Tomorrow Horoscope: ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬಲ್ಲ, ಜೀವನದಲ್ಲಿ ಪ್ರಮುಖ ಬದಲಾವಣೆ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬಲ್ಲ, ಜೀವನದಲ್ಲಿ ಪ್ರಮುಖ ಬದಲಾವಣೆ; ನಾಳೆಯ ದಿನ ಭವಿಷ್ಯ

Tomorrow Horoscope: ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬಲ್ಲ, ಜೀವನದಲ್ಲಿ ಪ್ರಮುಖ ಬದಲಾವಣೆ; ನಾಳೆಯ ದಿನ ಭವಿಷ್ಯ

24th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಜೂನ್ 24ರ ಸೋಮವಾರದ ದಿನ ಭವಿಷ್ಯವನ್ನು ಇಂದೇ ತಿಳಿಯಿರಿ.
ಜೂನ್ 24ರ ಸೋಮವಾರದ ದಿನ ಭವಿಷ್ಯವನ್ನು ಇಂದೇ ತಿಳಿಯಿರಿ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24th June 2024 Horoscope)

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ತದಿಗೆ ರಾತ್ರಿ 02.44ರವರೆಗು ಇದ್ದು, ಆನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರಾಷಾಡ ನಕ್ಷತ್ರವು ಸಂಜೆ 05.35 ರವರೆಗೆ ಇದ್ದು, ಆನಂತರ ಶ್ರವಣ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳ್ಗೆ 05.54

ಸೂರ್ಯಾಸ್ತ: ಸಂಜೆ 06.48

ರಾಹುಕಾಲ : ಬೆಳಗ್ಗೆ 07.37 ರಿಂದ ಬೆ.09.13

ಮೇಷ ರಾಶಿ

ನಿಮ್ಮಲ್ಲಿರುವ ಧೈರ್ಯ ಸಾಹಸದ ಗುಣ ಒಳ್ಳೆಯದು. ಆದರೆ ಹಠದಿಂದ ಕುಟುಂಬದವರ ಅವ ಕೃಪೆಗೆ ಗುರಿಯಾಗುವಿರಿ. ಸದಾ ನಿಮ್ಮಲ್ಲಿ ಉತ್ಸಾಹ ಮತ್ತು ಲವಲವಿಕೆ ಕಂಡುಬರುತ್ತದೆ. ಅನಾವಶ್ಯಕವಾಗಿ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡುವುದಿಲ್ಲ. ಉತ್ಸಾಹದಿಂದ ಬೇರೆಯವರ ಜವಾಬ್ದಾರಿಯನ್ನೂ ನಿರ್ವಹಿಸುತ್ತಾರೆ. ನಿಮ್ಮಲ್ಲಿರುವ ಗುಟ್ಟನ್ನು ಉಳಿಸಿಕೊಳ್ಳಲು ವಿಫಲರಾಗುವಿರಿ. ನಿಮ್ಮನ್ನು ನಂಬಿ ಬಂದವರಿಗೆ ಮೋಸ ಮಾಡದೆ ಸಹಾಯ ಮಾಡುವಿರಿ. ದಾನ ಧರ್ಮದ ಕಾರ್ಯದಲ್ಲಿ ನಿರತರಾಗುವಿರಿ. ಎಲ್ಲರನ್ನು ಸೋದರ ಪ್ರೇಮದಿಂದ ಕಾಣುವಿರಿ. ಆದರೆ ನಿಮ್ಮ ಮನಸ್ಸನ್ನು ಅರ್ಥ ಮಾಡಿಕೊಳ್ಳುವವರು ಬಲು ಕಡಿಮೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ ರಾಶಿ

ನಿಮ್ಮಲ್ಲಿ ವಿಶೇಷವಾಗಿ ಸಹನೆ ಮತ್ತು ನಾಯಕತ್ವದ ಗುಣಗಳಿವೆ. ಆದರೆ ಸಮಯವನ್ನು ಅರ್ಥಮಾಡಿಕೊಳ್ಳದೆ ಎಲ್ಲರೊಡನೆ ನಿಷ್ಟೂರವಾಗಿ ನಡೆದುಕೊಳ್ಳುವಿರಿ. ಇದರಿಂದ ಅನಾವಶ್ಯಕ ವಾದ ವಿವಾದಗಳು ಉಂಟಾಗುತ್ತವೆ. ಅನಾರೋಗ್ಯವಿರುತ್ತದೆ. ಮನದಲ್ಲಿ ಸದಾ ಕಾಲ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚಿಂತೆ ಇರುತ್ತದೆ. ಕರುಳಿನ ತೊಂದರೆ ನಿಮ್ಮನ್ನು ಬಾಧಿಸಬಹುದು. ನಿಮ್ಮ ಆಪ್ತ ಸ್ನೇಹಿತರಿಂದಲೇ ನಿಮ್ಮ ಕೆಲಸ ಕಾರ್ಯಗಳಿಗೆ ತೊಡಕು ಉಂಟಾಗುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮಿಥುನ ರಾಶಿ

ಪ್ರಾಣಿಗಳಿಂದ ಹಾನಿ ಇದೆ ಎಚ್ಚರಿಕೆ ಇರಲಿ. ಮೂತ್ರದ ಸೋಂಕು ನಿಮ್ಮನ್ನು ಬಧಿಸಲಿದೆ. ಬಂಧು-ಬಳಗದವರೊಬ್ಬರಿಂದ ನಿಮ್ಮ ಪ್ರಗತಿಗೆ ಅಡಚಣೆ ಉಂಟಾಗುತ್ತದೆ. ಸಮಾಜದ ಶ್ರೇಷ್ಠ ಪದವಿ ಪುರಸ್ಕಾರ ನಿಮಗೆ ದೊರೆಯಲಿದೆ. ಕುಟುಂಬದಲ್ಲಿ ಪರಸ್ಪರ ಬೇಧ ಭಾವದ ವಾತಾವರಣ ಉಂಟಾಗುತ್ತದೆ. ಸಂಬಂಧಿಕರ ಜೊತೆಯಲ್ಲಿ ನಡೆಯಬೇಕಾದ ವಿವಾಹವು ಮುಂದೂಡಲ್ಪಡುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ಆದಾಯದ ಮಿತಿಗಿಂತಲೂ ಹೆಚ್ಚಿನ ಖರ್ಚು ವೆಚ್ಚ ತಲೆದೋರುತ್ತದೆ. ಹಣದ ಕೊರತೆ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದಿಲ್ಲ. ಪ್ರವಾಸವೆಂದರೆ ಬಲು ಇಷ್ಟ ಆದರೆ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕಟಕ ರಾಶಿ

ನಿಮ್ಮ ಚುರುಕುತನವನ್ನು ಮೆಚ್ಚಿ ಸ್ನೇಹಿತರೊಬ್ಬರು ಸಹಾಯ ಮಾಡುತ್ತಾರೆ. ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಗಳು ಕಾಣಲಿವೆ. ನಿಮ್ಮಲ್ಲಿನ ಜಾಣ್ಮೆಯ ನಡೆ ನುಡಿ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಎದುರಾಗುವ ಅಡೆತಡೆಗಳನ್ನು ನಿವಾರಿಸಿ ಜೀವನದಲ್ಲಿ ಉನ್ನತಿ ಗಳಿಸುವಿರಿ. ಮೊದಲು ಫಲಿತಾಂಶದ ಬಗ್ಗೆ ಯೋಚಿಸಿ ನಂತರ ನಿಮ್ಮ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಯಾರ ಸಹಾಯವನ್ನು ಬಯಸುವುದಿಲ್ಲ. ನಿಮ್ಮ ಸ್ವಂತ ಸಾಮರ್ಥ್ಯ ಮತ್ತು ಪ್ರತಿಭೆಯ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ಸ್ತ್ರೀಯರಾಗಲಿ ಪುರುಷರಾಗಲಿ ಅಲಂಕಾರಕ್ಕೆ ವೇಳೆಯನ್ನು ಮೀಸಲಿಡುತ್ತಾರೆ. ಹೊಸ ವಿಚಾರಗಳನ್ನು ಕಲಿಯಬೇಕೆಂಬ ಮನಸಿರುತ್ತದೆ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಸಿಂಹ ರಾಶಿ

ಸಮಯ ವ್ಯರ್ಥ ಮಾಡದೆ ಯಾವುದಾದರೂ ಒಂದು ಕೆಲಸ ಕಾರ್ಯದಲ್ಲಿ ನಿರತರಾಗುವಿರಿ. ಗೃಹಿಣಿಯರಿಗೆ ವಿಶೇಷವಾದಂತಹ ಅನುಕೂಲತೆಗಳು ದೊರೆಯುತ್ತವೆ. ಬಂಧು ಬಳಗದವರ ಜೊತೆ ಉತ್ತಮ ಅನುಬಂಧ ಇರುತ್ತದೆ. ಅವರಿಗೆ ನಿಮ್ಮ ಮೇಲೆ ಅದೇ ಭಾವನೆ ಇರುವುದಿಲ್ಲ. ಬೇರೆಯವರಿಗೆ ಸಹಾಯ ಮಾಡಲು ಹಿಂಜರಿಯುವುದಿಲ್ಲ. ಕಷ್ಟ ನಷ್ಟದ ಸಂದರ್ಭದಲ್ಲಿ ಬುದ್ಧಿವಂತಿಕೆಯಿಂದ ಪಾರಾಗುವಿರಿ. ಕುಟುಂಬದಲ್ಲಿ ಅನಾವಶ್ಯಕ ಮನಸ್ತಾಪ ಇರುತ್ತದೆ. ಸರಿಯಾದ ಸಲಹೆ ಸೂಚನೆಗಳನ್ನು ನೀಡುವುದು ಒಳ್ಳೆಯದು. ಅತಿಯಾದ ಊಹೆ ಸಮಸ್ಯೆಗೆ ಕಾರಣವಾಗುತ್ತದೆ. ಮನದಲ್ಲಿಏನಾದರೂ ಒಂದು ಚಿಂತೆ ಇರುತ್ತದೆ. ಉತ್ತಮ ಆದಾಯವಿದ್ದರೂ ಹಣವನ್ನು ಉಳಿಸಲು ವಿಫಲರಾಗುವಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ

ಕನ್ಯಾ ರಾಶಿ

ನಿಮ್ಮ ಪ್ರಾಮಾಣಿಕತೆಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮಲ್ಲಿನ ಕಾರ್ಯದಕ್ಷತೆಗೆ ಉನ್ನತ ಗೌರವ ದೊರೆಯುತ್ತದೆ. ಬೇರೊಬ್ಬರ ಅಧೀನಕ್ಕೆ ಒಳಪಡದೆ ಸ್ವತಂತ್ರ ಜೀವನವನ್ನು ಇಷ್ಟಪಡುವಿರಿ. ಕುಟುಂಬದಲ್ಲಿ ಸದಾ ಕಾಲ ಸಂತೋಷ ಸಂಭ್ರಮ ಇರಲು ಕಾರಣರಾಗುವಿರಿ. ಕಲ್ಪನಾ ಜೀವಿಗಳು ನೆರೆಹೊರೆಯವರ ಜೊತೆಯಲ್ಲಿ ಉತ್ತಮ ಸ್ನೇಹ ಮತ್ತು ನಂಬಿಕೆ ಇರುತ್ತದೆ. ಎಂತಹ ಕಷ್ಟದ ಸಮಯವೆಂದರು ಸತ್ಯವನ್ನು ಹೇಳಲು ಇಷ್ಟಪಡುವಿರಿ. ಶಿಸ್ತುಬದ್ಧ ಜೀವನದಿಂದ ಎಲ್ಲರ ಗಮನ ಸೆಳೆಯುವಿರಿ. ನೀವಿರುವ ಕಡೆ ಹಾಸ್ಯಕ್ಕೆ ಬರದಿರುವುದಿಲ್ಲ. ಸಮಯವನ್ನು ಗೌರವಿಸುವಿರಿ. ನಿಮ್ಮ ಕಟ್ಟುನಿಟ್ಟಿನ ಮಾತುಗಳು ಹಲವರಿಗೆ ದಾರಿದೀಪವಾಗುತ್ತದೆ. ಹಣದ ತೊಂದರೆ ಇರುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 12

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ತುಲಾ ರಾಶಿ

ಕೇವಲ ನಿಮ್ಮ ಕುಟುಂಬವಲ್ಲದೆ ಸುತ್ತಮುತ್ತಲಿನ ವಾತಾವರಣ ಸಂತೋಷವಾಗಿರಲು ಕಾರಣವಾಗುವಿರಿ. ಹೊಗಳಿಕೆಗೆ ಮರುಳಾಗುವುದಿಲ್ಲ. ತಪ್ಪಾಗಿ ಅರ್ಥ ಮಾಡಿಕೊಂಡು ನೀವೇ ಅಪಾಯವನ್ನು ಆಹ್ವಾನಿಸುವಿರಿ. ಯಾವುದೇ ಬೆದರಿಕೆಗೆ ಬಗ್ಗುವುದಿಲ್ಲ. ಅವಿವಾಹಿತರಿಗೆ ಸಂಬಂಧ ಅಥವಾ ಪರಿಚಯದವರೊಂದಿಗೆ ವಿವಾಹ ನಿಶ್ಚಯವಾಗುತ್ತದೆ. ನವ ದಂಪತಿಗಳಿಗೆ ವಿಶೇಷವಾದಂತಹ ಅನುಕೂಲತೆಗಳು ದೊರೆಯಲಿವೆ. ಗೃಹಿಣಿಯರಿಗೆ ಅನಾರೋಗ್ಯ ಉಂಟಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ವಿದೇಶ ಅಥವಾ ದೂರದ ಸ್ಥಳಕ್ಕೆ ಪ್ರವಾಸ ಬೆಳೆಸುವಿರಿ. ಗಂಟಲಿನಲ್ಲಿ ತೊಂದರೆ ಉಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸವು ತೊಂದರೆ ಇಲ್ಲದೆ ನಿರಂತರವಾಗಿ ಸಾಗುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಭೂಮಿಯನ್ನು ಮಾರಾಟ ಮಾಡಬೇಕಾಗುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ

ವೃಶ್ಚಿಕ ರಾಶಿ

ನೀವಿರುವ ಸ್ಥಳದಲ್ಲಿ ಅಚ್ಚುಕಟ್ಟಿನ ವಾತಾವರಣ ಇರುತ್ತದೆ. ಶಿಸ್ತು ಬದ್ಧ ಜೀವನವನ್ನು ಇಷ್ಟಪಡುವಿರಿ. ನಿಮ್ಮ ಮಕ್ಕಳಿಗೆ ಶಿಸ್ತಿನ ಪಾಠವನ್ನು ಕಲಿಸುವಿರಿ. ಆದರೆ ಸಣ್ಣ ಪುಟ್ಟ ತಪ್ಪಿಗೂ ಸಿಡುಕುವಿರಿ. ಶಾಂತಿ ಸಂಯಮವನ್ನು ಕಾಪಾಡಿಕೊಂಡರೆ ಯಶಸ್ಸಿನ ಜೀವನ ನಿಮ್ಮದಾಗುತ್ತದೆ. ನಿಮಗೆ ವಿಶೇಷವಾದಂತಹ ಜನಾಕರ್ಷಕ ಶಕ್ತಿ ಇರುತ್ತದೆ. ಬೇರೆಯವರು ಅನುಕರಿಸಬೇಕಾದ ವಿಶೇಷ ಗುಣಗಳು ನಿಮ್ಮಲ್ಲಿರುತ್ತದೆ. ಸಹೋದ್ಯೋಗಿಗಳಿಗೆ ಸದಾ ಸಹಾಯ ಮಾಡುವಿರಿ. ಕುಟುಂಬಕ್ಕೆ ಯಾವುದೇ ಹಾನಿಯಾಗಲು ಬಿಡುವುದಿಲ್ಲ. ಹಣಕಾಸಿನ ತೊಂದರೆ ಇರುವುದಿಲ್ಲ. ಕೇವಲ ಕುಟುಂಬವಲ್ಲದೆ ಸಮಾಜದಲ್ಲಿಯೂ ನಿಮ್ಮ ಮಾತಿಗೆ ಗೌರವ ಲಭಿಸುತ್ತದೆ. ನಿಸ್ವಾರ್ಥದಿಂದ ಮಾಡುವ ಕೆಲಸ ಕಾರ್ಯಗಳಿಂದ ಸಮಾಜದಲ್ಲಿ ಉನ್ನತ ಕೀರ್ತಿ ಸಂಪಾದಿಸುವಿರಿ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಬೂದು

ಧನಸ್ಸು ರಾಶಿ

ಹೊಗಳು ಮಾತುಗಳಿಗೆ ಮರುಳಾಗಿ ತೊಂದರೆಯನ್ನು ಅನುಭವಿಸುವಿರಿ. ಸುಲಭವಾಗಿ ಮನಸ್ಸಿಟ್ಟು ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ಅಲ್ಪ ಪ್ರಮಾಣದ ಸೋಮಾರಿತನವು ನಿಮ್ಮನ್ನು ಕಾಡುತ್ತದೆ. ತೆಗೆದುಕೊಂಡ ತೀರ್ಮಾನಗಳನ್ನು ಬದಲಾಯಿಸದೆ ಹೋದಲ್ಲಿ ಯಶಸ್ಸು ದೊರೆಯುತ್ತದೆ. ಕುಟುಂಬದಲ್ಲಿ ಉತ್ತಮ ಬಾಂಧವ್ಯ ಇರಲಿದೆ. ಸಂಗಾತಿಯಿಂದ ನಿಮಗೆ ಹಣದ ಸಹಾಯ ದೊರೆಯುತ್ತದೆ. ಕೈ ಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ ಎಚ್ಚರಿಕೆ ಇರಲಿ. ಭೂ ವಿವಾದ ಒಂದು ಕಾನೂನಿನ ಮುಖಾಂತರ ಬಗೆಹರಿಯುತ್ತದೆ. ಕೋಪ ಬಂದಷ್ಟೇ ವೇಗವಾಗಿ ಮರೆಯಾಗುತ್ತದೆ. ಇದರಿಂದ ಸ್ನೇಹಿತರ ದಂಡು ನಿಮ್ಮೊಂದಿಗೆ ಇರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಂದು ಬಣ್ಣ

ಮಕರ ರಾಶಿ

ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರುತ್ತದೆ. ವಿದ್ಯಾರ್ಥಿಗಳು ವಿನೂತನ ಸಾಧನೆಯನ್ನು ಮಾಡಲಿದ್ದಾರೆ. ಮಕ್ಕಳಿಗೆ ಉದ್ಯೋಗ ಲಭಿಸಲಿದೆ. ಜೀವನದಲ್ಲಿನ ಕಷ್ಟ ನಷ್ಟಗಳು ಮರೆಯಾಗಲಿವೆ. ಕುಟುಂಬದಲ್ಲಿ ಸುಖ ಸಂತೋಷ ಮನೆಮಾಡುತ್ತದೆ. ಸಮಾಜದ ಬಗ್ಗೆ ವಿಶೇಷ ಗೌರವ ಇರುತ್ತದೆ. ಸಾಮಾಜಿಕ ನೀತಿ ನಿಯಮಗಳನ್ನು ಗೌರವಿಸುವಿರಿ. ಸಮಾಜದ ನಾಯಕತ್ವ ನಿಮ್ಮದಾಗುತ್ತದೆ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ತೋರವಿರಿ. ಯಾರಿಗೂ ಮೋಸ ಮಾಡದೆ ವಿಧೇಯತೆಯಿಂದ ವರ್ತಿಸುವಿರಿ. ನಿಮ್ಮ ಹಿರಿಯ ಅಧಿಕಾರಿಗಳು ಸಹ ನಿಮ್ಮನ್ನು ಗೌರವಿಸುತ್ತಾರೆ. ತಾಳ್ಮೆಯಿಂದ ಪ್ರತಿಯೊಬ್ಬರ ಮಾತನ್ನು ಆಲಿಸುವಿರಿ. ಉತ್ತಮ ಆದಾಯವಿದ್ದರೂ ಆಡಂಬರ ತೋರದೆ ಸರಳ ಜೀವನ ನಡೆಸುವಿರಿ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಕುಂಭ ರಾಶಿ

ನಿಮಗೆ ಒಪ್ಪಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಕಷ್ಟಪಟ್ಟು ಕೆಲಸ ಮಾಡಲು ಹಿಂಜರಿಯುವುದಿಲ್ಲ. ಶಾಂತಿ ಸಂಯಮದಿಂದ ಜೀವನವನ್ನು ನಡೆಸುವಿರಿ. ಚಿಕ್ಕ ಮಕ್ಕಳು ಸಹ ತಂದೆಯೊಡನೆ ಕೆಲಸವನ್ನು ನಿರ್ವಹಿಸಲು ಆರಂಭಿಸುತ್ತಾರೆ .ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಅನಾವಶ್ಯಕ ವಾದ ವಿವಾದ ಇರುತ್ತದೆ. ಸಹನಾಶೀಲತೆಯಿಂದ ಬಾಳುವಿರಿ. ಆತ್ಮೀಯರ ಬಗ್ಗೆ ಅನಾವಶ್ಯಕ ಸಂಶಯ ವ್ಯಕ್ತಪಡಿಸುವಿರಿ. ತಪ್ಪು ತಿಳುವಳಿಕೆಯಿಂದ ಹಣಕಾಸಿನ ವಿವಾದ ಒಂದನ್ನು ಎದುರಿಸಬೇಕಾಗುತ್ತದೆ. ನಿರಾಶೆಯನ್ನು ಒಪ್ಪದೆ ಕೋಪಕ್ಕೆ ಒಳಗಾಗುವಿರಿ. ಸಂಬಂಧಿಕರೊಬ್ಬರ ಸಹಾಯ ಸಹಕಾರದಿಂದ ಎದುರಾಗುವ ಕಷ್ಟದಿಂದ ಪಾರಾಗುವಿರಿ. ದಾಂಪತ್ಯ ಜೀವನದಲ್ಲಿ ಪರಸ್ಪರ ಹೊಂದಾಣಿಕೆ ಇರುತ್ತದೆ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ತಿಳಿಹಸಿರು

ಮೀನ ರಾಶಿ

ಯಾವುದೇ ಹಂತದಲ್ಲಿಯೂ ಆರಂಭಿಸಿದ ಕೆಲಸ ಕಾರ್ಯಗಳನ್ನು ನಿಲ್ಲಿಸುವುದಿಲ್ಲ. ಆದರೆ ಅನಾವಶ್ಯಕವಾಗಿ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ. ನಿಮ್ಮ ಮನಸ್ಸು ತಿಳಿ ನೀರಿನಂತೆ ಶುಭ್ರವಾಗಿರುತ್ತದೆ. ಆದರೆ ಮನಸ್ಸಿಟ್ಟು ಯಾವುದೇ ಕೆಲಸವನ್ನು ಮಾಡುವುದಿಲ್ಲ. ಹಿರಿಯ ಸೋದರಿ ಅಥವಾ ಸೋದರನಿಂದ ಅನುಕೂಲವಿರುತ್ತದೆ. ನಿಮಗೆ ಶೀತದಿಂದ ತಲೆನೋವು ಬರುವ ಸಾಧ್ಯತೆಗಳಿವೆ. ಬಂಧು-ಬಳಗದವರಿಂದ ಯಾವುದೇ ಸಹಾಯ ದೊರೆಯುವುದಿಲ್ಲ. ನಿಮ್ಮಿಂದ ಸಹಾಯ ಪಡೆದವರು ದೂರ ಸರಿಯುತ್ತಾರೆ. ಮನಸ್ಸಿನಲ್ಲಿ ಯಾವುದೋ ಒಂದು ಯೋಚನೆ ನಿಮ್ಮನ್ನು ಕಾಡುತ್ತದೆ. ಸಮಾಜದಲ್ಲಿರುವ ಒಳ್ಳೆಯ ಹೆಸರನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ಮನರಂಜನ ಸ್ಥಳಕ್ಕೆಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನಸುಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.