ವಾರ ಭವಿಷ್ಯ: ಕಟಕ ರಾಶಿಯವರಿಗೆ ಕುಟುಂಬದಲ್ಲಿ ನೆಮ್ಮದಿ ಇರುತ್ತೆ, ಮಿಥುನ ರಾಶಿಯವರು ಅನಾವಶ್ಯಕವಾಗಿ ಖರ್ಚು ಮಾಡಲು ಒಪ್ಪುವುದಿಲ್ಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಕಟಕ ರಾಶಿಯವರಿಗೆ ಕುಟುಂಬದಲ್ಲಿ ನೆಮ್ಮದಿ ಇರುತ್ತೆ, ಮಿಥುನ ರಾಶಿಯವರು ಅನಾವಶ್ಯಕವಾಗಿ ಖರ್ಚು ಮಾಡಲು ಒಪ್ಪುವುದಿಲ್ಲ

ವಾರ ಭವಿಷ್ಯ: ಕಟಕ ರಾಶಿಯವರಿಗೆ ಕುಟುಂಬದಲ್ಲಿ ನೆಮ್ಮದಿ ಇರುತ್ತೆ, ಮಿಥುನ ರಾಶಿಯವರು ಅನಾವಶ್ಯಕವಾಗಿ ಖರ್ಚು ಮಾಡಲು ಒಪ್ಪುವುದಿಲ್ಲ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಜೂನ್ 8ರ ಭಾನುವಾರದಿಂದ 14ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.

ಮೇಷ ರಾಶಿ

ನಿಮ್ಮದು ಬಿಡುವಿಲ್ಲದ ದುಡಿಮೆ ಆಗುತ್ತದೆ. ಉದ್ಯೋಗದಲ್ಲಿನ ಜವಾಬ್ದಾರಿಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಕುಟುಂಬದ ಕೆಲಸ ಕಾರ್ಯಗಳಲ್ಲಿ ಸದಸ್ಯರ ಸಹಾಯ ದೊರೆಯುತ್ತದೆ. ಪರಸ್ಪರ ಒಮ್ಮತದ ಕಾರಣ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಆಂತರಿಕ ಬದಲಾವಣೆಗಳು ಉಂಟಾಗುತ್ತವೆ. ಕ್ರಮೇಣವಾಗಿ ನಿಮ್ಮ ಪರವಾದ ಫಲಿತಾಂಶಗಳು ದೊರೆಯುತ್ತವೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳು ಏಕಾಗ್ರ ಚಿತ್ತತೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಹಿರಿಯರ ಮಾತನ್ನು ಪಾಲಿಸುವುದು ಒಳ್ಳೆಯದು. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ಬದಲಾವಣೆಗಳು ಕಂಡು ಬರದು. ಕೃಷಿ ಕಾರ್ಮಿಕರಿಗೆ ಅನುಕೂಲಕರ ವಾತಾವರಣ ಉಂಟಾಗುತ್ತದೆ. ದಿನ ಕಳೆದಂತೆ ಹೆಚ್ಚಿನ ಹಣದ ಅವಶ್ಯಕತೆ ಇರಲಿದೆ. ಕಷ್ಟದಲ್ಲಿರುವ ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ದಂಪತಿಯಲ್ಲಿ ಅನ್ಯೋನ್ಯತೆ ಬೆಳೆಯುತ್ತದೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಷಭ ರಾಶಿ

ಅತಿಯಾದ ಆತ್ಮಾಭಿಮಾನದ ಕಾರಣ ಬೇರೆಯವರ ಮಾತನ್ನು ಒಪ್ಪುವುದಿಲ್ಲ. ಹಠದ ಕಾರಣ ನೀವಿದ್ದೆಡೆ ಗಂಭೀರದ ವಾತಾವರಣ ಇರುತ್ತದೆ. ಸ್ಥಿರವಾದ ಮನಸ್ಸಿನಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆಯುವಿರಿ. ಉದ್ಯೋಗದಲ್ಲಿ ಒತ್ತಡದ ಸನ್ನಿವೇಶ ಎದುರಾಗುತ್ತದೆ. ಆದರೆ ಯಾವುದೇ ತೊಂದರೆ ಬಾರದು. ಮನಸ್ಸಿಲ್ಲದೆ ಹೋದರೂ ಅನಿವಾರ್ಯವಾಗಿ ಉದ್ಯೋಗ ಬದಲಿಸುವ ಸಾಧ್ಯತೆ ಇದೆ. ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಪರಸ್ಪರ ಮನಸ್ತಾಪ ಹೆಚ್ಚುವ ಸಾಧ್ಯತೆಗಳಿವೆ. ಸ್ನೇಹಿತರ ನಡುವೆ ಸಮಾನ ಭಾವನೆ ಉಂಟಾಗಿ ಜೀವನಲ್ಲಿ ನೆಮ್ಮದಿ ಇರುತ್ತದೆ. ವಿದ್ಯಾರ್ಥಿಗಳು ಆತ್ಮೀಯರ ಸಹಾಯದಿಂದ ಉನ್ನತ ವ್ಯಾಸಂಗದ ಅವಕಾಶ ಪಡೆಯುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ನಿಮ್ಮ ನಿರೀಕ್ಷೆಯಂತೆ ಉತ್ತಮ ಆದಾಯ ದೊರೆಯುತ್ತದೆ. ಆರೋಗ್ಯದಲ್ಲಿ ಕ್ರಮೇಣವಾಗಿ ಚೇತರಿಕೆ ಕಂಡು ಬರಲಿದೆ. ನಿಮಗೆ ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ. ಒಲ್ಲದ ಮನಸ್ಸಿನಿಂದ ಕೆಲಸವನ್ನು ಆರಂಭಿಸುವಿರಿ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮಿಥುನ ರಾಶಿ

ಮನದಲ್ಲಿನ ಭಯದ ಕಾರಣ ತೆಗೆದುಕೊಂಡ ತೀರ್ಮಾನಗಳನ್ನು ಬದಲಾಯಿಸುವಿರಿ. ಕುಟುಂಬದ ಮುಖ್ಯವಾದ ಕೆಲಸವನ್ನು ಪೂರ್ಣಗೊಳಿಸುವಿರಿ. ನಿಮ್ಮಲ್ಲಿನ ತಪ್ಪು ಕಲ್ಪನೆಯಿಂದ ಸಂಗಾತಿಯ ಜೊತೆ ಮನಸ್ತಾಪ ಉಂಟಾಗುತ್ತದೆ. ಕುಟುಬದಲ್ಲಿನ ಮಂಗಳ ಕಾರ್ಯವೊಂದು ಮುಂದೆ ಹೋಗಲಿದೆ. ಉದ್ಯೋಗದಲ್ಲಿ ಬೇರೆಯವರ ಜೊತೆ ಹೊಂದಿಕೊಂಡು ಕೆಲಸ ಮಾಡುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬರದು. ಹಣವನ್ನು ಸಂಪಾದಿಸುವ ಆತುರದಲ್ಲಿ ವಿವಾದಕ್ಕೆ ಸಿಲುಕುವಿರಿ. ಅನಾವಶ್ಯಕವಾಗಿ ಗಳಿಸಿದ ಹಣವನ್ನು ಖರ್ಚು ಮಾಡಲು ಒಪ್ಪುವುದಿಲ್ಲ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಗುರಿ ಸಾಧಿಸುತ್ತಾರೆ. ಒಳ್ಳೆಯ ಯೋಜನೆಯ ಕಾರಣ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಗಮನ ನೀಡಿ. ಸಂತಸದಿಂದ ಸಂಗಾತಿ ಮತ್ತು ಮಕ್ಕಳ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವಿರಿ. ಚಿನ್ನ ಅಥವಾ ಬೆಳ್ಳಿಯ ಪದಾರ್ಥಗಳನ್ನು ಕೊಳ್ಳುವಿರಿ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕಟಕ ರಾಶಿ

ಖರ್ಚು ವೆಚ್ಚಗಳು ಅತಿಯಾದರೂ ಸಂತಸದಿಂದ ಜೀವನ ನಡೆಸುವಿರಿ. ನಿಮ್ಮಲ್ಲಿನ ಕ್ರಿಯಾಶೀಲತೆಯಿಂದ ಕುಟುಂಬದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದಲ್ಲಿ ನಿಮ್ಮಿಂದಾಗಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಸಹೋದ್ಯೋಗಿಗಳ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಬಡ್ತಿ ದೊರೆತು ಪರಸ್ಥಳಕ್ಕೆ ತೆರಳುವಿರಿ. ವಿದ್ಯಾಥಿಗಳಿಗೆ ನಿರೀಕ್ಷಿತ ಫಲಿತಾಂಶಗಳು ದೊರೆಯಲಿವೆ. ಉತ್ತಮ ಪ್ರಯತ್ನದಿಂದ ಸೋದರಿಯ ಮನದಾಸೆಗಳನ್ನು ಪೂರ್ಣಗೊಳಿಸುವಿರಿ. ಉನ್ನತ ಅಧಿಕಾರದ ಆಸೆ ಸದ್ಯದ ಪರಿಸ್ಥಿಯಲ್ಲಿ ಫಲಿಸದು. ಸ್ವಂತ ಉದ್ದಿಮೆ ಇದ್ದಲ್ಲಿ ದೃಢ ನಿರ್ಧಾರದಿಂದ ಉತ್ತಮ ಆದಾಯ ಗಳಿಸುವಿರಿ. ನಿರುದ್ಯೋಗಿಗಳು ದುಡುಕುವ ಕಾರಣ ಉತ್ತಮ ಅವಕಾಶದಿಂದ ವಂಚಿತರಾಗುತ್ತಾರೆ. ಕುಟುಂಬದಲ್ಲಿನ ಆತಂಕವು ಸುಲಭವಾಗಿ ದೂರವಾಗುತ್ತದೆ. ಕುಟುಂಬದಲ್ಲಿ ವಿವಾಹದ ಬಗ್ಗೆ ಚರ್ಚೆ ನಡೆಯಲಿದೆ. ತಾಯಿಯವರ ಆರೋಗ್ಯದಲ್ಲಿ ಏರಿಳಿತ ಕಾಣಲಿದೆ. ತಾಯಿಯವರ ಹೆಸರಿನ ಭೂವಿವಾದವು ಸುಖ್ಯಾಂತಗೊಳ್ಳುತ್ತದೆ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.