ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ, ಮಿತಿಮೀರಿದ ಆಹಾರ ಸೇವನೆಯಿಂದ ಅನಾರೋಗ್ಯ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ, ಮಿತಿಮೀರಿದ ಆಹಾರ ಸೇವನೆಯಿಂದ ಅನಾರೋಗ್ಯ; ನಾಳೆಯ ದಿನ ಭವಿಷ್ಯ

ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ, ಮಿತಿಮೀರಿದ ಆಹಾರ ಸೇವನೆಯಿಂದ ಅನಾರೋಗ್ಯ; ನಾಳೆಯ ದಿನ ಭವಿಷ್ಯ

3rd July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ, ಮಿತಿಮೀರಿದ ಆಹಾರ ಸೇವನೆಯಿಂದ ಅನಾರೋಗ್ಯ; ನಾಳೆಯ ದಿನ ಭವಿಷ್ಯ
ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ, ಮಿತಿಮೀರಿದ ಆಹಾರ ಸೇವನೆಯಿಂದ ಅನಾರೋಗ್ಯ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd July 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ದ್ವಾದಶಿ ಬೆಳಗ್ಗೆ 06.49 ರವರೆಗು ಇದ್ದು ಉಪರಿ ತ್ರಯೋದಶಿ ಇರುತ್ತದೆ.

ನಕ್ಷತ್ರ : ರೋಹಿಣಿ ನಕ್ಷತ್ರವು ರಾತ್ರಿ 04.26 ರವರೆಗೆ ಇದ್ದು ನಂತರ ಮೃಗಶಿರ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 12.27 ರಿಂದ 02.03

ರಾಶಿಫಲ

ಮೇಷ

ಉದ್ಯೋಗದಲ್ಲಿ ನಿರೀಕ್ಷಿಸಿದಂತೆ ಉನ್ನತ ಅಧಿಕಾರ ವಹಿಸಿಕೊಳ್ಳುವಿರಿ. ಆತಂಕದ ಮನೋಭಾವನೆ ಇರುತ್ತದೆ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಕಂಡು ಬರುತ್ತದೆ. ಸಮಯಕ್ಕೆ ಸರಿಯಾಗಿ ವರ್ತಿಸುವ ಕಾರಣ ಸೋಲಿನ ಭಯವಿರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ನಿಮ್ಮ ಬಗ್ಗೆ ನಿಮಗೆ ವಿಶೇಷ ಅಭಿಮಾನವಿರುತ್ತದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ

ವೃಷಭ

ನಿಮ್ಮ ಪಾಲಿಗೆ ಸಂಬಂಧಿಸಿದ ಆಸ್ತಿಯು ದೊರೆಯುತ್ತದೆ. ಹಣದ ತೊಂದರೆ ಕಂಡುಬರುವುದಿಲ್ಲ. ಹೊಂದಾಣಿಕೆಯ ಗುಣವನ್ನು ರೂಢಿಸಿಕೊಂಡಲ್ಲಿ ಸುಖಮಯ ಜೀವನ ನಿಮ್ಮದಾಗುತ್ತದೆ. ಸಮಾಜದ ಪ್ರಭಾವಿ ವ್ಯಕ್ತಿಗಳ ಪರಿಚಯವಾಗುತ್ತದೆ. ಕೋಪ ಬಂದಾಗ ಸುಲಭವಾಗಿ ಶಾಂತರಾಗುವುದಿಲ್ಲ. ಬೇರೆಯವರು ಮಾಡುವ ಸಣ್ಣ ತಪ್ಪನ್ನು ವಿಮರ್ಶೆಗೆ ಒಳಪಡಿಸುವಿರಿ. ಕುಟುಂಬದ ಸದಸ್ಯರ ಜೊತೆ ಉತ್ತಮ ಬಾಂಧವ್ಯ ಇರುವುದಿಲ್ಲ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ಮಿಥುನ

ನಿಮ್ಮ ಹಾಸ್ಯದ ಮನೋಭಾವನೆ ಆತ್ಮೀಯತೆಯನ್ನು ಹೆಚ್ಚಿಸುವುದು. ಸಮಯವನ್ನು ವ್ಯರ್ಥ ಮಾಡದೆ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಎಲ್ಲರೊಂದಿಗೆ ಸ್ನೇಹದಿಂದ ವರ್ತಿಸುವಿರಿ. ಹೊಸ ರೀತಿಯ ಉದ್ಯೋಗವನ್ನು ಎದುರು ನೋಡುವಿರಿ. ನಿಮ್ಮ ಮಕ್ಕಳ ಜೊತೆ ದೀರ್ಘಕಾಲದ ಪ್ರಯಾಣಕ್ಕೆ ತೆರಳುವಿರಿ. ಕುಟುಂಬದವರೊಡನೆ ಶಾಂತಿ ನೆಮ್ಮದಿಯಿಂದ ಬಾಳುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕಟಕ

ಮಕ್ಕಳ ಜೀವನದಲ್ಲಿ ಉತ್ತಮ ಬದಲಾವಣೆ ಕಂಡುಬರುತ್ತದೆ. ದಂಪತಿ ನಡುವೆ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಗೃಣಿಯರ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಅನಾವಶ್ಯಕವಾಗಿ ವಿವಾದವೊಂದಕ್ಕೆ ಕಾರಣರಾಗುವಿರಿ. ಸಂಗಾತಿಯನ್ನು ಗೌರವದಿಂದ ಕಾಣುವಿರಿ. ಧಾರ್ಮಿಕ ಕೇಂದ್ರವೊಂದರ ಮೇಲ್ವಿಚಾರಣೆ ನಿಮ್ಮ ಪಾಲಿಗೆ ಬರಲಿದೆ. ಅನಾವಶ್ಯಕ ಖರ್ಚು ವಚ್ಚಗಳಿರುತ್ತವೆ. ಧೈರ್ಯದಿಂದ ಸವಾಲುಗಳನ್ನು ಎದುರಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ಸಿಂಹ

ನೆರೆಹೊರೆಯವರಿಂದ ಒಳ್ಳೆಯ ಮಾತುಗಳನ್ನಷ್ಟೇ ನಿರೀಕ್ಷಿಸುವಿರಿ. ಬೇರೆಯವರು ಮಾಡುವ ತಪ್ಪನ್ನು ಮನ್ನಿಸಿ ಪರಿಹಾರ ಕಂಡು ಹಿಡಿಯುವಿರಿ. ಉದ್ಯೋಗದ ಸಲುವಾಗಿ ದೂರದ ಊರಿಗೆ ತೆರಳುವಿರಿ. ಉದ್ಯೋಗ ಬದಲಿಸುವ ಅವಕಾಶ ದೊರೆತರೂ ಸರಿಯಾಗಿ ಸ್ಪಂದಿಸುವುದಿಲ್ಲ. ಮಿತಿಮೀರಿದ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗಲಿದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಬೂದು

ಕನ್ಯಾ

ಮೃದು ನಡವಳಿಕೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸುತ್ತದೆ. ಕುಟುಂಬದ ಮಂಗಳ ಕಾರ್ಯದ ಜವಾಬ್ದಾರಿ ನಿಮ್ಮದಾಗಲಿದೆ. ಕಲ್ಪನಾ ಜೀವಿಗಳು. ಸೋಲಾಗಲಿ ಗೆಲುವಾಗಲಿ ಭಾವಕತೆಯಿಂದ ಸ್ವೀಕರಿಸುವಿರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗಿರುತ್ತದೆ. ಕುಟುಂಬದ ಸದಸ್ಯರ ಜೊತೆ ಸಮಯ ಕಳೆಯಲು ಇಚ್ಚಿಸುವಿರಿ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ : ಕಂದು ಬಣ್ಣ

ತುಲಾ

ಎಲ್ಲರ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಸರಿಯಾದ ಮಾರ್ಗದಲ್ಲಿ ಪ್ರಯತ್ನಪಡದೆ ಯಾವುದೇ ಕೆಲಸದಲ್ಲಿಯೂ ಸೋಲನ್ನು ಒಪ್ಪುವುದಿಲ್ಲ. ಉತ್ತಮ ಆರೋಗ್ಯವಿರುತ್ತದೆ. ಕುಟುಂಬದಲ್ಲಿ ಪ್ರೀತಿ ವಿಶ್ವಾಸ ತುಂಬಿರುತ್ತದೆ. ಹೆಚ್ಚಿನ ಆಸಕ್ತಿಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಉದ್ಯೋಗದಲ್ಲಿ ಎದುರಾಗುವ ಕಠಿಣ ಸವಾಲುಗಳನ್ನು ಗೆಲ್ಲುವಿರಿ. ನಿಮ್ಮಲ್ಲಿರುವ ಕರ್ತವ್ಯ ಶೀಲತೆ ಬೇರೆಯವರಿಗೆ ಸ್ಪೂರ್ತಿಯಾಗುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಶ್ಚಿಕ

ಆರಂಭಿಸಿದ ಕೆಲಸ ಕಾರ್ಯಗಳು ಪೂರ್ಣವಾಗಲಿವೆ. ಐಷಾರಾಮಿ ಜೀವನವನ್ನು ಇಷ್ಟಪಡುವಿರಿ. ನಿಮ್ಮಲ್ಲಿನ ಮಹತ್ವಕಾಂಕ್ಷೆಯು ನೆರವೇರುತ್ತದೆ. ತಡವಾದರೂ ವೃತ್ತಿ ಕ್ಷೇತ್ರದಲ್ಲಿ ಅಧಿಕಾರ ಲಭಿಸುತ್ತದೆ. ಎದುರಾಗುವ ಸಮಸ್ಯೆಗಳಿಗೆ ಒಳ್ಳೆಯ ತಂತ್ರಗಾರಿಕೆಯಿಂದ ಪರಿಹಾರ ನೀಡುವಿರಿ. ಬೇರೆಯವರ ಕೆಲಸ ಕಾರ್ಯಗಳ ಬಗ್ಗೆ ವಿಮರ್ಶೆ ಮಾಡುವುದರಿಂದ ವಿರೋಧಿಗಳು ಹೆಚ್ಚುತ್ತಾರೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಧನಸ್ಸು

ವೃತ್ತಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳಿಗೆ ಆದ್ಯತೆ ನೀಡುವಿರಿ. ಹಿರಿಯ ಅಧಿಕಾರಿಗಳ ಸಹಕಾರ ನಿಮಗಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಯಾರ ಪ್ರಭಾವಕ್ಕೂ ಒಳಗಾಗುವುದಿಲ್ಲ. ಮೊದಲ ಆದ್ಯತೆಯನ್ನು ನಿಮ್ಮ ಸ್ವಂತ ಕೆಲಸ ಕಾರ್ಯಗಳಿಗೆ ನೀಡಿ. ಜನ ಸೇವಾ ಸಂಘದ ನಾಯಕತ್ವವನ್ನು ಒಪ್ಪಿಕೊಳ್ಳುವಿರಿ. ಬಿಡುವಿಲ್ಲದ ದುಡಿಮೆ ಇರುತ್ತದೆ. ನಿಮಗೆ ಅನುಕೂಲಕರವಾಗುವಂತಹ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ. .

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸು ಗೆಂಪು

ಮಕರ

ಮಕ್ಕಳ ಬಗ್ಗೆ ಅಸಮಾಧಾನವಿರುತ್ತದೆ. ಕಾರಣವಿಲ್ಲದೆ ಯಾರನ್ನೂ ಹೊಗಳುವುದಿಲ್ಲ. ಬೇರೆಯವರ ಕೆಲಸ ಕಾರ್ಯಗಳ ಬಗ್ಗೆ ಟೀಕೆ ಮಾಡುವಿರಿ. ಸಣ್ಣಪುಟ್ಟ ಕೆಲಸ ಮಾಡಿದರು ವಿಶ್ರಾಂತಿ ತೆಗೆದುಕೊಳ್ಳುವಿರಿ. ಆತುರದಿಂದ ಉದ್ಯೋಗವನ್ನು ಬದಲಿಸುವ ನಿರ್ಧಾರಕ್ಕೆ ಬರುವಿರಿ. ವಂಶಾಧಾರಿತ ವೃತ್ತಿಯೊಂದನ್ನು ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಕುಂಭ

ಉತ್ತಮ ಆರೋಗ್ಯ ನಿಮ್ಮ ಸಂತೋಷವನ್ನು ಹೆಚ್ಚಿಸುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗುತ್ತವೆ. ಯಾವುದೇ ಮಾತನ್ನು ಮರುಮಾಚದೆ ಎಲ್ಲರೊಡನೆ ಹಂಚಿಕೊಳ್ಳುವಿರಿ. ವಿಶ್ರಾಂತಿ ಇಲ್ಲದೆ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ನಿಮ್ಮ ಸ್ವಾತಂತ್ರಕ್ಕೆ ಅಡ್ಡಿ ಬಂದರೆ ಕೋಪಗೊಳ್ಳುವಿರಿ. ಕೆಲಸ ಕಾರ್ಯಗಳಿಗೆ ಬೇರೆಯವರಿಂದ ಪ್ರಶಂಸೆಯನ್ನು ನಿರೀಕ್ಷಿಸುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ಮೀನ

ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಬೇರೆಯವರ ಆಸೆ ಆಕಾಂಕ್ಷೆಗಳನ್ನು ಪೂರೈಸುವಲ್ಲಿ ಸಂತಸ ಕಾಣುವಿರಿ. ಆದರೆ ಹಟದ ಗುಣವಿರುತ್ತದೆ. ಸದಾಕಾಲ ನಿಮ್ಮ ಮನಸ್ಸು ಹಣದ ಗಳಿಕೆಯ ಬಗ್ಗೆ ಯೋಚಿಸುತ್ತದೆ. ಗೆಳೆಯರನ್ನು ಗೌರವದಿಂದ ಕಾಣುವಿರಿ. ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ನಿಮ್ಮ ಸಹವಾಸವನ್ನು ಬಯಸಿ ಬರುತ್ತಾರೆ. ಬಂಧು ಬಳಗದಿಂದ ದೂರ ಉಳಿಯಲು ಬಯಸುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.