Tomorrow Horoscope: ಧೈರ್ಯದಿಂದ ಸೋಲನ್ನು ಗೆಲುವಾಗಿ ಪರಿವರ್ತಿಸುವಿರಿ, ಹೊಸ ವಾಹನ ಖರೀದಿ ಯೋಗ; ಸೋಮವಾರದ ದಿನಭವಿಷ್ಯ
18 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಸೋಮವಾರದ ದಿನಭವಿಷ್ಯ ಹೀಗಿದೆ..

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 18 March 2024)
ನಾಳಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ
ತಿಥಿ : ನವಮಿ ರಾ.02.11 ರವರೆಗು ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಆರ್ದ್ರೆ ನಕ್ಷತ್ರವು ರಾ.09.36 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.24
ಸೂರ್ಯಾಸ್ತ: ಸ.06.29
ರಾಹುಕಾಲ : ಬೆ.07.30 ರಿಂದ ಬೆ.09.00
ರಾಶಿ ಫಲಗಳು
ಮೇಷ
ಕುಟುಂಬದಲ್ಲಿ ಸಂಬಂಧಿಕರ ವಿಚಾರದಿಂದ ಮಾನಸಿಕ ಉಂಟಾಗಲಿದೆ. ಉದ್ಯೋಗದಲ್ಲಿ ಬೇಸರವಿದ್ದರೂ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ವಿದ್ಯಾರ್ಥಿಗಳು ಹೊಸ ನಿರೀಕ್ಷಿಯಿಂದ ಕಲಿಕೆಯನ್ನು ಮುಂದುವರೆಸುತ್ತಾರೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಆಹಾರಕ್ರಮದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ಅನಾವಶ್ಯಕವಾಗಿ ಬರುವ ಕೋಪವನ್ನು ನಿಯಂತ್ರಿಸುವಿರಿ. ಎದುರಾಗುವ ದೊಡ್ಡ ವಿವಾದವನ್ನು ಪ್ರೀತಿಯ ಮಾತಿನಿಂದ ಸರಿಪಡಿಸುವಿರಿ. ಬೇರೆಯವರಿಂದ ಹಣದ ಸಹಾಯ ಪಡೆಯುವುದಿಲ್ಲ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಂಡು ಬರುತ್ತದೆ. ದೈನಂದಿನ ಕೆಲಸವನ್ನು ಆರಂಭಿಸುವ ಮುನ್ನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಂದು ಬಣ್ಣ
ವೃಷಭ
ಕುಟುಂಬದ ಜವಾಬ್ದಾರಿಗಳನ್ನು ಕಡಿಮೆ ಮಾಡಿಕೊಳ್ಳುವಿರಿ. ಆದರೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ದುಡುಕುತನ ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳ ನಿರ್ವಹಣೆ ಬೇರೆಯವರ ಪಾಲಾಗುತ್ತದೆ. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಅಗ್ರಸ್ಥಾನ ಪಡೆಯುತ್ತಾರೆ. ಅನಿರೀಕ್ಷಿತ ಖರ್ಚು ವೆಚ್ಚಗಳನ್ನು ಕಡಿತಗೊಳಿಸುವ ಚಿಂತೆ ಮಾಡುವಿರಿ. ಕುಟುಂಬದ ಹಿರಿಯರ ಸಲಹೆಯನ್ನು ಪಾಲಿಸುವಿರಿ. ಎಲ್ಲರ ಸಹಕಾರ ದೊರೆವ ಕಾರಣ ಕಷ್ಟ ನಷ್ಟಗಳು ಕಡಿಮೆಯಾಗುತ್ತವೆ. ಸಾಲದ ವ್ಯವಹಾರವನ್ನು ಇಷ್ಟಪಡುವುದಿಲ್ಲ. ಅತಿ ಮುಖ್ಯ ಕೆಲಸವನ್ನು ಮಾಡಲಾಗದು. ತಾಯಿಯವರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕಪ್ಪು ಬಣ್ಣ
ಮಿಥುನ
ಕುಟುಂಬದ ವಿಚಾರಗಳಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳುವಿರಿ. ಶಾಂತಿ ನೆಮ್ಮದಿಯಿಂದ ದಿನ ಕಳೆಯುವಿರಿ. ಉದ್ಯೋಗದಲ್ಲಿನ ಅನಿರೀಕ್ಷಿತ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ಆದಾಯ ಮತ್ತು ಖರ್ಚು ವೆಚ್ಚಗಳು ಸರಿಹೊಂದುತ್ತವೆ. ವಿದ್ಯಾರ್ಥಿಗಳು ಎದುರಾಗುವ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುವರು. ಪ್ರತಿಯೊಂದು ವಿಚಾರಗಳನ್ನೂ ಒತ್ತಡದಿಂದಲೇ ನಿಭಾಯಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಅಧಿಕಾರಿಗಳು ಆತಂಕದ ಪರಿಸ್ಥಿತಿಯಲ್ಲಿ ಸಿಲುಕಲಿದ್ದಾರೆ. ಸಹೋದ್ಯೋಗಿಗಳ ಜೊತೆ ನಯವಾಗಿ ವರ್ತಿಸಿ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸದಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವರ್ತಿಸಿ.
ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಕಟಕ
ಕುಟುಂಬದ ಕೆಲಸ ಕಾರ್ಯಗಳ ಜವಾಬ್ದಾರಿ ನಿಮ್ಮದಾಗುತ್ತದೆ. ಉದ್ಯೋಗದಲ್ಲಿ ದೊರೆವ ಹೆಚ್ಚಿನ ಜವಾಬ್ದಾರಿಯನ್ನು ತಿರಸ್ಕರಿಸುವಿರಿ. ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರವನ್ನು ತೆಗೆದುಕೊಳ್ಳಿರಿ. ವಿದ್ಯಾರ್ಥಿಗಳು ಒತ್ತಡದಿಂದ ಹೊರಬಂದು ಮನರಂಜನೆಯಲ್ಲಿ ದಿನ ಕಳೆಯುತ್ತಾರೆ. ಸೋಲು ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ವಿದೇಶಿ ವಿನಿಮಯದಿಂದ ಹೆಚ್ಚಿನ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆಗೆ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ಉದ್ಯೋಗವನ್ನು ಬದಲಾಯಿಸುವ ಸಾಧ್ಯತೆಗಳಿವೆ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಸಿಂಹ
ಸಿಡುಕಿನ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಗಳ ಸಲಹೆ ಪಾಲಿಸಿವುದು ಒಳ್ಳೆಯದು. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ವಿದ್ಯಾರ್ಥಿಗಳು ಹಠದಿಂದ ಮುಂದಿನ ಆಯ್ಕೆಯಲ್ಲಿ ನಿರತರಾಗುತ್ತಾರೆ. ಅಶಕ್ತರಿಗೆ ಸಹಾಯ ಮಾಡುವಿರಿ. ಹಣದ ಕೊರತೆಯಿಂದ ಪಾರಾಗಲು ಉದ್ಯೋಗ ಬದಲಿಸುವಿರಿ. ಗಣ್ಯವ್ಯಕ್ತಿಗಳ ಸಹಕಾರ ದೊರೆಯುತ್ತದೆ. ರಾಜಕೀಯದಲ್ಲಿ ಯಾವುದೇ ಉನ್ನತ ಅವಕಾಶವೊಂದು ದೊರೆಯಲಿದೆ. ಆಸೆ ಆಕಾಂಕ್ಷೆಗಳನ್ನು ತೊರೆದು ವೈರಾಗ್ಯದ ಭಾವನೆ ತಾಳುವಿರಿ. ಧೈರ್ಯದಿಂದ ಸೋಲನ್ನು ಗೆಲುವಾಗಿ ಪರಿವರ್ತಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಮನೆಯಲ್ಲಿನ ಹೆಣ್ಣುಮಕ್ಕಳ ಉನ್ನತಿಗಾಗಿ ಹೆಚ್ಚಿನ ಗಮನ ನೀಡುವಿರಿ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ ಬಣ್ಣ
ಕನ್ಯಾ
ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಉದ್ಯೋಗದ ಕಾರಣ ವಿದೇಶಕ್ಕೆ ಬೇಟಿ ನೀಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಡ್ಡಿ ಆತಂಕಗಳು ಇರುತ್ತದೆ. ವಿದ್ಯಾರ್ಥಿಗಳು ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಗಳಿಸುತ್ತಾರೆ. ಆತುರದ ಬುದ್ಧಿಯಿಂದ ತೊಂದರೆ ಅನುಭವಿಸುವಿರಿ. ರಾಜಕೀಯಕ್ಷೇತ್ರದಲ್ಲಿ ಸಮಾನ್ಯಮಟ್ಟದ ಪಲಿತಾಂಶಗಳು ದೊರೆಯುತ್ತದೆ. ಹಠದಿಂದ ತಪ್ಪು ಮಾಡಿ ನಂತರ ಪಶ್ಚಾತಾಪ ಪಡುವಿರಿ. ತಂದೆಯವರು ಭೂವಿವಾದಕ್ಕೆ ಪರಿಹಾರ ಕಂಡುಹಿಡಿಯುವಿರಿ. ಆತ್ಮೀಯರ ಒಡಗೂಡಿ ಮಾಡುವ ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಆತ್ಮೀಯರ ವಿವಾಹಕ್ಕೆ ಸಹಾಯಮಾಡುವಿರಿ. ಬೇಸರ ಉಂಟಾಗುವಂತೆ ಮಾತನಾಡುವಿರಿ. ಬೇರೆಯವನ್ನು ಟೀಕಿಸುವ ಮೊದಲು ಅವರ ವಿಶ್ವಾಸ ಗಳಿಸಲು ಪ್ರಯತ್ನಿಸಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ತುಲಾ
ಕುಟುಂಬದ ಸಮಸ್ಯೆಯೊಂದು ನಿಮ್ಮಿಂದಾಗಿ ಪರಿಹಾರಗೊಳ್ಳಲಿದೆ. ಉದ್ಯೋಗದಲ್ಲಿ ಉನ್ನತ ಅಧಿಕಾರವನ್ನುಗಳಿಸುವಿರಿ. ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಗುರಿಯನ್ನು ತಲುಪಲಿದ್ದಾರೆ. ಸಮಾಜದಲ್ಲಿ ಗಣ್ಯವ್ಯಕ್ತಿಯ ಸ್ಥಾನ ಮಾನ ದೊರೆಯುತ್ತದೆ. ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳುವಿರಿ. ನಯವಾದ ಮಾತು ಕತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ವ್ಯಾಪಾರದ ದೃಷ್ಠಿಯಿಂದ ಹೊಸ ವಾಹನವನ್ನು ಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿನ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತದೆ. ಪಕ್ಷಿಗಳು ಪ್ರಾಣಿಗಳನ್ನು ಸಾಕುವ ಆಸೆ ಮೂಡುತ್ತದೆ. ಬಡವರಿಗೆ ಆಹಾರ ನೀಡುವಲ್ಲಿ ಸಂತಸ ಕಾಣುವಿರಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ವೃಶ್ಚಿಕ
ಮುಂಗೋಪದ ಕಾರಣ ಕುಟುಂಬದಲ್ಲಿ ಗಂಭೀರದ ವಾತಾವರಣ ಇರಲಿದೆ. ಅಧಿಕಾರ ವರ್ಗದ ಅಸಂಬದ್ದ ಮಾತಿಗೆ ಬೇಸರಗೊಂಡು ಉದ್ಯೋಗವನ್ನು ಬದಲಿಸುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆಧ್ಯತೆ ನೀಡುವಿರಿ. ಆತ್ಮೀಯರು ಹಣದ ಸಹಾಯ ಮಾಡುತ್ತಾರೆ. ತಂದೆಯವರ ವಂಶದ ಆಸ್ತಿಯ ವಿವಾದ ಬಗೆಹರಿಯುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಒಡನೆ ಕಲಿವ ಅಭ್ಯಾಸ ಬೆಳೆಸಿಕೊಳ್ಳಬೇಕು. ದಿನದಾಂತ್ಯಕ್ಕೆ ಹಣದ ಕೊರೆತೆ ಉಂಟಾಗುತ್ತದೆ. ಸುಲಭವಾಗಿ ಬೇರೆಯವರ ಪ್ರಭಾವಕ್ಕೆ ಒಳಗಾಗುವಿರಿ. ಅಂತಾರಾಷ್ಟ್ರೀಯ ಭಾಷೆ ಕಲಿವ ಅವಕಾಶ ದೊರೆಯಲಿದೆ. ಸಾಲದ ವ್ಯವಹಾರದಲ್ಲಿ ಮನಸ್ತಾಪ ಉಂಟಾಗಲಿದೆ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ
ಧನಸ್ಸು
ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಪದವಿ ಗಳಿಸುವ ಮುನ್ನ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗಾವಕಾಶ ದೊರೆಯುತ್ತದೆ. ಉದ್ಯೋಗದಲ್ಲಿನ ವಿವಾದವನ್ನು ಸುಲಭವಾಗಿ ಪರಿಹರಿಸುವಿರಿ. ಸಮಾಜ ಸೇವೆ ಮಾಡುವ ಸಲುವಾಗಿ ಸಂಘ ಸಂಸ್ಠೆಯನ್ನು ಸ್ಥಾಪಿಸುವಿರಿ. ವೃತ್ತಿಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ಧಾರ್ಮಿಕ ಕೇಂದ್ರವೊಂದಕ್ಕೆ ಎಲ್ಲರ ಜೊತೆ ಭೇಟಿ ನೀಡುವಿರಿ. ಅಜೀರ್ಣದ ತೊಂದರೆ ಇರಲಿದೆ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯುತ್ತದೆ. ದಂಪತಿಗಳ ಸಮಸ್ಯೆಗೆ ಮುಕ್ತಿ ನೀಡಲು ಸಂಧಾನಕಾರ್ಯ ನಡೆಸುವಿರಿ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಮಕರ
ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ ವಿರುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ವಿದ್ಯಾರ್ಥಿಗಳು ಮೌನ ಮತ್ತು ವಿಶ್ರಾಂತಿಗೆ ಶರಣಾಗುತ್ತಾರೆ. ಕಷ್ಟಜೀವಿಗಳಾದ ಕಾರಣ ಕಾರಣ ಯಾವ ಕೆಲಸವೂ ನಿಮಗೆ ಅಸಾಧ್ಯವಲ್ಲ. ದಾಂಪತ್ಯದಲ್ಲಿ ಜೀವನದಲ್ಲಿ ಸುಖ ಸಂತೋಷ ನೆಲೆಸಿರುತ್ತದೆ. ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ಮನೆಯನ್ನು ಕೊಳ್ಳುವ ಯೋಚನೆ ಈಡೇರುತ್ತದೆ. ಕಮೀಷನ್ ವ್ಯವಹಾರದಲ್ಲಿ ಉತ್ತಮ ಆದಾಯ ಗಳಿಸುವಿರಿ. ಧಾರ್ಮಿಕ ಕೇಂದ್ರಗಳ ಆಡಳಿತ ದೊರೆಯುತದೆ. ಚಿನ್ನ ಬೆಳ್ಳಿಯ ಒಡವೆಗಳ ಸರಬರಾಜಿನಲ್ಲಿ ಹೆಚ್ಚಿನ ಆದಾಯ ಗಳಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ಕುಂಭ
ನಿಮ್ಮಲ್ಲಿರುವ ಹಠದ ಗುಣ ಕುಟುಂಬದಲ್ಲಿ ಬೇಸರವನ್ನು ಉಂಟುಮಾಡಲಿದೆ. ಉದ್ಯೋಗದಲ್ಲಿನ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷಿಸಿದ ಯಶಸ್ಸು ಗಳಿಸುತಾರೆ. ಹಣಕಾಸಿನ ವಿಚಾರದ ಬಗ್ಗೆ ಯಾರಿಗೂ ತಿಳಿಸುವುದಿಲ್ಲ. ಸೋದರನ ಜೊತೆಗಿನ ಮನಸ್ತಾಪವು ಕೊನೆಗೊಳ್ಳಲಿದೆ. ತಂದೆಯವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣರಾಗುವಿರಿ. ಅರೆ ಮನಸ್ಸಿನಿಂದ ಕೆಲಸ ಕಾರ್ಯಗಳನ್ನು ಮಾಡುವಿರಿ. ಸಾಕುಪ್ರಾಣಿಗಳ ಸೋಂಕಿನಿಂದ ಅನಾರೋಗ್ಯ ಉಂಟಾಗಲಿದೆ. ಸಾಲದ ವ್ಯವಹಾರದಲ್ಲಿ ಸಾಕ್ಷೀದಾರರಾದಲ್ಲಿ ತೊಂದರೆಗೆ ಸಿಲುಕುವಿರಿ. ಕುಟುಂಬದಲ್ಲಿನ ವಯೋವೃದ್ದರ ಆರೋಗ್ಯದಲ್ಲಿ ತೊಂದರೆ ಇರಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಮೀನ
ಕುಟುಂಬದಲ್ಲಿ ಹೊಸ ನಿರೀಕ್ಷೆ ಇರುವ ಕಾರಣ ಸಂತಸ ತುಂಬಿರುತ್ತದೆ. ಉದ್ಯೋಗದಲ್ಲಿ ಯಾವುದೇ ವಿಚಾರವೆಂದರೂ ಹೆಚ್ಚಿನ ಪ್ರಯತ್ನದಿಂದ ಯಶಸ್ಸನ್ನು ಗಳಿಸಬಹುದು. ಹಣಕಾಸಿನ ವಿಚಾರದಲ್ಲಿ ಕುಟುಂಬದ ಸದಸ್ಯರ ಸಹಾಯ ದೊರೆಯುತ್ತದೆ. ಅದೃಷ್ಟದಿಂದ ವಿದ್ಯಾರ್ಥಿಗಳ ಆಶೋತ್ತರಗಳು ಸುಲಭವಾಗಿ ನೆರವೇರಲಿವೆ. ಹಣಕಾಸಿನ ತೊಂದರೆ ಬಾರದು. ಸ್ವಂತ ಉದ್ಧಿಮೆಯನ್ನು ಆರಂಭಿಸುವ ಮಾತುಕತೆ ನಡೆಸುವಿರಿ. ಅಶಕ್ತರ ಜೀವನಕ್ಕೆ ಆಧಾರವಾಗುವಿರಿ. ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುವಿರಿ. ವ್ಯಾಪಾರೋದ್ದೇಶಕ್ಕಾಗಿ ಹೊಸ ವಾಹನವನ್ನು ಕೊಳ್ಳುವಿರಿ. ತಲೆನೋವಿನ ತೊಂದರೆಯಿಂದ ಬಳಲುವಿರಿ. ದೈಹಿಕ ವ್ಯಾಯಾಮದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ
-----------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
