ವಾರ ಭವಿಷ್ಯ: ಧನು ರಾಶಿಯ ಅವಿವಾಹಿತರಿಗೆ ಮದುವೆಯ ಯೋಗವಿದೆ, ಮಕರ ರಾಶಿಯವರಿಗೆ ಕೌಟುಂಬಿಕ ವಿವಾದಗಳು ಬಗೆಹರಿಯುತ್ತವೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಧನು ರಾಶಿಯ ಅವಿವಾಹಿತರಿಗೆ ಮದುವೆಯ ಯೋಗವಿದೆ, ಮಕರ ರಾಶಿಯವರಿಗೆ ಕೌಟುಂಬಿಕ ವಿವಾದಗಳು ಬಗೆಹರಿಯುತ್ತವೆ

ವಾರ ಭವಿಷ್ಯ: ಧನು ರಾಶಿಯ ಅವಿವಾಹಿತರಿಗೆ ಮದುವೆಯ ಯೋಗವಿದೆ, ಮಕರ ರಾಶಿಯವರಿಗೆ ಕೌಟುಂಬಿಕ ವಿವಾದಗಳು ಬಗೆಹರಿಯುತ್ತವೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 11ರ ಭಾನುವಾರದಿಂದ ಮೇ 17 ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ಧನು ರಾಶಿ

ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ ಅಥವಾ ಉದ್ಯೋಗವನ್ನು ಬದಲಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಲಾಭವಿರುತ್ತದೆ. ಕುಟುಂಬದ ಸದಸ್ಯರಿಂದ ಸಹಾಯ ದೊರೆಯುತ್ತದೆ. ನವ ವಿವಾಹಿತರಿಗೆ ಉದ್ಯೋಗದಲ್ಲಿ ಅಧಿಕಾರ ಯೋಗವಿರುತ್ತದೆ. ಹತ್ತಾರು ಜನರಿಗೆ ಆಶ್ರಯ ನೀಡುವಿರಿ. ವಿಶೇಷ ಗೌರವ ಮತ್ತು ಅಂತಸ್ತು ದೊರೆಯುತ್ತದೆ. ಬೇರೆಯವರಿಗೆ ಅಸಾಧ್ಯ ಎನಿಸುವ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ದಂಪತಿ ನಡುವೆ ಕೆಲಕಾಲ ವಾದ ವಿವಾದಗಳಿರುತ್ತವೆ. ಸಂಗಾತಿಯ ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗುತ್ತೆ. ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ವಾಹನ ಖರೀದಿಸುತ್ತೀರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕಲಾವಿದರಿಗೆ ಲಾಭವಿದೆ. ಉಸಿರಾಟಕ್ಕೆ ಸಂಬಂಧಿಸಿದ ತೊಂದರೆ ಇರುತ್ತದೆ. ಮನೆತನದ ಭೂ ವಿವಾದವು ಬಗೆಹರಿಯುವುದಿಲ್ಲ. ಸಮಾಜದಲ್ಲಿ ಎಲ್ಲರ ಗೌರವವನ್ನು ಪಡೆಯುವಿರಿ. ನಿಮ್ಮ ತಂದೆಗೆ ಅವರ ರಕ್ತ ಬಂಧುಗಳಿಂದಲೇ ತೊಂದರೆ ಉಂಟಾಗಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಕರ ರಾಶಿ

ಹಣಕಾಸಿನ ವಿಚಾರದಲ್ಲಿ ಮಧ್ಯವರ್ತಿಗಳಿಂದ ತೊಂದರೆ ಎದುರಾಗುತ್ತದೆ. ಇರುವ ಮನೆಯನ್ನು ವೈಭವಿಕರಿಸುವಿರಿ. ಅನಾರೋಗ್ಯವಿರುತ್ತದೆ. ಸೋದರಿಗೆ ಆಕೆಯ ಪತಿಯೊಂದಿಗೆ ವಿರಸವಿರುತ್ತದೆ. ಬುದ್ಧಿವಂತಿಕೆಯ ಮಾತುಕತೆಯಿಂದ ನಿಮ್ಮ ಕೆಲಸ ಕಾರ್ಯಗಳನ್ನು ಯಶಸ್ವಿಗೊಳಿಸುವಿರಿ. ಭೂಮಿಗೆ ಸಂಬಂಧಿಸಿದ ವ್ಯವಹಾರದಲ್ಲಿ ಲಾಭವಿದೆ. ತಾಳ್ಮೆಯಿಂದ ವರ್ತಿಸಿದಷ್ಟು ನಿಮ್ಮ ಜೀವನದಲ್ಲಿ ಒಳ್ಳೆಯ ಬದಲಾವಣೆಗಳು ಕಂಡುಬರುತ್ತದೆ. ನಾಯಿಯಂತಹ ಸಾಕು ಪ್ರಾಣಿಯಿಂದ ಹಾನಿ ಉಂಟಾಗಬಹುದು. ವಾಹನದ ಕಂಟಕದಿಂದ ಪಾರಾಗುವಿರಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ನಿಧಾನವಾಗಲಿದೆ. ಕೌಟುಂಬಿಕ ವಿವಾದಗಳು ಬಗೆಹರಿಯುತ್ತವೆ. ಬಂಧು ಬಳಗದವರಿಂದ ಯಾವುದೇ ಉಪಯೋಗ ಇರುವುದಿಲ್ಲ. ನಿಮಗೆ ದೊರೆಯಬೇಕಾದ ಉದ್ಯೋಗವು ಪರರ ಪಾಲಾಗುತ್ತದೆ. ನರಕ್ಕೆ ಸಂಬಂಧಿಸಿದ ದೋಷವಿರುತ್ತದೆ. ಆತುರದಿಂದ ಕೆಲಸ ಕಾರ್ಯಗಳು ಆರಂಭಿಸುವಿರಿ. ದುಡುಕಿನ ಮಾತಿನಿಂದ ಹಿರಿಯರ ಅವಕೃಪೆಗೆ ಒಳಗಾಗುವಿರಿ. ವಿದ್ಯಾರ್ಥಿಗಳಿಗೆ ವಿಶೇಷ ಲಾಭವಿದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕುಂಭ ರಾಶಿ

ಹಿರಿಯರ ಮಾರ್ಗದರ್ಶನದಲ್ಲಿ ನಿಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಮಾತಿನ ಬಲದಿಂದ ಎಲ್ಲರ ವಿಶ್ವಾಸ ಗಳಿಸುವಿರಿ. ಕುಟುಂಬದ ಸದಸ್ಯರೊಬ್ಬರು ಉದ್ಯೋಗ ದೊರೆತು ವಿದೇಶಕ್ಕೆ ತೆರಳುತ್ತಾರೆ. ಜೀವನದಲ್ಲಿ ಆಕಸ್ಮಿಕವಾದ ಶುಭ ಫಲಿತಾಂಶಗಳು ದೊರೆಯಲಿದೆ. ಸ್ವಂತ ಭೂಮಿ ಅಥವಾ ಮನೆಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಖರ್ಚುವೆಚ್ಚಗಳು ಎದುರಾಗಲಿದೆ. ವಿವಾಹದ ವೇಳೆ ವಿವಾದ ಎದುರಾಗುತ್ತದೆ. ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ವಿದ್ಯಾರ್ಥಿಗಳಿಗೆ ಶುಭವರ್ತಮಾನವೊಂದು ಬರಲಿದೆ. ಅನಿರೀಕ್ಷಿತ ಧನ ಲಾಭವಿದೆ. ಸರಿ ತಪ್ಪನ್ನು ಅರಿತು ನಿಮ್ಮ ಪಾಲಿನ ಕೆಲಸ ನಿರ್ವಹಿಸುವಿರಿ. ಆರಂಭದಲ್ಲಿ ಜೀವನವು ಸಾಮಾನ್ಯವಾಗಿರುತ್ತದೆ. ಆತ್ಮಸ್ಥೈರ್ಯ ಹೊಸ ದಾರಿಯನ್ನು ತೋರಿಸುತ್ತದೆ. ನಿಮ್ಮ ಸಂಗಾತಿಗೆ ಯಾವುದೇ ವಿಚಾರದಲ್ಲಿ ಆಸಕ್ತಿ ಇರುವುದಿಲ್ಲ. ನಿಮ್ಮ ಮನಸ್ಸನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸಂಯಮನದ ನಡವಳಿಕೆ ಜೀವನದಲ್ಲಿ ನೆಮ್ಮದಿ ನೀಡುತ್ತದೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮೀನ ರಾಶಿ

ನಿಮ್ಮ ತಂದೆಯವರ ಉದ್ಯೋಗದಲ್ಲಿ ಉತ್ತಮ ಬದಲಾವಣೆ ಕಂಡುಬರುತ್ತದೆ. ನೀವು ಉದ್ಯೋಗ ಬದಲಿಸಲು ಪ್ರಯತ್ನಿಸಿದರು ಸಾಧ್ಯವಾಗದು. ತಾಯಿಯವರ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಸಣ್ಣಪುಟ್ಟ ತಪ್ಪುಗಳಿಗೂ ಕೋಪದಿಂದ ವರ್ತಿಸುವಿರಿ. ಆದರೆ ನಿಮ್ಮ ತಪ್ಪನ್ನು ಮರೆಮಾಚುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸುವುದಿಲ್ಲ. ನೇರ ನಿಷ್ಠುರದ ಗುಣವಿರುತ್ತದೆ. ಮನೆತನದ ಆಸ್ತಿಯಲ್ಲಿ ನ್ಯಾಯಯುತ ಪಾಲು ನಿಮ್ಮದಾಗುತ್ತದೆ. ಸಮಾಜ ಸೇವೆಯಲ್ಲಿ ಆಸಕ್ತಿ ಇರುತ್ತದೆ. ಗಣ್ಯ ವ್ಯಕ್ತಿಗಳ ಸಹವಾಸ ದೊರೆಯುತ್ತದೆ. ವಂಶದಲ್ಲಿ ಉನ್ನತ ಗೌರವ ಗಳಿಸುವಿರಿ. ವೃತ್ತಿ ಕ್ಷೇತ್ರದಲ್ಲಿ ದರ್ಪದ ಗುಣ ತೋರಿಸುವಿರಿ. ವಾಯುದೋಷದಿಂದ ಬಳಲುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರಲಿದೆ. ಗೆಳೆಯರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಿರಿ. ಮಕ್ಕಳ ವಿಚಾರದಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಸಾಲದ ವ್ಯವಹಾರದಿಂದ ಸಮಸ್ಯೆಗೆ ಸಿಲುಕುವಿರಿ.

ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.