ವಾರ ಭವಿಷ್ಯ: ಮೇಷ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತಾರೆ, ವೃಷಭ ರಾಶಿಯವರ ಸೋಲಿನ ಹಿಂದೆ ಗೆಲುವು ಇರುತ್ತೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಮೇಷ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತಾರೆ, ವೃಷಭ ರಾಶಿಯವರ ಸೋಲಿನ ಹಿಂದೆ ಗೆಲುವು ಇರುತ್ತೆ

ವಾರ ಭವಿಷ್ಯ: ಮೇಷ ರಾಶಿಯವರಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತಾರೆ, ವೃಷಭ ರಾಶಿಯವರ ಸೋಲಿನ ಹಿಂದೆ ಗೆಲುವು ಇರುತ್ತೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ
ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 11ರ ಭಾನುವಾರದಿಂದ ಮೇ 17 ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ಮೀನ ರಾಶಿಯವರ ವಾರ ಭವಿಷ್ಯ

ಮೇಷ ರಾಶಿ

ನಿಮ್ಮದಲ್ಲದ ತಪ್ಪಿಗೆ ಅಪವಾದ ಒಂದನ್ನು ಎದುರಿಸಬೇಕಾಗುತ್ತದೆ. ನಿಮ್ಮಿಂದ ಸಹಾಯ ಪಡೆದವರೆ ನಿಮ್ಮಿಂದ ದೂರವಾಗುತ್ತಾರೆ. ಉತ್ತಮ ಮುಂದಾಲೋಚನೆಯ ಗುಣವಿರುತ್ತದೆ. ಇದರಿಂದಾಗಿ ಎದುರಾಗಬಹುದಾದ ಸಮಸ್ಯೆಗಳಿಂದ ದೂರವಾಗುವುದು ಸಾಧ್ಯವಾಗುತ್ತದೆ. ಭೂ ವಿಚಾರದಲ್ಲಿ ಎಚ್ಚರಿಕೆಯ ನಡಿಗೆಯ ಅಗತ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ವರಮಾನ ಇರುತ್ತದೆ. ಸಂಸಾರಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ. ಉದ್ಯೋಗವನ್ನು ಬದಲಿಸುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸಲು ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು. ಕೆಲಸ ಕಾರ್ಯಗಳಿಗೆ ಮನೆತನದ ಹಿರಿಯರ ಸಹಾಯ ದೊರೆಯಲಿದೆ. ವಾಸ ಸ್ಥಳ ಬದಲಾಗಬಹುದು. ನಿರೀಕ್ಷಿತ ಖರ್ಚು ವೆಚ್ಚಗಳಿದ್ದರೂ ಧೈರ್ಯವಾಗಿ ಎಲ್ಲವನ್ನು ನಿಭಾಯಿಸುತ್ತೀರಿ. ಕುಟುಂಬದಲ್ಲಿ ನಡೆಯಬೇಕಿದ್ದ ಮಂಗಳ ಕಾರ್ಯವು ಮುಂದೂಡಲ್ಪಡುತ್ತದೆ. ಉತ್ತಮ ಆರೋಗ್ಯ ಇರುತ್ತದೆ. ಕುಟುಂಬದ ವ್ಯವಹಾರವನ್ನು ಹಗುರವಾಗಿ ಪರಿಗಣಿಸುವಿರಿ. ಮಕ್ಕಳೊಂದಿಗೆ ಮನಸ್ತಾಪ ಇರುತ್ತದೆ. ಪ್ರಯಾಣದಿಂದ ಲಾಭವಿದೆ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಷಭ ರಾಶಿ

ಸೋಲಿನ ಹಿಂದೆ ಗೆಲುವು ಇರುತ್ತದೆ. ಕುಟುಂಬದಲ್ಲಿ ಎಲ್ಲರ ನಂಬಿಕೆ ಮತ್ತು ಮೆಚ್ಚುಗೆಯನ್ನು ಗಳಿಸುವಿರಿ. ಸಂತಾನ ಲಾಭವಿದೆ. ಗೋಪ್ಯವಾಗಿ ನಿಮ್ಮ ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಕೈಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ. ಸೋದರಿಯಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ವಿವಾಹ ಕಾರ್ಯದಲ್ಲಿ ಅಡ್ಡಿ ಆತಂಕಗಳು ಎದುರಾದರೂ ಕ್ರಮೇಣವಾಗಿ ಯಶಸ್ಸು ಗಳಿಸುವಿರಿ. ನಿಮ್ಮ ಬಳಿ ಇರುವ ಹಣವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗುವಿರಿ. ಸಂಗಾತಿಯು ಸಮಸ್ಯೆಗಳನ್ನು ಅರಿತುಕೊಂಡು ನಿಮಗೆ ಸಹಾಯ ಮಾಡುತ್ತಾರೆ. ದುಡುಕದೆ ಮೃದುವಾಗಿ ಮಾತನಾಡಿ ನಿಮ್ಮ ಕೆಲಸ ಸಾಧಿಸುವಿರಿ. ನಿಮ್ಮಲ್ಲಿನ ಊಹಾಶಕ್ತಿಯು ಅನುಕರಣೆಯವಾಗಿರುತ್ತದೆ. ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಮನೆತನಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿದೆ. ಆತುರದ ಗುಣದಿಂದ ವರಮಾನದಲ್ಲಿ ಕೊರತೆ ಕಾಣಲಿದೆ.

ಪರಿಹಾರ: ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಬೂದು ಬಣ್ಣ

ಮಿಥುನ

ಉದ್ಯೋಗದಲ್ಲಿ ಬೇಸರದ ಸನ್ನಿವೇಶ ಎದುರಾಗುತ್ತದೆ. ಇದರಿಂದಾಗಿ ಉದ್ಯೋಗವನ್ನು ಬದಲಿಸುವಿರಿ. ಜೀವನದಲ್ಲಿ ಕ್ರಮೇಣವಾಗಿ ಪ್ರಗತಿಯತ್ತ ಸಾಗುವಿರಿ. ಬೇರೆಯವರ ತಪ್ಪನ್ನು ಸರಿಪಡಿಸುವಿರಿ. ಉದ್ಯೋಗದಲ್ಲಿ ಎಲ್ಲರ ಮೆಚ್ಚುಗೆ ಗಳಿಸುವಿರಿ. ಆರಂಭಿಸಿದ ಕೆಲಸ ಕಾರ್ಯಗಳನ್ನು ವಿಶ್ರಾಂತಿ ಇಲ್ಲದೆ ಪೂರ್ಣಗೊಳಿಸುವಿರಿ. ದಂಪತಿ ನಡುವೆ ಬೇಸರದ ಸನ್ನಿವೇಶವು ಎದುರಾಗಲಿದೆ. ಕುಟುಂಬದಲ್ಲಿ ಪ್ರೀತಿ ವಿಶ್ವಾಸವು ಮರುಕಳಿಸಲಿದೆ. ಬೇಸಾಯದಲ್ಲಿ ಆಸಕ್ತಿ ಮೂಡುತ್ತದೆ. ಮನೆತನದ ಸಮಸ್ಯೆಗಳನ್ನು ದೂರ ಮಾಡುವಿರಿ. ದಿನ ನಿತ್ಯದ ಜವಾಬ್ದಾರಿಗಳಲ್ಲಿ ಬೇರೆಯವರನ್ನು ನಂಬಿ ಮೋಸ ಹೋಗುವ ಸಾಧ್ಯತೆಗಳಿವೆ. ಹಣಕಾಸಿನ ವಿಚಾರಗಳನ್ನು ಏಕಾಂಗಿಯಾಗಿ ನಿರ್ವಹಿಸಬಲ್ಲಿರಿ. ಚರ್ಮದ ದೋಷವಿರುತ್ತದೆ. ಧಾರ್ಮಿಕ ವಿಧಿ ವಿಧಾನದಲ್ಲಿ ಆಸಕ್ತಿ ಮೂಡುತ್ತದೆ. ಅಜ್ಜಿ ( ತಾಯಿಯ ತಾಯಿ ) ಯಿಂದ ಹಣದ ಸಹಾಯ ದೊರೆಯುತ್ತದೆ. ಬರಹಗಾರರಿಗೆ ಅವಕಾಶ ಮತ್ತು ಉತ್ತಮ ಆದಾಯ ದೊರೆಯಲಿದೆ. ವದಂತಿಗಳನ್ನು ನಂಬುವಿರಿ. ಕುಟುಂಬದಲ್ಲಿ ಇಕ್ಕಟ್ಟಿನ ಪರಿಸ್ಥಿತಿಯೊಂದು ಎದುರಾಗುತ್ತದೆ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ

ಕಟಕ ರಾಶಿ

ವಿದ್ಯಾರ್ಥಿಗಳು ಆರಂಭದಲ್ಲಿ ಅಡೆತಡೆಗಳನ್ನು ಎದುರಿಸುತ್ತಾರೆ. ತಂದೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ಉದ್ವೇಗದಿಂದ ಮಾತನಾಡುವ ಕಾರಣ ಕೆಲವರ ವಿರೋಧವನ್ನು ಎದುರಿಸಬೇಕಾಗುತ್ತದೆ. ಭೂ ಸಂಬಂಧಿತ ವಿಚಾರದಲ್ಲಿ ಆತ್ಮೀಯರು ನಿಮ್ಮಿಂದ ದೂರ ಉಳಿಯುತ್ತಾರೆ. ಎಲ್ಲರೊಂದಿಗೆ ಕೋಪದಿಂದ ವರ್ತಿಸುವಿರಿ. ಕುಟುಂಬದ ಹಿರಿಯರ ಹಠದ ಬುದ್ಧಿ ಬೇಸರ ಮೂಡಿಸುತ್ತದೆ. ಹಣಕಾಸಿನ ವ್ಯವಹಾರದಲ್ಲಿ ವಿಶೇಷವಾದ ಪರಿಣತಿ ಗಳಿಸುವಿರಿ. ನಿಮ್ಮ ತಪ್ಪು ನಿರ್ಧಾರಗಳಿಂದ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುವುದಿಲ್ಲ. ವಾದ ವಿವಾದಗಳಿಂದ ದೂರ ಉಳಿಯುವಿರಿ. ಹಠದ ಬುದ್ಧಿ ಇರುವ ಕಾರಣ ನಿಮ್ಮ ಬುದ್ಧಿವಂತಿಕೆ ಉಪಯೋಗವಾಗುವುದಿಲ್ಲ. ರಕ್ತಕ್ಕೆ ಸಂಬಂಧಿಸಿದ ದೋಷ ಇರುವವರು ಎಚ್ಚರಿಕೆ ವಹಿಸಿ. ಸೋದರಿಯ ದಾಂಪತ್ಯ ಜೀವನದಲ್ಲಿ ಬೇಸರದ ಸನ್ನಿವೇಶ ಎದುರಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಮನಸ್ತಾಪ ಉಂಟಾಗಲಿದೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.