ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಆತ್ಮೀಯರ ನೆರವಿನಿಂದ ಉದ್ಯೋಗ ಸಿಗುತ್ತೆ, ಕನ್ಯಾ ರಾಶಿಯವರು ಆರೋಗ್ಯದ ಬಗ್ಗೆ ಗಮನ ಹರಿಸಬೇಕು
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಆತ್ಮೀಯರ ನೆರವಿನಿಂದ ಉದ್ಯೋಗ ಸಿಗುತ್ತೆ, ಕನ್ಯಾ ರಾಶಿಯವರು ಆರೋಗ್ಯದ ಬಗ್ಗೆ ಗಮನ ಹರಿಸಬೇಕು

ವಾರ ಭವಿಷ್ಯ: ಸಿಂಹ ರಾಶಿಯವರಿಗೆ ಆತ್ಮೀಯರ ನೆರವಿನಿಂದ ಉದ್ಯೋಗ ಸಿಗುತ್ತೆ, ಕನ್ಯಾ ರಾಶಿಯವರು ಆರೋಗ್ಯದ ಬಗ್ಗೆ ಗಮನ ಹರಿಸಬೇಕು

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 11ರ ಭಾನುವಾರದಿಂದ ಮೇ 17 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ

ಸಿಂಹ ರಾಶಿ

ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಆತ್ಮೀಯರ ಸಹಾಯದಿಂದ ಉದ್ಯೋಗ ಲಭಿಸುತ್ತದೆ. ಭೂ ವ್ಯವಹಾರದಲ್ಲಿ ನಿರೀಕ್ಷಿತ ವರಮಾನ ಇರುತ್ತದೆ. ಸಮಾಜದಲ್ಲಿ ಗಣ್ಯ ವ್ಯಕ್ತಿಯ ಸ್ಥಾನಮಾನ ದೊರೆಯುತ್ತದೆ. ಕುಟುಂಬದಲ್ಲಿ ನಿಮ್ಮ ಮಾತಿಗೆ ಗೌರವ ಮತ್ತು ಬೆಂಬಲ ದೊರೆಯುತ್ತದೆ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಹೋರಾಟದ ಮನೋಭಾವನೆ ತೋರುವಿರಿ. ಉತ್ತಮ ಊಹಶಕ್ತಿಯು ನಿಮಗಿರುತ್ತದೆ. ಯುವಕ ಯುವತಿಯರು ಉದ್ಯೋಗವನ್ನು ಆರಿಸಿ ವಿದೇಶಕ್ಕೆ ತೆರಳುತ್ತಾರೆ. ವದಂತಿಗಳನ್ನು ನಂಬಿ ಕುಟುಂಬದ ನೆಮ್ಮದಿಯನ್ನು ಹಾಳು ಮಾಡುವಿರಿ. ಬಂಧು ಬಳಗದವರಿಂದ ಅಂತರವನ್ನು ಕಾಪಾಡಿಕೊಳ್ಳುವಿರಿ. ಆಡುವ ಮಾತಿನ ಮೇಲೆ ಹತೋಟಿಯನ್ನು ಸಾಧಿಸುವುದು ಒಳ್ಳೆಯದು. ಸೋದರಿಯರು ಹೊಂದಾಣಿಕೆಯಿಂದ ಜೀವನ ನಡೆಸುತ್ತಾರೆ. ದಂಪತಿ ನಡುವೆ ವಾದ ವಿವಾದಗಳಿದ್ದರೂ ಯಾವುದೇ ತೊಂದರೆಯೂ ಎದುರಾಗುವುದಿಲ್ಲ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ
ದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಕನ್ಯಾ ರಾಶಿ

ವಿದ್ಯಾರ್ಥಿಗಳು ಹೆಚ್ಚಿನ ಸಾಧನೆಗೆ ಪಾತ್ರರಾಗುತ್ತಾರೆ. ದೊಡ್ಡ ಮಟ್ಟದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಗಮನ ವಹಿಸಿ. ಕೈಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ. ಸ್ವಗೃಹ ಭೂ ಲಾಭವಿದೆ. ಉತ್ತಮ ಹಣ ಮತ್ತು ಅಧಿಕಾರವಿದ್ದರೂ ಸರಳ ರೀತಿಯಲ್ಲಿ ಜೀವನ ನಡೆಸುವಿರಿ. ಬೇರೆಯವರಿಗೆ ತೊಂದರೆಯಾಗದಂತೆ ನಿಮ್ಮ ಕೆಲಸವನ್ನು ನಿರ್ವಹಿಸುವಿರಿ. ಮನೆತನದ ಹಳೆಯ ಪದಾರ್ಥಗಳು ಮತ್ತು ಮನೆತನದ ವೃತ್ತಿಯಲ್ಲಿ ಆಸಕ್ತಿ ಮೂಡುತ್ತದೆ. ಗೋಪ್ಯವಾಗಿ ನಿಮ್ಮ ವ್ಯಾಪಾರ ವ್ಯವಹಾರವನ್ನು ವಿಸ್ತರಿಸುವಿರಿ. ಸೋದರರ ಪ್ರಗತಿಯಲ್ಲಿ ನಿಮ್ಮ ಪಾಲಿರುತ್ತದೆ. ಬೆಳೆ ಬಾಳುವ ಪದಾರ್ಥಗಳಿಗೆ ಹಣ ಖರ್ಚು ಮಾಡುವಿರಿ. ಎದುರಾಗುವ ಸಮಸ್ಯೆಗಳನ್ನು ಬುದ್ದಿವಂತಿಕೆಯಿಂದ ನಿರ್ವಹಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ಲಾಭವಿರುತ್ತದೆ. ದಂಪತಿ ನಡುವೆ ಹಣಕಾಸಿನ ವಿಚಾರದಲ್ಲಿ ಒಮ್ಮತ ಕಂಡು ಬರುವುದಿಲ್ಲ. ನಿಮಗೆ ಸಂಬಂಧಿಸಿದ ಚಿನ್ನ ಅಥವಾ ಬೆಳ್ಳಿಯ ಪದಾರ್ಥಗಳನ್ನು ಆತ್ಮೀಯರಿಗೆ ನೀಡುವಿರಿ. ತಪ್ಪು ಮಾಡಿದವರನ್ನು ಹಿಂಜರಿಯದೆ ನಿಂದಿಸುವಿರಿ. ಇದರಿಂದ ವಿವಾದವೊಂದಕ್ಕೆ ಸಿಲುಕುವಿರಿ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ತುಲಾ ರಾಶಿ

ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವಿರಿ. ಆಪತ್ತಿನಲ್ಲಿ ಇರುವವರಿಗೆ ಆಸರೆಯಾಗುವಿರಿ. ಯುವಕ ಯುವತಿಯರ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತದೆ. ಗುರು ಹಿರಿಯರ ಸಮಕ್ಷಮದಲ್ಲಿ ಮಂಗಳ ಕಾರ್ಯ ಒಂದು ನೆರವೇರಲಿದೆ. ದಂಪತಿನಡುವೆ ಉತ್ತಮ ಭಾವನೆ ಇರುತ್ತದೆ. ಕ್ರಮೇಣವಾಗಿ ನಿಮ್ಮ ನಿರೀಕ್ಷೆಗಳು ಸಕಾರಗೊಳ್ಳಲಿವೆ. ಮಕ್ಕಳಿಗೆ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಕುಟುಂಬದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಕೈಗೂಡಲಿವೆ. ಪರರ ಮಾತನ್ನು ನಂಬಿದಲ್ಲಿ ಕುಟುಂಬದಲ್ಲಿ ಅಶಾಂತಿ ಉಂಟಾಗುತ್ತದೆ. ವಿಶೇಷ ಕಲೆ ಅಥವಾ ವಿದ್ಯೆ ನಿಮಗೆ ಲಭಿಸುತ್ತದೆ. ಸೋದರಿಯ ದಾಂಪತ್ಯ ಜೀವನದಲ್ಲಿ ಅಸಂಬದ್ಧ ಸನ್ನಿವೇಶವೊಂದು ಎದುರಾಗುತ್ತದೆ. ಮನೆ ಬದಲಾವಣೆಯ ಸೂಚನೆಯಿದೆ. ಛಲದ ಗುಣದಿಂದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಆತ್ಮೀಯರೇ ನಿಮ್ಮ ಪ್ರಯತ್ನಗಳಿಗೆ ಅಡ್ಡಿಯಾಗುತ್ತಾರೆ. ನಿಮ್ಮ ಮಧ್ಯಸ್ಥಿಕೆಯಿಂದ ಹಣಕಾಸಿನ ವಿವಾದವೊಂದು ಬಗೆಹರಿಯುತ್ತದೆ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ವೃಶ್ಚಿಕ ರಾಶಿ

ರಕ್ತಕ್ಕೆ ಸಂಬಂಧಿಸಿದ ದೋಷವಿರುತ್ತದೆ. ಸಂಗಾತಿಯ ಸಹಾಯದಿಂದ ನಿಮ್ಮ ಕೆಲಸ ಕಾರ್ಯಗಳು ಪೂರ್ಣಗೊಳ್ಳುತ್ತವೆ. ನಿಮ್ಮ ಮಾತಿಗೆ ಮತ್ತು ತೀರ್ಮಾನಗಳನ್ನು ಎಲ್ಲರೂ ಗೌರವಿಸಬೇಕೆಂಬ ಮನಸಿರುತ್ತದೆ. ಬುದ್ಧಿವಂತಿಕೆಯಿಂದ ಉದ್ಯೋಗದಲ್ಲಿ ಯಶಸ್ಸನ್ನು ಕಾಣುವಿರಿ. ಶಾಂತಿ ನೆಮ್ಮದಿಯಿಂದ ಬಾಳುವಿರಿ. ನೆರೆಹೊರೆಯವರೊಂದಿಗೆ ಉತ್ತಮ ಒಡನಾಟ ಇರುತ್ತದೆ. ಕಷ್ಟವಿಲ್ಲದ ಕೆಲಸ ಕಾರ್ಯಗಳು ಮಾಡುವಿರಿ. ಹಣಕಾಸಿನ ವಿಚಾರದಲ್ಲಿ ಸ್ವಂತ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಉನ್ನತಮಟ್ಟದ ಯಶಸ್ಸು ದೊರೆಯುತ್ತದೆ. ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ನಿರೀಕ್ಷೆ ಇರುವುದಿಲ್ಲ. ಉನ್ನತ ಮಟ್ಟದ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವಿರಿ. ಅನಿರೀಕ್ಷಿತವಾದ ವಿಪತ್ತಿನಿಂದ ಪಾರಾಗುವಿರಿ. ಕುಟುಂಬದಿಂದ ಕೆಲ ದಿನಗಳು ದೂರ ಉಳಿಯಬೇಕಾಗುತ್ತದೆ. ಪ್ರಯೋಜನವಿಲ್ಲದ ವಿಚಾರಗಳಿಗೆ ಯೋಚನೆ ಮಾಡುವಿರಿ. ಶಾಸ್ತ್ರ ಸಂಪ್ರದಾಯದಲ್ಲಿ ನಂಬಿಕೆ ಆಸಕ್ತಿ ಉಂಟಾಗುತ್ತದೆ. ಹಣದ ತೊಂದರೆಯಿಂದ ಪಾರಾಗಲು ಮನೆತನದ ವೃತ್ತಿಯನ್ನು ಅವಲಂಬಿಸುವಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.