ವಾರ ಭವಿಷ್ಯ: ಮಿಥುನ ರಾಶಿಯ ದಂಪತಿ ನಡುವೆ ಪ್ರೀತಿ ವಿಶ್ವಾಸ ಹೆಚ್ಚಾಗುತ್ತೆ, ಕಟಕ ರಾಶಿಯವರಿಗೆ ಉತ್ತಮ ಆದಾಯ ಇರಲಿದೆ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 4ರ ಭಾನುವಾರದಿಂದ ಮೇ 10ರ ಶನಿವಾರದವರಿಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಮೇಷ ರಾಶಿ
ಎಲ್ಲರ ಬಗ್ಗೆ ದಯೆ ಮತ್ತು ಅನುಕಂಪ ತೋರುವಿರಿ. ಜೀವನದಲ್ಲಿ ಸಂತೋಷ ನೆಮ್ಮದಿ ನಿಮ್ಮದಾಗಲಿದೆ. ಉದ್ಯೋಗಸ್ಥರಾದಲ್ಲಿ ಸಹೋದ್ಯೋಗಿಗಳ ಸಹಕಾರ ಲಭಿಸುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಯಾರಿಗೂ ತಿಳಿಯದಂತೆ ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿತಾಯ ಮಾಡುವಿರಿ. ಮನೆಯಲ್ಲಿ ಸೌಹಾರ್ದಯುತ ವಾತಾವರಣ ಇರಲಿದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳುವ ಕಾರಣ ಶಾಂತಿ ನೆಮ್ಮದಿಯಿಂದ ಬಾಳುವಿರಿ. ವಿದ್ಯಾರ್ಥಿಗಳಿಗೆ ವಿಶೇಷವಾದ ಅವಕಾಶ ದೊರೆತು ಉನ್ನತ ಅಭ್ಯಾಸದಲ್ಲಿ ಮುಂದುವರೆಯುತ್ತಾರೆ. ಕುಟುಂಬದಲ್ಲಿನ ಕೆಲಸ ಕಾರ್ಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಕುಟುಂಬದ ಹಿರಿಯರ ವಿಶ್ವಾಸವನ್ನು ಗಳಿಸುವಿರಿ. ವೈಯಕ್ತಿಕ ವಿಚಾರವಾಗಿ ಹೆಚ್ಚಿನ ಖರ್ಚು ವೆಚ್ಚಗಳು ಇರಲಿವೆ. ಪತಿಯ ಜೊತೆಗಿನ ಬೇಸರವು ದೂರವಾಗುತ್ತದೆ. ಆತುರದಿಂದ ನಿರ್ಧಾರಗಳನ್ನು ತೆಗೆದುಕೊಂಡರೆ ಯಾವುದೇ ವಿಚಾರವಾದರೂ ಹಿನ್ನೆಡೆ ಉಂಟಾಗಲಿದೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ನಿಮ್ಮದಾಗಲಿದೆ. ನಿಮ್ಮ ಮನದ ಆಸೆಯಂತೆ ಸಣ್ಣ ಪುಟ್ಟ ಪ್ರಯಾಣಗಳು ಸಹ ಸಾಧ್ಯವಾಗುವುದಿಲ್ಲ. ಪ್ರತಿಯೊಂದು ವಿಚಾರದಲ್ಲಿಯೂ ಆಳವಾದ ಅಧ್ಯಯನ ನಡೆಸುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ವೃಷಭ ರಾಶಿ
ಆರೋಗ್ಯದಲ್ಲಿ ಏರಿಳಿತ ಇರಲಿದೆ. ಮಾನಸಿಕ ನೆಮ್ಮದಿ ಇರುವುದಿಲ್ಲ. ಕುಟುಂಬದಲ್ಲಿ ಬೇಸರದ ಸನ್ನಿವೇಶ ಎದುರಾಗುತ್ತದೆ. ಅತಿ ನಿಧಾನದ ತೀರ್ಮಾನಗಳು ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ. ಹಣವನ್ನು ಉಳಿಸುವ ನಿಮ್ಮ ಗುರಿಗೆ ಪತಿಯ ಸಹಯೋಗ ಇರುತ್ತದೆ. ನಿಮ್ಮ ಮನದ ಆಸೆಯು ಪೂರ್ಣಗೊಳ್ಳಲಿದೆ. ಕೆಲಸ ಕಾರ್ಯಗಳ ವಿಚಾರದಲ್ಲಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಬಲ್ಲಿರಿ. ನೋಡಲು ತಾಳ್ಮೆಯ ಪ್ರತಿರೂಪವಾದರೂ, ಕೋಪ ಬಂದರೆ ಉದ್ವೇಗಕ್ಕೆ ಒಳಗಾಗುವಿರಿ. ಮಕ್ಕಳ ವಿಚಾರದಲ್ಲಿ ಕಠಿಣವಾದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಸಂಶಯಾಸ್ಪದವಾದ ನಿಮ್ಮ ಮಾತುಗಳು ನೆರೆವರೆಯವರಲ್ಲಿ ಅಸಮಾಧಾನ ಉಂಟುಮಾಡುತ್ತದೆ. ವಾದ ವಿವಾದಗಳಿಂದ ದೂರ ಉಳಿಯುವುದು ಒಳ್ಳೆಯದು. ಪತಿಯ ಜೊತೆಗಿನ ಅನುಬಂಧ ಬೇರೆಯವರ ಹಸ್ತಕ್ಷೇಪದಿಂದ ತೊಂದರೆಗೀಡಾಗಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವೃತ್ತಿಪರರು ಉತ್ತಮ ವಾರ್ತೆಯನ್ನು ಪಡೆಯುತ್ತಾರೆ. ಕೆಲವು ಕಾರ್ಡ್ ಹೆಚ್ಚು ಪ್ರಚಾರ ಅವಕಾಶಗಳು ಇವೆ. ನೀವು ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಸಂತೋಷದಲ್ಲಿ ಭಾಗಿಯಾಗುತ್ತಾರೆ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಮಿಥುನ
ಆತ್ಮ ವಿಶ್ವಾಸದ ಕೊರತೆ ನಿಮ್ಮನ್ನು ಕಾಡುತ್ತದೆ. ಬಿಡುವಿಲ್ಲದ ಕೆಲಸ ಕಾರ್ಯಗಳು ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ. ಕೇವಲ ವಿಶ್ರಾಂತಿಯಿಂದ ನಿಮ್ಮ ಆತ್ಮಶಕ್ತಿ ಮರಳುತ್ತದೆ. ಕಳೆದುಹೋದ ಗೌರವವನ್ನು ಪುನಃ ಸಂಪಾದಿಸಲು ಶಾಂತಿಯ ಮಾರ್ಗ ಅನುಸರಿಸುವಿರಿ. ನಿಮ್ಮ ತಂದೆ ತಾಯಿಯಿಂದ ಹಣದ ಸಹಾಯ ದೊರೆಯುತ್ತದೆ. ಹಣವನ್ನು ಸಂಗ್ರಹಿಸುವಲ್ಲಿ ಯಶಸ್ಸು ಕಾಣುವಿರಿ. ಬೇರೆಯವರಿಗೆ ಉಪದೇಶ ನೀಡುವಲ್ಲಿ ನಿರತರಾಗುವಿರಿ. ನಿಮ್ಮ ಮಾತುಗಳನ್ನು ಮಕ್ಕಳು ಕೇಳಬೇಕಾದ ಸಂದರ್ಭ ಒದಗುತ್ತದೆ. ಉದ್ಯೋಗದಲ್ಲಿ ನಿಮ್ಮದೆ ತಪ್ಪಿನಿಂದಾಗಿ ತೊಂದರೆಗೆ ಒಳಗಾಗುವಿರಿ. ಸ್ನೇಹಿತರ ಜೊತೆಯಲ್ಲಿ ಉತ್ತಮ ಅನುಬಂಧ ಇರುತ್ತದೆ. ಕುಟುಂಬದ ಸದಸ್ಯರು ನಿಮ್ಮನ್ನು ಅವಲಂಭಿಸಿರುತ್ತಾರೆ. ಮಕ್ಕಳಿಗೆ ವಿದ್ಯಾಭ್ಯಾಸದ ವಿಚಾರದಲ್ಲಿ ಪ್ರೋತ್ಸಾಹ ನೀಡುವಿರಿ. ಪ್ರೀತಿಪಾತ್ರರೊಡನೆ ಮನದ ಆಸೆಯನ್ನು ಹಂಚಿಕೊಳ್ಳುವಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಅನಿರೀಕ್ಷಿತವಾದ ಬದಲಾವಣೆಗಳಿಂದ ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ದಂಪತಿ ನಡುವಿನ ಪ್ರೀತಿ ವಿಶ್ವಾಸ ಹೆಚ್ಚುತ್ತದೆ.
ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಕಟಕ ರಾಶಿ
ಸದಾಕಾಲ ಕ್ರಿಯಾಶೀಲರಾಗುವಿರಿ. ಎಲ್ಲರಿಗೂ ಮಾತೃಸದೃಶ ಪ್ರೀತಿಯನ್ನು ತೋರುವಿರಿ. ನಿಮ್ಮ ವ್ಯಕ್ತಿತ್ವಕ್ಕೆ ಎಲ್ಲರೂ ಸೋಲುತ್ತಾರೆ. ಕುಟುಂಬದಲ್ಲಿನ ತಪ್ಪುಗಳನ್ನು ಸುಧಾರಿಸಲು ಗಂಭೀರ ಪ್ರಯತ್ನಗಳನ್ನು ಮಾಡುವಿರಿ. ನಿಮಗೆ ಉತ್ತಮ ಆದಾಯ ಇರುತ್ತದೆ. ಹಣವನ್ನು ಧಾರ್ಮಿಕ ಕ್ರಿಯಾವಿಧಿಗಳಿಗೆ ವಿನಿಯೋಗಿಸುವಿರಿ. ಮಾನಸಿಕ ನೆಮ್ಮದಿ ಇರುವುದಿಲ್ಲ. ಶಾಂತಿ ಸಂಯಮದಿಂದ ಉದ್ಯೋಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸುವಿರಿ. ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಪರಿಸ್ಥಿತಿಯ ಒತ್ತಡದಿಂದ ವಾಸಸ್ಥಳವನ್ನು ಬದಲಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಮೂಡಲಿದೆ. ಕುಟುಂಬದ ಜೊತೆ ವಿದೇಶಕ್ಕೆ ತೆರಳುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಪತಿಯ ಜೊತೆ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವ ಸಾಧ್ಯತೆ ಇದೆ. ಪತಿಯ ಜೊತೆ ತವರಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ವೈವಾಹಿಕ ಜೀವನದಲ್ಲಿ ಉತ್ತಮ ಬದಲಾವಣೆಗಳು ಉಂಟಾಗಲಿವೆ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ