Tomorrow Horoscope: ಉತ್ತಮ ಅವಕಾಶ ದೊರೆತು ವೃತ್ತಿ ಬದಲಾಯಿಸುವಿರಿ, ಹಣದ ತೊಂದರೆ ಬಾರದು; ಶುಕ್ರವಾರದ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಉತ್ತಮ ಅವಕಾಶ ದೊರೆತು ವೃತ್ತಿ ಬದಲಾಯಿಸುವಿರಿ, ಹಣದ ತೊಂದರೆ ಬಾರದು; ಶುಕ್ರವಾರದ ದಿನಭವಿಷ್ಯ

Tomorrow Horoscope: ಉತ್ತಮ ಅವಕಾಶ ದೊರೆತು ವೃತ್ತಿ ಬದಲಾಯಿಸುವಿರಿ, ಹಣದ ತೊಂದರೆ ಬಾರದು; ಶುಕ್ರವಾರದ ದಿನಭವಿಷ್ಯ

22 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಶುಕ್ರವಾರದ ದಿನಭವಿಷ್ಯ ಹೀಗಿದೆ..

ಶುಕ್ರವಾರದ ದಿನಭವಿಷ್ಯ
ಶುಕ್ರವಾರದ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 22 March 2024)

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ : ದಿನ ಪೂರ್ತಿ ತ್ರಯೋದಶಿ ಇರಲಿದೆ

ನಕ್ಷತ್ರ : ಮಖೆ ನಕ್ಷತ್ರವು ರಾ.04.34 ರವರೆಗೆ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.23

ಸೂರ್ಯಾಸ್ತ: ಸ.06.30

ರಾಹುಕಾಲ : ಬೆ.10.30 ರಿಂದ ಮ.12.00

ರಾಶಿ ಫಲಗಳು

ಮೇಷ

ಕುಟುಂಬದಲ್ಲಿನ ನಿರೀಕ್ಷೆಗಳಿಗೆ ಹೊಸ ಭಾವನೆ ಮೂಡುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ದೊರೆಯಲಿದೆ. ಬಿಡುವಿಲ್ಲದ ಕಾರಣ ಮಾನಸಿಕ ಒತ್ತಡ ಹೆಚ್ಚುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳ ಹೂಡುವಿರಿ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೆ ಹೊಸ ವಿಚಾರಗಳ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ಭೂವಿವಾದವೊಂದು ಬಗೆಹರಿದು ನೆಮ್ಮದಿ ಉಂಟಾಗಲಿದೆ. ವಾಹನದಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಸ್ತ್ರೀಯರಿಗೆ ವಿದ್ಯಾರ್ಥಿಗಳಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ ದೊರೆಯುತ್ತದೆ. ಕುಟುಂಬದ ಹಿರಿಯರ ಹಣಕಾಸಿನ ತೊಂದರೆ ನಿಮ್ಮಿಂದಾಗಿ ಕಡಿಮೆ ಆಗಲಿದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಷಭ

ಕುಟುಂಬದಲ್ಲಿದ್ದ ಪರಸ್ಪರ ಅಪನಂಬಿಕೆ ಕಡಿಮೆಯಾಗುತ್ತದೆ. ಉದ್ಯೋಗದಲ್ಲಿ ಎದುರಾಗುವ ಅನಿರೀಕ್ಷಿತ ತಿರುವುಗಳು ಬೇಸರ ಮೂಡಿಸುತ್ತವೆ. ಉದ್ಯೋಗ ಬದಲಾಯಿಸುವ ಯೋಚನೆ ಮೂಡಲಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಯಾರ ಮಾತಿಗೂ ಗೌರವ ನೀಡದೆ ಸ್ವಂತ ನಿರ್ಧಾರಕ್ಕೆ ಬದ್ದರಾಗುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ಸೋದರನ ಜೊತೆಗೂಡಿ ಮನೆಕೊಳ್ಳುವ ಯೋಚನೆ ಇರುತ್ತದೆ. ಹಣದ ಕೊರತೆಯ ಕಾರಣ ಹಳೆಯ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಿಮ್ಮ ನೇತೃತ್ವದಲ್ಲಿ ನಡೆಯಲಿದೆ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಬೂದು ಬಣ್ಣ

ಮಿಥುನ

ಕುಟುಂಬದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳನ್ನು ಬದಲಿಸುವಿರಿ. ಉದ್ಯೋಗದಲ್ಲಿ ಸ್ವಾರ್ಥದ ಗುಣವನ್ನು ತೋರುವಿರಿ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲಕ್ಕೆ ತಕ್ಕಂತೆ ಬದಲಾಗುವಿರಿ. ಕುಟುಂಬದ ಅಧಿಕಾರ ನಿಮಗೆ ದೊರೆಯುತ್ತದೆ. ಕಣ್ಣಿನ ದೋಷ ಇರುತ್ತದೆ. ಬರಹಗಾರರಿಗೆ ಸಮಾಜದ ಉನ್ನತ ಸ್ಥಾನಮಾನ ದೊರೆಯುತ್ತದೆ. ಸೋದರರ ಜೊತೆಯಲ್ಲಿ ದೂರದ ಊರಿಗೆ ಪ್ರಯಾಣ ಆರಂಭಿಸುವಿರಿ. ಆತುರದಲ್ಲಿ ಮಾಡುವ ಸಣ್ಣ ತಪ್ಪುಗಳನ್ನೂ ದೊಡ್ಡವಿವಾದವನ್ನಾಗಿ ಮಾಡುವಿರಿ. ಸಾಲದ ವ್ಯವಹಾರ ಮಾಡದಿರಿ. ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ರೂಪಿಸುವಿರಿ. ಹಿರಿಯರ ಆದೇಶದಂತೆ ಸ್ವಂತ ವ್ಯಾಪಾರವನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಂದು ಬಣ್ಣ

ಕಟಕ

ಕುಟುಂಬದ ಸದಸ್ಯರ ನಡುವೆ ಸದ್ಭಾವನೆಯ ಕೊರತೆ ಇರುತ್ತದೆ. ಉದ್ಯೋಗದಲ್ಲಿ ಸಣ್ಣ ಪುಟ್ಟ ಅಡಚಣೆಗಳು ಎದುರಾದರೂ ತೊಂದರೆ ಕಾಣದು. ಸ್ವಂತ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡುವಿರಿ. ಉತ್ತಮ ಪ್ರಯತ್ನದ ಕಾರಣ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಆದಾಯ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಂಡು ವಿವಾದದಲ್ಲಿ ಸಿಲುಕುವಿರಿ. ಉತ್ತಮ ಅವಕಾಶ ದೊರೆತು ವೃತ್ತಿ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳು ವಿವೇಚನೆ ಇಲ್ಲದೆ ತಪ್ಪು ನಿರ್ಧಾರ ತೆಗೆದುಕೊಳ್ಳುವರು. ಕುಟುಂಬಕ್ಕೆ ಆತ್ಮೀಯರೊಬ್ಬರ ಆಗಮನ ಆಗಲಿದೆ. ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಕುಟುಂಬಕ್ಕೆ ಸೇರಿದ ಕಾನೂನು ಪ್ರಕ್ರಿಯೆಯಲ್ಲಿ ಜಯ ದೊರೆಯುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಪ್ಪುಬಣ್ಣ

ಸಿಂಹ

ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇರುತ್ತದೆ. ಗೆಲುವನ್ನೇ ನಿರೀಕ್ಷಿಸುವ ಕಾರಣ ಕೆಲಸ ಕಾರ್ಯಗಳಲ್ಲಿ ವಿಶ್ರಾಂತಿ ಇರುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಯಾಗಿ ಬಡ್ತಿ ದೊರೆಯುತ್ತದೆ. ವಾಹನಗಳ ಬಿಡಿ ಭಾಗಗಳ ವ್ಯಾಪಾರದಲ್ಲಿ ಉತ್ತಮ ಆದಾಯ ಇರುತ್ತದೆ. ವಿದ್ಯಾರ್ಥಿಗಳಿಗೆ ಉದ್ಯೋಗದ ಅವಕಾಶ ದೊರೆಯಲಿದೆ. ಉಪಯೋಗಿಸಿದ ವಾಹನಗಳನ್ನು ಆಧನೀಕರಿಸುವ ಕಲೆಗೆ ಬೆಲೆ ದೊರೆಯುತ್ತದೆ. ಕೋಪವನ್ನು ಕಡಿಮೆ ಮಾಡಿಕೊಳ್ಳಿರಿ. ಕುಟುಂಬದ ಐಕ್ಯತೆಗಾಗಿ ದುಡಿಯುವಿರಿ. ಜೀವನದ ನಿರ್ವಹಣೆಗಾಗಿ ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಮನೆಯ ಮುಂದಿರುವ ಕೆಂಪು ಹೂವಿನ ಗಿಡಗಳ ರಕ್ಷಣೆ ಮಾಡುವಿರಿ. ಸಮಾಜದಲ್ಲಿ ಉನ್ನತ ಗೌರವ ಲಭಿಸುತ್ತದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ

ಕನ್ಯಾ

ಕುಟುಂಬದಲ್ಲಿದ ಶಾಂತಿ ನೆಮ್ಮದಿಗೆ ಭಂಗ ಬರುತ್ತದೆ. ಉದ್ಯೋಗದಲ್ಲಿ ಅನಾವಶ್ಯಕ ವಾದ ವಿವಾದಗಳು ಕಂಡು ಬರುತ್ತದೆ. ವ್ಯಾಪಾರದಲ್ಲಿ ತಪ್ಪುಕಲ್ಪನೆಯಿಂದ ತೊಂದರೆ ಎದುರಿಸುವಿರಿ. ಕುಟುಂಭದ ಭೂವಿಚಾರದಲ್ಲಿ ಯಶಸ್ಸು ದೊರೆಯುತ್ತದೆ. ಪಾಲುಗಾರಿಕೆ ವ್ಯಾಪಾರವೊಂದನ್ನು ಆರಂಭಿಸುವಿರಿ. ಸೋದರಿಯ ವಿವಾಹದ ಮಾತುಕತೆ ನಡೆಯುತ್ತದೆ. ತಾಯಿಯವರ ಆರೋಗ್ಯದ ಬಗ್ಗೆ ಗಮನ ಇರಲಿ. ಹಣದ ವಿಚಾರದಲ್ಲಿ ಮಾನಸಿಕ ಒತ್ತಡ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಕಣ್ಣಿನ ತೊಂದರೆಯು ನಿವಾರಣೆ ಆಗಲಿದೆ. ಬೇರೆಯವರನ್ನು ಅನಾವಶ್ಯಕವಾಗಿ ಟೀಕಿಸುವಿರಿ. ಸಹನೆಯಿಂದ ವರ್ತಿಸಿದಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ತುಲಾ

ಕುಟುಂಬದಲ್ಲಿ ಶುಭಕಾರ್ಯಕ್ಕೆ ಮುತುವರ್ಜಿಯ ತಯಾರಿ ನಡೆಸುವಿರಿ. ಉದ್ಯೋಗದಲ್ಲಿನ ತೊಂದರೆ ಪರಿಹಾರವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಚೇತರಿಕೆ ಉಂಟಾಗುತ್ತದೆ. ಯಾವುದೇ ಅಂಜಿಕೆ ಇಲ್ಲದೆ ಜೀವನದಲ್ಲಿ ಮುಂದುವರಿಯುವಿರಿ. ಕಷ್ಟದ ದಿನಗಳು ಕಳೆದು ಒಳ್ಳೆಯ ದಿನಗಳು ಆರಂಭವಾಗಲಿವೆ. ಎಲ್ಲರನ್ನೂ ಗೌರವದಿಂದ ನೋಡುವಿರಿ. ಹೆಚ್ಚಿನ ಪ್ರಯತ್ನದಿಂದ ಜೀವನದಲ್ಲಿ ಮುಂದೆ ಬರುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಹಣದ ವಿವಾದದಿಂದ ಪಾರಾಗುವಿರಿ. ಭೂವಿವಾದದಲ್ಲಿ ಜಯ ಲಭಿಸುತ್ತದೆ. ವಯೋವೃದ್ಧರ ಬಗ್ಗೆ ಹೆಚ್ಚಿನ ಪ್ರೀತಿ ಗೌರವ ತೋರುವಿರಿ. ತಪ್ಪಿಗೆ ತೆಗಳದೆ ತಿದ್ದಿ ಸ್ನೇಹವನ್ನು ಬೆಳೆಸುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿಮಿಶ್ರಿತಬಿಳಿ ಬಣ್ಣ

ವೃಶ್ಚಿಕ

ಮೌನದಿಂದ ಮಾತ್ರ ಕುಟುಂಬದದಲ್ಲಿ ಒಮ್ಮತ ಮೂಡುತ್ತದೆ. ನಿಮ್ಮ ಸಿಡುಕಿನ ಗುಣ ಬೇರೆಯವರಲ್ಲಿ ಬೇಸರ ಉಂಟು ಮಾಡುತ್ತದೆ. ಉದ್ಯೋಗದ ವಿಚಾರದಲ್ಲಿ ಯೋಚಿಸದೆ ಸೂಕ್ತ ನಿಲುವು ತೆಗೆದುಕೊಳ್ಳಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ವಿರೋಧಿಗಳಿದ್ದರೂ ಸುರಕ್ಷಿತವಾಗುವಿರಿ. ಶ್ರಮದ ಕಾಲದಲ್ಲಿ ಆತ್ಮೀಯರ ಸಲಹೆ ಸೂಚನೆ ದೊರೆಯುತ್ತದೆ. ವಿದ್ಯಾರ್ಥಿಗಳು ಪ್ರಾಯಾಸದಿಂದ ಕಲಿಕೆಯಲ್ಲಿ ಮುಂದುವರಿಯುತ್ತಾರೆ. ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ಪುಟ್ಟ ಹೆಣ್ಣುಮಕ್ಕಳಿಗೆ ಉಡುಗೊರೆಯನ್ನು ನೀಡುವಿರಿ

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಧನಸ್ಸು

ಬದಲಾಗುವ ಮನಸ್ಸಿನ ಕಾರಣ ಕುಟುಂಬದ ಕೆಲಸ ಕಾರ್ಯದಲ್ಲಿ ನಿರಾಸೆ ಇರಲಿದೆ. ಸಾಮರಸ್ಯದ ಕೊರೆತೆ ಕಂಡರೂ ಉದ್ಯೋಗದಲ್ಲಿ ಉಪಯುಕ್ತ ಬದಲಾವಣೆ ಉಂಟಾಗುತ್ತದೆ. ಅನಿರೀಕ್ಷಿತ ಧನಲಾಭವಿದೆ. ಸ್ವಂತ ಬಳಕೆಗಾಗಿ ವಾಹನ ಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಲಾಭಗಳಿಸುವಿರಿ. ಮಕ್ಕಳ ಅಧ್ಯಯನಕ್ಕಾಗಿ ಹೆಚ್ಚಿನ ಹಣ ಬೇಕಾಗಬಹುದು. ವಿದೇಶ ಪ್ರವಾಸದ ಯೋಜನೆಯಿಂದ ದೂರ ತೆರಳುವಿರಿ. ಕುಟುಂಬದಲ್ಲಿನ ಮಂಗಳಕಾರ್ಯದ ಹೊಣೆ ನಿಮ್ಮದಾಗಲಿದೆ. ಮನದಲ್ಲಿ ಬೇಸರವಿರುತ್ತದೆ. ಸರಳ ಮತ್ತು ಕಷ್ಟವಲ್ಲದ ಜೀವನಕ್ಕಾಗಿ ಸಣ್ಣ ಬಂಡವಾಳದ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಕರ

ಸುಳ್ಳು ಮಾತನ್ನು ನಂಬುವ ಕಾರಣ ಕುಟುಂಬದ ಹಣಕಾಸಿನ ವಿವಾದಗಳಿಗೆ ಕಾರಣರಾಗುವಿರಿ. ಉದ್ಯೋಗದಲ್ಲಿ ಬೇಸರದ ಸನ್ನಿವೇಶ ಎದುರಾಗುತ್ತದೆ. ವ್ಯಾಪಾರವನ್ನು ವಿಸ್ತರಿಸಲು ಹೆಚ್ಚಿನ ಬಂಡವಾಳ ಹೂಡುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಆಸಕ್ತಿ ತೋರುವರು. ಜಮೀನು ಅಥವ ಹೊಸ ಮನೆಯನ್ನು ಕೊಳ್ಳುವ ಬಗ್ಗೆ ಮಾತುಕತೆ ನಡೆಸುವಿರಿ. ಹಣದ ಕೊರತೆ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಹಿಂದೊಮ್ಮೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಬಂಧುವೊಬ್ಬರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಮನರಂಜನೆಗಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ತಾಯಿಯವರಿಗೆ ಉಡುಗೊರೆಯೊಂದನ್ನು ನೀಡುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕುಂಭ

ಕುಟುಂಬದಲ್ಲಿ ನೀರಸ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿ ಫಲಿತಾಂಶಗಳು ಗಲಿಬಿಲಿಗೆ ಕಾರಣವಾಗಲಿವೆ. ಆತ್ಮೀಯರಿಂದ ಉತ್ತಮ ಸಹಕಾರ ದೊರೆಯುವುದಿಲ್ಲ. ಏಕಾಂಗಿಯಾಗಿ ಮಾಡುವ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ಕಷ್ಟ ಪಟ್ಟು ದುಡಿಯುವುದನ್ನು ಇಚ್ಚಿಸದೆ ಕಮೀಷನ್ ಆಧಾರಿತ ಸಂಸ್ಥೆಯನ್ನು ಆರಂಭಿಸುವಿರಿ. ಹಣಕಾಸಿನ ಕೊರತೆ ಕಂಡುಬರದು. ಪರಸ್ಥಳದಲ್ಲಿ ವ್ಯಾಪಾರಸಂಸ್ಥೆಯ ಶಾಖೆಯನ್ನು ಆರಂಭಿಸುವ ಗುರಿ ಇರುತ್ತದೆ. ಬೇರೆಯವರ ಹಣಕಾಸಿನ ವಿವಾದಗಳನ್ನು ಪರಿಹರಿಸಿ ಆದಾಯ ಗಳಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಆದಾಯ ಇರುತ್ತದೆ. ವಿದ್ಯಾರ್ಥಿಗಳು ಯಾವುದೆ ಕ್ಲಿಷ್ಟಕರವಾದ ವಿಚಾರವನ್ನು ಅರ್ಥಮಾಡಿಕೊಳ್ಳಬಲ್ಲರು. ಸಮಯಕ್ಕೆ ತಕ್ಕಂತಹ ತೀರ್ಮಾನವನ್ನು ತೆಗೆದುಕೊಳ್ಳುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮೀನ

ಕುಟುಂಬದಲ್ಲಿ ಆಶಾದಾಯಕ ವಾತಾವರಣ ಕಂಡುಬರುತ್ತದೆ. ಮನಸ್ಸಿಗೆ ನೆಮ್ಮದಿ ನೀಡುವ ಘಟನೆಯೊಂದು ನಡೆಯಲಿದೆ. ಉದ್ಯೋಗವು ಮಂದಗತಿಯ ಫಲಗಳನ್ನು ನೀಡುತ್ತದೆ. ಸಾಕುಪ್ರಾಣಿಗಳ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಪಶುಸಂಗೋಪನೆಯಲ್ಲಿ ಆಸಕ್ತಿ ಮೂಡುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹಣದ ಜೊತೆ ನೆಮ್ಮದಿಯನ್ನೂ ಕಾಣುವಿರಿ. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಸಹಕಾರವಿರುತ್ತದೆ. ಆದರೂ ಏಕಚಿತ್ತತೆಯಿಂದ ಕಲಿಕೆಯಲ್ಲಿ ನಿರತರಾಗಬೇಕು. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಸತತವಾಗಿ ಮನಸ್ಸಿನ ವಿಚಾರಗಳನ್ನು ಬದಲಾಯಿಸದಿರಿ. ಸ್ವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಹಣದ ತೊಂದರೆ ಬಾರದು. ಶೀತದ ತೊಂದರೆ ಕಾಡುತ್ತದೆ. ಬೆಳ್ಳಿ ಪದಾರ್ಥವನ್ನು ಉಡುಗೊರೆ ನೀಡಲು ಕೊಳ್ಳುವಿರಿ. ಹಾಲು ಅಥವಾ ನೀರನ್ನು ಕುಡಿವ ವೇಳೆ ಸ್ವಚ್ಚತೆ ಕಾಪಾಡಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕೆಂಪು ಬಣ್ಣ

-----------------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.