ವಾರ ಭವಿಷ್ಯ: ಮೇಷ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ತೊಂದರೆ ಇರುವುದಿಲ್ಲ, ವೃಷಭ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 27ರ ಭಾನುವಾರದಿಂದ ಮೇ 3ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಮೇಷ ರಾಶಿ
ಸದಾಕಾಲ ಚುರುಕುತನದಿಂದ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ. ನಿಮ್ಮ ಇಚ್ಛೆಗೆ ಸರಿ ಹೊಂದುವ ಕೆಲಸ ಕಾರ್ಯಗಳು ದೊರೆಯುತ್ತವೆ. ಕುಟುಂಬದಲ್ಲಿ ಹಿರಿಯರ ಮಾತಿಗೆ ಎಲ್ಲರೂ ಗೌರವ ನೀಡಬೇಕಾಗುತ್ತದೆ. ಇದರಿಂದಾಗಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ನಲೆಸಿರುತ್ತದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ. ಸ್ವಂತ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಯಾವುದೇ ಕೆಲಸವನ್ನು ಆರಂಭ ಮಾಡುವ ಮೊದಲು ಅದರ ಬಗ್ಗೆ ಸಂಪೂರ್ಣ ಜ್ಞಾನವನ್ನು ಪಡೆಯುವಿರಿ, ವಿದ್ಯಾರ್ಥಿಗಳು ಏಕಾಂಗಿಯಾಗಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ, ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಹಾಯದಿಂದ ಪರಿಹಾರ ದೊರೆಯುತ್ತದೆ.
ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ ಬಣ್ಣ
ವೃಷಭ ರಾಶಿ
ಜನರು ಒಪ್ಪುವಂತಹ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡುವಿರಿ. ಆತ್ಮವಿಶ್ವಾಸದ ಗುಣವಿರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರದಿರಿ. ಯಾವುದೇ ಕೆಲಸ ಕಾರ್ಯಗಳು ತ್ವರಿತಗತಿಯಲ್ಲಿ ಪೂರೈಸಲು ಪ್ರಯತ್ನಿಸುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಬೇಸರಗೊಳ್ಳುವಿರಿ. ಕಷ್ಟ ಎನಿಸಿದರೂ ಹಣವನ್ನು ಉಳಿಸುವಲ್ಲಿ ಸಫಲರಾಗುವಿರಿ. ಕುಟುಂಬದ ಸದಸ್ಯರ ಸಹಕಾರ ನಿಮಗೆ ದೊರೆಯುತ್ತದೆ. ಒತ್ತಡದಿಂದ ಹೊರಬರಲು ವಿಶ್ರಾಂತಿಯನ್ನು ಪಡೆಯಲು ಕಿರು ಪ್ರವಾಸ ಕೈಗೊಳ್ಳುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಇರುತ್ತದೆ. ಮುಖ್ಯವಾದ ವಿಚಾರಗಳನ್ನು ಗೋಪ್ಯವಾಗಿ ಇಡುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ಉನ್ನತ ಅಧ್ಯಯನದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ದೊರೆಯುತ್ತದೆ. ತಾಳ್ಮೆಯಿಂದ ಬೇರೆಯವರ ಮಾತನ್ನು ಆಲಿಸುವಿರಿ. ಆದರೆ ನಿಮ್ಮ ಮನಸ್ಸಿಗೆ ಇಷ್ಟವೆನಿಸುವ ಕಾರ್ಯವನ್ನು ಮಾತ್ರ ಮಾಡುವಿರಿ. ಮನೆತನದ ಆಸ್ತಿಯ ಪಾಲುಗಾರಿಕೆಯಲ್ಲಿ ವಿವಾದ ಉಂಟಾಗುತ್ತದೆ.
ಪರಿಹಾರ: ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮಿಥುನ ರಾಶಿ
ಶಾಂತಿ ನೆಮ್ಮದಿಯಿಂದ ಜೀವನವನ್ನು ನಡೆಸುವಿರಿ. ಕಷ್ಟವೆನಿಸಿದರು ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿ ಇಟ್ಟುಕೊಳ್ಳುವಿರಿ. ವ್ಯಕ್ತಿತ್ವವು ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ದೈಹಿಕ ವ್ಯಾಯಾಮದಲ್ಲಿ ಹೆಚ್ಚಿನ ಆಸಕ್ತಿ ಇರುತ್ತದೆ. ಕೈ ಕಾಲುಗಳಿಗೆ ಪೆಟ್ಟಾಗುವ ಸಾಧ್ಯತೆಗಳಿವೆ. ಬಹುದಿನದಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಭೂ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಆರ್ಥಿಕ ಬಿಕ್ಕಟ್ಟು ಎದುರಾಗಲಿದೆ. ಕುಟುಂಬದ ಸದಸ್ಯರ ಸಲಹೆಯಂತೆ ವ್ಯಾಪಾರವನ್ನು ಆರಂಭಿಸುವಿರಿ. ಆತ್ಮೀಯರಿಂದ ಉಡುಗೊರೆಯಾಗಿ ಹಣ ದೊರೆಯುತ್ತದೆ. ಮಕ್ಕಳ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಕಳಿಸುತ್ತಾರೆ. ಸಣ್ಣಪುಟ್ಟ ಕೆಲಸ ಕಾರ್ಯವಾದರೂ ಸತತ ಪ್ರಯತ್ನದಿಂದ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತದೆ.
ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕಟಕ ರಾಶಿ
ಕೈಕಾಲುಗಳಲ್ಲಿ ನೋವಿರುತ್ತದೆ. ಕುಟುಂಬದ ಸಮಸ್ಯೆಗಳಿಗೆ ಪರಿಹಾರವನ್ನು ನೀವೇ ಕಂಡುಹಿಡಿಯಬೇಕಾಗುತ್ತದೆ. ಬೇರೆಯವರ ಸಹಾಯ ಸಹಕಾರ ನಿಮಗೆ ದೊರೆಯುವುದಿಲ್ಲ. ನಿಧಾನ ಗತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಪ್ರಗತಿ ಕಂಡುಬರುತ್ತದೆ. ಕುಟುಂಬದ ಒಳಿತಿಗಾಗಿ ಬಿಡುವಿಲ್ಲದೆ ದುಡಿಯುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರೋತ್ಸಾಹ ನೀಡುವಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ದೊರೆಯುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಯಾವುದೇ ಅಡಚಣೆ ಕಂಡುಬರುವುದಿಲ್ಲ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವಿರಿ. ಯಾತ್ರಾ ಸ್ಥಳಕ್ಕೆ ಕುಟುಂಬದವರೊಡನೆ ಭೇಟಿ ನೀಡುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ದೊರೆಯಲಿದೆ. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವುದಿಲ್ಲ. ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಅನಾವಶ್ಯಕವಾದ ವಾದ ವಿವಾದಗಳು ಇರುತ್ತವೆ. ಸಹನೆ ಶಾಂತಿಯಿಂದ ವರ್ತಿಸಿದರೆ ಉನ್ನತ ಮಟ್ಟದ ಅವಕಾಶಗಳು ಲಭಿಸುತ್ತದೆ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ