿರಿ.
ಪರಿಹಾರ: ದೇವರಿಗೆ ತುಪ್ಪದ ದೀಪ ಹಚ್ಚಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಕಂದು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
