Tomorrow Horoscope: ಊಹಿಸಿದ್ದ ವಿಚಾರಗಳು ನಿಜವಾಗಲಿದೆ, ದಿನಾಂತ್ಯಕ್ಕೆ ಅನಿರೀಕ್ಷಿತ ಧನಲಾಭವಿದೆ; ಭಾನುವಾರದ ದಿನಭವಿಷ್ಯ
24 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಭಾನುವಾರದ ದಿನಭವಿಷ್ಯ ಹೀಗಿದೆ..

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 24 March 2024)
ನಾಳಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಭಾನುವಾರ
ತಿಥಿ : ಚತುರ್ದಶಿ ಬೆ. 09.12 ರವರೆಗು ಇರುತ್ತದೆ. ಆನಂತರ ಹುಣ್ಣಿಮೆ ಆರಂಭವಾಗಲಿದೆ.
ನಕ್ಷತ್ರ : ಪುಬ್ಬ ನಕ್ಷತ್ರವು ಬೆ. 07.05 ರವರೆಗು ಇರುತ್ತದೆ. ಆನಂತರ ಉತ್ತರ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆ.06.22
ಸೂರ್ಯಾಸ್ತ: ಸ.06.30
ರಾಹುಕಾಲ : ಬೆ. 04.30 ರಿಂದ ಸ.06.00
ರಾಶಿ ಫಲಗಳು
ಮೇಷ
ವಿಶ್ರಾಂತಿ ಇಲ್ಲದ ದುಡಿಮೆ ಕೋಪ ತಾಪಗಳಿಗೆ ಕಾರಣವಾಗುತ್ತದೆ. ಹಣಕಾಸಿನ ಕೊರತೆ ಕಡಿಮೆ ಆಗಲಿದೆ. ಜವಾಬ್ದಾರಿಗಳ ನಡುವೆ ಅರೋಗ್ಯದ ಬಗ್ಗೆ ಗಮನ ವಹಿಸಬೇಕು. ಉದ್ಯೋಗದಲ್ಲಿ ಬೇಸರದ ಸನ್ನಿವೇಶವೊಂದು ಎದುರಾಗುತ್ತದೆ. ಆದರೆ ಆತ್ಮೀಯರೊಬ್ಬರ ಕಾರಣ ಸಹಜ ಸ್ಥಿತಿ ಮರಳುತ್ತದೆ. ಯಾರೊಂದಿಗೂ ವಾದ ವಿವಾದ ಮಾಡದೆ ಬುದ್ಧಿವಂತಿಕೆಯ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಕಾರ್ಮಿಕ ವಲಯದವರು ವಿಶೇಷವಾದ ಸವಲತ್ತನ್ನು ಪಡೆಯುತ್ತಾರೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ್ಳಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಉದ್ಯೋಗ ಬದಲಿಸುವ ಸಾಧ್ಯತೆಗಳು ಕಾಣುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳದಿರಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಷಭ
ಮಾಡುವ ಕೆಲಸವನ್ನು ಸ್ವಂತ ಬುದ್ದಿಬಲದಿಂದ ಪೂರ್ಣಗೊಳಿಸುವಿರಿ. ಹಠದ ಸ್ವಾಭಾವವಿರುತ್ತದೆ. ನನ್ನ ಹಾದಿಯೇ ಸರಿ ಎಂಬ ಭಾವನೆ ಇರುತ್ತದೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದ ಲಾಭಾಂಶ ದೊರೆಯುತ್ತದೆ. ಉದ್ಯೋಗಸ್ಥರಿಗಿಂತ ವ್ಯಾಪಾರಸ್ಥರಿಗೆ ನಲ್ಮೆಯ ದಿನ. ಭೂವ್ಯವಹಾರದಲ್ಲಿ ಲಾಭವಿರುತ್ತದೆ. ಕುಟುಂಬದಲ್ಲಿಒಮ್ಮತದ ಕೊರತೆ ಇರುತ್ತದೆ. ಅವಿವಾಹಿತರಿಗೆ ವಿವಾಹಯೋಗವಿದೆ. ವಿದ್ಯಾರ್ಥಿಗಳು ನಿರೀಕ್ಷಿತ ಯಶಸ್ಸು ಗಳಿಸುತ್ತಾರೆ. ವಾಸಸ್ಥಳವನ್ನು ಬದಲಾಯಿಸುವ ಬಗ್ಗೆ ಯೋಚಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಉಂಟಾಗಬಹುದು ಎಚ್ಚರಿಕೆಯಿಂದಿರಿ. ಹಿರಿಯ ಅಧಿಕಾರಿಗಳ ಅವಕೃಪೆಗೆ ಒಳಗಾಗುವಿರಿ. ಕುಟುಂಬದಲ್ಲಿ ಹಣದ ಕೊರತೆ ಕಂಡುಬರುತ್ತದೆ.
ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ
ಮಿಥುನ
ಅಸ್ಥಿರದ ಮನಸ್ಸಿನ ಯಾವುದೇ ಕೆಲಸ ಕಾರ್ಯವನ್ನು ಆರಂಭಿಸಲು ಸಾಧ್ಯವಾಗದು. ಜೀವನದಲ್ಲಿನ ಅಡೆತಡೆಗಳು ಸಂಗಾತಿಯ ಸಹಾಯದಿಂದ ದೂರಾಗುತ್ತದೆ. ಉದ್ಯೋಗ ದೊರೆತು ವಿದೇಶಕ್ಕೆ ತೆರಳುವಿರಿ. ಹಣದ ವಿವಾದವೊಂದು ಬಗೆಹರಿಯಲಿದೆ. ಸಂಗಾತಿಯ ಸಹಯೋಗದಲ್ಲಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ರಾಜಕೀಯ ವಲಯದಲ್ಲಿ ಇರುವವರು ಉತ್ತಮ ಆದಾಯ ಮತ್ತು ಜನಪ್ರಿಯತೆಯನ್ನು ಗಳಿಸಲಿದ್ದಾರೆ. ಕೃಷಿಭೂಮಿಯನ್ನು ಕೊಳ್ಳುವ ಮಾತುಕತೆ ನಡೆಯುತ್ತದೆ. ಅಧಿಕಾರಿಗಳಿಗೆ ಸವಾಲೆನಿಸುವ ಸಮಸ್ಯೆಯೊಂದು ಎದುರಾಗಲಿದೆ. ಅನಿರೀಕ್ಷಿತ ಧನಾಗಮವಿದೆ. ಸ್ತ್ರೀಯರು ಬಂಗಾರದ ಒಡವೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡಲಿದ್ದಾರೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯುವಿರಿ.
ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕಟಕ
ಕುಟುಂಬದ ಒಟ್ಟು ಆದಾಯ ಹೆಚ್ಚಲಿದೆ. ಮನದಲ್ಲಿ ಹೊಸ ಯೋಜನೆಯು ಮೂಡಲಿದೆ. ಹಣವನ್ನು ಉಳಿಸುವ ಹಾದಿಯಲ್ಲಿ ಸಾಗುವಿರಿ. ಮಕ್ಕಳ ಸಾಧನೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಸಂಗಾತಿಯ ಸಹಕಾರ ಮನದ ಚಿಂತೆ ದೂರ ಮಾಡಲಿದೆ. ಸಹೋದ್ಯೋಗಿಗಳ ಆಂತರ್ಯವನ್ನು ಅರ್ಥಮಾಡಿಕೊಳ್ಳುವಿರಿ. ಅಳುಕಿನ ಮನಸ್ಸಿನಿಂದ ಆರಂಭಿಸಿದ್ದ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳ ಮನಸ್ಸಿಗೆ ಸಂತಸ ದೊರೆವ ಸುದ್ದಿ ಬರಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಾಣಾಯಾಮವನ್ನು ಅವಲಂಭಿಸುವುವಿರಿ. ಖರ್ಚು ವೆಚ್ಚದ ವಿಚಾರದಲ್ಲಿ ಯೋಚಿಸದೆ ಅವಸರದ ನಿರ್ಧಾರ ತೆಗೆದುಕೊಳ್ಳದಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿಬಣ್ಣ
ಸಿಂಹ
ಕುಟುಂಬಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಹಣದ ಸದುಪಯೋಗ ಮಾಡಿಕೊಂಡಲ್ಲಿ ತೊಂದರೆ ಬಾರದು. ಕೆಲಸದ ನಡುವೆ ವಿಶ್ರಾಂತಿಯನ್ನೂ ಪಡೆಯುವುದು ಮುಖ್ಯ. ಜನಸೇವೆ ಮಾಡುವಲ್ಲಿ ಸಂತೃಪ್ತಿ ಪಡೆಯುವಿರಿ. ಕುಟುಂಬದ ಆಸ್ತಿಯ ವಿವಾದ ಪರಿಹಾರವಾಗಿ ಪಾಲು ದೊರೆಯುತ್ತದೆ. ಅಧಿಕಾರಿಗಳಿಗೆ ಉದ್ಯೋಗದಲ್ಲಿ ವಿಶೇಷವಾದ ಸ್ಥಾನ ಮಾನ ದೊರೆಯಲಿದೆ. ಅತಿಯಾದ ನಿರೀಕ್ಷೆ ಇರುತ್ತದೆ. ಕುಟುಂಬದಲ್ಲಿ ಪರಸ್ಪರ ಅನಾವಶ್ಯಕವಾದ ವಾದ ವಿವಾದಗಳು ಇರಲಿವೆ. ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಊಹಿಸಿದ್ದ ಅನೇಕ ವಿಚಾರಗಳು ಇಂದು ನಿಜವಾಗಲಿವೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ನಿರ್ಧಾರಕ್ಕೆ ಬರುವಿರಿ. ದಿನಾಂತ್ಯಕ್ಕೆ ಅನಿರೀಕ್ಷಿತ ಧನಲಾಭವಿರುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಹಾಲಿನ ಬಣ್ಣ
ಕನ್ಯಾ
ಬೇರೆಯವರು ಮಂಡಿಸುವ ವಿಚಾರವನ್ನು ಸರಿಯಾಗಿ ಅರ್ಥಮಾಡಿಕೊಳ್ಳುವುದಿಲ್ಲ. ಅನಾವಶ್ಯಕವಾಗಿ ಬೇರೆಯವರು ಮಾಡಿದ ಕೆಲಸವನ್ನು ಟೀಕಿಸುವಿರಿ. ಸೋದರನ ವೈವಾಹಿಕ ಜೀವನದ ಸಮಸ್ಯೆಯನ್ನು ಪರಿಹರಿಸುವಿರಿ. ಕುಟುಂಬದಲ್ಲಿ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸುವಿರಿ. ಕಲಾವಿದರಾದಲ್ಲಿ ಒಳ್ಳೆಯ ಅವಕಾಶಗಳು ದೊರೆಯಲಿವೆ. ಮಕ್ಕಳಿಗಾಗಿ ವೈಭವದ ಅಲಂಕಾರದ ವಸ್ತುಗಳನ್ನು ಕೊಳ್ಳುವಿರಿ. ಉದ್ಯೋಗದಲ್ಲಿ ಸಂತಸದ ವಾತಾವರಣ ಇರುತ್ತದೆ. ಅಧಿಕಾರಿಗಳಾದಲ್ಲಿ ವಿವಾದವೊಂದನ್ನು ಎದುರಿಸಬೇಕಾಗುತ್ತದೆ. ದುಡುಕಿನಿಂದ ತಪ್ಪು ನಿರ್ಧಾರವೊಂದನ್ನು ತೆಗೆದುಕೊಂಡು ಪತ್ಚಾತಾಪ ಪಡುವಿರಿ. ಹಣಕಾಸಿನ ವಿವಾದವೊಂದು ರಾಜಿಯ ಹಂತವನ್ನು ತಲುಪುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ತುಲಾ
ಮನದಲ್ಲಿ ಆತಂಕ ಇದ್ದರೂ ಮಾಡುವ ಕೆಲಸಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಯಾವುದೇ ಸಮಯವನ್ನು ನಿಮ್ಮ ಅನುಕೂಲಕ್ಕೆ ತಕ್ಕಂತೆ ಪರಿವರ್ತಿಸಿಕೊಳ್ಳುವಿರಿ. ಬುದ್ಧಿವಂತಿಕೆಯ ಮಾತಿನಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಉದ್ಯೋಗದಲ್ಲಿ ಉನ್ನತ ಹಂತವನ್ನು ತಲುಪುವಿರಿ. ವಿದ್ಯಾರ್ಥಿಗಳು ವಿಶಿಷ್ಠ ಸಾಧನೆ ಮಾಡುತ್ತಾರೆ. ಕಷ್ಟ ಎನಿಸಿದರೂ ವೈಭವದ ಜೀವನ ನಡೆಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿರುತ್ತದೆ. ಕಂತು ವ್ಯಾಪಾರದಿಂದ ಹಣ ಉಳಿಸುವಿರಿ. ಮಧ್ಯಸ್ಥಿಕೆ ವಹಿಸಿ ಆತ್ಮೀಯರ ಹಣಕಾಸಿನ ವಿವಾದವನ್ನು ಬಗೆಹರಿಸುವಿರಿ. ಮಕ್ಕಳೊಂದಿಗೆ ಸಹನೆಯಿಂದ ವರ್ತಿಸಿ. ಹೆಣ್ಣುಮಕ್ಕಳಿಗೆ ಉದ್ಯೋಗ ದೊರೆಯಲಿದೆ. ಅತಿಯಾದ ಆಹಾರ ಸೇವನೆ ಅಜೀರ್ಣತೆಯನ್ನು ಉಂಟುಮಾಡಲಿದೆ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ
ವೃಶ್ಚಿಕ
ಮನಸ್ಸಿಗೆ ಸರಿ ತೋರಿದ ಕೆಲಸವನ್ನು ಮಾತ್ರ ಮಾಡುವಿರಿ. ಹಣಕಾಸಿನ ವಿಚಾರದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಮಾನ ದೊರೆಯಲಿದೆ. ಕುಟುಂಬದಲ್ಲಿ ಸುಖ ಶಾಂತಿ ನೆಲೆಸಿರುತ್ತದೆ. ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಸಂಗಾತಿಯ ಜೊತೆಗೂಡಿ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಬಹುಕಾಲದಿಂದ ಕಾಡುತ್ತಿದ್ದ ಅನಾರೋಗ್ಯ ನಿವಾರಣೆ ಆಗಲಿದೆ. ಒತ್ತಡದಿಂದ ವೃತ್ತಿ ಬದಲಾಯಿಸುವಿರಿ. ಅನಿರೀಕ್ಷಿತ ಧನಾಗಮನವಿದೆ. ಸಾಕುಪ್ರಾಣಿಗಳ ಬಗ್ಗೆ ಕನಿಕರ ತೋರುವಿರಿ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಧನಸ್ಸು
ಯಾವುದೇ ಸವಾಲನ್ನು ಧೈರ್ಯದಿಂದ ಎದುರಿಸಿ ಜಯ ಸಾಧಿಸುವಿರಿ. ಕುಟುಂಬಕ್ಕೆ ಹೊಸ ಅತಿಥಿಗಳ ಆಗಮನ ಆಗಲಿದೆ. ವಿದ್ಯಾರ್ಥಿಗಳು ಒತ್ತಡವನ್ನು ಮರೆಮಾಚಿ ಸಂತೋಷವನ್ನು ಹಂಚುತ್ತಾರೆ. ಉದ್ಯೋಗದಲ್ಲಿನ ತೊಂದರೆ ಮರೆಯಾಗುತ್ತದೆ. ಮುಂಗೋಪವನ್ನು ಕಡಿಮೆ ಮಾಡಿಕೊಂಡಲ್ಲಿ ಜನರ ಸಹಾಯ ದೊರೆಯುತ್ತದೆ. ಸ್ಥಿರವಾದ ಮನಸ್ಸನ್ನು ರೂಪಿಸಿಕೊಳ್ಳಿ. ಕುಟುಂಬದ ಹಿರಿಯರಿಂದ ನಿಮಗೆ ಹಣದ ಸಹಾಯ ದೊರೆಯುತ್ತದೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವಿರಿ. ಸ್ವಂತ ವಾಹನವನ್ನು ಕೊಳ್ಳುವಿರಿ. ಅನಾವಶ್ಯಕವಾದ ಖರ್ಚುವೆಚ್ಚಗಳನ್ನು ನಿಯಂತ್ರಿಸುವಿರಿ. ಲಾಭವಿಲ್ಲದ ಯಾವುದೆ ಕೆಲಸವನ್ನು ಮಾಡುವುದಿಲ್ಲ. ಗುರುಗಳ ಆಶೀರ್ವಾದ ಪಡೆಯಲು ಯಾತ್ರಾಸ್ಥಳಕ್ಕೆ ತೆರಳುವಿರಿ.
ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ಮಕರ
ಆರೋಗ್ಯದಲ್ಲಿ ಏರಿಳಿತ ಉಂಟಾದರೂ ತೊಂದರೆ ಇರದು. ರಕ್ತಕ್ಕೆ ಸಂಬಂಧಿಸಿದ ತೊಂದರೆ ಇದ್ದಲ್ಲಿ ವೈದ್ಯರ ಸಲಹೆ ಪಡೆಯಿರಿ. ಕುಟುಂಬದಲ್ಲಿ ಪ್ರತಿಯೊಂದು ಕೆಲಸಗಳಿಗೂ ಬೇರೆಯವರನ್ನು ಅವಲಂಬಿಸುವಿರಿ. ಕುಟುಂಬದ ವಿವಾಹವೊಂದು ಕೆಲದಿನಗಳವರೆಗೆ ಮುಂದೂಡಲ್ಪಡುತ್ತದೆ. ಉದ್ಯೋಗದಲ್ಲಿ ಬೇಸರ ಉಂಟಾಗಿ ವಂಶದ ವೃತ್ತಿಯನ್ನು ಆರಂಭಿಸುವಿರಿ. ಭೂವಿವಾದದಲ್ಲಿ ಜಯ ಲಭಿಸುತ್ತದೆ. ವಿದ್ಯಾರ್ಥಿಗಳಿಗೆ ಶುಭಫಲಗಳು ದೊರೆಯಲಿವೆ. ಕಟ್ಟಡ ನಿರ್ಮಾಣಕ್ಕೆ ಅವಶ್ಯಕವಾದ ಕಬ್ಬಿಣ, ಸಿಮೆಂಟ್ ಮುಂತಾದ ವಸ್ತುಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಬೇರೆಯವ ಹಣದ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದರೆ ತೊಂದರೆಯಿದೆ. ಮನೆಯಲ್ಲಿರುವ ಮಕ್ಕಳಿಗೆ ಸಂತೋಷದಾಯಕ ವಾತಾವರಣ ನಿರ್ಮಿಸುವಿರಿ.
ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಕುಂಭ
ಕುಟುಂಬದಲ್ಲಿ ಅನ್ಯೋನ್ಯತೆ ಮರುಕಳಿಸುತ್ತದೆ. ಉದ್ಯೋಗದಲ್ಲಿ ಸಂತೃಪ್ತಿ ಇರುವುದಿಲ್ಲ. ಸೋದರ ಅಥವಾ ಸೋದರಿಯ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರವೊಂದನ್ನು ಆರಂಭಿಸುವಿರಿ. ಎಲ್ಲರೊಂದಿಗೆ ಸೌಹಾರ್ದತೆಯಿಂದ ಬೆರೆತು ಕೆಲಸ ಕಾರ್ಯಗಳನ್ನು ಸರಿದೂಗಿಸುವಿರಿ. ಆತ್ಮವಿಶ್ವಾಸದ ಕೊರತೆಯಿಂದ ತಪ್ಪುನಿರ್ಧಾರ ತೆಗೆದುಕೊಳ್ಳುವಿರಿ. ವಿಶೇಷವಾದ ಕಲಾಪ್ರೌಢಿಮೆ ಇದ್ದಲ್ಲಿ ಉತ್ತಮ ಅವಕಾಶವೊಂದು ದೊರೆಯಲಿದೆ. ಸಂಗೀತ ಬಲ್ಲವರಿಗೆ ಮಹತ್ತರ ಅವಕಾಶ ದೊರೆಯಲಿದೆ. ವಿಕಲ ಚೇತನರಿಗೆ ವಿಶೇಷವಾದ ಅನುಕೂಲತೆ ಇರುತ್ತದೆ. ಹಳೆಯ ಮನೆಯನ್ನು ನವೀಕರಿಸುವ ಕಾಯಕವನ್ನು ಆರಂಭಿಸುವಿರಿ. ಆತ್ಮೀಯರಿಂದ ಹಣದ ಸಹಾಯವನ್ನು ಪಡೆಯುವಿರಿ. ಕೈಕಾಲುಗಳಿಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ.
ಪರಿಹಾರ : ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮೀನ
ನಿಮ್ಮ ಮನಸ್ಸಿನ ಆಸೆ ಆಕಾಂಕ್ಷೆಗಳು ಭವಿಷ್ಯದಲ್ಲಿ ಕೈಗೂಡಲಿವೆ. ಮನಸ್ಸಿಲ್ಲದೆ ಹೋದರು ಕುಟುಂಬದ ಅಧಿಕಾರ ಹಿಡಿಯುವಿರಿ. ಉದ್ಯೋಗದಲ್ಲಿ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಕಣ್ಣಿನ ದೋಷವಿರುತ್ತದೆ. ಒಮ್ಮೆ ತೆಗೆದುಕೊಳ್ಳುವ ನಿರ್ಧಾರವನ್ನು ಎಂದಿಗೂ ಬದಲಾಯಿಸುವುದಿಲ್ಲ. ಅವಿವಾಹಿತರಿಗೆ ವಿವಾಹಯೋಗವಿದೆ. ಸಂಪ್ರಾದಾಯಿಕ ವೈದ್ಯ ಪದ್ಧತಿಯನ್ನು ಕಲಿಯಲು ಆರಂಭಿಸುವಿರಿ. ಜನಸೇವಾಸಂಸ್ಥೆಯನ್ನು ನಡೆಸುತ್ತಿದ್ದಲ್ಲಿ ಸರ್ಕಾರದಿಂದ ಧನಸಹಾಯ ದೊರೆಯುತ್ತದೆ. ನಿಮ್ಮ ಖರ್ಚಿಗೆ ಸಮನಾದ ಆದಾಯ ನಿಮಗೆ ದೊರೆಯುತ್ತದೆ. ಮಕ್ಕಳಿಗೆ ಉಡುಗೊರೆ ನೀಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ಕಿರುಪ್ರವಾಸ ಕೈಗೊಳ್ಳುವಿರಿ. ಕಷ್ಟದಲ್ಲಿ ಇದ್ದವರಿಗೆ ಹಣದ ಸಹಾಯ ಮಾಡುವಿರಿ.
ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ
---------------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
