Tomorrow Horoscope: ಆತುರದಿಂದ ಕೆಲಸಕ್ಕೆ ಮುಂದಾಗಲ್ಲ, ಕೋಪ ಬಂದಷ್ಟೇ ಬೇಗ ಶಾಂತರಾಗುವಿರಿ; ನಾಳೆಯ ದಿನ ಭವಿಷ್ಯ
29h June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th June 2024 Horoscope)
ನಾಳಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶನಿವಾರ
ತಿಥಿ: ಅಷ್ಟಮಿ ಹ. 03.30 ರವರೆಗು ಇದ್ದು ಆನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ: ಉತ್ತರಾಭಾದ್ರ ನಕ್ಷತ್ರವು ಹ. 10.37 ರವರೆಗೆ ಇದ್ದು ಆನಂತರ ರೇವತಿ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.55
ಸೂರ್ಯಾಸ್ತ: ಸಂಜೆ 06.48
ರಾಹುಕಾಲ: ಬೆಳಗ್ಗೆ 09.14 ರಿಂದ 10.50
ಮೇಷ ರಾಶಿ
ವಿದ್ಯಾವಂತರ ಬಗ್ಗೆ ವಿಶೇಷ ಗೌರವವಿರುತ್ತದೆ. ಗುರು ಹಿರಿಯರಿಗೆ ಅಗತ್ಯವಾದಂತಹ ಸೌಲಭ್ಯವನ್ನು ಕಲ್ಪಿಸುವಿರಿ. ನಿಮ್ಮಲ್ಲಿ ಎಷ್ಟೇ ಬುದ್ಧಿವಂತಿಕೆ ಇದ್ದರೂ ಬೇಕಾದ ಸಮಯಕ್ಕೆ ಅದರ ಬಳಕೆ ಸಾಧ್ಯವಾಗುವುದಿಲ್ಲ. ಬಹು ಮುಖ್ಯವಾದ ಕೆಲಸವನ್ನು ಮಾಡಲು ಮರೆಯುವಿರಿ. ಅನಾರೋಗ್ಯದ ಕಾರಣ ವಿಶ್ರಾಂತಿಯನ್ನು ಬಯಸುವಿರಿ. ಸುಲಭವಾಗಿ ಯಾರ ಮೇಲೂ ನಂಬಿಕೆ ಉಂಟಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಓದಲು ಅಥವಾ ಬರೆಯಲು ಕುಳಿತರೆ ನಿದ್ದೆ ಆವರಿಸುತ್ತೆ. ಉದ್ಯೋಗದಲ್ಲಿ ಅನಗತ್ಯ ಅಡಚಣೆಗಳು ಎದುರಾಗಲಿವೆ. ಹವ್ಯಾಸಕ್ಕೆಂದು ಆರಂಭಿಸಿದ ಬರವಣಿಗೆಯು ಜೀವನಕ್ಕೆ ಆಧಾರವಾಗುತ್ತದೆ. ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೇಸರಿ
ವೃಷಭ ರಾಶಿ
ನಿಮ್ಮ ಮನದಲ್ಲಿ ಸಕಾರಾತ್ಮಕ ಭಾವನೆಗಳು ಉಂಟಾಗುತ್ತವೆ. ಮಹಿಳೆಯರು ಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೆ ಸಹಾಯ ಮಾಡುತ್ತಾರೆ. ಯಾರ ಮನಸ್ಸನ್ನೂ ನೋಯಿಸದೆ ಎಲ್ಲರೊಂದಿಗೆ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ನಿಮ್ಮ ಹುಟ್ಟೂರಿನಲ್ಲಿರುವ ಶಿಥಿಲಗೊಂಡ ದೇವಾಲಯವನ್ನು ಪುನರುಜ್ಜೀವನಗೊಳಿಸುವಿರಿ. ಈ ದಿನ ಬಹುತೇಕ ಒಳ್ಳೆಯ ಫಲಗಳನ್ನು ಪಡೆಯುವಿರಿ. ಚಿಕ್ಕ ಮಕ್ಕಳಿಗೆ ಯಾವುದಾದರೂ ಒಂದು ರೀತಿಯಲ್ಲಿ ತೊಂದರೆ ಇರುತ್ತದೆ. ಬಂಧು ಬಳಗದವರ ಸಮಸ್ಯೆಗಳನ್ನು ಪರಿಹರಿಸಿ ವಿಶೇಷ ಗೌರವಕ್ಕೆ ಪಾತ್ರರಾಗುವಿರಿ. ಸೋದರ ಮಾವನಿಗೆ ಹಣದ ಸಹಾಯ ಮಾಡುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ವಿಶೇಷವಾದ ಸಾಧನೆ ಮಾಡುತ್ತಾರೆ. ಬೇರೆಯವರ ತಪ್ಪನ್ನು ಖಂಡಿಸದೆ ತಿದ್ದುವಿರಿ. ಇದರಿಂದ ಎಲ್ಲರಿಗೂ ಬೇಕಾದ ವ್ಯಕ್ತಿಯಾಗಿ ಜೀವನ ಮಾಡುವಿರಿ.
ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮಿಥುನ ರಾಶಿ
ಅರಸಿ ಬಂದ ಜನಕ್ಕೆ ನಿಮ್ಮ ಕೈಲಾದ ಸಹಾಯವನ್ನು ಮಾಡುವಿರಿ. ಕೇವಲ ನಿಮ್ಮ ಮನೆ ಮಾತ್ರವಲ್ಲದೆ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವಿರಿ. ರೋಷ ದ್ವೇಷಕ್ಕೆ ಮಣಿಯದೆ ಪ್ರೀತಿ ವಿಶ್ವಾಸಕ್ಕೆ ತಲೆಬಾಗುವಿರಿ. ಧಾರ್ಮಿಕ ಕಾರ್ಯವೊಂದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಕುಟುಂಬದ ಹಿರಿಯರ ಬೆಂಬಲ ನಿಮಗೆ ದೊರೆಯುತ್ತದೆ. ಅನಿರೀಕ್ಷಿತವಾಗಿ ವಿಶೇಷವಾದ ಅನುಕೂಲತೆಗಳು ದೊರೆಯುತ್ತವೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಿರಿ. ಮಾಡುವ ಕೆಲಸ ಕಷ್ಟವೆನಿಸಿದರು ಅದರಿಂದ ಲಾಭ ಮತ್ತು ಒಳ್ಳೆಯ ಹೆಸರನ್ನು ನಿರೀಕ್ಷಿಸುವಿರಿ. ನಿಮ್ಮ ಮನಸ್ಸಿನಲ್ಲಿ ನೀವು ಮಾಡುವ ಕೆಲಸಗಳೆಲ್ಲ ಸರಿಯಾದವು ಎಂಬ ಭಾವನೆ ಇರುತ್ತದೆ.
ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೆಂಪು
ಕಟಕ ರಾಶಿ
ರಾಜಕೀಯಕ್ಕೆ ಪ್ರವೇಶಿಸಲು ಉತ್ತಮ ಅವಕಾಶ ದೊರೆಯುತ್ತದೆ. ಯಾವುದೇ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ನಿಮ್ಮ ನಿಯಂತ್ರಣಕ್ಕೆ ತಂದು ಕೊಳ್ಳುವಿರಿ. ಪ್ರತಿಯೊಂದು ವಿಚಾರದಲ್ಲಿಯೂ ಹೆಚ್ಚಿನ ಆಸಕ್ತಿ ತೋರುವುದರಿಂದ ಯಾವುದೇ ತೊಂದರೆ ಬಾರದು. ಸ್ವಾರ್ಥದ ಬುದ್ಧಿ ಇರುವುದಿಲ್ಲ. ಗುರು ಹಿರಿಯರನ್ನು ಗೌರವದಿಂದ ಕಾಣುವಿರಿ. ನೇರವಾದ ನಡೆ ನುಡಿ ಇರುವ ಕಾರಣ ಸ್ನೇಹಿತರು ಕಡಿಮೆ. ಆದರೆ ನೀವು ಯಾರನ್ನು ದ್ವೇಷಿಸುವುದಿಲ್ಲ. ಸಮಾಜದ ಮುಖ್ಯಸ್ಥರಾಗಿ ಬಾಳುವಿರಿ. ನಮ್ಮವರು ಬೇರೆಯವರು ಎಂಬ ತಾರತಮ್ಯ ತೋರುವುದಿಲ್ಲ. ಯಾರೇ ತಪ್ಪನ್ನು ಮಾಡಿದರು ಅದನ್ನು ಖಂಡಿಸುವಿರಿ. ಸ್ವಂತ ಕಾಲೇಜು ಆರಂಭಿಸುವ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸುವಿರಿ.
ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಿತ್ತಳೆ
ಸಿಂಹ ರಾಶಿ
ಎಲ್ಲರಿಗೂ ಅನುಕೂಲವಾಗುವಂತಹ ಕೆಲಸ ಕಾರ್ಯಗಳನ್ನು ಮಾಡುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗುತ್ತಾರೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಮಕ್ಕಳನ್ನು ಸನ್ಮಾರ್ಗದಲ್ಲಿ ಬೆಳೆಸುವಿರಿ. ನಿಮ್ಮ ನಿರೀಕ್ಷೆಯಂತೆ ಜೀವನದಲ್ಲಿ ಹಲವಾರು ಬದಲಾವಣೆಗಳು ಕಂಡುಬರುತ್ತವೆ. ದಾಂಪತ್ಯ ಜೀವನವು ಪ್ರೀತಿ ವಿಶ್ವಾಸದಿಂದ ಕೂಡಿರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪುವಿರಿ. ಅಧಿಕಾರದ ಬಗ್ಗೆ ಆಸೆ ಇರುವುದಿಲ್ಲ. ಆದರೆ ದೊರೆಯುವ ಅವಕಾಶವನ್ನು ಕೈ ಬಿಡುವುದಿಲ್ಲ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಸಮಯವನ್ನು ವ್ಯರ್ಥ ಮಾಡದೆ ಯಾವುದಾದರೂ ಒಂದು ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಒತ್ತಡಕ್ಕೆ ಮಣಿದು ನೌಕರಿಯನ್ನು ಬದಲಿಸುವಿರಿ.
ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಹಳದಿ
ಕನ್ಯಾ ರಾಶಿ
ಹಣಕಾಸಿನ ವಿಚಾರದಲ್ಲಿ ಮನಸ್ತಾಪವಿರುತ್ತದೆ. ಕುಟುಂಬದ ಹಿರಿಯರ ಜವಾಬ್ದಾರಿಯು ನಿಮ್ಮದಾಗಲಿದೆ. ವಂಶದಲ್ಲಿಯೇ ನಿಮಗೆ ವಿಶೇಷ ಗೌರವ ಲಭಿಸುತ್ತದೆ. ಮಕ್ಕಳನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಎಲ್ಲರ ಜೊತೆಯೂ ಗಂಭೀರವಾಗಿ ನಡೆದುಕೊಳ್ಳುವಿರಿ. ಸಂಚಾರ ಮಾಡುವುದರಲ್ಲಿ ಅತಿಯಾದ ಸಂತೋಷವಿರುತ್ತದೆ. ಆಕಸ್ಮಿಕವಾಗಿ ಆಗುವ ತಪ್ಪಿಗೂ ಪಶ್ಚಾತಾಪ ಪಡುವಿರಿ. ಸ್ವತಂತ್ರವಾದ ಉದ್ದಿಮೆಯನ್ನು ಆರಂಭಿಸುವ ಹಂಬಲವಿರುತ್ತದೆ. ನಿಮ್ಮ ಒಳ್ಳೆಯ ಪ್ರಭಾವಕ್ಕೆ ಎಲ್ಲರ ಸಹಾಯ ಸಹಕಾರ ದೊರೆಯುತ್ತದೆ. ಬಹುದಿನದ ನಂತರ ನಿಮ್ಮ ಕೆಲಸವೊಂದು ಆತ್ಮೀಯರ ಸಹಾಯದಿಂದ ನೆರವೇರುತ್ತದೆ. ಸಮಾಜದ ಗಣ್ಯ ವ್ಯಕ್ತಿಗಳ ಜೊತೆಯಲ್ಲಿ ಒಡನಾಟವಿರುತ್ತದೆ. ಪುಟ್ಟ ಮಕ್ಕಳ ಆಟ ಪಾಠಗಳಿಂದ ಮನದ ನೋವನ್ನು ಮರೆಯುವಿರಿ.
ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 7
ಅಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಸಿರು
ತುಲಾ ರಾಶಿ
ಕುಟುಂಬದ ಕಷ್ಟ ನಷ್ಟಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ನಿಮಗೆ ಅನುಕೂಲವಾಗುವಂತಹ ಬದಲಾವಣೆಗಳು ಕಂಡು ಬರಲಿವೆ. ಅಧಿಕಾರಿಗಳಾದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ಯುವಕ ಯುವತಿಯರು ವಿಶೇಷ ಅನುಕೂಲತೆಯನ್ನು ಪಡೆಯುತ್ತಾರೆ. ನಿವೃತ್ತಿಯ ನಂತರವೂ ಅನಿವಾರ್ಯವಾಗಿ ತಂದೆಯವರು ಕೆಲಸ ಮಾಡಬೇಕಾಗುತ್ತದೆ. ಪ್ರಾಮಾಣಿಕತೆಯಿಂದ ನಿಮ್ಮ ಕರ್ತವ್ಯವನ್ನು ಪಾಲಿಸುವಿರಿ. ತಂದೆ ಮಕ್ಕಳ ನಡುವೆ ಅಲ್ಪ ಪ್ರಮಾಣದ ಮನಸ್ತಾಪವಿರುತ್ತದೆ. ಕಲಾವಿದರು ವಿನೂತನ ಅವಕಾಶಗಳನ್ನು ಪಡೆದುಕೊಳ್ಳುತ್ತಾರೆ. ನಿಮ್ಮ ಮನಸ್ಸಿಗೆ ಬೇಸರವಾದಲ್ಲಿ ಹಿರಿಯ ಅಧಿಕಾರಿಗಳನ್ನು ನಿಂದಿಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಯಾರೊಂದಿಗೂ ಸಾಲದ ವ್ಯವಹಾರವನ್ನು ಮಾಡಲು ಇಷ್ಟಪಡುವುದಿಲ್ಲ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ
ವೃಶ್ಚಿಕ ರಾಶಿ
ನೆರೆಹೊರೆಯವರಿಗೆ ಅನುಕೂಲವಾಗುವಂತಹ ಕೆಲಸ ಕಾರ್ಯಗಳನ್ನು ರೂಪಿಸುವಿರಿ. ದಿನನಿತ್ಯದ ಸವಾಲುಗಳನ್ನು ಸುಲಭವಾಗಿ ಎದುರಿಸುವಿರಿ. ಸತತ ಪ್ರಯತ್ನದಿಂದ ಯಶಸ್ಸನ್ನು ಗಳಿಸುವಿರಿ. ಒಮ್ಮೆಯೂ ಯೋಚಿಸದೆ ಪ್ರಶ್ನೆಗೆ ತಕ್ಕಂತೆ ನೇರವಾದ ಉತ್ತರಗಳನ್ನು ನೀಡುವಿರಿ. ಕ್ಷಣಾರ್ಧದಲ್ಲಿ ಕೋಪ ಬರುತ್ತದೆ. ಯಾವುದೇ ಸಮಸ್ಯೆ ಎದುರಾದರೂ ಉಪಾಯದಿಂದ ಪಾರಾಗುವಿರಿ. ಆತಂಕದ ಮನೋಭಾವನೆಯಿಂದ ಬಳಲುವಿರಿ. ಒಂದು ಕೆಲಸ ಪೂರ್ಣಗೊಳ್ಳುವವರೆಗೂ ಮತ್ತೊಂದು ಕೆಲಸವನ್ನು ಆರಂಭಿಸುವುದಿಲ್ಲ. ಆತುರದಿಂದ ಕೆಲಸ ಕಾರ್ಯಗಳಲ್ಲಿ ತೊಡಗುವುದಿಲ್ಲ. ನಿಮ್ಮ ನಡವಡಿಕೆಯು ಬೇರೆಯವರಿಗೆ ಹೊಸ ಸ್ಪೂರ್ತಿಯನ್ನು ತುಂಬುತ್ತದೆ. ದಂಪತಿ ನಡುವೆ ಉತ್ತಮ ಬಾಂಧವ್ಯ ಉಂಟಾಗುತ್ತದೆ.
ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ನೇರಳೆ
ಧನಸ್ಸು ರಾಶಿ
ಸಂತೋಷವಾಗಲಿ ಅಥವಾ ದುಃಖವಾಗಲಿ ತಡೆಯಲಾರದೆ ಭಾವುಕತೆಯಿಂದ ವ್ಯಕ್ತಪಡಿಸುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯವಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ತೊಂದರೆ ಉಂಟಾದಲ್ಲಿ ಸಹನೆ ಕಳೆದುಕೊಳ್ಳುವಿರಿ. ಕೋಪಗೊಂಡರು ಅದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಸಣ್ಣ ಮಟ್ಟದ ಕೆಲಸ ಕಾರ್ಯವಾದರೂ ಹೆಚ್ಚಿನ ಉತ್ಸಾಹದಿಂದ ಆರಂಭಿಸುವಿರಿ. ಅನಾವಶ್ಯಕ ಚಿಂತೆ ಮಾಡುವುದಿಲ್ಲ. ನಿಮ್ಮ ನಿರಂತರ ಚಟುವಟಿಕೆ ಎಲ್ಲರಿಗೂ ಮಾದರಿಯಾಗುತ್ತದೆ. ಅನಿವಾರ್ಯವಾದಲ್ಲಿ ಕುಟುಂಬದ ಹಿರಿಯರು ನಿಮಗೆ ಸಹಾಯ ಮಾಡುತ್ತಾರೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಎಂದಿಗೂ ಬದಲಾಯಿಸುವುದಿಲ್ಲ. ಸೋಲನ್ನು ಲೆಕ್ಕಿಸದೆ ಕರ್ತವ್ಯದತ್ತ ಮುನ್ನುಗ್ಗುವಿರಿ. ನಿಮ್ಮಲ್ಲಿರುವ ಕ್ರೀಡಾಮನೋಭಾವನೆ ನಿಧಾನವಾಗಿ ಯಶಸ್ಸನ್ನು ನೀಡುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ನಿಮಗೆ ನೀವೇ ಹತ್ತಾರು ಕಟ್ಟುಪಾಡುಗಳನ್ನು ಹಾಕಿಕೊಳ್ಳುವಿರಿ.
ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ
ಮಕರ ರಾಶಿ
ಸಮಾಜದಲ್ಲಿ ಉನ್ನತ ಕೀರ್ತಿಗೆ ಪಾತ್ರರಾಗುವಿರಿ. ಸಮರ್ಪಣಾ ಮನೋಭಾವನೆಯಿಂದ ಕೈ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಆತುರದಿಂದ ತೊಂದರೆ ಆಗಬಹುದು. ಎಚ್ಚರಿಕೆ ವಹಿಸಿ ದಾಂಪತ್ಯ ಜೀವನದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಕೋಪ ಬಂದಾಗ ಉದ್ವೇಗದಿಂದ ವರ್ತಿಸುವಿರಿ. ಇದರಿಂದ ಎಲ್ಲರಿಗೂ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯ ಬರುವ ಸಾಧ್ಯತೆ ಇದೆ. ಸುಲಭವಾಗಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಜಯ ಲಭಿಸುವವರೆಗೂ ವಿಶ್ರಾಂತಿಯನ್ನು ಪಡೆಯುವುದಿಲ್ಲ. ಸಾಹಸದ ಗುಣ ನಿಮ್ಮಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ವಿಶೇಷವಾದಂತಹ ಆಸಕ್ತಿಯನ್ನು ತೋರಿಸುತ್ತಾರೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಕುತೂಹಲವಿರುತ್ತದೆ.
ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕುಂಭ ರಾಶಿ
ನೋಡಲು ಆಕರ್ಷಕವಾಗಿರುವ ವಸ್ತುಗಳನ್ನು ಕೊಳ್ಳುವಿರಿ. ಉದ್ಯೋಗ ಕ್ಷೇತ್ರದ ಪ್ರತಿಯೊಂದು ವಿಚಾರದಲ್ಲಿಯೂ ಮುಂದಾಳತ್ವ ವಹಿಸುವಿರಿ. ಸಂಗಾತಿ ಮಕ್ಕಳ ಜೊತೆ ಪ್ರವಾಸ ಮಾಡುವುದೆಂದರೆ ಬಲು ಇಷ್ಟ. ಕೋಪ ಬಂದಷ್ಟೇ ಬೇಗ ಶಾಂತರಾಗುವಿರಿ. ನವ ವಿವಾಹಿತರ ನಡುವೆ ಅನಗತ್ಯ ಮನಸ್ತಾಪವಿರುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತದೆ. ಹಣದ ಕೊರತೆಯನ್ನು ಎದುರಿಸುವಿರಿ. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳುವ ಯೋಜನೆ ರೂಪಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹಿನ್ನಡೆ ಇರುತ್ತೆ. ನಿಮ್ಮ ಹಠದ ಗುಣದಿಂದ ಕುಟುಂಬದಲ್ಲಿ ನೆಮ್ಮದಿಯ ಕೊರತೆ ಇರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಕಂದು
ಮೀನ ರಾಶಿ
ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ನಿಮಗೆ ವಿರೋಧಿಗಳಿದ್ದರೂ ಯಾವುದೇ ತೊಂದರೆ ಮಾಡಲಾರರು. ದಾಂಪತ್ಯದಲ್ಲಿ ಇದ್ದ ಭಿನ್ನಾಭಿಪ್ರಾಯಗಳು ಮರೆಯಾಗಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಅವಶ್ಯಕವಾದ ಖರ್ಚು ವೆಚ್ಚಗಳನ್ನು ಇಷ್ಟಪಡುವುದಿಲ್ಲ. ಮಕ್ಕಳಿಗೆ ಸ್ವಾತಂತ್ರ್ಯ ನೀಡಿದರು ಕುಟುಂಬದ ಗೌರವವನ್ನು ಕಾಪಾಡುತ್ತಾರೆ. ನಿರುದ್ಯೋಗಿಗಳಿಗೆ ಸಹಾಯ ಮಾಡುವಿರಿ. ಕಷ್ಟದಲ್ಲಿ ಇರುವವರಿಗೆ ಉತ್ತಮ ಮಾರ್ಗದರ್ಶನ ನೀಡುವಿರಿ. ಕಡಿಮೆ ಅವಧಿಯಲ್ಲಿಯೇ ಹೆಚ್ಚಿನ ಕೆಲಸವನ್ನು ನಿರ್ವಹಿಸುವಿರಿ. ಬೇರೆಯವರ ತಪ್ಪುಗಳನ್ನು ಜಾಣ್ಮೆಯಿಂದ ಸರಿಪಡಿಸುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
