ಏಕಾಂತ ಜೀವನ ಬಯಸುವಿರಿ, ನಿಮ್ಮ ಹಟದ ಸ್ವಭಾವದಿಂದ ಆತ್ಮೀಯರಿಗೆ ಬೇಸರ; ದ್ವಾದಶ ರಾಶಿಗಳ ನಾಳೆಯ ದಿನ ಭವಿಷ್ಯ
4th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.(ಬರಹ: ಎಚ್. ಸತೀಶ್, ಜ್ಯೋತಿಷಿ)

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th July 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಗುರುವಾರ
ತಿಥಿ : ಚತುರ್ದಶಿ ರಾತ್ರಿ 04.24 ರವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.
ನಕ್ಷತ್ರ : ಮೃಗಶಿರ ನಕ್ಷತ್ರವು ರಾತ್ರಿ 04.07 ರವರೆಗೆ ಇದ್ದು ನಂತರ ಆರ್ದ್ರೆ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.57
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: 02.03 ರಿಂದ 03.39
ರಾಶಿಫಲ
ಮೇಷ
ಸಂಗಾತಿಯೊಂದಿಗೆ ಸ್ನೇಹಿತರಂತೆ ಬಾಳುವಿರಿ. ಸಣ್ಣಪುಟ್ಟ ಪ್ರವಾಸ ಮಾಡುವಲ್ಲಿ ತೃಪ್ತಿ ಕಾಣುವಿರಿ. ಶಾಂತವಾಗಿದ್ದರೂ ತಪ್ಪನ್ನು ಖಂಡಿಸುವಿರಿ. ಬೇರೆಯವರ ಮನಸ್ಸಿನ ವಿಚಾರವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಲ್ಲಿರಿ. ಮನದಲ್ಲಿರುವ ಆಸೆಗಳಿಗೆ ಎಲ್ಲರ ಬೆಂಬಲ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ನಿಮ್ಮಲ್ಲಿರುವ ಆತ್ಮಾಭಿಮಾನಕ್ಕೆ ಧಕ್ಕೆಯಾದಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಆಕಾಶ ನೀಲಿ
ವೃಷಭ
ನಿಮ್ಮ ಸತತ ಪ್ರಯತ್ನದ ನಡುವೆಯೂ ಅನಾವಶ್ಯಕ ಖರ್ಚು ವೆಚ್ಚಗಳು ಇರಲಿವೆ. ಕುಟುಂಬದ ವಿವಾಹ ಕಾರ್ಯವು ಸರಳ ರೀತಿಯಲ್ಲಿ ನಡೆಯುತ್ತದೆ. ಏಕಾಂತ ಜೀವನವನ್ನು ಇಷ್ಟಪಡುವಿರಿ. ಸ್ಥಿರವಾದ ಬುದ್ದಿಯಿಂದ ಆರಂಭಿಸಿದ ಕಾರ್ಯದಲ್ಲಿ ಯಶಸ್ಸು ಗಳಿಸುವಿರಿ. ನಿಮ್ಮಲ್ಲಿನ ಹಟದ ಗುಣ ಬೇರೆಯವರಿಗೆ ಬೇಸರ ಉಂಟುಮಾಡುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕೆಂಪು
ಮಿಥುನ
ನಿಮ್ಮ ಮನಸ್ಸು ನಿಮ್ಮ ಹತೋಟಿಯಲ್ಲಿ ಇರುವ ಕಾರಣ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಎದುರಾಗುವುದಿಲ್ಲ. ದಾಂಪತ್ಯ ಜೀವನ ಸುಖ ಸಂತೋಷದಿಂದ ಕೂಡಿರುತ್ತದೆ. ನಿಮ್ಮಲ್ಲಿ ಉತ್ತಮ ಊಹಾಶಕ್ತಿ ಇರುತ್ತದೆ. ಆದ್ದರಿಂದ ಕಷ್ಟಕ್ಕೆ ಸಿಲುಕುವುದಿಲ್ಲ. ಎಂತಹ ಸಂದರ್ಭ ಎದುರಾದರು ಪ್ರೀತಿ ವಿಶ್ವಾಸ ಕಳೆದುಕೊಳ್ಳುವುದಿಲ್ಲ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆ ಹಸಿರು
ಕಟಕ
ತಂದೆಯವರಿಂದ ನಿಮಗೆ ಹಣದ ಸಹಾಯ ದೊರೆಯಲಿದೆ. ಕುಟುಂಬದಲ್ಲಿನ ಮನಸ್ತಾಪ ಕೊನೆಗೊಂಡು ಪರಸ್ಪರ ಪ್ರೀತಿ-ವಿಶ್ವಾಸ ಹೆಚ್ಚುತ್ತದೆ. ಮನೆಯವರ ಒಪ್ಪಿಗೆಯಂತೆ ವಿವಾಹ ನಿಶ್ಚಯವಾಗುತ್ತದೆ. ಸೌಂದರ್ಯಕ್ಕೆ ಬೆಲೆ ನೀಡುವಿರಿ. ಇರುವ ಮನೆಗೆ ಹೊಸ ರೂಪ ನೀಡಲು ಪ್ರಯತ್ನಿಸುವಿರಿ. ಆದರ್ಶವಾದಿಗಳು. ನಿಮ್ಮ ವಾದ ವಿವಾದಗಳು ಬೇರೆಯವರನ್ನು ರಂಜಿಸುತ್ತದೆ.
ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಸಿಂಹ
ನ್ಯಾಯದ ಪಕ್ಷಪಾತಿಗಳು. ಆದ್ದರಿಂದ ನಿಮಗೆ ಮಿತ್ರರಿಗಿಂತ ವಿರೋಧಿಗಳೇ ಹೆಚ್ಚಾಗಿರುತ್ತಾರೆ. ದುಡುಕುತನದ ಮಾತುಕತೆಯಿಂದ ತೊಂದರೆಗೆ ಒಳಗಾಗುವಿರಿ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ನಿಮ್ಮ ಕರ್ತವ್ಯವನ್ನು ಸರಿಯಾದ ರೀತಿ ಮಾಡಿ ಮುಗಿಸುವಿರಿ. ನಿಮ್ಮ ಬುದ್ಧಿವಾದವನ್ನು ಯಾರೊಬ್ಬರೂ ಕೇಳುವುದಿಲ್ಲ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ
ಕನ್ಯಾ
ನಿಮ್ಮ ಪಾಲಿನ ಕೆಲಸ ಕಾರ್ಯಗಳನ್ನು ಶ್ರದ್ದೆಯಿಂದ ಮಾಡುವಿರಿ. ನಿಮ್ಮ ಬಳಿ ಎಷ್ಟೇ ಹಣವಿದ್ದರೂ ಸರಳ ಜೀವನವನ್ನು ನಡೆಸುವಿರಿ. ರಾಜಕೀಯದಲ್ಲಿ ಆಸಕ್ತಿ ಇದ್ದರೆ ಉತ್ತಮ ಅವಕಾಶ ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಅನುಬಂಧ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ನೇಹಿತರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಅಳುಕಿನ ಸ್ವಭಾವವಿರುತ್ತದೆ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು
ತುಲಾ
ನೀವು ತೆಗೆದುಕೊಳ್ಳುವ ನಿರ್ಣಯವನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುವುದು. ಕುಟುಂಬಕ್ಕೆ ಸಂಬಂಧಿಸಿದ ಭೂವಿವಾದವು ಬಿಗುವಿನ ವಾತಾವರಣವನ್ನು ಉಂಟುಮಾಡುತ್ತದೆ. ನಿಮ್ಮಲ್ಲಿರುವ ಶಾಂತಿ ಸೌಹಾರ್ದಯುತ ಗುಣವು ಅಪಾಯದಿಂದ ಪಾರು ಮಾಡುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚು ಕ್ರಿಯಾಶೀಲರಾಗುತ್ತಾರೆ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ..
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ : ಕಿತ್ತಳೆ
ವೃಶ್ಚಿಕ
ಉದ್ಯೋಗದಲ್ಲಿ ಇದ್ದ ಅಡಚಣೆ ದೂರವಾಗಿ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳುತ್ತದೆ. ಯಾರೊಂದಿಗೂ ವಾದದಲ್ಲಿ ತೊಡಗಿದೆ ಬುದ್ಧಿವಂತಿಕೆಯಿಂದ ಕೆಲಸ ಸಾಧಿಸುವಿರಿ. ಮಕ್ಕಳ ವಿಚಾರದಲ್ಲಿ ನಿಮ್ಮ ತೀರ್ಮಾನವೇ ಅಂತಿಮವಾಗುತ್ತದೆ. ಅವರ ಜೀವನ ರೂಪಿಸಲು ಹಲವು ಯೋಜನೆಗಳನ್ನು ರೂಪಿಸುವಿರಿ. ಪಾಲುದಾರಿಕೆ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ
ಧನಸ್ಸು
ಹಿರಿಯ ಅಧಿಕಾರಿಗಳು ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಹೊಂದಿರುತ್ತಾರೆ. ಆತ್ಮೀಯರಿಂದ ಹಣಕಾಸಿನ ವ್ಯವಹಾರದಲ್ಲಿ ವಿರೋಧ ಎದುರಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ಕೆಲಸ ಕಾರ್ಯದ ನಡುವೆಯೂ ಸಂಗಾತಿ ಮತ್ತು ಮಕ್ಕಳಿಗೆಂದು ಸ್ವಲ್ಪ ಸಮಯ ಮೀಸಲಿಡುವಿರಿ. ಆತ್ಮೀಯರಿಂದ ಉಡುಗೊರೆಯೊಂದು ದೊರೆಯುತ್ತದೆ.
ಪರಿಹಾರ : ಜೇನು ಸೇವಿಸಿ ನೀರು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಸಿರು
ಮಕರ
ಕುಟುಂಬದವರ ಜೊತೆ ಸಂತೋಷದಿಂದ ಬೆರೆಯುವಿರಿ. ಮಕ್ಕಳ ಜೀವನದಲ್ಲಿ ಯಾವುದೇ ತೊಂದರೆ ಬರದಂತೆ ನೋಡಿಕೊಳ್ಳುವಿರಿ. ಮಹಿಳೆಯರಿಗೆ ವಿಶೇಷವಾದ ಶುಭಫಲಗಳು ದೊರೆಯುತ್ತವೆ. ಅಪೂರ್ಣಗೊಂಡ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ವಿಶ್ರಾಂತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳ ಬಗ್ಗೆ ಗಮನವನ್ನು ನೀಡುವಿರಿ.
ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ. .
ಅದೃಷ್ಟದ ಸಂಖ್ಯೆ :12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಕುಂಭ
ಗೃಹಿಣಿಯರು ಬೇಸರ ಕಡೆಯಲು ಸಣ್ಣಪುಟ್ಟ ವ್ಯಾಪಾರದಲ್ಲಿ ತೊಡಗುತ್ತಾರೆ. ವಿದೇಶಿ ಸಂಸ್ಥೆಯೊಂದರ ಸಹಕಾರದಿಂದ ಪಾಲುಗಾರಿಕೆಯ ವ್ಯವಹಾರವನ್ನು ಆರಂಭಿಸುವಿರಿ. ಸ್ವಂತ ಕೆಲಸ ಕಾರ್ಯಗಳಿಗೆ ಸಮಯವಿಲ್ಲದೆ ಹೋಗುತ್ತದೆ. ದಾಂಪತ್ಯ ಜೀವನದಲ್ಲಿ ಇದ್ದ ಬೇಸರ ದೂರವಾಗಲಿದೆ. ಹಣಕಾಸಿನ ಬಗ್ಗೆ ಗಮನ ನೀಡುವುದಿಲ್ಲ. ವಿದೇಶದಲ್ಲಿ ಉನ್ನತ ಅಧ್ಯಯನ ನಡೆಸಲು ವಿದ್ಯಾರ್ಥಿಗಳಿಗೆ ಅವಕಾಶ ಲಭಿಸುತ್ತದೆ.
ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಧರಿಸುವದರಿಂದ ಶುಭವಿರುತ್ತದೆ
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮೀನ
ನಿಮ್ಮ ಕಠಿಣ ನಿರ್ಧಾರಗಳು ಕುಟುಂಬದಲ್ಲಿ ಸಂದಿಗ್ದತೆ ಉಂಟುಮಾಡುತ್ತದೆ. ನಿಮ್ಮ ಉದ್ಯೋಗದಲ್ಲಿ ಉತ್ತಮ ಬದಲಾವಣೆಗಳು ಎದುರಾಗಲಿವೆ. ನಿಮ್ಮ ಮಾತಿನ ಮೇಲೆ ನಿಯಂತ್ರಣ ಸಾಧಿಸಬೇಕು. ನಿಮ್ಮ ಹಾಗೂ ತಾಯಿಯ ನಡುವೆ ಭಾವಪೂರ್ಣ ಸನ್ನಿವೇಶವೊಂದು ಉಂಟಾಗಲಿದೆ. ಜೀವನ ಸಂಗಾತಿಯೊಂದಿಗೆ ಸಂತೋಷ ಸಂತಸ ಇರಲಿದೆ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 6
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಗುಲಾಬಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
