ವಾರ ಭವಿಷ್ಯ: ತುಲಾ ರಾಶಿಯ ಅವಿವಾಹಿತರಿಗೆ ಮದುವೆಯ ಯೋಗವಿದೆ, ವೃಶ್ಚಿಕ ರಾಶಿಯವರ ಮನಸ್ಸಿನದಲ್ಲಿ ಆತಂಕದ ಭಾವನೆ ಇರುತ್ತೆ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 20ರ ಭಾನುವಾರದಿಂದ 26ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಸಿಂಹ ರಾಶಿ
ಅಜೀರ್ಣದ ತೊಂದರೆ ನಿಮ್ಮನ್ನು ಕಾಡುತ್ತದೆ. ಮನದಲ್ಲಿ ಸಕಾರಾತ್ಮಕ ಯೋಚನೆಗಳು ಇರುತ್ತವೆ. ಅಸಾಧ್ಯ ಎನಿಸುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವ ನಿರ್ಧಾರವನ್ನು ಮಾಡುವಿರಿ. ಅನಿರೀಕ್ಷಿತ ಬದಲಾವಣೆಗಳು ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಹಣಕಾಸಿನ ಸ್ಥಿತಿಯಲ್ಲಿ ನಿಧಾನಗತಿಯ ಪ್ರಗತಿ ಕಂಡುಬರುತ್ತದೆ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯವರ್ತಿಯಾದಲ್ಲಿ ತೊಂದರೆ ಉಂಟಾಗುತ್ತದೆ. ನಿಮ್ಮದಲ್ಲದ ತಪ್ಪಿಗೆ ದಂಡ ತೆರುವಿರಿ. ಉದ್ಯೋಗದಲ್ಲಿ ಎಲ್ಲರೂ ನಿಮ್ಮ ಪರವಾಗಿ ಕೆಲಸ ನಿರ್ವಹಿಸುತ್ತಾರೆ. ಉತ್ತಮ ಅವಕಾಶ ದೊರೆತು ಉದ್ಯೋಗವನ್ನು ಬದಲಿಸುವಿರಿ. ಮನೆತನಕ್ಕೆ ಸಂಬಂಧಿಸಿದ ವೃತ್ತಿಯನ್ನು ಮುಂದುವರೆಸುವಿರಿ. ಹಣಕಾಸಿನ ಕೊರತೆ ನಿಮ್ಮನ್ನು ಕಾಡುತ್ತದೆ. ಸೋದರರ ಜೊತೆಯಲ್ಲಿ ಕುಟುಂಬದ ವಿಚಾರವಾಗಿ ಭಿನ್ನಾಭಿಪ್ರಾಯವಿರುತ್ತದೆ. ನಿಮಗಿಷ್ಟವಾದ ಪದಾರ್ಥವನ್ನು ಕಳೆದುಕೊಳ್ಳುವ ಸಂಭವವಿದೆ.
ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ಕನ್ಯಾ ರಾಶಿ
ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಕುಟುಂಬದ ಹಿರಿಯರ ಸಹಾಯ ಸಹಕಾರ ನಿಮಗಿರುತ್ತದೆ. ಯಾವುದೇ ವಿಚಾರವಾದರೂ ಎಚ್ಚರಿಕೆಯಿಂದ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ಮೊಣಕಾಲು ಅಥವಾ ಪಾದದ ನೋವು ಇರಲಿದೆ. ನೆಲದ ಮೇಲೆ ಬಿದ್ದು ಕೈಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ, ಎಚ್ಚರಿಕೆ ಇರಲಿ. ಆತ್ಮೀಯರೊಬ್ಬರು ನಿಮಗೆ ಬೇಸರ ಉಂಟಾಗುವ ಕೆಲಸ ಮಾಡುತ್ತಾರೆ. ನಿರೀಕ್ಷೆಗೂ ಮೀರಿದ ಆದಾಯ ಗಳಿಸುವಿರಿ. ಆತುರದಿಂದ ಯಾವುದೇ ಕೆಲಸವನ್ನು ನಿರ್ವಹಿಸುವುದಿಲ್ಲ. ಶಾಂತಿ ಸಂಯಮದ ಗುಣ ಎಲ್ಲರ ಮನ ಗೆಲ್ಲುತ್ತದೆ. ಮನರಂಜನೆಗಾಗಿ ಹೆಚ್ಚಿನ ಹಣ ವೆಚ್ಚ ಮಾಡುವಿರಿ. ಕುಟುಂಬದಲ್ಲಿ ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯ ಮೂಡುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ.
ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
ತುಲಾ ರಾಶಿ
ಜೀವನದಲ್ಲಿ ಸೋಲು ಗೆಲುವು ಸರಿ ಸಮಾನವಾಗಿರುತ್ತದೆ. ನಿಮ್ಮಲ್ಲಿನ ಕ್ರೀಡಾಮನೋಭಾವನೆಯಿಂದ ಮಾನಸಿಕ ನೆಮ್ಮದಿ ಇರುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಕಾರಣರಾಗುವಿರಿ. ಹಣಕಾಸಿನ ವಿಚಾರದಲ್ಲಿ ದೊಡ್ಡ ಯೋಜನೆಗಳನ್ನು ರೂಪಿಸುವಿರಿ. ಕುಟುಂಬದ ಹಿರಿಯರ ಮಾರ್ಗದರ್ಶನ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಲೋಹದ ವಸ್ತುಗಳಿಂದ ಕೈಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ. ಆರೋಗ್ಯದ ಬಗ್ಗೆ ಗಮನವಿರಲಿ. ಎಲ್ಲರೊಂದಿಗೆ ಭಾವನಾತ್ಮಕವಾಗಿ ವರ್ತಿಸುವಿರಿ. ಸಂಗೀತ ನಾಟ್ಯದಲ್ಲಿ ಉತ್ತಮ ಅಭಿರುಚಿ ಬೆಳೆಯುತ್ತದೆ. ಬಂಧುವರ್ಗದವರ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ದೊಡ್ಡ ಅವಕಾಶ ದೊರೆಯುತ್ತದೆ. ಆತುರದಿಂದ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿರಿ. ಉದ್ಯೋಗದಲ್ಲಿ ನೀರಸವಾದ ವಾತಾವರಣ ಇರುತ್ತದೆ. ನೆಚ್ಚಿನ ಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ವೃಶ್ಚಿಕ ರಾಶಿ
ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಮನಸ್ಸಿನಲ್ಲಿ ಆತಂಕದ ಭಾವನೆ ಇರುತ್ತದೆ. ಕೆಲಸ ಕಾರ್ಯಗಳಲ್ಲಿ ಕುಟುಂಬದವರ ಹಸ್ತಕ್ಷೇಪ ಇರುತ್ತದೆ. ಕಷ್ಟವೆನಿಸಿದರು ಆರೋಗ್ಯವನ್ನು ಉಳಿಸಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಸ್ವಂತ ನಿಲುವಿಗೆ ಬದ್ಧರಾಗುವಿರಿ. ಹಣಕಾಸಿನ ಕೊರತೆ ಇದ್ದರೂ ಬೇರೆಯವರ ಸಹಾಯ ಪಡೆಯುವುದಿಲ್ಲ. ಉಪಯೋಗ ಆಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಸವಿಯಾದ ಮಾತಿನಲ್ಲಿ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಒತ್ತಡವಿದ್ದರೂ ಬದಲಾಯಿಸುವುದಿಲ್ಲ. ಉತ್ತಮ ಆದಾಯವಿರುತ್ತದೆ. ಆತ್ಮೀಯರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಕುಟುಂಬದ ಹಿರಿಯರ ಪ್ರಭಾವಕ್ಕೆ ಒಳಗಾಗುವಿರಿ. ಸಭೆ ಸಮಾರಂಭಗಳಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಚಿಕ್ಕ ಮಕ್ಕಳಲ್ಲಿ ನಾಯಕತ್ವದ ಗುಣವು ಬೆಳಯುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ತಮ್ಮ ಗುರಿ ತಲುಪಲಿದ್ದಾರೆ.
ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ