Tomorrow Horoscope: ಕುಟುಂಬದಲ್ಲಿ ಹಬ್ಬದ ವಾತಾವರಣ, ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗೆ; ಗುರುವಾರದ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕುಟುಂಬದಲ್ಲಿ ಹಬ್ಬದ ವಾತಾವರಣ, ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗೆ; ಗುರುವಾರದ ದಿನಭವಿಷ್ಯ

Tomorrow Horoscope: ಕುಟುಂಬದಲ್ಲಿ ಹಬ್ಬದ ವಾತಾವರಣ, ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗೆ; ಗುರುವಾರದ ದಿನಭವಿಷ್ಯ

14 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಗುರುವಾರದ ದಿನಭವಿಷ್ಯ ಹೀಗಿದೆ..

ಗುರುವಾರದ ದಿನಭವಿಷ್ಯ
ಗುರುವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 14 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಗುರುವಾರ

ತಿಥಿ : ಪಂಚಮಿ ರಾ.04.49 ರವರೆಗು ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಭರಣಿ ನಕ್ಷತ್ರವು ರಾ.10.01ರವರೆಗೆ ಇರುತ್ತದೆ. ಆನಂತರ ಕೃತ್ತಿಕ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಹ.01.30ರಿಂದ ಹ.03.00

ರಾಶಿ ಫಲಗಳು

ಮೇಷ

ಆರೋಗ್ಯವನ್ನು ಸರಿ ಹಾದಿಯಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ದೈನಂದಿನ ರೀತಿ ನೀತಿಗಳನ್ನು ಬದಲಿಸಿಕೊಳ್ಳುವಿರಿ. ಮುಂಗೋಪವಿರುತ್ತದೆ. ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆಯನ್ನು ನೀಡುವಿರಿ. ಕೆಲಸ ಕಾರ್ಯಗಳಲ್ಲಿ ಒತ್ತಡವು ಹೆಚ್ಚಾಗಿರುತ್ತದೆ. ಸಂಪಾದಿಸಿದ ಹಣವನ್ನು ಖರ್ಚು ಮಾಡಲು ಮನಸ್ಸಿರುವುದಿಲ್ಲ. ಕುಟುಂಬದ ಕೆಲಸ ಕಾರ್ಯಗಳು ಯಶಸ್ವಿಯಾಗುವ ಕಾರಣ ಸಂತೋಷ ತುಂಬಿರುತ್ತದೆ. ಅನಾವಶ್ಯಕವಾಗಿ ಸಣ್ಣಪುಟ್ಟ ವಿಚಾರಗಳಿಗೂ ವಾದ ವಿವಾದಗಳು ಇರಲಿವೆ. ಉದ್ಯೋಗದಲ್ಲಿ ನಿಮ್ಮ ಮಾರ್ಗದರ್ಶನದಲ್ಲಿ ಮಾಡಿದ ಪ್ರಾಜೆಕ್ಟ್​​​ನಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಆತ್ಮೀಯರೊಂದಿಗೆ ಸಂತೋಷದಿಂದ ದಿನ ಕಳೆಯುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಷಭ

ಮನದಲ್ಲಿರುವ ಯೋಚನೆಗಳನ್ನು ಮರೆತು ಎಲ್ಲರೊಂದಿಗೆ ನಗುನಗುತ್ತಾ ಬಾಳುವಿರಿ. ಆತ್ಮೀಯರು ಆಯೋಜಿಸಿದ ಕಾರ್ಯಕ್ರಮದ ಜವಾಬ್ದಾರಿ ದೊರೆಯಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ. ಹಣಕಾಸಿನ ವಿಚಾರದಲ್ಲಿ ತೊಂದರೆ ಕಾಣಬಹುದು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಂಗಾತಿಗೆ ವಿಶೇಷವಾದ ಗೌರವ ಮತ್ತುಉನ್ನತ ಹುದ್ದೆ ದೊರೆಯುತ್ತವೆ. ಸಂಗಾತಿಯಿಂದ ಸಂಪೂರ್ಣ ಸಹಾಯದೊರೆಯಲಿದೆ. ಹೊಗಳಿಕೆಗೆ ಮರುಳಾಗಬೇಡಿರಿ. ಮನದಲ್ಲಿರುವ ಯೋಚನೆಗೆ ಮಾತಿನ ರೂಪವನ್ನು ನೀಡುವಿರಿ. ಹೊಗಳಿಕೆ ಮತ್ತು ಅನುಕೂಲತೆಯನ್ನು ನಿರೀಕ್ಷಿಸುತ್ತ ಕೆಲಸದಲ್ಲಿ ಭಾಗವಹಿಸುವಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನೆಮ್ಮದಿಯಿಂದ ಬಾಳುತ್ತಾರೆ. ನಿರೀಕ್ಷೆಗೆ ಮೀರಿದ ಶುಭಫಲಗಳು ದೊರೆಯುವುದು.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ಮಿಥುನ

ಆರೋಗ್ಯದಲ್ಲಿ ಸ್ಥಿರತೆ ಇರುವುದಿಲ್ಲ. ಆದರೆ ಸರಿಯಾದ ಕ್ರಮದಿಂದ ಉತ್ತಮ ಆರೋಗ್ಯ ಗಳಿಸುವಿರಿ. ಆತ್ಮೀಯರೊಂದಿಗೆ ದೀರ್ಘ ಕಾಲದ ಪ್ರವಾಸ ಮಾಡುವಿರಿ. ನಿಮ್ಮ ಮನಸ್ಸನ್ನು ಗೆದ್ದಿರುವ ಅಮೂಲ್ಯವಾದ ವಸ್ತುಗಳನ್ನು ಕಾಪಾಡಿಕೊಳ್ಳಿ. ಮನಸ್ಸಿಲ್ಲದೆ ಹೋದರು ದೂರದ ಸಂಬಂಧಿ ಒಬ್ಬರಿಗೆ ಹಣದ ಸಹಾಯ ಮಾಡುವಿರಿ. ಮಕ್ಕಳ ವಿಚಾರದಲ್ಲಿ ವಿನಾಕಾರಣ ಯೋಚನೆ ಇರಲಿದೆ. ಮಕ್ಕಳೊಂದಿಗೆ ಪ್ರೀತಿಯಿಂದ ಬಾಳುವಿರಿ. ನಂಬಿಸಿ ಮೋಸ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬದವರ ಒತ್ತಡದಿಂದ ಕೆಲಸವೊಂದನ್ನು ನಿರ್ವಹಿಸಬೇಕಾಗುತ್ತದೆ. ಮನರಂಜನಾ ಮಾಧ್ಯಮದಲ್ಲಿ ಇರುವವರಿಗೆ ವಿಶೇಷ ಹಾಗೂ ಉತ್ತಮ ಅವಕಾಶಗಳು ದೊರೆಯಲಿದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕಟಕ

ನಿಮ್ಮ ಮಾತನ್ನು ಯಾರೂ ಕೇಳಲಾರರು. ಇದರಿಂದ ಮನದಲ್ಲಿ ಬೇಸರ ಮೂಡುತ್ತದೆ. ನಿಮ್ಮ ನಿರ್ಧಾರ ಮತ್ತು ಆಡುವ ಮಾತುಗಳು ಸರಿಯಾಗಿರುತ್ತದೆ ಎಂಬ ಭಾವನೆ ಇರುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಂಡರೆ ನೆಮ್ಮದಿಯ ಜೀವನ ನಡೆಸಬಹುದು. ಬೇರೆಯವರ ಮನಸ್ಸನ್ನು ಅರಿತು ನಡೆದುಕೊಳ್ಳಿ. ಕುಟುಂಬದಲ್ಲಿ ಹಬ್ಬದ ವಾತಾವರಣ ಇರಲಿದೆ. ಕೆಲವೊಮ್ಮೆ ಏನೂ ತಿಳಿಯದಂತೆ ಇರುವುದು ಒಳ್ಳೆಯದು. ಸಣ್ಣ ಪುಟ್ಟ ವಿಚಾರಗಳಿಗೂ ವಿವಾದಾತ್ಮಕ ಹೇಳಿಕೆ ನೀಡುವಿರಿ. ಕುಟುಂಬದವರು ನಿಮ್ಮ ತಪ್ಪನ್ನು ಬದಿಗಿಟ್ಟು ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಾರೆ. ಆತ್ಮೀಯರೊಬ್ಬರ ಆರೋಗ್ಯದಲ್ಲಿ ದಿಢೀಡೀರ್ ಕುಸಿತ ಕಂಡುಬಂದರೂ ತೊಂದರೆ ಕಾಣದು.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಸಿಂಹ

ಬಿಡುವಿಲ್ಲದ ಕೆಲಸ ಬೇಸರಕ್ಕೆ ಕಾರಣವಾಗುತ್ತದೆ. ಸಾಧ್ಯವಾದಲ್ಲಿ ಕೆಲಸ ಕಾರ್ಯಗಳ ಮಧ್ಯೆ ವಿಶ್ರಾಂತಿ ತೆಗೆದುಕೊಳ್ಳಲು ಪ್ರಯತ್ನಿಸಿ. ಕುಟುಂಬದ ಜವಾಬ್ದಾರಿ ಹೆಚ್ಚುವ ಕಾರಣ ಮಾನಸಿಕ ಒತ್ತಡವಿರುತ್ತದೆ. ನೀವಾಗಿಯೇ ಯಾರ ಸಹಾಯವನ್ನು ಬಯಸುವುದಿಲ್ಲ. ಆದರೆ ಬೇರೆಯವರ ಸಹಕಾರವನ್ನು ತಿರಸ್ಕರಿಸುವುದು ಇಲ್ಲ. ಅನಗತ್ಯ ಖರ್ಚು ವೆಚ್ಚಗಳಿಂದ ಬೇಸರಗೊಳ್ಳುವಿರಿ. ನಿಮ್ಮ ಕಾರ್ಯನಿರ್ವಹಣೆಗೆ ಎಲ್ಲರ ಪ್ರಶಂಸೆ ಲಭ್ಯವಾಗುತ್ತದೆ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯಲಿದೆ. ಬಾಳ ಸಂಗಾತಿಯ ಸಹಾಯ ಸಹಕಾರ ಸದಾ ಕಾಲ ದೊರೆಯಲಿದೆ. ಉದ್ಯೋಗದಲ್ಲಿ ಹೊಸ ಭರವಸೆಯೊಂದಿಗೆ ಮುಂದುವರೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮಲ್ಲಿನ ಪ್ರತಿಭೆಗೆ ತಕ್ಕಂತೆ ಉತ್ತಮ ಅವಕಾಶಗಳು ದೊರೆಯಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕಂದು ಬಣ್ಣ

ಕನ್ಯಾ

ಆತ್ಮವಿಶ್ವಾಸದಿಂದ ಕೈಹಿಡಿದ ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದಲ್ಲಿ ಪರಸ್ಪರ ಹೆಚ್ಚಿನ ನಂಬಿಕೆ ಇರುತ್ತದೆ. ಉತ್ತಮ ಆದಾಯ ಗಳಿಸಿ ಆರ್ಥಿಕವಾಗಿ ಸಬಲರಾಗುವಿರಿ. ಆತ್ಮೀಯರೊಂದಿಗೆ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಸಂಗಾತಿಯ ಸಹಕಾರ ಹೊಸ ಚೇತನವನ್ನು ತುಂಬಲಿದೆ. ಬಿಡುವಿನ ವೇಳೆ ದೈಹಿಕವಾಗಿ ಅಶಕ್ತರಾಗಿರುವ ಜನರಿಗೆ ಸಹಾಯ ಮಾಡುವಿರಿ. ಚಾಡಿ ಮಾತುಗಳಿಗೆ ಬೆಲೆ ನೀಡದಿರಿ. ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಪರಸ್ಪರ ಹೊಂದಾಣಿಕೆ ಇರಲಿದೆ. ಜೀವನದಲ್ಲಿನ ಅತ್ಯುತ್ತಮ ಕೆಲಸ ಒಂದನ್ನು ಮಾಡುವಿರಿ. ಏಕಾಂಗಿಯಾಗಿ ಕಿರು ಪ್ರವಾಸ ಕೈಗೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ತುಲಾ

ಆತುರದಲ್ಲಿ ಕೆಲಸ ನಿರ್ವಹಿಸಿದರೆ ತೊಂದರೆ ಉಂಟಾಗಬಹುದು. ಕಷ್ಟ ನಷ್ಟಗಳಿಗೆ ಹೆದರದೆ ಕರ್ತವ್ಯ ನಿರತರಾಗುತ್ತಾರೆ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವಿರಿ. ಇದರಿಂದಾಗಿ ಆತ್ಮವಿಶ್ವಾಸದ ಕೊರತೆ ಕಾಣುವುದಿಲ್ಲ. ರಕ್ತ ಸಂಬಂಧಿಕರ ಸಹಾಯ ಸದಾ ಕಾಲ ಇರುತ್ತದೆ. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ದಂಪತಿಗಳಲ್ಲಿ ಪರಸ್ಪರ ಪ್ರೀತಿ ಗೌರವ ಇರಲಿದೆ. ಕಾರ್ಯ ಯೋಜನೆಗಳು ಸಫಲವಾಗಲಿದೆ. ಉದ್ಯೋಗದಲ್ಲಿ ಅನುಕೂಲಕರ ಬೆಳವಣಿಗೆಗಳು ಕಂಡು ಬರಲಿವೆ. ಆರೋಗ್ಯದ ಬಗ್ಗೆ ಗಮನವಿರಲಿ. ಹೊಸ ವ್ಯವಹಾರಗಳಲ್ಲಿ ಆತುರ ತೋರದೆ ನಿರೀಕ್ಷಿಸಿದ ಲಾಭವನ್ನು ಪಡೆಯುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ವೃಶ್ಚಿಕ

ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಆಪತ್ತಿನಿಂದ ಪಾರು ಮಾಡುತ್ತದೆ. ಹೊಸ ಮನೆಯನ್ನು ಕೊಳ್ಳುವ ಯೋಜನೆ ರೂಪಿಸುವಿರಿ. ಸೋದರ ಮಾವನಿಂದ ಹಣದ ಸಹಾಯ ದೊರೆಯಲಿದೆ. ಅವಿವಾಹಿತರಿಗೆ ಸಂಬಂಧದಲ್ಲಿ ವಿವಾಹವಾಗುತ್ತದೆ. ವಂಶಾನಗತವಾಗಿ ಬಂದ ಆಸ್ತಿಯಲ್ಲಿ ಸಮಪಾಲು ದೊರೆಯಲಿದೆ. ಬೇರೆಯವರ ಮನಸ್ಸನ್ನು ಅರಿತುಕೊಂಡು ಸಹನಯಿಂದ ವ್ಯವಹರಿಸಿ. ಕುಟುಂಬದಲ್ಲಿ ಮಂಗಳಕರ ಕಾರ್ಯವೊಂದು ಯಶಸ್ವಿಯಾಗಲಿದೆ. ಮಕ್ಕಳೊಂದಿಗೆ ಮನರಂಜನಾ ಸ್ಥಳಕ್ಕೆ ತೆರಳುವಿರಿ. ಸಣ್ಣ ಬಂಡವಾಳದ ವ್ಯಾಪಾರವನ್ನು ಆರಂಭಿಸಿ ಉತ್ತಮ ಆದಾಯವನ್ನು ಗಳಿಸುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಧನಸ್ಸು

ಕುಟುಂಬದಲ್ಲಿ ಕೆಲವೊಂದು ಅನಿರೀಕ್ಷಿತ ಘಟನೆಗಳು ನಡೆಯಲಿವೆ. ಧೈರ್ಯ ಮತ್ತು ಸಹನೆ ಜೀವನದಲ್ಲಿ ಹೊಸ ಆಯಾಮವನ್ನು ಸೃಷ್ಟಿಸುತ್ತದೆ. ಒಳ್ಳೆಯ ಅಭ್ಯಾಸಗಳಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ದೊರೆವ ಅವಕಾಶಗಳನ್ನು ಸಮರ್ಥಕವಾಗಿ ಬಳಸಿಕೊಳ್ಳುವಿರಿ. ಉತ್ತಮ ಆದಾಯವಿದ್ದರೂ ಹಣಕಾಸಿನ ಕೊರತೆ ಕಾಡುತ್ತದೆ. ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ಸದಾಕಾಲ ಒಳ್ಳೆಯ ನಿರೀಕ್ಷೆಯಲ್ಲಿ ಇರುವಿರಿ. ಆತ್ಮೀಯರು ಸಮಸ್ಯೆಗಳಿಂದ ಪಾರಾಗಲು ಸಹಾಯ ಮಾಡುತ್ತಾರೆ. ಕುಟುಂಬದ ಜನರೊಂದಿಗೆ ಬೆರೆಯಲು ಸಮಯವನ್ನು ಮೀಸಲಿಡಿ. ದಂಪತಿಗಳ ನಡುವೆ ಉತ್ತಮ ಅನುಬಂಧ ಇರಲಿದೆ. ನಿಮ್ಮ ವಯಸ್ಸಿನ ಜನರಿಗೆ ನಾಯಕರಾಗಿ ಬಾಳುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಮಕರ

ನಿಮ್ಮ ಆಸೆ ಆಕಾಂಕ್ಷೆಗಳನ್ನು ಸರಳವಾದ ರೀತಿಯಲ್ಲಿ ಗಳಿಸುವಿರಿ. ದುಡುಕಿ ಮಾತನಾಡುವ ಕಾರಣ ಸಮಸ್ಯೆಗೆ ಸಿಲುಕುವಿರಿ. ಕುಟುಂಬದಲ್ಲಿ ಸಂತೋಷ ಮನೆ ಮಾಡಿರುತ್ತದೆ. ಅತಿಯಾದ ಉತ್ಸಾಹದಿಂದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳುವಿರಿ. ಸಾಲದ ವ್ಯವಹಾರದಲ್ಲಿ ತೊಂದರೆ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ. ಸಾಧ್ಯವಾದಷ್ಟು ದುಂದು ವೆಚ್ಚಗಳನ್ನು ಕಡಿಮೆ ಮಾಡಿ. ಮಕ್ಕಳ ಅಭ್ಯುದಯಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಲಾಭವಿಲ್ಲದ ಕೆಲಸಕಾರ್ಯಗಳಿಂದ ದೂರ ಉಳಿಯುವಿರಿ. ಸಂಗಾತಿಯು ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಬೇಕು.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕುಂಭ

ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಗುರು ಹಿರಿಯರ ಆಶೀರ್ವಾದದಿಂದ ಜೀವನದಲ್ಲಿ ಸುಖ ಶಾಂತಿ ನೆಲೆಸಲಿದೆ. ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ಉದ್ಯೋಗವನ್ನು ಬದಲಾಯಿಸುವ ಆಲೋಚನೆ ಮನಸ್ಸಿರುತ್ತದೆ. ಅನಿವಾರ್ಯವಾಗಿ ಆತ್ಮೀಯವಾದ ಹಣವನ್ನು ಪಡೆಯಬೇಕಾಗುತ್ತದೆ. ಸಂಗಾತಿಗೆ ಉದ್ಯೋಗ ದೊರೆಯಲಿದೆ. ಕುಟುಂಬದಲ್ಲಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸುವಿರಿ. ನಿಮ್ಮಲ್ಲಿ ಹುದುಗಿರುವ ವಿಶೇಷ ಪ್ರತಿಭೆಯನ್ನು ತೋರಲು ಉತ್ತಮ ವೇದಿಕೆ ದೊರೆಯುತ್ತದೆ. ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ಕೈಕಾಲಿಗೆ ಪೆಟ್ಟಾಗುವ ಸಂಭವವಿದೆ. ವಾಹನ ಚಾಲನೆ ವೇಳೆ ಎಚ್ಚರಿಕೆ ಇರಲಿ. ಸಮಾಜದ ಗಣ್ಯ ವ್ಯಕ್ತಿ ಒಬ್ಬರ ಪರಿಚಯ ನಿಮಗಾಗಲಿದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮೀನ

ವಿಶೇಷವಾದ ಆತ್ಮವಿಶ್ವಾಸ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡಲಿದೆ. ಅಧಿಕವಾದ ಕಾರ್ಯದ ಒತ್ತಡವಿದ್ದರೂ ನಿರೀಕ್ಷಿತ ಫಲಿತಾಂಶವನ್ನು ಪಡೆಯುವಿರಿ. ಬೇಗನೆ ಕೋಪ ಬಂದರು ಬಹುಕಾಲ ನಿಲ್ಲುವುದಿಲ್ಲ. ಉದ್ಯೋಗವನ್ನು ಬದಲಾಯಿಸುವ ನಿರ್ಧಾರ ಮಾಡುವಿರಿ. ಹಣಕಾಸಿನ ಕೊರತೆ ಉಂಟಾಗುವುದಿಲ್ಲ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದರೆ ತೊಂದರೆ ಉಂಟಾಗುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡುವಿರಿ. ಸಂಗಾತಿಯ ಹಣದ ಸಹಾಯದಿಂದ ಸಣ್ಣಪುಟ್ಟ ವ್ಯಾಪಾರವನ್ನು ಆರಂಭಿಸುವಿರಿ. ಬೇರೆಯವರ ವಿಚಾರದಿಂದಾಗಿ ದಂಪತಿಗಳ ನಡುವೆ ವಾದ ವಿವಾದಗಳಿರುತ್ತವೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯವಿರುತ್ತದೆ. ನಿಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಒಟ್ಟಾರೆ ಎಲ್ಲರೊಂದಿಗೆ ಸಂತಸದಿಂದ ದಿನ ಕಳೆಯುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.