ಯುಗಾದಿ ಹಣಕಾಸು ಭವಿಷ್ಯ: ಕನ್ಯಾ ರಾಶಿಯವರಿಗೆ ಅನಿರೀಕ್ಷಿತ ಧನ ಲಾಭವಿದೆ, ವೃಶ್ಚಿಕ ರಾಶಿಯವರು ಹಣ ಉಳಿಸುವಲ್ಲಿ ಯಶಸ್ವಿಯಾಗುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಯುಗಾದಿ ಹಣಕಾಸು ಭವಿಷ್ಯ: ಕನ್ಯಾ ರಾಶಿಯವರಿಗೆ ಅನಿರೀಕ್ಷಿತ ಧನ ಲಾಭವಿದೆ, ವೃಶ್ಚಿಕ ರಾಶಿಯವರು ಹಣ ಉಳಿಸುವಲ್ಲಿ ಯಶಸ್ವಿಯಾಗುತ್ತಾರೆ

ಯುಗಾದಿ ಹಣಕಾಸು ಭವಿಷ್ಯ: ಕನ್ಯಾ ರಾಶಿಯವರಿಗೆ ಅನಿರೀಕ್ಷಿತ ಧನ ಲಾಭವಿದೆ, ವೃಶ್ಚಿಕ ರಾಶಿಯವರು ಹಣ ಉಳಿಸುವಲ್ಲಿ ಯಶಸ್ವಿಯಾಗುತ್ತಾರೆ

Ugadi Finance Horoscope: ಯುಗಾದಿ ಹಣಕಾಸು ವರ್ಷ ಭವಿಷ್ಯ 2025. ಕನ್ಯಾ ರಾಶಿಯವರಿಗೆ ಅನಿರೀಕ್ಷಿತ ಧನ ಲಾಭವಿದೆ, ವೃಶ್ಚಿಕ ರಾಶಿಯವರು ಹಣ ಉಳಿಸುತ್ತಾರೆ. (ಬರಹ: ಎಚ್‌.ಸತೀಶ್, ಜ್ಯೋತಿಷಿ)

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಹಣಕಾಸು ಯುಗಾದಿ ವರ್ಷ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಹಣಕಾಸು ಯುಗಾದಿ ವರ್ಷ ಭವಿಷ್ಯ

ಯುಗಾದಿ ಹಣಕಾಸು ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಹಣಕಾಸು ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಸಿಂಹದಿಂದ ಕಟಕದವರಿಗೆ ನಾಲ್ಕು ರಾಶಿಯವರ ಹಣಕಾಸು ವರ್ಷ ಭವಿಷ್ಯ ಇಲ್ಲಿದೆ.

ಸಿಂಹ ರಾಶಿ

ಉತ್ತಮ ಆದಾಯವಿರುತ್ತದೆ. ಖರ್ಚು ವೆಚ್ಚಗಳು ಕಡಿಮೆಯಾಗಿರುತ್ತದೆ. ಆದರೆ ಅತಿಯಾದ ಸಹಾಯದ ಗುಣದಿಂದ ಹಣದ ಕೊರತೆಯನ್ನು ಎದುರಿಸುವಿರಿ. ಕಷ್ಟವೆನಿಸಿದರೂ ಆಸ್ತಿ ಗಳಿಸುವ ಸಲುವಾಗಿ ಹಣವನ್ನು ಉಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಣವನ್ನು ವಿನಿಯೋಗಿಸುವ ಮುನ್ನ ಯೋಚಿಸುವುದು ಒಳ್ಳೆಯದು. ಸುಲಭವಾದ ದಾರಿಯಲ್ಲಿ ಹಣ ಸಂಪಾದಿಸಲು ಸಾಧ್ಯವಾಗುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭಾಂಶವು ಕಡಿಮೆಯಾಗುತ್ತದೆ. ಆದ್ದರಿಂದ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತೀರಿ. ಹಣಕಾಸಿನ ವಿವಾದವೊಂದನ್ನು ಎದುರಿಸಿ ಜಯಗಳಿಸುವಿರಿ. ಉತ್ತಮ ವೇತನ ಗಳಿಸಲು ಉದ್ಯೋಗ ನಿಮಿತ್ತ ಕುಟುಂಬದವರಿಂದ ದೂರ ಉಳಿಯುವಿರಿ. ಸಹನೆಯಿಂದ ವರ್ತಿಸಿದಲ್ಲಿ ಉತ್ತಮ ಹಣಗಳಿಗೆ ಸಾಧ್ಯವಾಗುತ್ತದೆ.

ಕನ್ಯಾ ರಾಶಿ

ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವರ್ತಿಸುವಿರಿ. ಕಷ್ಟ ಎನಿಸಿದರು ಹಣ ಸಂಗ್ರಹ ಮಾಡುವಿರಿ. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ಜವಾಬ್ದಾರಿ ಇರುವ ಕಾರಣ ಹಣದ ಕೊರತೆ ಉಂಟಾಗದು. ನಿಯಮಿತ ಆದಾಯ ಇರುತ್ತದೆ. ಕ್ಷೀಪ್ರಗತಿಯಲ್ಲಿ ಲಾಭಗಳಿಸುವ ಆಸೆ ಇರುತ್ತದೆ. ಅನಿರೀಕ್ಷಿತ ಧನ ಲಾಭ ದೊರೆಯಲಿದೆ. ಮನೆ ಅಥವಾ ಜಮೀನನ್ನು ಕೊಳ್ಳಲು ಹಣವಿನಿಯೋಗಿಸುವಿರಿ. ವಿದೇಶಕ್ಕೆ ಸಂಬಂಧಪಟ್ಟಂತಹ ವ್ಯಾಪಾರ ಒಂದನ್ನು ಆರಂಭಿಸುವಿರಿ. ಕುಟುಂಬದ ಸದಸ್ಯರ ಆರೋಗ್ಯದ ತೊಂದರೆಯಿಂದ ಹಣ ಖರ್ಚಾಗುತ್ತದೆ. ಆತ್ಮೀಯರೊಂದಿಗೆ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಸಮಾಜ ಸೇವಾ ಕಾರ್ಯಕ್ರಮಗಳಿಗೆ ಹಣವನ್ನು ನೀಡುವಿರಿ.

ತುಲಾ ರಾಶಿ

ಸುಖಮಯ ಜೀವನವನ್ನು ಇಷ್ಟಪಡುವಿರಿ. ಐಷಾರಾಮಿ ವಸ್ತುಗಳನ್ನು ಕೊಳ್ಳುವಿರಿ. ಇದರಿಂದಾಗಿ ಉತ್ತಮ ಆದಾಯವಿದ್ದರೂ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಬೇರೆಯವರಿಗೆ ನೀಡಿದ ಹಣ ಮರಳಿ ದೊರೆಯದು. ಇದೇ ರೀತಿ ಬೇರೆಯವರಿಗೆ ನೀಡಬೇಕಾದ ಹಣವನ್ನು ನೀಡಲು ನಿಮ್ಮಿಂದ ಸಾಧ್ಯವಾಗದು. ಅನಗತ್ಯ ಖರ್ಚು ವೆಚ್ಚಗಳು ಎದುರಾಗಲಿವೆ. ಹಣಕಾಸಿನ ಯೋಜನೆಗಳಲ್ಲಿ ಹಣವನ್ನು ಹೂಡುವ ಮುನ್ನ ಎಚ್ಚರಿಕೆವಹಿಸಬೇಕು. ಸ್ವಂತ ಉದ್ದಿಮೆ ಇದ್ದಲ್ಲಿ ವರಮಾನದಲ್ಲಿ ಸ್ಥಿರತೆ ಕಂಡುಬರುತ್ತದೆ. ಪಾಲುಗಾರಿಕೆಯ ವ್ಯಾಪಾರವಿದ್ದಲ್ಲಿ ಉತ್ತಮ ಲಾಭಾಂಶ ನಿಮ್ಮದಾಗುತ್ತದೆ. ನಿಮ್ಮ ವ್ಯಾಪಾರವನ್ನು ವಿಸ್ತರಿಸುವಿರಿ. ಹಣದ ವ್ಯವಹಾರದ ತಿಳುವಳಿಕೆ ಉಳ್ಳವರಿಂದ ಹಣ ಹೂಡಿಕೆಯ ಬಗ್ಗೆ ಸಲಹೆಯನ್ನು ಪಡೆಯುವುದು ಶ್ರೇಯಸ್ಕರ.

ವೃಶ್ಚಿಕ ರಾಶಿ

ಹಣಕಾಸಿನ ಗಳಿಕೆಯಲ್ಲಿ ನಿಮಗೆ ಉತ್ತಮ ಅಭಿರುಚಿ ಇರುತ್ತದೆ. ಆದರೆ ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದಿಲ್ಲ. ನಿಮ್ಮ ಬಳಿ ಇರುವ ಹಣವೆಲ್ಲ ಖರ್ಚಾದ ನಂತರ ಮತ್ತೆ ಹಣ ಗಳಿಸಲು ಆರಂಭಿಸುವಿರಿ. ಸ್ವಂತ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ. ಆದರೂ ಹಣ ಉಳಿಸುವ ಯತ್ನದಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ನಿರೀಕ್ಷೆಯಂತೆ ಉತ್ತಮ ವೇತನ ದೊರೆಯುತ್ತದೆ. ಕಮಿಷನ್ ಆಧಾರಿತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಬೇರೆಯವರನ್ನು ನಂಬುವುದಿಲ್ಲ. ಇದರಿಂದ ಉತ್ತಮ ಅವಕಾಶಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಆತುರ ಪಡೆದೆ ಯೋಚಿಸಿ ಮುಂದುವರೆದರೆ ಉತ್ತಮ ಹಣಗಳಿಕೆ ಸಾಧ್ಯವಾಗುತ್ತದೆ.

ಬರಹ: ಎಚ್‌. ಸತೀಶ್, ಜ್ಯೋತಿಷಿ.

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.