Tomorrow Horoscope: ಹೊಸ ಜವಾಬ್ದಾರಿಯೊಂದು ವಿಶ್ರಾಂತಿ ಕಸಿಯುತ್ತೆ, ವಿವಾಹ ಯೋಗವಿದೆ; ಶನಿವಾರದ ದಿನಭವಿಷ್ಯ
9 March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಶನಿವಾರದ ದಿನಭವಿಷ್ಯ ಹೀಗಿದೆ..

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 9 March 2024)
ನಾಳಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಶನಿವಾರ
ತಿಥಿ : ಚತುರ್ದಶಿ ಸ.05.44 ರವರೆಗು ಇದ್ದು ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.
ನಕ್ಷತ್ರ : ಧನಿಷ್ಠ ನಕ್ಷತ್ರವು ಬೆ.06.55 ರವರೆಗೆ ಇರುತ್ತದೆ. ಉಪರಿ ಶತಬಿಷ ನಕ್ಷತ್ರ ಇರುತ್ತದೆ.
ಸೂರ್ಯೋದಯ: ಬೆ.06.29
ಸೂರ್ಯಾಸ್ತ: ಸ.06.28
ರಾಹುಕಾಲ : ಬೆ.09.00 ರಿಂದ ಬೆ.10.30
ರಾಶಿ ಫಲಗಳು
ಮೇಷ
ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ ಕಂಡುಬರುತ್ತದೆ. ಉದ್ಯೋಗದಲ್ಲಿ ತಾಳ್ಮೆಯಿಂದ ನಿರ್ಧಾರ ತೆಗೆದುಕೊಂಡಲ್ಲಿ ವಿಶೇಷವಾದ ಅನುಕೂಲತೆ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಆದಾಯ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಜವಾಬ್ದಾರಿ ಹೆಚ್ಚುತ್ತದೆ. ವಿದ್ಯಾರ್ಥಿಗಳು ಕಲಿಕೆಯ ಬಗ್ಗೆ ಹೆಚ್ಚಿನ ಆಸಕ್ತಿ ತೆಗೆದುಕೊಳ್ಳುತ್ತಾರೆ. ಸ್ವಂತ ಬಳಕೆಗೆ ಹೊಸ ವಾಹನವನ್ನು ಕೊಳ್ಳುವಿರಿ. ವಾಸವಿರುವ ಮನೆಯನ್ನು ವಿಸ್ತರಿಸುವಿರಿ. ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು. ಕೃಷಿಕರಿಗೆ ಉತ್ತಮ ಆದಾಯ ದೊರೆಯಲಿದೆ. ವಾಹನಗಳ ಮಾರಾಟದಲ್ಲಿ ಲಾಭ ಇರುತ್ತದೆ. ಪಶುಸಂಗೋಪನೆಯಲ್ಲಿ ಆಸಕ್ತಿ ಇರುತ್ತದೆ. ಹಿರಿಯ ಸೋದರಿಯ ಸಹಕಾರ ಇರುತ್ತದೆ.
ಪರಿಹಾರ : ಜೇನುತುಪ್ಪ ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಸಿರು ಬಣ್ಣ
ವೃಷಭ
ಕುಟುಂಬದಲ್ಲಿನ ಒತ್ತಡವು ಕಡಿಮೆ ಆಗುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತವಾಗಿ ಅಡಚಣೆಯೊಂದು ಎದುರಾಗುತ್ತದೆ. ಹಿರಿಯ ಅಧಿಕಾರಿಗಳ ಸಹಕಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆದಾಯ ತೃಪ್ತಿಕರವಾಗಿರುತ್ತದೆ. ವಿದ್ಯಾರ್ಥಿಗಳು ಹಠದ ಗುಣದಿಂದ ವಿದ್ಯಾಭ್ಯಾಸದಲ್ಲಿ ಶ್ರದ್ಧೆ ತೋರುತ್ತಾರೆ. ಹಣದ ಕೊರತೆ ಕಡಿಮೆ ಮಾಡಲು ಉಪವೃತ್ತಿಯೊಂದನ್ನು ಆರಂಬಿಸುವಿರಿ. ಅನಗತ್ಯವಾಗಿ ಉದ್ಯೋಗವನ್ನು ಬದಲಾಯಿಸುವಿರಿ. ಸೋದರನ ಹಣದ ವಿವಾದ ಪರಿಹರಿಸಲು ಹೋಗಿ ಕಷ್ಟಕ್ಕೆ ಸಿಲುಕುವಿರಿ. ಮಕ್ಕಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವಿರಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹೊಸ ಜವಾಬ್ದಾರಿಯೊಂದು ವಿಶ್ರಾಂತಿ ಇಲ್ಲದಂತೆ ಮಾಡುತ್ತದೆ.
ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ನೀಲಿ ಬಣ್ಣ
ಮಿಥುನ
ಮಕ್ಕಳ ಆಗಮನದಿಂದ ಕುಟುಂಬದಲ್ಲಿ ಸಂಭ್ರಮದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಒತ್ತಡದ ನಡುವೆಯೂ ಯಶಸ್ಸನ್ನು ಕಾಣುವಿರಿ. ವ್ಯಾಪಾರ ವ್ಯವಹಾರದಲ್ಲಿ ನಿರಾತಂಕದ ವಾತಾವರಣ ಇರುತ್ತದೆ. ವಿದ್ಯಾರ್ಥಿಗಳು ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಮುಂದುವರೆಯುವರು. ಚಿಕ್ಕ ಮಕ್ಕಳ ಆರೋಗ್ಯದಲ್ಲಿ ತೊಂದರೆ ಆಗಬಹುದು. ಹಿರಿಯ ಅಧಿಕಾರಿಗಳು ಸಂದಿಗ್ದ ಪರಿಸ್ಥಿತಿಯನ್ನು ಎದುರಿಸುತ್ತಾರೆ. ನಿಮ್ಮ ಮಧ್ಯಸ್ಥಿಕೆಯಿಂದ ಉದ್ಯೋಗದಲ್ಲಿನ ಸಮಸ್ಯೆಯೊಂದು ಪರಿಹಾರವಾಗಲಿದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ವಿದ್ಯಾರ್ಥಿಗಳಿಗೆ ಉದ್ಯೋಗ ಲಭಿಸುವ ಸಾಧ್ಯತೆಗಳಿವೆ. ಹಣದ ಕೊರತೆ ಉಂಟಾಗಬಹುದು.
ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಕಟಕ
ದುಡುಕುತನದಿಂದ ಕುಟುಂಬದಲ್ಲಿ ವಿವಾದವೊಂದವನ್ನು ಎದುರಿಸುವಿರಿ. ಉದ್ಯೋಗದಲ್ಲಿ ಬಡ್ತಿ ದೊರೆತು ಜವಾಬ್ದಾರಿ ಹೆಚ್ಚುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆದಾಯದ ಕೊರತೆ ಇರುವುದಿಲ್ಲ. ಹಣದ ವಿಚಾರದಲ್ಲಿ ಆತುರದ ತೀರ್ಮಾನ ತೆಗೆದುಕೊಳ್ಳದಿರಿ. ವಿದ್ಯಾರ್ಥಿಗಳು ಚುರುಕಿನಿಂದ ಅಧ್ಯಯನದಲ್ಲಿ ಮುಂದುವರೆಯುತ್ತಾರೆ. ಕಂತು ವ್ಯಾಪಾರದಲ್ಲಿ ಉತ್ತಮ ಗಳಿಕೆ ಇರುತ್ತದೆ. ವಯೋವೃದ್ದರ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಸಂಗಾತಿಯ ಜೊತೆಯಲ್ಲಿ ಭಿನ್ನಾಭಿಪ್ರಾಯ ಇರುತ್ತದೆ. ತಾಯಿಗೆ ಅಜೀರ್ಣದ ತೊಂದರೆ ಉಂಟಾಗಬಹುದು, ರಕ್ತದ ಒತ್ತಡ ಇದ್ದಲ್ಲಿ ವೈದ್ಯರನ್ನು ಭೇಟಿಮಾಡಿ. ಪ್ರಯೋಜನವಿಲ್ಲದ ಓಡಾಟ ಕೋಪಕ್ಕೆ ಕಾರಣವಾಗುತ್ತದೆ. ದೇವಾಲಯದ ಪುನರುಜ್ಜೀವನ ಕಾಯಕದಲ್ಲಿ ಭಾಗವಹಿಸುವಿರಿ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಸಿಂಹ
ಕುಟುಂಬದಲ್ಲಿನ ಮನಸ್ತಾಪವು ಕಡಿಮೆಯಾಗಲಿದೆ. ಪರಸ್ಪರ ಮಾತುಕತೆಯಿಂದ ಸಹಜಸ್ಥಿತಿ ಮರಳುತ್ತದೆ. ಉದ್ಯೋಗದಲ್ಲಿ ಮಾಡದ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ತಂದೆಯವರ ವ್ಯಾಪಾರದಲ್ಲಿ ಆಸಕ್ತಿ ಇರುವುದಿಲ್ಲ. ಮನಸ್ಸಿನ ಮೇಲೆ ಪರಿಣಾಮ ಬೀರುವ ಘಟನೆಯೊಂದು ಸಂಭವಿತ್ತದೆ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ಹೊರಬರುತ್ತ್ರಾರೆ. ಐಷಾರಾಮಿ ವಸ್ತುಗಳನ್ನು ಕೊಳ್ಳುವ ಸಾಧ್ಯತೆ ಇದೆ. ಮಕ್ಕಳ ಜೊತೆಯಲ್ಲಿ ಆಟವಾಡುತ್ತಾ ಮನರಂಜನೆಯಲ್ಲಿ ದಿನ ಕಳೆಯುವಿರಿ. ದೇವತಾ ಸೇವೆಯಲ್ಲಿ ನೆಮ್ಮದಿ ಕಾಣುವಿರಿ. ಸಮಾಜದಲ್ಲಿ ವಿಶೇಷವಾದ ಸ್ಥಾನ ಮಾನ ದೂರೆಯುತ್ತದೆ. ಸಹನೆಯಿಂದ ವರ್ತಿಸಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕನ್ಯಾ
ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ಕೊರತೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಇರಲಿವೆ. ಉದ್ಯೋಗದಲ್ಲಿ ಪ್ರಯತ್ನಕ್ಕೆ ತಕ್ಕ ಫಲಗಳು ದೊರೆಯಲಿವೆ. ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಓದುವ ಹವ್ಯಾಸ ಬೆಳೆಸಿಕೂಳ್ಳಬೇಕು. ಸಂಪ್ರದಾಯಿಕ ಔಷದೋಪಚಾರದಿಂದ ಆರೋಗ್ಯದಲ್ಲಿ ಸ್ಥಿರತೆ ಉಂಟಾಗುತ್ತದೆ. ಸಂಗಾತಿಯ ಸ್ಥಿತಿ ಪ್ರಜ್ಞೆಯಿಂದ ದೊಡ್ಡ ಸಮಸ್ಯೆಯೊಂದು ನಿವಾರಣೆ ಆಗುವುದು. ಕಲಾವಿದರಿಗೆ ಶುಭವಿದೆ. ಉದ್ಯೋಗದಲ್ಲಿ ಪರಸ್ಪರ ಸಹಕಾರದ ಕೊರತೆ ಕಂಡುಬರುತ್ತದೆ. ದುಡುಕಿನ ಮಾತನಾಡದಿರಿ. ವಂಶದ ಹಿರಿಯರ ಮಾರ್ಗದರ್ಶನ ದೊರೆಯುತ್ತದೆ. ತಂದೆಯವರಿಗೆ ಅನಾವಶ್ಯಕ ಖರ್ಚು ವೆಚ್ಚಗಳಿದ್ದು, ಕುಟುಂಬದ ಜವಾಬ್ದಾರಿ ನಿಮ್ಮದಾಗಲಿದೆ. ಭೂವಿವಾದವೊಂದು ಪರಿಹಾರಗೊಳ್ಳಲಿದೆ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದು ಬಣ್ಣ
ತುಲಾ
ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಒಮ್ಮತ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿತ ಗುರಿ ಇಲ್ಲದೆ ಕೆಲಸ ನಿರ್ವಹಿಸಬೇಕಾಗುತ್ತದೆ. ಚಂಚಲ ಮನಸ್ಸಿನ ಕಾರಣ ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ ಕಂಡುಬರುತ್ತದೆ. ಸಾರಿಗೆ ಆಧಾರಿತ ವ್ಯವಹಾರದಲ್ಲಿ ಪಾಲುದಾರಿಕೆ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಬಲ್ಲವರಿಂದ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಸಮಯವನ್ನು ವ್ಯರ್ಥಮಾಡದೆ ಹೊಸ ಜವಾಬ್ದಾರಿಗಳನ್ನು ಒಪ್ಪುವಿರಿ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಕೊಲೆಸ್ಟ್ರಾಲ್ ಇರುವ ಆಹಾರ ಪದಾರ್ಥಗಳಿಂದ ದೂರವಿರಿ. ಚಾಡಿ ಮಾತನ್ನು ನಂಬದಿರಿ. ಭೂವಿವಾದವನ್ನು ಎಚ್ಚರಿಕೆಯಿಂದ ಪರಿಹರಿಸಲು ಪ್ರಯತ್ನಿಸಿ. ಸೋದರಿಯ ವಿವಾಹದ ಮಾತುಕತೆ ನಡೆಯುತ್ತದೆ.
ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಂದು ಬಣ್ಣ
ವೃಶ್ಚಿಕ
ಕುಟುಂಬದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವುದಿಲ್ಲ. ವಾತಾವರಣಕ್ಕೆ ತಕ್ಕಂತೆ ಮನಸ್ಸನ್ನು ಬದಲಾಯಿಸುವಿರಿ. ಯಾವುದೇ ಕೆಲಸವನ್ನು ಮನವಿಟ್ಟು ಮಾಡುವುದಿಲ್ಲ. ಹಿರಿಯ ಅಧಿಕಾರಿಗಳ ಉಪಟಳಕ್ಕೆ ಬೇಸತ್ತು ಉದ್ಯೋಗವನ್ನು ಬದಲಾಯಿಸುವ ಸೂಚನೆಗಳಿವೆ. ವಿದ್ಯಾರ್ಥಿಗಳು ಉತ್ತಮ ಸನ್ನಿವೇಶದ ಮಧ್ಯೆ ಹುಮ್ಮಸ್ಸಿನಿಂದ ಕೆಲಸ ನಿರ್ವಹಿಸುತ್ತಾರೆ. ಹಣಕಾಸಿನ ವಿಚಾರದಲ್ಲಿ ತಪ್ಪಾದ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಭೂ ಸಂಬಂಧಿತ ಉದ್ದಿಮೆಯಲ್ಲಿ ಉತ್ತಮ ಆದಾಯ ಲಭಿಸುತ್ತದೆ. ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಧನಸ್ಸು
ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವಿರಿ. ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಸಮಸ್ಯೆಗಳಿಗೆ ಹೆದರದೆ ಪರಿಹಾರವನ್ನು ಕಂಡುಹಿಡಿಯುವಿರಿ. ಉದ್ಯೋಗದಲ್ಲಿ ಮರೆಯಾದ ಸಹಬಾಳ್ವೆ ಸಹಕಾರ ಮರಳುತ್ತದೆ. ಹಣಕಾಸಿನ ಕೊರತೆ ಕಾಣದು. ವ್ಯಾಪಾರಸ್ಥರು ಹೆಚ್ಚಿನ ಪರಿಶ್ರಮದಿಂದ ಸ್ಥಿರವಾದ ಆದಾಯ ಪಡೆಯುತ್ತಾರೆ. ನಿಮ್ಮಲ್ಲಿರುವ ವಿಶಾಲ ಮನೋಭಾವನೆ ಕೆಲವರ ಜೀವನ ರೂಪಿಸುತ್ತದೆ. ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿರ್ಧಾರವು ಅವರ ಭವಿಷ್ಯವನ್ನು ರೂಪಿಸುತ್ತದೆ. ಉದ್ಯೋಗ ನಿಮಿತ್ತ ವಿದೇಶಪ್ರವಾಸ ಮಾಡಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಫಲರಾಗುವಿರಿ. ದುಡುಕುತನದ ಮಾತು ವಿವಾದಕ್ಕೆ ಕಾರಣವಾಗಬಲ್ಲದು. ಬಂಧು ಬಳಗದವರಿಗೆ ಹಣದ ಸಹಾಯ ಮಾಡುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ಮಕರ
ಕುಟುಂಬದ ಕೆಲಸಗಳ ಬಗ್ಗೆ ಗಮನ ನೀಡುವುದಿಲ್ಲ. ಉದ್ಯೋಗದಲ್ಲಿನ ನಿಧಾನಗತಿಯ ಪ್ರಗತಿ ಬೇಸರ ಮೂಡಿಸುತ್ತದೆ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳು ಉತ್ತಮ ಆದಾಯದೊಂದಿಗೆ ನಡೆಯಲಿವೆ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿಯನ್ನು ಗಳಿಸುವರು. ವ್ಯವಸಾಯಕ್ಕೆ ಸಹಾಯಕವಾದ ಪರಿಕರಗಳ ಸರಬರಾಜಿನಲ್ಲಿ ಲಾಭವಿದೆ. ಸೋದರನಿಗೆ ವಿವಾಹ ನಿಶ್ಚಯವಾಗಲಿದೆ. ಕುಟುಂಬದ ದಿನನಿತ್ಯದ ನಿರ್ವಹಣೆ ನಿಮ್ಮ ಪಾಲಾಗುತ್ತದೆ. ಮಕ್ಕಳಿಗೆ ಉದ್ಯೋಗ ದೊರೆಯುತ್ತದೆ. ಬೆಲೆಬಾಳುವ ವಸ್ತುಗಳಿಗೆ ಹಣ ಖರ್ಚಾಗುತ್ತದೆ. ಬರಿ ಮಾತಿನಿಂದ ಕೆಲಸ ಸಾಧಿಸುವಿರಿ. ಸಂಗೀತ ನಾಟ್ಯಗಳಲ್ಲಿ ಆಸಕ್ತಿ ಮೂಡುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕುಂಭ
ಕುಟುಂಬದ ಒಗ್ಗಟ್ಟಿನಲ್ಲಿ ಬಿರುಕು ಮೂಡಲಿದೆ. ಸಹನೆಯಿಂದ ವಿಚಾರ ವಿನಿಮಯ ಮಾಡಿಕೊಂಡಲ್ಲಿ ಸಂತೋಷ ಮರುಕಳಿಸುತ್ತದೆ. ಉದ್ಯೋಗದಲ್ಲಿನ ಬದಲಾವಣೆಗಳು ಹೊಸ ನಿರೀಕ್ಷೆಯನ್ನು ಮೂಡಿಸುತ್ತವೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆದಾಯ ದೊರೆಯದು. ಮನದ ಯೋಜನೆಯನ್ನು ಯಾರಿಗೂ ಹೇಳುವುದಿಲ್ಲ. ಪಾಲುಗಾರಿಕೆಯ ವ್ಯವಹಾರದಲ್ಲಿ ಬಂಡವಾಳ ಹೂಡದಿರಿ. ಕುಟುಂಬದ ಆಸ್ತಿಯ ವಿವಾದ ನಿರ್ಣಾಯಕ ಹಂತ ತಲುಪಲಿದೆ. ವಿದ್ಯಾರ್ಥಿಗಳು ಚುರುಕಿನಿಂದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುತ್ತಾರೆ. ಕಾರಣವಿಲ್ಲದೆ ದಂಪತಿಗಳ ನಡುವೆ ವಿರಸ ಉಂಟಾಗುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯಕ್ಕೆ ಸಹಕಾರ ನೀಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನೀಲಿಮಿಶ್ರಿತಬಿಳಿ ಬಣ್ಣ
ಮೀನ
ನೆಮ್ಮದಿಯಿಂದ ದಿನ ಕಳೆಯುವಿರಿ. ಕುಟುಂಬದಲ್ಲಿದ್ದ ಭಿನ್ನಾಭಿಪ್ರಾಯ ಬಗೆಹರಿಯುವುದು. ಉದ್ಯೋಗದಲ್ಲಿನ ಬದಲಾವಣೆಗಳು ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ. ಆಪ್ತರ ಸಹಕಾರ ದೊರೆಯಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಬರಿ ಮಾತಿನಿಂದಲೇ ಎಲ್ಲರ ಮನಸ್ಸನ್ನು ಗೆಲ್ಲಬಲ್ಲಿರಿ. ಸಮಯದ ಅಭಾವದಿಂದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿವೆ. ಮಕ್ಕಳ ಸಹಾಯದಿಂದ ಆರ್ಥಿಕ ಪ್ರಗತಿ ಸಾದಿಸುತ್ತಾರೆ. ವಿದ್ಯಾರ್ಥಿಗಳು ಎಲ್ಲರೂ ಮೆಚ್ಚುವಂತಹ ಕೆಲಸವನ್ನು ಮಾಡಲಿದ್ದಾರೆ. ಯಂತ್ರ ವಾಹನಗಳ ವ್ಯಾಪಾರ ವಹಿವಾಹಿಟಿನಿಂದ ಲಾಭವಿದೆ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ತೊಂದರೆ ಅನುಭವಿಸುವಿರಿ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ :7
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಹಾಲಿನ ಬಣ್ಣ
-----------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
