ವಾರ ಭವಿಷ್ಯ: ಕುಂಭ ರಾಶಿಯವರು ಮೌನದಿಂದ ಕೆಲಸ ಸಾಧಿಸುತ್ತಾರೆ, ಮೀನ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುತ್ತೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಾರ ಭವಿಷ್ಯ: ಕುಂಭ ರಾಶಿಯವರು ಮೌನದಿಂದ ಕೆಲಸ ಸಾಧಿಸುತ್ತಾರೆ, ಮೀನ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುತ್ತೆ

ವಾರ ಭವಿಷ್ಯ: ಕುಂಭ ರಾಶಿಯವರು ಮೌನದಿಂದ ಕೆಲಸ ಸಾಧಿಸುತ್ತಾರೆ, ಮೀನ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರುತ್ತೆ

ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 4ರ ಭಾನುವಾರದಿಂದ ಮೇ 10 ರ ಶನಿವಾರದವರಿಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ವಾರ ಭವಿಷ್ಯ

ಧನು ರಾಶಿ

ಹಳೆಯ ನೆನಪುಗಳು ನಿಮ್ಮ ಬೇಸರಕ್ಕೆ ಕಾರಣವಾಗಲಿವೆ. ಪ್ರಯೋಜನವಿಲ್ಲದ ವಿಚಾರಗಳಿಗೆ ಯೋಚನೆ ಮಾಡುವಿರಿ. ಇದರಿಂದ ಅನಾರೋಗ್ಯ ಉಂಟಾಗಲಿದೆ. ಮುಖ್ಯವಾಗಿ ಅಜೀರ್ಣದಿಂದ ಬಳಲುವಿರಿ. ಅವಿರತ ಮತ್ತು ಶ್ರಮದಾಯಕ ಕೆಲಸದ ನಡುವೆ ವಿಶ್ರಾಂತಿಯನ್ನು ಬಯಸುವಿರಿ. ನಿಮ್ಮ ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ. ಯಾವುದೇ ವಿಚಾರದಲ್ಲಿಯೂ ದಿಟ್ಟ ಮತ್ತು ದೃಢವಾದ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಸುಲಭವಾಗಿ ಬೇರೆಯವರ ಸಲಹೆಯನ್ನು ಪಾಲಿಸುವುದಿಲ್ಲ. ಹಣವನ್ನು ಉಳಿಸುವ ಯೋಜನೆ ರೂಪಿಸುವಿರಿ. ನಿಮ್ಮ ತಪ್ಪನ್ನು ಮರೆಮಾಚಿ ಬೇರೆಯವರನ್ನು ದೂರುವಿರಿ. ಉದ್ಯೋಗದಲ್ಲಿ ಸಾಧಾರಣ ಪ್ರಗತಿ ಇರಲಿದೆ. ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವ ಜನರ ಬಗ್ಗೆ ಎಚ್ಚರಿಕೆ ಇರಲಿ. ವಿದ್ಯಾಥಿಗಳಿಗೆ ಹೊಸ ವಿಷಯಗಳನ್ನು ಕಲಿಯುವ ಅವಕಾಶ ದೊರೆಯಲಿದೆ. ಪ್ರಯಾಣದಿಂದ ಲಾಭವಿದೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಕರ ರಾಶಿ

ಕೆಲಸ ಕಾರ್ಯಗಳಲ್ಲಿ ಆಸಕ್ತಿ ಇರುವುದಿಲ್ಲ. ನಿಮ್ಮಲ್ಲಿ ಅನುಕರಣೀಯ ಗುಣಗಳು ಕಂಡುಬರಲಿವೆ. ಸಣ್ಣ ಪುಟ್ಟ ಕೆಲಸಗಳನ್ನೂ ಅತಿ ಶ್ರದ್ದೆಯಿಂದ ಮಾಡುವಿರಿ. ಸತತ ಪ್ರಯತ್ನದಿಂದ ಜಯದ ಹಾದಿಯಲ್ಲಿ ಸಾಗುವಿರಿ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ನಿಮ್ಮದಾಗುತ್ತದೆ. ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಸ್ವಂತ ತೀರ್ಮಾನಗಳಿಗೆ ಬದ್ಧರಾಗುವಿರಿ. ಅತಿಯಾದ ಆಸೆ ಇರುವುದಿಲ್ಲ. ಅಲ್ಪ ತೃಪ್ತಿಗೆ ಸಂತಸ ಪಡುವಿರಿ. ಕೆಲಸ ಕಾರ್ಯಗಳಲ್ಲಿ ನಿರತರಾಗಿರುವಂತೆ ಇತರರನ್ನು ಪ್ರೇರೇಪಿಸುವಿರಿ. ನಿಮ್ಮ ಮನದ ಭಾವನೆಗಳಿಗೆ ಜೀವ ನೀಡುವಿರಿ. ಕೋಪದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಜನಾಕರ್ಷಕ ಬುದ್ಧಿ ನಿಮ್ಮಲ್ಲಿ ಇರುತ್ತದೆ. ವಿರೋಧಿಗಳನ್ನು ಸದಾ ಗಮನಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗುತ್ತವೆ. ಅವಿವಾಹಿತರಿಗೆ ವಿವಾಹಯೋಗವಿದೆ. ಬಿಡುವಿನ ವೇಳೆಯಲ್ಲಿ ಹೊಸ ವಿಚಾರಗಳನ್ನು ಕಲಿಯಲು ಉತ್ಸುಕರಾಗುವಿರಿ. ನಿಮ್ಮಲ್ಲಿ ಮರೆವಿನ ಗುಣವಿರುತ್ತದೆ. ಮಕ್ಕಳಿಗೆ ಸ್ವಾತಂತ್ರ ನೀಡುವ ಕಾರಣ ದೊಡ್ಡ ಯೋಚನೆ ಮತ್ತು ಒತ್ತಡ ದೂರವಾಗುತ್ತದೆ.

ಪರಿಹಾರ: ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೆಂಪು ಬಣ್ಣ

ಕುಂಭ ರಾಶಿ

ಮೌನದಿಂದ ಕೆಲಸ ಸಾಧಿಸುವಿರಿ. ನಿಮ್ಮನ್ನು ಅರಿಯಲು ಬೇರೆಯವರಿಗೆ ಸಾಧ್ಯವಾಗುವುದಿಲ್ಲ. ಕೈಕಾಲುಗಳಲ್ಲಿ ಶಕ್ತಿಯು ಕಡಿಮೆ ಆಗಲಿದೆ. ಒಮ್ಮೆ ಹೇಳಿದ ಮಾತಿಗೆ ಬದ್ಧರಾಗುವಿರಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ನಿರೀಕ್ಷೆ ಇರುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ಮಾತನ್ನು ಎಲ್ಲರೂ ಗೌರವಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಿದ್ದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ಪತಿಯ ಜೊತೆಯಲ್ಲಿ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವ ಸೂಚನೆಗಳಿವೆ. ಜೀವನದಲ್ಲಿ ಕ್ರಮೇಣವಾಗಿ ಉನ್ನತೆ ಸಾಧಿಸುವಿರಿ. ಆತ್ಮೀಯರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ನೇರ ಮತ್ತು ನಿಷ್ಠುರದ ನಡೆ ನುಡಿ ನಿಮಗಿರುತ್ತದೆ. ದಾಂಪತ್ಯದಲ್ಲಿ ಇದ್ದ ಅಪಶೃತಿಯು ಮರೆಯಾಗುತ್ತದೆ. ಸೇವಾ ಮನೋಭಾವನೆಯನ್ನು ದುರುಪಯೋಗಪಡಿಸಿಕೊಳ್ಳುವ ಜನರಿಂದ ದೂರವಿರಿ. ತಂದೆಯ ಆಸ್ತಿಲ್ಲಿ ನಿರೀಕ್ಷಿತ ಪಾಲು ದೊರೆಯುತ್ತದೆ. ಉದ್ಯೋಗವನ್ನು ತೊರೆದು ಸ್ವಂತ ವ್ಯಾಪಾರದಲ್ಲಿ ಆಸಕ್ತಿ ತೋರುವಿರಿ. ವಿದೇಶ ಪ್ರವಾಸ ಯೋಗವಿದೆ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಮೀನ ರಾಶಿ

ರಕ್ತದ ದೋಷದಿಂದ ಬಳಲುತ್ತಿರುವವರು ಎಚ್ಚರಿಕೆಯಿಂದ ಇರುವುದು ಒಳಿತು. ಮನದಲ್ಲಿ ಒತ್ತಡ ಇರುತ್ತದೆ. ವಿಶ್ರಾಂತಿ ತೆಗೆದುಕೊಳ್ಳಲು ಪ್ರಯತ್ನಿಸಿ. ಜೀವನದಲ್ಲಿ ಎಲ್ಲರ ಮನಸ್ಸನ್ನು ಗೆಲ್ಲಲು ಯಶಸ್ವಿಯಾಗುವಿರಿ. ಹಣಕ್ಕೆ ಮಹತ್ವ ನೀಡುವುದಿಲ್ಲ. ಎಲ್ಲರ ಮನಸ್ಸನ್ನೂ ಅರ್ಥಮಾಡಿಕೊಳ್ಳುವುದಿಲ್ಲ, ಆದರೆ ಬೇರೆಯವರಿಗೆ ಮನನೋಹಿಸುವ ಸಾಹಸ ಮಾಡುವುದಿಲ್ಲ. ಹಣದ ಕೊರತೆ ಇರುತ್ತದೆ. ಉದ್ಯೋಗವನ್ನು ಬದಲಿಸುವ ಗುರಿ ಇದ್ದಲ್ಲಿ ಸಾಧ್ಯವಾಗಲಿದೆ. ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ದರ್ಜೆ ತಲುಪುತ್ತಾರೆ. ಸಮಾಜದ ಗಣ್ಯ ವ್ಯಕ್ತಿಯನ್ನು ಭೇಟಿ ಮಾಡುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಜನರೊಂದಿಗೆ ಪ್ರೀತಿ ಸೌಹಾರ್ದದಿಂದ ಬೆರೆಯುವಿರಿ. ಗಲಿಬಿಲಿಯ ವಾತಾವರಣ ಇರುತ್ತದೆ. ಯಾವುದೇ ಕೆಲಸದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.