ಆತುರದಿಂದ ಅವಕಾಶ ವಂಚಿತರಾಗಬಹುದು, ಪ್ರಯಾಣದ ವೇಳೆ ಎಚ್ಚರ ಅಗತ್ಯ; ಮೇಷದಿಂದ ಕಟಕ ರಾಶಿವರೆಗೆ ವಾರ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಆತುರದಿಂದ ಅವಕಾಶ ವಂಚಿತರಾಗಬಹುದು, ಪ್ರಯಾಣದ ವೇಳೆ ಎಚ್ಚರ ಅಗತ್ಯ; ಮೇಷದಿಂದ ಕಟಕ ರಾಶಿವರೆಗೆ ವಾರ ಭವಿಷ್ಯ

ಆತುರದಿಂದ ಅವಕಾಶ ವಂಚಿತರಾಗಬಹುದು, ಪ್ರಯಾಣದ ವೇಳೆ ಎಚ್ಚರ ಅಗತ್ಯ; ಮೇಷದಿಂದ ಕಟಕ ರಾಶಿವರೆಗೆ ವಾರ ಭವಿಷ್ಯ

ವಾರ ಭವಿಷ್ಯ: ಪ್ರತಿ ರಾಶಿಗೂ ಅದರದ್ದೇ ಆದರ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗ ನೀಡುತ್ತವೆ. ಫೆ 16 ರಿಂದ ಫೆ 22ರವರೆಗೆ, ಮೇಷದಿಂದ ಕಟಕ ರಾಶಿವರೆಗೆ ಏನೆಲ್ಲಾ ಪರಿಣಾಮಗಳಿವೆ ಎಂಬ ವಿವರ ಇಲ್ಲಿದೆ.

ಮೇಷದಿಂದ ಕಟಕದವರೆಗೆ ವಾರ ಭವಿಷ್ಯ
ಮೇಷದಿಂದ ಕಟಕದವರೆಗೆ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 16ರ ಭಾನುವಾರದಿಂದ 22ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಮೇಷ ರಾಶಿ

ಉತ್ತಮ ಆರೋಗ್ಯಕ್ಕಾಗಿ ದೈಹಿಕ ವ್ಯಾಯಾಮ ಮತ್ತು ಯೋಗವನ್ನು ಅಭ್ಯಾಸ ಮಾಡಲಿದ್ದೀರಿ. ಕುಟುಂಬ ಸದಸ್ಯರಿಂದ ಉತ್ತಮ ಪ್ರೋತ್ಸಾಹ ಮತ್ತು ಸಹಾಯ ದೊರೆಯುತ್ತದೆ. ದೊರೆವ ಅವಕಾಶದ ಲಾಭ ಪಡೆದುಕೊಳ್ಳುವಿರಿ. ಹಣದ ತೊಂದರೆ ಇರುವುದಿಲ್ಲ. ಹಳೆಯ ಆರ್ಥಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ನೀಡಬಲ್ಲಿರಿ. ಕುಟುಂಬದ ಹಿರಿಯರ ಜೊತೆ ಉತ್ತಮ ಸಂಬಂಧ ವೃದ್ಧಿಯಾಗುತ್ತದೆ. ಸಮಾಜದಲ್ಲಿ ನಿಮಗೆ ವಿಶೇಷ ಗೌರವ ದೊರೆಯುತ್ತದೆ. ನಿಮ್ಮ ಮಾತು ಮತ್ತು ಸಲಹೆಯನ್ನು ಎಲ್ಲರೂ ಒಪ್ಪುತ್ತಾರೆ. ಬಿಡುವಿಲ್ಲದ ಕೆಲಸದಿಂದಾಗಿ ಆಲಸ್ಯ ನಿಮ್ಮನ್ನು ಭಾದಿಸುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ದೊರೆಯುತ್ತದೆ. ಅತಿಯಾದ ಆತುರದಿಂದಾಗಿ ಕೆಲವೊಂದು ಉತ್ತಮ ಅವಕಾಶಗಳಿಂದ ವಂಚಿತರಾಗುವಿರಿ. ಚುರುಕುತನದಿಂದ ಎಲ್ಲರ ಗಮನ ಸೆಳೆಯುವಿರಿ.

ಪರಿಹಾರ: ಕುಟುಂಬದ ಹಿರಿಯರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿಬಣ್ಣ

ವೃಷಭ ರಾಶಿ

ದುಡುಕದೇ ಬುದ್ಧಿವಂತಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಹೊಂದಾಣಿಕೆಯ ಗುಣ ಇರುವ ಕಾರಣ ಎಲ್ಲರ ಮನಗೆಲ್ಲುವಿರಿ. ಕೋಪ ಬರುತ್ತದೆ, ಆದರೆ ಅದು ಬಹುಕಾಲ ನಿಲ್ಲುವುದಿಲ್ಲ. ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಮಾನಸಿಕ ಮತ್ತು ದೈಹಿಕ ವಿಶ್ರಾಂತಿಯ ಅಗತ್ಯವಿರುತ್ತದೆ. ಈ ವಾರ ಹಣಕಾಸಿನ ತೊಂದರೆ ಇರುವುದಿಲ್ಲ. ಮನೆತನದ ಆಸ್ತಿಯ ವಿವಾದವು ಅಂತ್ಯಗೊಳ್ಳುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣ ತುಂಬಿರುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಾರೆ. ನಿಮ್ಮ ಪ್ರಯತ್ನಗಳ ಯಶಸ್ಸಿಗೆ ಎಲ್ಲರ ಸಹಾಯ ದೊರೆಯುತ್ತದೆ. ಅನಾವಶ್ಯಕವಾಗಿ ಬೇರೆಯವರನ್ನು ಅನುಮಾನಿಸುವಿರಿ. ಎದುರಾಗುವ ಪರಿಸರಕ್ಕೆ ಹೊಂದಿಕೊಂಡು ಬಾಳುವಿರಿ. ಸಮಾಜದಲ್ಲಿ ವಿಶೇಷವಾದ ಗೌರವ ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಉದ್ಯೋಗದಲ್ಲಿ ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವಿರಿ.

ಪರಿಹಾರ: ಕಪ್ಪು ಬಣ್ಣದ ನಾಯಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಮಿಥುನ ರಾಶಿ

ಮನಸ್ಸಿನಲ್ಲಿ ಹಣಕಾಸಿನ ಬಗ್ಗೆ ಚಿಂತೆ ಇರುತ್ತದೆ. ಆತಂಕದ ಪರಿಸ್ಥಿತಿಯಲ್ಲಿಯೂ ಎಚ್ಚರಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಕಲುಷಿತ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಉತ್ತಮ ಹವ್ಯಾಸದಿಂದ ಆರೋಗ್ಯದಲ್ಲಿ ಚೇತರಿಕೆ ಕಾಣುವಿರಿ. ಅನಿರೀಕ್ಷಿತವಾಗಿ ದೊರೆಯುವ ಅವಕಾಶಗಳನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುವಿರಿ. ಮನೆತನದ ಆಸ್ತಿಯಲ್ಲಿ ಹೆಚ್ಚಿನ ಪಾಲು ದೊರೆಯುತ್ತದೆ. ಜನರೊಂದಿಗೆ ಬೆರೆಯದೆ ಏಕಾಂಗಿಯಾಗಿ ಇರಲು ಬಯಸುವಿರಿ. ಜೀವನದಲ್ಲಿ ಎದುರಾಗುವ ತೊಂದರೆಗಳನ್ನು ಊಹಿಸಬಲ್ಲಿರಿ. ಆತುರ ಪಡದೆ ಎಚ್ಚರಿಕೆಯ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಗಳಿಸುವಿರಿ. ಯಾವುದೇ ಸಂದರ್ಭವನ್ನು ನಿಮ್ಮ ಅನುಕೂಲಕ್ಕೆ ತಕ್ಕಂತೆ ಬದಲಿಸಿಕೊಳ್ಳಬಲ್ಲಿರಿ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಅವಕಾಶ ದೊರೆಯುತ್ತದೆ. ಯಾರೊಬ್ಬರ ಮನಸ್ಸಿಗೂ ಬೇಸರ ಉಂಟುಮಾಡದೆ ಸ್ನೇಹದಿಂದ ವರ್ತಿಸುವಿರಿ.

ಪರಿಹಾರ: ಮಕ್ಕಳಿಗೆ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 4 ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕಟಕ

ಸದಾ ಚಟುವಟಿಕೆಯಿಂದ ಕೆಲಸ ಕಾರ್ಯದಲ್ಲಿ ತೊಡಗುವಿರಿ. ನಿಮ್ಮ ವ್ಯಕ್ತಿತ್ವಕ್ಕೆ ಅನುಗುಣವಾದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರುತ್ತದೆ. ಮನದಲ್ಲಿ ಗೆಲುವಿನ ಹಂಬಲ ಸದಾ ಇರುತ್ತದೆ. ಉಪಯೋಗವಿಲ್ಲದ ವಿಚಾರಗಳಿಗೆ ಯೋಚನೆ ಮಾಡುವಿರಿ. ಪ್ರಯಾಣ ಮಾಡುವ ವೇಳೆ ಎಚ್ಚರಿಕೆ ಇರಲಿ. ಅಮೂಲ್ಯವಾದ ವಸ್ತುವೊಂದು ನಿಮಗೆ ಉಡುಗೊರೆಯಾಗಿ ದೊರೆಯುತ್ತದೆ. ನಿಮ್ಮ ಪಾಲಿನ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಬಲ್ಲಿರಿ. ನೀವು ತೆಗೆದುಕೊಳ್ಳುವ ತೀರ್ಮಾನಗಳ ಬಗ್ಗೆ ಕುಟುಂಬದ ಸದಸ್ಯರ ವಿರೋಧವಿರುತ್ತದೆ. ವಿವಾಹಿತರ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ. ವಿದ್ಯಾರ್ಥಿಗಳು ಎದುರಾಗುವ ಸಮಸ್ಯೆಗಳನ್ನು ಎದುರಿಸಿ ಉತ್ತಮ ಸಾಧನೆ ಮಾಡುತ್ತಾರೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 2 ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು, ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.