ವಾರ ಭವಿಷ್ಯ: ಕುಂಭ ರಾಶಿಯವರಿಗೆ ಹಣದ ನೆರವು ಸಿಗುತ್ತೆ, ಮೀನ ರಾಶಿಯವರು ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಕುಂಭ ರಾಶಿಯವರಿಗೆ ಹಣದ ನೆರವು ಸಿಗುತ್ತೆ, ಮೀನ ರಾಶಿಯವರು ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತಾರೆ

ವಾರ ಭವಿಷ್ಯ: ಕುಂಭ ರಾಶಿಯವರಿಗೆ ಹಣದ ನೆರವು ಸಿಗುತ್ತೆ, ಮೀನ ರಾಶಿಯವರು ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತಾರೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 20ರ ಭಾನುವಾರದಿಂದ 26ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಧನು ರಾಶಿ

ಆಹಾರ ಸೇವನೆಯಲ್ಲಿ ಇತಿ ಮಿತಿಯನ್ನು ಅನುಸರಿಸುವಿರಿ. ಇದರಿಂದ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ತಪ್ಪು ನಿರ್ಧಾರದ ಕಾರಣದಿಂದಾಗಿ ವರಮಾನದಲ್ಲಿ ಹಿನ್ನೆಡೆ ಉಂಟಾಗುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಸ್ವಂತ ಕೆಲಸ ಕಾರ್ಯಗಳನ್ನು ಮುಂದೊಡುವಿರಿ. ಕುಟುಂಬದವರ ಸಹಕಾರ ನಿಮಗಿರುತ್ತದೆ. ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ಕಠಿಣ ಪ್ರಯತ್ನ ಕೈಗೊಳ್ಳಬೇಕು. ನಿಮಗೆ ಗುರು ಹಿರಿಯರ ಸಹಾಯ ಸಹಕಾರ ದೊರೆಯುತ್ತದೆ. ಸೋಲಿನ ವೇಳೆ ಕೋಪಗೊಂಡರು ಬಹುಕಾಲ ಉಳಿಯುವುದಿಲ್ಲ. ಮಕ್ಕಳಿಗೆ ಉದ್ಯೋಗ ದೊರೆಯುವಲ್ಲಿ ನಿಮ್ಮ ಪಾತ್ರವು ಅತಿ ಮುಖ್ಯವಾಗುತ್ತದೆ. ಸೋದರ ಮಾವನ ಸಲುವಾಗಿ ಕುಟುಂಬದಲ್ಲಿ ಗಂಭೀರವಾದ ವಾತಾವರಣ ಉಂಟಾಗುತ್ತದೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ ರಾಶಿ

ಕುಟುಂಬದ ಹಿರಿಯರು ಕೌಟುಂಬಿಕ ಕಲಹದಲ್ಲಿ ಸಿಲುಕುತ್ತಾರೆ. ಆದರೆ ನಿಮ್ಮ ಮಧ್ಯಸ್ಥಿಕೆಯಿಂದ ವಾತಾವರಣ ತಿಳಿಯಾಗುತ್ತದೆ. ಉಸಿರಾಟಕ್ಕೆ ಸಂಬಂಧಿಸಿದ ದೋಷ ಇದ್ದವರು ಎಚ್ಚರಿಕೆ ವಹಿಸಬೇಕು. ಬುದ್ಧಿವಂತಿಕೆಯ ತೀರ್ಮಾನಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಸಾಮರ್ಥ್ಯಕ್ಕೆ ಮೀರಿದ ಜವಾಬ್ದಾರಿಗಳು ನಿಮ್ಮದಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಬಗ್ಗೆ ಮನಸ್ಸಿನಲ್ಲಿ ಆತಂಕದ ಭಾವನೆಗಳಿರುತ್ತವೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಇರುವುದಿಲ್ಲ. ವದಂತಿಗಳನ್ನು ನಂಬುವಿರಿ. ನಿಮ್ಮ ತಪ್ಪಿಗೂ ಬೇರೆಯವರನ್ನೂ ದೂರುವಿರಿ. ಮನಸ್ಸಿನ ಭಾವನೆಗಳಿಗೆ ಗೌರವ ದೊರೆಯುವುದಿಲ್ಲ. ವಾಸಸ್ಥಳವನ್ನು ಬದಲಾಯಿಸುವಿರಿ. ಮನೆತನದ ಗೌರವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಪ್ರಯಾಣದ ವೇಳೆ ಎಚ್ಚರಿಕೆ ಇರಲಿ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 7 ಅದೃಷ್ಟದ ದಿಕ್ಕು : ಪಶ್ಚಿಮ ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ ರಾಶಿ

ವೃತ್ತಿ ಕ್ಷೇತ್ರದಲ್ಲಿ ಹೊಸ ರೀತಿಯ ಸವಾಲುಗಳು ಎದುರಾಗಲಿವೆ. ಬೇರೆಯವರ ಜವಾಬ್ದಾರಿಗಳನ್ನು ನಿರ್ವಹಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಸಹೋದ್ಯೋಗಿಗಳ ಸಹಾಯ ಸಹಕಾರವಿದ್ದರೂ ಉಪಯೋಗವಿಲ್ಲದಂತಾಗುತ್ತದೆ. ಆರೋಗ್ಯವನ್ನು ಉಳಿಸಿಕೊಳ್ಳಲು ಕಠಿಣ ಕ್ರಮಗಳನ್ನು ಅವಲಂಬಿಸುವಿರಿ. ದೈನಂದಿನ ದಿನಚರಿಯಲ್ಲಿ ಅನಿವಾರ್ಯವಾದ ಬದಲಾವಣೆಗಳು ಉಂಟಾಗಲಿವೆ. ವಿದ್ಯಾರ್ಥಿಗಳ ಕಲಿಕೆಯ ವಿಚಾರದಲ್ಲಿ ಯಾವುದೇ ತೊಂದರೆ ಕಂಡುಬರದು. ಮನೆತನದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದಲ್ಲಿ ಒಮ್ಮತದ ವಾತಾವರಣ ಇರುವುದಿಲ್ಲ. ದಂಪತಿ ನಡುವೆ ಮನಸ್ತಾಪವಿರುತ್ತದೆ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಏಕಾಂಗಿಯಾಗಿ ದಿನ ಕಳೆಯಲು ಬಯಸುವಿರಿ. ಅವಕಾಶಗಳಿದ್ದರೂ ಹೊಸ ಕೆಲಸ ಕಾರ್ಯಗಳನ್ನು ಆರಂಭಿಸುವುದಿಲ್ಲ. ಹಣಕಾಸಿನ ವಿವಾದ ಎದುರಾಗಲಿದೆ. ದುಡುಕದೆ ಸಂಯಮದಿಂದ ವರ್ತಿಸಿದಲ್ಲಿ ಸುಖ ಜೀವನ ನಿಮ್ಮದಾಗುತ್ತದೆ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ ರಾಶಿ

ದೇಹದ ತೂಕವೇ ನಿಮಗೆ ದೊಡ್ಡ ಸಮಸ್ಯೆಯಾಗುತ್ತದೆ. ಆತುರದಿಂದ ಹಣಕಾಸಿನ ವಿಚಾರಗಳಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಕುಟುಂಬದ ಗೌರವವನ್ನು ಕಾಪಾಡಲು ಯಾವುದೇ ರೀತಿಯ ಕಠಣ ಕ್ರಮಗಳನ್ನು ಕೈಗೊಳ್ಳುವಿರಿ. ಮನೆತನದ ವಿವಾದವನ್ನು ಪರಿಹರಿಸುವಲ್ಲಿ ಯಶಸ್ವಿಯಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿರುತ್ತದೆ. ಯಾವುದೇ ಕೆಲಸ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಕಲಿಕೆಗಿಂತಲೂ ಮನರಂಜನೆಯಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. ಪರಿಶ್ರಮಕ್ಕೆ ತಕ್ಕಂತಹ ಫಲಗಳು ದೊರೆಯಲಿವೆ. ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸುವಿರಿ. ಮನದ ಬೇಸರ ಕಳೆಯಲು ಮನರಂಜನೆಯನ್ನು ಅವಲಂಬಿಸುವಿರಿ. ಕೈಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಹಿರಿಯ ಸೋದರ ಅಥವಾ ಸೋದರಿಯ ಜೊತೆಯಲ್ಲಿ ಸಣ್ಣ ಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಸುಲಭವಾಗಿ ಬೇರೆಯವರನ್ನು ನಂಬುವುದಿಲ್ಲ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಮಕ್ಕಳ ಒತ್ತಡಕ್ಕೆ ಮಣಿದು ಬದಲಿಸುವಿರಿ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹಸಿರು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.