Tomorrow Horoscope: ನಿಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಿರಿ, ಕೆಲಸದ ಸ್ಥಳದಲ್ಲಿ ಭಾರೀ ನಿರಾಸೆ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ನಿಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಿರಿ, ಕೆಲಸದ ಸ್ಥಳದಲ್ಲಿ ಭಾರೀ ನಿರಾಸೆ; ನಾಳೆಯ ದಿನ ಭವಿಷ್ಯ

Tomorrow Horoscope: ನಿಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಿರಿ, ಕೆಲಸದ ಸ್ಥಳದಲ್ಲಿ ಭಾರೀ ನಿರಾಸೆ; ನಾಳೆಯ ದಿನ ಭವಿಷ್ಯ

5th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಿಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಿರಿ, ಕೆಲಸದ ಸ್ಥಳದಲ್ಲಿ ಭಾರೀ ನಿರಾಸೆ; ನಾಳೆಯ ದಿನ ಭವಿಷ್ಯ
ನಿಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಿರಿ, ಕೆಲಸದ ಸ್ಥಳದಲ್ಲಿ ಭಾರೀ ನಿರಾಸೆ; ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th June 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಚತುರ್ದಶಿ ರಾತ್ರಿ 07.10 ರವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಕೃತ್ತಿಕಾ ನಕ್ಷತ್ರವು ರಾ. 09.00ರವರೆಗು ಇರುತ್ತದೆ. ಆನಂತರ ರೋಹಿಣಿ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.43

ರಾಹುಕಾಲ: 12.22 ರಿಂದ 01.58

ರಾಶಿಫಲ

ಮೇಷ

ಉತ್ತಮ ಆದಾಯವಿದ್ದರೂ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಅನಾವಶ್ಯಕವಾಗಿ ಚಿಂತೆ ಅಥವ ಒತ್ತಡಕ್ಕೆ ಒಳಗಾಗದೆ ಧೈರ್ಯದಿಂದ ಮುಂದುವರೆಯುವಿರಿ. ಇರುವ ಹಣದಲ್ಲಿಯೇ ಮನೆ ನಿಭಾಯಿಸಿ. ತಾನಾಗಿಯೆ ದೊರೆವ ಹಣದ ಸಹಾಯವನ್ನು ತಿರಸ್ಕರಿಸದಿರಿ. ಆತ್ಮೀಯರಿಗೆ ಉಡುಗೊರೆಗಳನ್ನು ನೀಡಬೇಕಾಗುತ್ತದೆ. ನೀಡಿದ ಭರವಸೆಯನ್ನು ಪೂರೈಸದ ಕಾರಣ ಮಕ್ಕಳ ವಿರೋಧ ಎದುರಿಸಬೇಕಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಷಭ

ಹೊರಾಂಗಣ ಕ್ರೀಡೆಯಲ್ಲಿ ಆಸಕ್ತಿ ಇರುವವರಿಗೆ ವಿನೂತನ ಅವಕಾಶ ದೊರೆಯುತ್ತದೆ. ಆತ್ಮೀಯರ ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಮನೆಯ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಸಮಾಜದ ಗಣ್ಯವ್ಯಕ್ತಿಗಳ ಜೊತೆ ಬಾಂಧವ್ಯ ಸುಧಾರಿಸುತ್ತದೆ. ನಿಮ್ಮ ಸಲಹೆಯನ್ನು ಒಪ್ಪದೆ ಮಕ್ಕಳು ತೊಂದರೆಗೆ ಒಳಗಾಗುತ್ತಾರೆ. ಉದ್ಯೋಗದಲ್ಲಿ ಯಾವುದೆ ತೊಂದರೆ ಕಾಣದು.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಮಿಥುನ

ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಗಳಿಸುವಿರಿ. ಮಕ್ಕಳು ನಿಮ್ಮ ಪ್ರೀತಿ ವಿಶ್ವಾಸವನ್ನು ನಿರೀಕ್ಷಿಸುತ್ತಾರೆ ನಿರಾಸೆ ಮಾಡದಿರಿ. ಕುಟುಂಬದಲ್ಲಿ ನೆಮ್ಮದಿ ಮತ್ತು ಸಂತೋಷ ಇರುತ್ತದೆ. ಕುಟುಂಬದ ಹಿರಿಯರೊಡನೆ ಧಾರ್ಮಿಕ ಸ್ಥಳಕ್ಕೆ ತೆರಳುವ ಸೂಚನೆಗಳಿವೆ. ಸ್ನೇಹಿತರ ಮೂಲಕ ನಿಮ್ಮ ಮುಖ್ಯ ಕೆಲಸವೊಂದು ಕೈಗೂಡಲಿದೆ. ದೈನಂದಿನ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾದರೂ ಯಾವುದೇ ತೊಂದರೆ ಎದುರಾಗದು.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಿ. ಬೇರೆಯವರ ಜಯವನ್ನೂ ಆನಂದಿಸುವಿರಿ. ಸಮಾಜದ ಗೌರವವೊಂದು ನಿಮಗೆ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಬೆಲೆ ಬಾಳುವ ಪ್ರಾಚೀನಕಾಲದ ವಸ್ತುಗಳನ್ನು ಕೊಳ್ಳುವಿರಿ. ಚಿನ್ನ ಬೆಳ್ಳಿಯ ಆಭರಣವನ್ನು ಸಂಗಾತಿಗೆ ಉಡುಗೊರೆಯಾಗಿ ನೀಡುವಿರಿ. ಪ್ರಯತ್ನಪಟ್ಟಲ್ಲಿ ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ತಪ್ಪು ತಿಳುವಳಿಕೆಯಿಂದ ಸೋದರರ ಬಗ್ಗೆ ಅಸಮಾಧಾನ ಉಂಟಾಗಲಿದೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಸಿಂಹ

ಹಣ ಉಳಿತಾಯದ ಬಗ್ಗೆ ಕುಟುಂಬದ ಹಿರಿಯರ ಸಲಹೆ ಪಡೆಯುವಿರಿ. ಮಕ್ಕಳು ನಿಮ್ಮ ಮಾತುಗಳನ್ನು ಒಪ್ಪದೇ ಹೋಗಬಹುದು. ವಿದ್ಯಾರ್ಥಿಗಳು ಉನ್ನತ ಅಧ್ಯಯನದ ಬಗ್ಗೆ ಹೆಚ್ಚಿನ ಗಮನ ನೀಡುತ್ತಾರೆ. ಕಷ್ಟವೆನಿಸಿದರೂ ನಿಮ್ಮ ಮನದ ಆಶೋತ್ತರಗಳನ್ನು ಈಡೇರಿಸಿಕೊಳ್ಳುವಿರಿ. ಸಾಲದ ವ್ಯವಹಾರದಲ್ಲಿ ತೊಂದರೆ ಎದುರಾಗುತ್ತದೆ. ಸಂಗಾತಿ ಜೊತೆ ಪ್ರೀತಿ ವಿಶ್ವಾಸ ಹೆಚ್ಚುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನಸು ಗೆಂಪು

ಕನ್ಯಾ

ನಿಮ್ಮಆದಾಯದ ಮಟ್ಟ ಗಣನೀಯವಾಗಿ ಹೆಚ್ಚಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಆತುರದಿಂದ ಉದ್ಯೋಗ ಬದಲಾಯಿಸಿ ಒತ್ತಡಕ್ಕೆ ಒಳಗಾಗುವಿರಿ. ಕೆಲಸಕ್ಕೆ ಮೊದಲ ಆದ್ಯತೆ ನೀಡುವಿರಿ. ನಿಮ್ಮ ಬಗ್ಗೆ ಕುಟುಂಬದ ಸದಸ್ಯರಿಗೆ ಬೇಸರ ಇರುತ್ತದೆ. ವ್ಯಯುಕ್ತಿಕ ಜೀವನದ ಬಗ್ಗೆ ಯೋಚಿಸಬೇಕಾಗುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕವಾಗಿ ಬಳಲುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ತುಲಾ

ಆತುರದಿಂದ ಯಶಸ್ಸನ್ನು ಗಳಿಸಲು ಸಾಧ್ಯವಾಗದು ಎಂಬ ನಿಜ ತಿಳಿಯುವಿರಿ. ಬೇರೆಯವರ ತಪ್ಪನ್ನು ಎಲ್ಲರಿಗೂ ತಿಳಿಯುವಂತೆ ಮಾಡುವಿರಿ. ಸದಾಕಾಲ ಓಡಾಟದಲ್ಲಿ ಮಗ್ನರಾಗುವಿರಿ. ಮಾಡುವ ತಪ್ಪನ್ನು ಮರೆಮಾಚುವಿರಿ. ಹಣಕಾಸಿನ ವ್ಯವಹಾರದಲ್ಲಿ ಅಸಹಜ ನಿಲುವು ತಾಳುವಿರಿ. ಹೊಗಳುವವರ ಮಾತನ್ನು ನಿಜವೆಂದು ನಂಬುವಿರಿ. ಅತಿಯಾದ ಖರ್ಚು ವೆಚ್ಚಗಳನ್ನು ಕಡಿತಗೊಳಿಸಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ

ವೃಶ್ಚಿಕ

ಹಿಂದೊಮ್ಮೆ ನಿಮಗಾದ ತೊಂದರೆಗೆ ಪರಿಹಾರ ಪಡೆಯುವಿರಿ. ಸಣ್ಣ ಪುಟ್ಟ ವಿಷಗಳಿಗೂ ಕೋಪಗೊಳ್ಳುವಿರಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಹಣ ಹೂಡಿ ಉತ್ತಮ ಲಾಭ ಗಳಿಸುವಿರಿ. ಜನಸಾಮಾನ್ಯರಿಗಾಗಿ ಸಂಧಾನ ಸಭೆ ನಡೆಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಹಣಕಾಸಿನ ವ್ಯವಹಾರದಲ್ಲಿ ಬೇರೆಯವರ ಹಸ್ತಕ್ಷೇಪದಿಂದ ತೊಂದರೆ ಉಂಟಾಗಬಹುರು. ಆತ್ಮೀಯರೊಬ್ಬರ ಜೊತೆ ವಿವಾದ ಉಂಟಾಗಬಹುದು.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು

ಧನಸ್ಸು

ಆದಾಯದಲ್ಲಿ ಸ್ಥಿರತೆ ಇರುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಲಾಭ ಇರಲಿದೆ. ನಿಮ್ಮ ಆಚಾರ ವಿಚಾರಗಳು ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಕುಟುಂಬದ ಒಗ್ಗಟ್ಟಿಗೆ ಧಕ್ಕೆ ಉಂಟಾಗುವ ಘಟನೆಯೊಂದು ನಡೆಯಲಿದೆ. ಆತ್ಮೀಯರು ಹಣದ ಸಹಾಯ ಮಾಡುತ್ತಾರೆ. ಮುಂಗೋಪದಿಂದ ವರ್ತಿಸುವ ಕಾರಣ ಉದ್ಯೋಗಾವಕಾಶವೊಂದು ಕೈಜಾರಲಿದೆ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಕುಟುಂಬದ ಜವಾಬ್ದಾರಿಯನ್ನು ಯಶಸ್ಚಿಯಾಗಿ ನೆರವೇರಿಸುವಿರಿ. ಸಮಯಕ್ಕೆ ತಕ್ಕಂತೆ ವರ್ತಿಸುವ ಕಾರಣ ಸಂತೃಪ್ತಿಯ ಜೀವನ ನಡೆಸುವಿರಿ. ಸಂಗಾತಿಯ ಅವಶ್ಯಕತೆಗಳನ್ನು ಖುಷಿಯಿಂದ ಪೂರೈಸುವಿರಿ. ಮಕ್ಕಳ ಮೇಲಿನ ಪ್ರೀತಿಯಿಂದ ಮನದ ನೋವನ್ನು ಮರೆಯುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳು ಶಾಶ್ವತ ಪರಿಹಾರದಿಂದ ಮರೆಯರಾಗುತ್ತದೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಕುಂಭ

ಮನದ ಆತಂಕದ ಭಾವನೆಯಿಂದ ಹೊರ ಬರಲು ಪ್ರಯತ್ನಿಸಿ. ದುಂದುಗಾರಿಕೆ ಖರ್ಚು ವೆಚ್ಚಗಳನ್ನು ಕಡಿತಗೊಳಿಸಿ. ಆತ್ಮೀಯರ ಜೊತೆಯಾತ ಮನದ ನೋವನ್ನು ಕಡಿಮೆ ಮಾಡಿರಿ. ಕೋಪವನ್ನು ಎಲ್ಲರೊಂದಿಗೆ ತೋರುವುದಿಲ್ಲ. ಆಡುವ ಮಾತಿನ ಮೇಲೆ ಎಚ್ಚರವಿರಲಿ. ನಿಮ್ಮದಲ್ಲದ ತಪ್ಪಿಗೆ ದಂಡ ತೆರುವಿರಿ. ಕಾನೂನಿನ ಹೋರಾಟದಲ್ಲಿ ಜಯ ಗಳಿಸುವಿರಿ. ಪ್ರತಿಯೊಂದು ಕ್ಷಣದಲ್ಲೂ ನಿಮ್ಮ ಸಂಗಾತಿಯ ಸಹಕಾರ ದೊರೆಯುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ಅತಿಯಾಗಿ ಚಿಂತಿಸಿದಲ್ಲಿ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಮಕ್ಕಳಿಂದ ನಿರಾಸೆಯಾದರೂ ಲಘುವಾಗಿ ಪರಿಗಣಿಸುವಿರಿ. ಕುಟುಂಬದಲ್ಲಿ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಹಿರಿಯರ ಉತ್ತಮ ಆರೋಗ್ಯ ನಿಮ್ಮಆನಂದಕ್ಕೆ ಕಾರಣವಾಗುತ್ತದೆ. ಹಣಕಾಸಿನ ಅನುಕೂಲತೆಯಿಂದ ನೆಮ್ಮದಿ ಗಳಿಸುವಿರಿ. ಉದ್ಯೋಗ ಸ್ಥಳದಲ್ಲಿ ನಿರಾಸೆಯ ಪ್ರತಿಕ್ರಿಯೆ ಕಂಡುಬರುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ಎಚ್ಚರಿಕೆ ಇರಬೇಕು.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕೇಸರಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

 

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.