Tomorrow Horoscope: ಶತ್ರುಗಳು ಮಿತ್ರರಾಗುತ್ತಾರೆ, ಹಣಕಾಸಿನ ತೊಂದರೆ ಇರಲ್ಲ; ಭಾನುವಾರದ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಶತ್ರುಗಳು ಮಿತ್ರರಾಗುತ್ತಾರೆ, ಹಣಕಾಸಿನ ತೊಂದರೆ ಇರಲ್ಲ; ಭಾನುವಾರದ ದಿನಭವಿಷ್ಯ

Tomorrow Horoscope: ಶತ್ರುಗಳು ಮಿತ್ರರಾಗುತ್ತಾರೆ, ಹಣಕಾಸಿನ ತೊಂದರೆ ಇರಲ್ಲ; ಭಾನುವಾರದ ದಿನಭವಿಷ್ಯ

10 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಭಾನುವಾರದ ದಿನಭವಿಷ್ಯ ಹೀಗಿದೆ..

ಭಾನುವಾರದ ದಿನಭವಿಷ್ಯ
ಭಾನುವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 10 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಅಮಾವಾಸ್ಯೆ ಬೆ.03.22 ರವರೆಗು ಇದ್ದು ಆನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಭಾದ್ರ ನಕ್ಷತ್ರವು ರಾ.03.37 ರವರೆಗೆ ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.28

ರಾಹುಕಾಲ : ಸ.04.30 ರಿಂದ ಸ.06.00

ರಾಶಿ ಫಲಗಳು

ಮೇಷ

ಮನದಲ್ಲಿ ಸದಾಕಾಲ ಒಳ್ಳೆಯ ಯೋಚನೆಗಳು ಮೂಡುತ್ತವೆ. ಇದರಿಂದಾಗಿ ಕುಟುಂಬದ ಎಲ್ಲರ ಸಹಾಯ ಸಹಕಾರ ದೊರೆಯಲಿದೆ. ಕುಟುಂಬದ ಜವಾಬ್ದಾರಿಯು ಕಡಿಮೆಯಾಗುತ್ತದೆ. ಸಹೋದ್ಯೋಗಿಗಳ ಒಲವನ್ನು ಗಳಿಸುವಿರಿ. ಹೊಸ ನಿರೀಕ್ಷೆಗಳ ಕಾರಣ ಉದ್ಯೋಗವನ್ನು ಬದಲಿಸಬಹುದು. ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿಸುವ ಯೋಜನೆ ರೂಪಿಸುವಿರಿ. ನಿಮ್ಮ ಹಣಕಾಸಿನ ವ್ಯವಹಾರಗಳಿಗೆ ಆತ್ಮೀಯರ ಸಹಕಾರವಿರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲವು ದೊರೆಯುತ್ತದೆ. ಆಕಸ್ಮಿಕವಾಗಿ ವಿವಾಹ ನಿಶ್ಚಯವಾಗಬಹುದು. ಆತ್ಮೀಯರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಮನೆಯ ದುರಸ್ತಿಗಾಗಿ ಹಣವನ್ನು ಹೊಂದಿಸಬೇಕಾಗಬಹುದು.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಷಭ

ಆತ್ಮೀಯರು ನಡೆಸುವ ಸಂತೋಷಕೂಟದಲ್ಲಿ ಭಾಗವಹಿಸಲು ತೆರಳುವಿರಿ. ಅತಿಯಾದ ಆಹಾರ ಸೇವನೆಯಿಂದ ದೂರವಿರುವುದು ಒಳ್ಳೆಯದು. ಕುಟುಂಬದಲ್ಲಿನ ಜವಾಬ್ದಾರಿಯು ನಿಮ್ಮದಾಗಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರುಪೇರು ಕಂಡು ಬರಬಹುದು. ಹಣಕಾಸಿನ ಕೊರತೆಯನ್ನು ಎದುರಿಸುವಿರಿ. ಕುಟುಂಬದ ಸದಸ್ಯರೊಬ್ಬರ ವಿವಾಹಕ್ಕೆ ಹಣದ ಅವಶ್ಯಕತೆ ಇರುತ್ತದೆ. ಮಿತ್ರರೊಬ್ಬರ ಆಗಲಿಕೆ ಮನಸ್ಸಿಗೆ ನೋವನ್ನು ಉಂಟುಮಾಡುತ್ತದೆ. ಭವಿಷ್ಯದ ಬಗ್ಗೆ ಯೋಚಿಸದೆ ಪ್ರಸಕ್ತ ಸನ್ನಿವೇಶಕ್ಕೆ ಹೊಂದಿಕೊಂಡು ನಡೆಯುವಿರಿ. ಸಾಂಸಾರಿಕ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಉದ್ಯೋಗದಲ್ಲಿನ ಗೌರವವಿತ ಸ್ಥಾನಮಾನ ದೊರೆಯುತ್ತದೆ. ಮೊಮ್ಮಕ್ಕಳ ಆಗಮನ ಕುಟುಂಬದ ಆನಂದವನ್ನು ಹೆಚ್ಚಿಸುತ್ತದೆ. ನಿರೀಕ್ಷಿಸಿದ ಘಟನೆಗಳು ನಡೆಯದೇ ಹೋದಲ್ಲಿ ಬೇಸರಕ್ಕೆ ಒಳಗಾಗುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

ಮಿಥುನ

ಗೆಲ್ಲಲೇ ಬೇಕೆಂಬ ತೀರ್ಮಾನದಿಂದ ದಿನವನ್ನು ಆರಂಭಿಸುವಿರಿ. ಮನದಲ್ಲಿ ಧೈರ್ಯ ಮತ್ತು ಸಾಹಸದ ಗುಣ ಮನೆ ಮಾಡುತ್ತದೆ. ಕ್ಲಿಷ್ಟಕರ ಕೆಲಸ ಕಾರ್ಯಗಳನ್ನು ಸಹ ಸರಳಗತಿಯಲ್ಲಿ ಮಾಡಿ ಮುಗಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಮನಸ್ಸಿಗೆ ಬೇಸರವನ್ನು ಉಂಟುಮಾಡುತ್ತದೆ. ಓಡಾಟದಿಂದ ಯಾವುದೇ ಕೆಲಸ ಸಿದ್ಧಿಸುವುದಿಲ್ಲ. ನಿಮ್ಮಲ್ಲಿರುವ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಕುಟುಂಬಕ್ಕೆ ಸಂಬಂಧಿಸಿದ ಅತಿ ಮುಖ್ಯವಾದ ಕೆಲಸವೊಂದನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಸಹೋದ್ಯೋಗಿಗಳ ಸಹಾಯ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎದುರಾಗುವ ವಿಪತ್ತನ್ನು ಸುಲಭವಾಗಿ ಗೆಲ್ಲುವಿರಿ. ಬಹುದಿನದ ಹಗರಣವೊಂದು ಸುಖಾಂತ್ಯಗೊಳ್ಳುತ್ತದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕಟಕ

ಕುಟುಂಬದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಮೂಡುವುದಿಲ್ಲ. ಉತ್ತಮ ಪ್ರಯತ್ನ ಇಲ್ಲದೆ ಹೋದರು ಉದ್ಯೋಗದಲ್ಲಿ ಯಶಸ್ಸನ್ನು ಕಾಣುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿಮ್ಮ ನಿಯಂತ್ರಣ ತಪ್ಪಬಹುದು. ಆತ್ಮೀಯರ ಸಹಕಾರದಿಂದ ಹಣದ ತೊಂದರೆಯಿಂದ ಹೊರಬರುವಿರಿ. ವಿದ್ಯಾರ್ಥಿಗಳು ಮನರಂಜನೆಯಿಂದ ದೂರವಿದ್ದು ಕಲಿಕೆಯಲ್ಲಿ ಯಶಸ್ಸನ್ನು ಗಳಿಸುತ್ತಾರೆ. ರಕ್ತಕ್ಕೆ ಸಂಬಂಧಪಟ್ಟ ದೋಷವಿದ್ದಲ್ಲಿ ಎಚ್ಚರಿಕೆ ವಹಿಸಿ. ಹಣ ಉಳಿತಾಯ ಮಾಡುವ ಗುರಿ ಇದ್ದರು ವಿಫಲರಾಗುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ನಿಮ್ಮದಾಗುತ್ತದೆ. ಆತ್ಮೀಯರೊಬ್ಬರು ತಪ್ಪು ಗ್ರಹಿಕೆಯಿಂದ ನಿಮ್ಮಿಂದ ದೂರವಾಗಬಹುದು. ದಿನನಿತ್ಯದ ಆಗುಹೋಗುಗಳ ಬಗ್ಗೆ ಎಚ್ಚರಿಕೆ ಇರಲಿ. ಸಂಗಾತಿಯೊಂದಿಗೆ ಸಂತಸದಿಂದ ಬಾಳುವಿರಿ. ಆರೋಗ್ಯಕ್ಕೆ ಹಾನಿಕರವಾಗುವ ಅಭ್ಯಾಸಗಳಿಂದ ದೂರವಿರಲು ಪ್ರಯತ್ನಿಸಿ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಸಿಂಹ

ಕುಟುಂಬದ ಹೆಚ್ಚಿನ ಜವಾಬ್ದಾರಿ ನಿಮ್ಮ ವಿಶ್ರಾಂತಿಯನ್ನು ಕಸಿಯುತ್ತದೆ. ಕುತೂಹಲ ಮತ್ತು ಕ್ರಿಯಾಶೀಲತೆ ನಿಮ್ಮ ಜೀವನಕ್ಕೆ ಹೊಸ ಅರ್ಥ ನೀಡುತ್ತದೆ. ಎಲ್ಲರಿಗೂ ಸಹಾಯ ಮಾಡುವ ಗುಣ ಮೆಚ್ಚುಗೆಗೆ ಪಾತ್ರವಾಗುತ್ತದೆ. ಆದರೆ ಮಾನಸಿಕ ಒತ್ತಡ ಹೆಚ್ಚುತ್ತದೆ. ಆರೋಗ್ಯದಲ್ಲಿ ಕ್ಷಿಪ್ರ ಬದಲಾವಣೆಗಳು ಕಂಡು ಬರಲಿವೆ. ಉದ್ಯೋಗದಲ್ಲಿಅನಿವಾರ್ಯವಾಗಿ ನಿಮ್ಮ ಜವಾಬ್ದಾರಿಯನ್ನು ಬೇರೆಯವರು ನಿರ್ವಹಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಕುಂದುತ್ತದೆ. ಅಗತ್ಯವಿದ್ದ ವಸ್ತುಗಳನ್ನು ಮಾತ್ರ ಕೊಳ್ಳುವ ಕಾರಣ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ವಿವಾದದಿಂದ ದೂರವಾಗುವ ಸಲುವಾಗಿ ನಿಮಗೆ ನೀವೇ ಮಾತಿನ ನಿರ್ಬಂಧಕ್ಕೆ ಒಳಪಡುವಿರಿ. ಸಂಗಾತಿಯಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಸುಲಭವಾಗಿ ನಿಮ್ಮನ್ನು ಯಾರು ಸಮಾಧಾನಪಡಿಸಲಾರರು. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯಬೇಕಾಗುತ್ತದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕನ್ಯಾ

ಮನೆಯಲ್ಲಿಯೇ ಇರುವುದು ನಿಮಗೆ ಬೇಸರದ ಸಂಗತಿ. ಹಾಗೆಯೇ ಸದಾಕಾಲ ಕೆಲಸವನ್ನು ಮಾಡಲು ಸಿದ್ಧರಿಲ್ಲ. ಚಿಕ್ಕ ಪುಟ್ಟ ವಿಚಾರಗಳಿಗೂ ಸಿಡುಕಿನಿಂದ ವರ್ತಿಸುವಿರಿ. ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಬಹುದು. ಆದರೆ ನಿಮ್ಮ ಸಹಾಯಕ್ಕೆ ಬೇರೊಬ್ಬರು ಸಿದ್ದರಿರುತ್ತಾರೆ. ವಯಸ್ಸಿನ ಭೇದವಿಲ್ಲದೆ ಹೊರಾಂಗಣ ಕ್ರೀಡೆಗಳಲ್ಲಿ ಭಾಗವಹಿಸುವಿರಿ. ನಿಮ್ಮ ತಪ್ಪನ್ನು ಮುಚ್ಚಿಟ್ಟು ಬೇರೆಯವರ ತಪ್ಪನ್ನು ಟೀಕಿಸುವಿರಿ. ಆದರೆ ಸಂತೋಷ ಸಂಭ್ರಮಗಳಿಗೆ ಪಾರವಿರುವುದಿಲ್ಲ. ಸುತ್ತಮುತ್ತಲಿನ ಜನರ ವಿಶ್ವಾಸವನ್ನು ಗಳಿಸಿ ಸಂತಸದಿಂದ ಬಾಳುವಿರಿ. ಸಂಗಾತಿಯ ಮನಸ್ಸಿಗೆ ನೋವನ್ನುಂಟು ಮಾಡುವುದಿಲ್ಲ. ಎಲ್ಲರೊಂದಿಗೆ ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಅನಗತ್ಯ ಯೋಚನೆ ತಲೆ ನೋವಿಗೆ ಕಾರಣವಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ತುಲಾ

ಮುಖ್ಯವಾದ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಬಯಸುವಿರಿ. ಇದರಿಂದ ವಿಶ್ರಾಂತಿ ಇಲ್ಲದಂತಾಗುತ್ತದೆ. ಅನಾವಶ್ಯಕ ಚಿಂತೆ ಕುಟುಂಬದ ನೆಮ್ಮದಿಯನ್ನು ಕಡಿಮೆ ಮಾಡುತ್ತದೆ. ಕಾದು ನೋಡುವ ತಂತ್ರ ಒಳ್ಳೆಯದು. ಎಲ್ಲರೊಂದಿಗೆ ಸಹನೆಯಿಂದ ವರ್ತಿಸಿದರೆ ಯಾವುದೇ ತೊಂದರೆ ಇರದು. ಉದ್ಯೋಗದ ಬಹುದಿನದ ಕಾರ್ಯಯೋಜನೆಯೊಂದು ಪೂರ್ಣಗೊಳ್ಳಲಿದೆ. ಹೊಸತನದ ನಿರೀಕ್ಷೆ ನವ ಚೈತನ್ಯವನ್ನು ತುಂಬಲಿದೆ. ವ್ಯಾಪಾರ ವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹಣಕಾಸಿನ ತೊಂದರೆ ಕಂಡುಬರದು. ದೈಹಿಕವಾಗಿ ಸದೃಢರಾಗುವಿರಿ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮುಖ್ಯಸ್ಥಾನವನ್ನು ಅಲಂಕರಿಸುವಿರಿ. ಕೆಲಸದ ನಿಮಿತ್ತ ಕುಟುಂಬದಿಂದ ದೂರದ ಸ್ಥಳದಲ್ಲಿ ಉಳಿಯ ಬೇಕಾಗಬಹುದು.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ವೃಶ್ಚಿಕ

ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕ ಶಕ್ತಿಯು ಕಡಿಮೆಯಾಗುತ್ತದೆ. ವಿಶ್ರಾಂತಿಯ ಅಗತ್ಯತೆ ಬಹಳವಿದೆ. ಮುಖ್ಯವಾಗಿ ಗೃಹಿಣಿಯರ ಆರೋಗ್ಯದಲ್ಲಿ ತೊಂದರೆ ಇರಬಹುದು. ಕುಟುಂಬದಲ್ಲಿ ಹೊಂದಾಣಿಕೆ ಮೇಲುಗೈ ಸಾಧಿಸುತ್ತದೆ. ಉದ್ಯೋಗದಲ್ಲಿ ನಿಮ್ಮ ಅವಕಾಶ ಬೇರೆಯವರ ಪಾಲಾಗಬಹುದು. ಆದರೆ ಆತ್ಮೀಯರ ಸಹಾಯದಿಂದ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಬಹುದು. ಆಸ್ತಿಯ ವಿವಾದವಿದ್ದಲ್ಲಿ ಎಚ್ಚರಿಕೆ ವಹಿಸಿ. ಹೊಸ ಬಗೆಯ ವ್ಯಾಪಾರ ವ್ಯವಹಾರಗಳನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ಆವಿಷ್ಕಾರ ಮನೋಭಾವನೆಯನ್ನು ಹೊಂದಿರುತ್ತಾರೆ. ವಿದೇಶಕ್ಕೆ ವಿಶೇಷ ಅಭ್ಯಾಸ ಮಾಡಲು ತೆರಳಬಹುದು. ಒಳ್ಳೆಯ ಹಾಸ್ಯದ ಮನೋಭಾವನೆ ಇರುವ ಕಾರಣ ಶತ್ರುಗಳು ಮಿತ್ರರಾಗುತ್ತಾರೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಸಂಗಾತಿಯಿಂದ ಸಂಪೂರ್ಣ ಸಹಕಾರ ದೊರೆಯುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಧನಸ್ಸು

ಕಡಿಮೆ ಅವಧಿಯಲ್ಲಿ ಹೆಚ್ಚಿನ ಕೆಲಸ ಮಾಡಬೇಕಾಗಬಹುದು. ಇದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಇರುವುದಿಲ್ಲ. ನಿಮ್ಮ ಸ್ವಂತ ವಿಚಾರವನ್ನು ಕುಟುಂಬದ ಪ್ರಭಾವ ಬೀರದು. ಕುಟುಂಬದಲ್ಲಿ ಹಾಸ್ಯದ ಮನೋಭಾವನೆ ತುಂಬಿರುತ್ತದೆ. ಉದ್ಯೋಗದಲ್ಲಿ ನಿಮ್ಮದಲ್ಲದ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ನಿಮ್ಮ ನಿರ್ಧಾರವನ್ನು ಒಪ್ಪದೇ ಹೋದಲ್ಲಿ ಕೋಪದ ಕೈ ಗೊಂಬೆ ಆಗುವಿರಿ. ಕೋಪದಿಂದ ಎಲ್ಲರಿಂದ ದೂರ ಉಳಿಯುವಿರಿ. ಆದರೆ ತಾಯಿಯವರ ಮಾತು ನಿಮ್ಮ ಮನಸ್ಸನ್ನು ಬದಲಿಸುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹೊಂದಿರುತ್ತಾರೆ. ಪ್ರತಿಯೊಂದು ವಿಚಾರವು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಡೆಯಲಿದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮಕರ

ಕುಟುಂಬದ ಸಂತೋಷ ಸಂಭ್ರಮಕ್ಕಾಗಿ ಮುಖ್ಯ ಕೆಲಸಗಳನ್ನು ಮುಂದೂಡುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ದೀರ್ಘಕಾಲದ ಪ್ರವಾಸಕ್ಕೆ ಸಜ್ಜಾಗುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ತುಂಬಿರುತ್ತದೆ. ಆತ್ಮೀಯರಿಗೆ ದುಬಾರಿ ಉಡುಗೊರೆಯನ್ನು ನೀಡಬೇಕಾಗುತ್ತದೆ. ಕಾತುರದಿಂದ ಯಾವುದೇ ವಿಚಾರದಲ್ಲಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಬೇಡಿರಿ. ಉದ್ಯೋಗದಲ್ಲಿನ ಕಠಿಣ ಜವಾಬ್ದಾರಿಗಳನ್ನು ಬೇರೆಯವರಿಗೆ ವರ್ಗಾಯಿಸುವಿರಿ. ವಿದ್ಯಾರ್ಥಿಗಳು ಚಿಂತೆ ಮತ್ತು ಒತ್ತಡದಿಂದ ಹೊರ ಬರುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಹಣಕಾಸಿನ ತೊಂದರೆ ಇರುವುದಿಲ್ಲ. ಹಣದ ಮೇಲೆ ಅತಿಯಾದ ಆಸೆಯೂ ಇರದು. ಇದರಿಂದ ಎಲ್ಲರೊಡನೆ ನೆಮ್ಮದಿಯಿಂದ ಜೀವನ ನಡೆಸುವಿರಿ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕುಂಭ

ಕ್ಷುಲ್ಲಕ ವಿಚಾರಗಳಿಗೆ ಅನಗತ್ಯ ಪ್ರಾಮುಖ್ಯತೆ ನೀಡುವಿರಿ. ನಿಮ್ಮ ರೀತಿ ನೀತಿಗಳಿಗೆ ಕುಟುಂಬದಲ್ಲಿ ವಿರೋಧವಿರುತ್ತದೆ. ಅನಗತ್ಯವಾದ ವಿವಾದಗಳಿಂದ ಮಾನಸಿಕ ವ್ಯಥೆ ಉಂಟಾಗುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡುಬರುವುದಿಲ್ಲ. ಸಾಲವಾಗಿ ನೀಡಿದ ಹಣ ಮರಳಿ ಕೈ ಸೇರುವುದು. ಸದಾಕಾಲ ಸಂತೋಷ ಸಂಭ್ರಮದಿಂದ ಇರಲು ಬಯಸುವಿರಿ. ತಪ್ಪನ್ನು ಒಪ್ಪುವ ಕಾರಣ ವಿವಾದವೊಂದು ಕೊನೆಗೊಳ್ಳುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸ್ಥಿರವಾದ ಆದಾಯ ದೊರೆಯಲಿದೆ. ಸ್ನೇಹಿತರ ಸಹಾಯದಿಂದ ಉದ್ಯೋಗದಲ್ಲಿನ ಸಮಸ್ಯೆಯೊಂದು ಬಗೆಹರಿಯಲಿದೆ. ಬೇರೆಯವರ ಮನಸ್ಸಿಗೆ ಬೇಸರ ಬರದಂತೆ ನಡೆದುಕೊಂಡರೆ ನಿಮಗೆ ಲಾಭ. ಸಂಗಾತಿಯ ಸಹಕಾರ ಇರುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಮೀನ

ಮನದಲ್ಲಿ ಆತಂಕದ ಭಾವನೆ ಇರುತ್ತದೆ. ಅನಾವಶ್ಯಕ ಮಾನಸಿಕ ಒತ್ತಡ ಕುಟುಂಬದ ನೆಮ್ಮದಿಯನ್ನು ಹಾಳುಮಾಡುತ್ತದೆ. ಧನಾತ್ಮಕ ಮನೋಭಾವನೆ ಮತ್ತು ಸತತ ಪ್ರಯತ್ನದಿಂದ ಯಾವುದೇ ಕೆಲಸವನ್ನು ಸಾಧಿಸಬಲ್ಲಿರಿ. ಅನಿವಾರ್ಯವಾಗಿ ಕುಟುಂಬದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸುತ್ತಿದ್ದ ಬದಲಾವಣೆಗಳು ಉಂಟಾಗಲಿವೆ. ಕುಟುಂಬದ ಸದಸ್ಯರ ಸಲಹೆಯನ್ನು ಪಾಲಿಸಿದರೆ ಹಣಕಾಸಿನ ಕೊರತೆ ಕಾಣುವುದಿಲ್ಲ. ವ್ಯಾಪಾರ ವ್ಯವಹಾರಗಳಲ್ಲಿ ಉಂಟಾಗುವ ಬದಲಾವಣೆಗಳಿಂದ ವರಮಾನ ಕಡಿಮೆಯಾಗಬಹುದು. ವಿದ್ಯಾರ್ಥಿಗಳು ನಿರೀಕ್ಷಿಸಿದಂತೆ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಹೊಂದಿಸಬೇಕಾಗಬಹುದು. ದಾಂಪತ್ಯ ಜೀವನದಲ್ಲಿ ಪರಸ್ಪರ ಕ್ಷಮಾ ಗುಣ ಇರುವ ಕಾರಣ ಸಂತಸ ನೆಲೆಸಿರುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೇರಳೆ ಬಣ್ಣ

------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.