Tomorrow Horoscope: ಸೋಲಿಗೆ ಹೆದರುವುದಿಲ್ಲ, ಅತಿಯಾದ ಬುದ್ಧಿವಂತಿಕೆ ಇರುತ್ತದೆ; ನಾಳೆಯ ದಿನ ಭವಿಷ್ಯ
30th June 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (30th June 2024 Horoscope)
ನಾಳಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ
ತಿಥಿ: ನವಮಿ ಹ. 01.04 ರವರೆಗು ಇದ್ದು ಆನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ: ರೇವತಿ ನಕ್ಷತ್ರವು ಬೆ. 08.58 ರವರೆಗೆ ಇದ್ದು ಆನಂತರ ಅಶ್ವಿನಿ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.56
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಸಂಜೆ 05.15 ರಿಂದ 06.51
ಮೇಷ ರಾಶಿ
ನೀರಸವಾದ ಜೀವನವನ್ನು ಇಷ್ಟಪಡುವುದಿಲ್ಲ. ಜೀವನದಲ್ಲಿ ಸದಾ ಸವಾಲುಗಳು ಎದುರಾಗಬೇಕೆಂದು ಬಯಸುವಿರಿ. ನಿಮ್ಮಲ್ಲಿರುವ ಆತ್ಮವಿಶ್ವಾಸ ಯಾವುದೇ ರೀತಿಯ ಸನ್ನಿವೇಶಕ್ಕೂ ಹೊಂದಿಕೊಳ್ಳಬಲ್ಲದು. ಅತ್ಯಲ್ಪ ಕಾಲದಲ್ಲಿ ಹೆಚ್ಚಿನ ಕೆಲಸವನ್ನು ಮಾಡಬಲ್ಲಿರಿ. ಆದರೆ ಸಹನೆ ಬಹಳ ಕಡಿಮೆ. ಸಣ್ಣಪುಟ್ಟ ತಪ್ಪುಗಳನ್ನು ಮನ್ನಿಸಲಾರದೆ ಹೋಗುವಿರಿ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ನಿಮಗೆ ಸಮಾಜದಲ್ಲಿ ನಾಯಕನ ಪಟ್ಟ ದೊರೆಯುತ್ತದೆ. ಮನೆಯಲ್ಲಿ ನೀವಿಲ್ಲದೆ ಯಾವುದೇ ಸರಳವಾದ ಕೆಲಸವೂ ನಡೆಯುವುದಿಲ್ಲ.
ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಪ್ಪು
ವೃಷಭ ರಾಶಿ
ಕಡಿಮೆ ಸಂಖ್ಯೆಯ ಸ್ನೇಹಿತರು ಇರುತ್ತಾರೆ. ಸ್ನೇಹಿತರನ್ನು ಅಭಿಮಾನದಿಂದ ಕಾಣುವಿರಿ. ಸಂತಸ ಸಂಭ್ರಮಕ್ಕೆ ಕೊನೆಗೆ ಇರುವುದಿಲ್ಲ. ಉತ್ತಮ ದೇಹ ದಾಡ್ಯತೆಗಾಗಿ ದೈಹಿಕ ವ್ಯಾಯಾಮವನ್ನು ಅನುಸರಿಸುವಿರಿ. ಸಣ್ಣಪುಟ್ಟ ಸೋಲಿಗೂ ಮಾನಸಿಕವಾಗಿ ಕುಗ್ಗುವಿರಿ. ಅನಾರೋಗ್ಯವಿರುತ್ತದೆ. ಮುಖ್ಯವಾಗಿ ತಲೆನೋವು ನಿಮ್ಮನ್ನು ಬಾಧಿಸುತ್ತದೆ. ಧೈರ್ಯಕ್ಕೆ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಸಹನಾಶೀಲರಾಗಿರುತ್ತಾರೆ. ಸ್ನೇಹಿತರ ಗುಂಪಿನಿಂದ ಹೊರಬಂದು ಏಕಾಂಗಿಯಾಗಿ ಕಲಿಕೆಯನ್ನು ಮುಂದುವರಿಸುತ್ತಾರೆ. ಪ್ರಾಮಾಣಿಕೆಯಿಂದ ನಡೆದುಕೊಳ್ಳುವಿರಿ. ನಿಮ್ಮ ವಯಸ್ಸಿನ ಜನರ ನಡುವೆ ಉನ್ನತ ಪಟ್ಟವನ್ನು ಅಲಂಕರಿಸುವಿರಿ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿಹಸಿರು
ಮಿಥುನ ರಾಶಿ
ವಂಶದ ಆಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ವಿಶೇಷವಾದ ಕಾರ್ಯಕ್ರಮವೊಂದು ನಡೆಯಲಿದೆ. ಉತ್ತಮ ಆರೋಗ್ಯಗಳಿಸಲು ಸರಿಯಾದ ಹಾದಿಯಲ್ಲಿ ನಡೆಯಬೇಕಾಗುತ್ತದೆ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವುದು ಅಸಾಧ್ಯವಾಗುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಹಣಕಾಸಿನ ವಿವಾದದಿಂದ ಹೊರಬರಲು ಕಾನೂನು ಕ್ರಮವನ್ನು ಅನುಸರಿಸುವಿರಿ. ಬಂದು ಮಿತ್ರರ ಮೇಲೆ ವಿಶೇಷವಾದ ಪ್ರೀತಿ ವಿಶ್ವಾಸ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗಲಿವೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಅತಿಯಾದ ಶಿಸ್ತಿನ ಕಾರಣ ಮಕ್ಕಳು ನಿಮ್ಮ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ.
ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕಟಕ ರಾಶಿ
ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಹಠದ ಗುಣದಿಂದಾಗಿ ಅಪೂರ್ವವಾದ ಅವಕಾಶವನ್ನು ಕಳೆದುಕೊಳ್ಳುವಿರಿ. ಹಣದ ಕೊರತೆ ಕಂಡುಬರುವುದಿಲ್ಲ. ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಡುವಿರಿ. ರುಚಿಕರ ಭೋಜನವನ್ನು ಆಸ್ವಾದಿಸುವಿರಿ. ಕಷ್ಟಕರ ಪರಿಸ್ಥಿತಿಯಲ್ಲಿಯೂ ಬುದ್ಧಿವಂತಿಕೆಯಿಂದ ಸುಖ ಜೀವನ ನಡೆಸುವಿರಿ. ಸಂದಿಗ್ದ ವಾತಾವರಣವೊಂದು ಎದುರಾಗಲಿದೆ. ಅತಿಯಾದ ದಾನದಿಂದ ಕಷ್ಟಕ್ಕೆ ಸಿಲುಕುವಿರಿ. ನೀವು ನಂಬಿದವರೆ ನಿಮ್ಮಿಂದ ಸುಲಭವಾಗಿ ಹಣವನ್ನು ಪಡೆಯುತ್ತಾರೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೀಲಿಮಿಶ್ರಿತ ಬಿಳಿ
ಸಿಂಹ ರಾಶಿ
ಬುದ್ಧಿವಂತಿಕೆಯಿಂದ ಅವಶ್ಯಕತೆ ಇರುವಷ್ಟು ಹಣವನ್ನು ಸಂಪಾದಿಸುವಿರಿ. ಯಾವುದೇ ಸಂದರ್ಭ ಎದುರಾದರೂ ಬೇರೆಯವರ ಅಧೀನದಲ್ಲಿ ಇರುವುದಿಲ್ಲ. ಐಷಾರಾಮಿ ಜೀವನಕ್ಕಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ಸರಿಯಲ್ಲದ ಆಹಾರ ಕ್ರಮವು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ದೇಹದ ತೂಕ ಹೆಚ್ಚುವ ಕಾರಣ ನೆಮ್ಮದಿ ಕಳೆದುಕೊಳ್ಳುವಿರಿ. ಗಂಟಲಿಗೆ ಸಂಬಂಧಪಟ್ಟಂತಹ ಅನಾರೋಗ್ಯ ನಿಮ್ಮನ್ನು ಕಾಡಲಿದೆ. ಸಂದಿಗ್ದಮಯ ಸಮಯ ಸನ್ನಿವೇಶಗಳನ್ನು ಸರಿಪಡಿಸಬಲ್ಲಿರಿ. ಬೇರೆಯವರಿಗೆ ಅಸಾಧ್ಯವಾದ ವಿಚಾರಗಳನ್ನು ಸುಲಭವಾಗಿ ತಿಳಿದುಕೊಳ್ಳುವಿರಿ. ಸೋಲಿಗೆ ಹೆದರುವುದಿಲ್ಲ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಕನ್ಯಾ ರಾಶಿ
ಆರಂಭಿಸಿದ ಕೆಲಸ ಕಾರ್ಯಗಳು ಸುಗಮವಾಗಿ ಸಾಗಲಾರದು. ಇದರಿಂದ ಬೇಸರಕ್ಕೆ ಒಳಗಾಗುವಿರಿ. ಹಾಸ್ಯ ಪ್ರಿಯರು. ಅನಾವಶ್ಯಕವಾಗಿ ಬೇರೆಯವರನ್ನು ಟೀಕಿಸುವಿರಿ. ಸದಾ ಉತ್ಸಾಹದಿಂದ ಜೀವನ ನಡೆಸುವಿರಿ. ಎಲ್ಲರೂ ಮೆಚ್ಚುವಂತೆ ಮಾತನಾಡುವಿರಿ. ಕುಟುಂಬದಲ್ಲಿ ನಡೆಯಬೇಕಿತ್ತ ವಿವಾಹವು ಮುಂದೂಡಲ್ಪಡುತ್ತದೆ. ನಿಮ್ಮ ಮನಸ್ಸನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಾಗದು. ವದಂತಿಯನ್ನು ಹರಡದೆ ಹೋದರು ವದಂತಿಯನ್ನು ಇಷ್ಟಪಡುವಿರಿ. ತಾಳ್ಮೆಯಿಂದ ವರ್ತಿಸುವುದಿಲ್ಲ. ಸಂಕೋಚದ ಸ್ವಭಾವ ಇರುವ ಕಾರಣ ನಿಮ್ಮ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿವೆ. ಅತಿಯಾದ ಬುದ್ಧಿವಂತಿಕೆ ಇರುತ್ತದೆ.
ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 2
ಅಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ತುಲಾ ರಾಶಿ
ಯಾವುದೇ ರೀತಿಯ ಸಮಸ್ಯೆಗಳು ಎದುರಾದರೂ ಸಹನೆ ಕಳೆದುಕೊಳ್ಳದೆ ಮಾತು ಕತೆಯಿಂದ ಸರಿಪಡಿಸುವಿರಿ. ನಿಮ್ಮ ಮನಸ್ಸಿಗೆ ಒಪ್ಪುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಎಲ್ಲದನ್ನು ಆಕರ್ಷಿಸುವಂತಹ ಗುಣ ನಿಮಗಿರುತ್ತದೆ. ನಿಮ್ಮ ಮಕ್ಕಳಿಗೆ ನಿಮ್ಮ ಮೇಲೆ ವಿಶೇಷವಾದ ಪ್ರೀತಿ ಇರುತ್ತದೆ. ದಂಪತಿಗಳ ನಡುವೆ ಉತ್ತಮ ಅನುಬಂಧ ಇರುತ್ತದೆ. ದುಡುಕಿನ ಮಾತುಗಳನ್ನಾಡುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಉತ್ತಮ ಬದಲಾವಣೆಗಳು ಕಂಡುಬರುವೆ. ಉದ್ಯೋಗ ಬದಲಿಸುವ ತೀರ್ಮಾನ ಮಾಡುವಿರಿ. ಕುಟುಂಬದ ಹಿರಿಯರ ಜವಾಬ್ದಾರಿಯನ್ನು ಗೌರವದಿಂದ ಒಪ್ಪಿಕೊಳ್ಳುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ನೌಕರರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ.
ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಆಕಾಶ ನೀಲಿ
ವೃಶ್ಚಿಕ ರಾಶಿ
ಮನೆಯ ಜನರಲ್ಲಿ ಪರಸ್ಪರ ಹೊಂದಾಣಿಕೆಯ ಬುದ್ಧಿ ಇರುತ್ತದೆ. ಪ್ರೀತಿ ಮಮತೆಯಿಂದ ಮಕ್ಕಳನ್ನು ನೋಡಿಕೊಳ್ಳುವಿರಿ. ವಿಶೇಷ ಚೇತನರಿಗೆ ಜೀವನ ನಡೆಸಲು ಸಹಾಯ ಮಾಡುವಿರಿ. ಕಲಾವಿದರಿಗೆ ವಿಶೇಷ ವ್ಯಕ್ತಿಯನ್ನು ಭೇಟಿಯಾಗುವ ಅವಕಾಶ ದೊರೆಯುತ್ತದೆ. ನಿಮ್ಮಲ್ಲಿರುವ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಸಮಾನ ಮಸ್ಕರೊಂದಿಗೆ ಸ್ನೇಹವನ್ನು ಬೆಳೆಸುವಿರಿ. ಧಾರ್ಮಿಕ ಆಚರಣೆಯಲ್ಲಿ ನಂಬಿಕೆ ಇರುತ್ತದೆ. ಇಲ್ಲಸಲ್ಲದ ಅಪವಾದಗಳು ಎದುರಾಗಲಿವೆ. ಮಕ್ಕಳ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಲಭಿಸುತ್ತದೆ. ಮನದಲ್ಲಿ ಕೋಪವಿದ್ದರೂ ಕೆಲಸ ಕಾರ್ಯಗಳಲ್ಲಿ ತೊಂದರೆಯಾಗುವುದಿಲ್ಲ. ನಿಮ್ಮ ಆತ್ಮೀಯ ಸ್ನೇಹಿತರೊಬ್ಬರಿಂದಲೇ ಸಮಸ್ಯೆಯೂ ಉಂಟಾಗುತ್ತದೆ. ಉದ್ಯೋಗದ ವಿಚಾರದಲ್ಲಿ ದೊರಕುವ ಅವಕಾಶಗಳ ಆಯ್ಕೆಯಲ್ಲಿ ಗಲಿಬಿಲಿಗೊಳ್ಳುವಿರಿ.
ಪರಿಹಾರ: ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಧನಸ್ಸು ರಾಶಿ
ನಿಮ್ಮಲ್ಲಿರುವ ತರ್ಕದ ಗುಣ ಕೆಲವರಿಗೆ ಬೇಸರ ಮೂಡಿಸುತ್ತದೆ. ನಿಮ್ಮ ಬುದ್ಧಿಶಕ್ತಿಯು ವಿಶೇಷವಾಗಿ ಇರುತ್ತದೆ. ಸೌಂದರ್ಯಕ್ಕೆ ಮರುಳಾಗುವುದಿಲ್ಲ. ಬುದ್ಧಿವಂತರನ್ನು ಮೆಚ್ಚಿ ಅವರಿಗೆ ಸಹಾಯ ಮಾಡುವಿರಿ. ನಿಮ್ಮ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಸಂಗಾತಿಯು ದೊರೆಯುತ್ತಾರೆ. ಹೆಣ್ಣು ಮಕ್ಕಳನ್ನು ವಿಶೇಷವಾದ ಗೌರವದಿಂದ ಕಾಣುವಿರಿ. ನಿಷ್ಠೆಯಿಂದ ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಹಣಕಾಸಿನ ಗಳಿಕೆಯೊಂದೇ ಜೀವನವಲ್ಲ ಎಂದು ಪ್ರತಿಬಿಂಬಿಸುವಿರಿ. ಆದರೂ ಮುಂದಿನ ಉತ್ತಮ ಜೀವನಕ್ಕಾಗಿ ಹಣವನ್ನು ಉಳಿಸುವಿರಿ. ಇಂದಿನ ಸೋಲನ್ನು ಮರೆತು ಮುಂದಿನ ಗೆಲುವಿಗೆ ಸಿದ್ದರಾಗುವಿರಿ.
ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಎಲೆಹಸಿರು
ಮಕರ ರಾಶಿ
ಮನದಲ್ಲಿ ಅಂಜಿಕೆಯ ಸ್ವಭಾವ ಇರುವುದಿಲ್ಲ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಸೌಮ್ಯವಾಗಿದ್ದರು ಕೋಪ ಬಂದಾಗ ಉದ್ವೇಗದಿಂದ ವರ್ತಿಸುವಿರಿ. ನಿಮ್ಮಲ್ಲಿರುವ ಹಠದ ಗುಣ ಜೊತೆಯಲ್ಲಿರುವವರಿಗೆ ಬೇಸರ ಉಂಟುಮಾಡುತ್ತದೆ. ಪ್ರಾಣಿಗಳ ಬಗ್ಗೆ ಕರುಣೆ ಇರುತ್ತದೆ. ನಿಮ್ಮಲ್ಲಿರುವ ಹಣದ ಅಲ್ಪ ಭಾಗವನ್ನು ದಾನ ಧರ್ಮಕ್ಕೆ ಉಪಯೋಗಿಸುವಿರಿ. ಕಷ್ಟ ನಷ್ಟಗಳಿಗೆ ಬಲಿಯಾಗದೆ ಪಾಲಾಗುವಿರಿ. ಯಾವುದೇ ಕೆಲಸ ಆರಂಭಿಸಲು ತಡ ಮಾಡುವುದಿಲ್ಲ. ನಿಮ್ಮಲ್ಲಿರುವ ಕ್ರಿಯಾಶೀಲತೆ ಅಚ್ಚರಿಯನ್ನು ಉಂಟುಮಾಡುತ್ತದೆ. ನಿಮ್ಮ ಮನದಲ್ಲಿ ಮೂಡುವ ಯೋಜನೆಗಳಿಗೆ ಜೀವ ತುಂಬುವಿರಿ. ಅವಸರಕ್ಕೆ ಒಳಗಾದರೆ ಕೆಲಸ ಕಾಯಗಳಲ್ಲಿ ಹಿನ್ನೆಡೆ ಉಂಟಾಗುತ್ತದೆ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ
ಕುಂಭ ರಾಶಿ
ಚಂಚಲವಾದ ಮನಸ್ಸಿರುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಅನಾವಶ್ಯಕವಾಗಿ ಬದಲಿಸುವಿರಿ. ಮಿತಿಮೀರಿದ ಆಸೆ ಮನಸ್ಸಿನ ನೆಮ್ಮದಿಯನ್ನು ದೂರ ಮಾಡುತ್ತದೆ. ಕೆಲಸ ಕಾರ್ಯಗಳು ಅಪೂರ್ಣವಾಗುತ್ತವೆ. ಕೋಮಲವಾದ ಮನಸ್ಸಿರುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪುವಿರಿ. ಆತ್ಮ ಗೌರವಕ್ಕೆ ತೊಂದರೆ ಎನಿಸುವ ಕೆಲಸವನ್ನು ಮಾಡುವುದಿಲ್ಲ. ಸಂತಾನ ಲಾಭವಿದೆ. ಮನಸ್ಸಿಲ್ಲದೆ ಹೋದರು ಸಂಬಂಧಿಕರಿಗೆ ಹಣದ ಸಹಾಯ ಮಾಡುವಿರಿ. ಹಣಕಾಸಿನ ವಿಚಾರದಲ್ಲಿ ತಪ್ಪಾದ ನಿರ್ಧಾರವನ್ನು ತೆಗೆದುಕೊಳ್ಳುವಿರಿ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮೀನ ರಾಶಿ
ಸ್ವಂತ ಉದ್ದಿಮೆ ಇದ್ದಲ್ಲಿ ಎಚ್ಚರಿಕೆಯಿಂದ ಇರಬೇಕು. ಮಕ್ಕಳಿಗೆ ಕಫದ ತೊಂದರೆ ಇರುತ್ತದೆ. ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಮನದ ಭಾವನೆಗಳನ್ನು ಹತ್ತಿಕ್ಕಲು ಸಾಧ್ಯವಾಗುವುದಿಲ್ಲ. ಹಳೆಯ ಸೋಲಿಗೆ ಸಮಯ ವ್ಯರ್ಥ ಮಾಡದೆ ಗೆಲುವಿನತ್ತ ಸಾಗುವಿರಿ. ಸಂಗಾತಿಯ ಸುಖ ಸಂತೋಷಕ್ಕಾಗಿ ಯಾವುದೇ ತ್ಯಾಗವನ್ನು ಮಾಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಯಾರಿಗೂ ತಿಳಿಯದಂತೆ ಹಣ ಸಂಗ್ರಹ ಮಾಡುವಿರಿ. ಎಂತಹ ಸಂದರ್ಭ ಬಂದರು ಯಾರಿಂದಲೂ ಹಣವನ್ನು ಪಡೆಯುವುದಿಲ್ಲ. ಸೌಂದರ್ಯಪ್ರಿಯರು. ಮನೆಯ ಮಂದಿಯ ಜೊತೆ ಬೇಸರ ಕಳೆಯಲು ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ.
ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)