ವಾರ ಭವಿಷ್ಯ: ತುಲಾ ರಾಶಿಯವರಿಗೆ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ, ವೃಶ್ಚಿಕ ರಾಶಿಯವರು ಐಷರಾಮಿ ಜೀವನ ಇಷ್ಟ ಪಡುವುದಿಲ್ಲ
ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ರಾಶಿಯವರಿಗೆ ಏನು ಫಲ? ಒಂದು ವಾರ ಭವಿಷ್ಯ ಇದೆ.

ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 4ರ ಭಾನುವಾರದಿಂದ ಮೇ 10 ರ ಶನಿವಾರದವರಿಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ವಾರ ಭವಿಷ್ಯ ಇಲ್ಲಿದೆ.
ಸಿಂಹ ರಾಶಿ
ಸದಾ ಸಿಡುಕಿನಿಂದ ವರ್ತಿಸುವಿರಿ. ಇದರಿಂದ ನಿಮ್ಮ ಕೆಲಸಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಹಣಕಾಸಿನ ತೊಂದರೆ ಇರುವ ಕಾರಣ ಖಿನ್ನತೆಯಿಂದ ಬಳಲುವಿರಿ. ಉದ್ಯೋಗದಲ್ಲಿ ನಿಮ್ಮ ಕೆಲಸದಲ್ಲಿ ಬೇರೆಯವರ ಹಸ್ತಕ್ಷೇಪ ಇರುತ್ತದೆ. ಕುಟುಂಬದಲ್ಲಿ ಪರಸ್ಪರ ಉತ್ತಮ ಮನೋಭಾವನೆ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳದ ಅವಶ್ಯಕತೆ ಇರುತ್ತದೆ. ಆದಾಯದಲ್ಲಿ ಪ್ರಗತಿ ಕಂಡುಬರುತ್ತದೆ. ನಿರೀಕ್ಷಿಸಿದಂತೆ ಮಕ್ಕಳ ಜೀವನದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರಲಿದೆ. ಮಕ್ಕಳ ಅನಾರೋಗ್ಯದಿಂದ ನೆಮ್ಮದಿ ಕಳೆದುಕೊಳ್ಳುವಿರಿ. ಹಠದ ಮನಸ್ಸು ಎಲ್ಲರಲ್ಲಿಯೂ ಅಸಮಾಧಾನ ಉಂಟುಮಾಡುತ್ತದೆ. ವಯೋವೃದ್ಧ ಸ್ತ್ರೀಯರ ಅರೋಗ್ಯದ ಸಮಸ್ಯೆ ದೂರವಾಗುತ್ತದೆ. ಸೋಲನ್ನು ಒಪ್ಪದೆ ಹೋರಾಟದ ಮನೋಭಾವನೆ ತೋರುವಿರಿ. ಮಕ್ಕಳನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ತೀರ್ಮಾನಗಳನ್ನು ಕುಟುಂಬದ ಸದಸ್ಯರು ಒಪ್ಪುತ್ತಾರೆ. ಆತ್ಮವಿಶ್ವಾಸದಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ.
ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ
ಕನ್ಯಾ ರಾಶಿ
ಉತ್ತಮ ಆದಾಯ ಇರುತ್ತದೆ. ಆದರೆ ಮನರಂಜನೆಗಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕುಟುಂಬದಲ್ಲಿ ಸಂತೋಷ ನೆಮ್ಮದಿ ನೆಲೆಸಿರುತ್ತದೆ. ಮೋಜಿನ ಜೀವನ ಇಷ್ಟ ಪಡುವುದಿಲ್ಲ. ಮನೆಯಲ್ಲಿ ಸಣ್ಣ ಪುಟ್ಟ ವಿಚಾರಗಳಿಗೂ ಮಹತ್ವ ನೀಡುವಿರಿ. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ. ಇದರಿಂದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಮಕ್ಕಳ ಕಾರಣದಿಂದ ನಿಮಗೆ ಮಾನಸಿಕ ಒತ್ತಡ ಇರುತ್ತದೆ. ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಎದುರಾಗಲಿವೆ. ಭವ್ಯವಾದ ಮನೆಯನ್ನು ಕೊಳ್ಳುವ ಸಾಧ್ಯತೆಗಳಿವೆ. ಸ್ವಂತ ಪರಿಶ್ರಮದಿಂದ ಜೀವನವನ್ನು ರೂಪಿಸಿಕೊಳ್ಳುವಿರಿ. ಮಾಡಿದ ತಪ್ಪನ್ನು ಒಪ್ಪಿಕೊಳ್ಳುವಿರಿ. ನಂಬಿದವರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ನಿಮ್ಮಿಂದ ಸಹಾಯ ಪಡೆದವರು ಕೃತಜ್ಞತೆಯಿಂದ ನಿಮಗೆ ಸಹಾಯ ಮಾಡಲಿದ್ದಾರೆ. ಕುಟುಂಬದ ಆದಾಯ ಹೆಚ್ಚಲು ಕಾರಣರಾಗುವಿರಿ. ಪತಿಯ ಜೊತೆಗೂಡಿ ಪ್ರವಾಸಕ್ಕೆ ತೆರಳುವಿರಿ. ಸಮಾಜದ ಹಿರಿತನ ನಿಮ್ಮದಾಗುತ್ತದೆ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ತುಲಾ ರಾಶಿ
ನಿಮ್ಮ ಮನದ ಆಲೋಚನೆಗಳು ಜೀವನದ ಬೇಸರಕ್ಕೆ ಕಾರಣವಾಗುತ್ತದೆ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಬೇರೆಯವರಿಂದ ಪಡೆದ ಹಣವನ್ನು ಸುಲಭವಾಗಿ ಮರಳಿ ನೀಡಲು ಸಾಧ್ಯವಾಗುವುದಿಲ್ಲ. ಉದ್ಯೋಗದಲ್ಲಿ ಅನಿರೀಕ್ಷಿತ ಘಟನೆಗಳು ಬೇಸರಕ್ಕೆ ಕಾರಣವಾಗಲಿವೆ. ಮನೆಯ ವಾತಾವರಣವನ್ನು ನಿಮಗೆ ಅನುಕೂಲವಾಗುವಂತೆ ಬದಲಾಯಿಸುವಿರಿ. ಕುಟುಂಬದಲ್ಲಿ ನಿಮ್ಮ ಮಾತಿಗೆ ತೀರ್ಮಾನಗಳಿಗೆ ಎಲ್ಲರ ಒಪ್ಪಿಗೆ ಇರುತ್ತದೆ. ತಂದೆ ತಾಯಿಯವರ ಜೊತೆಗಿನ ಮನಸ್ತಾಪವು ಕೊನೆಗೊಳ್ಳುವುದು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆತ್ಮೀಯರ ಅನುಮೋದನೆ ಬಹುಮುಖ್ಯ. ಹಠ ಮತ್ತು ಆತ್ಮ ವಿಶ್ವಾಸದಿಂದ ನಿಮ್ಮ ಕೆಲಸ ಸಾಧಿಸುವಿರಿ. ಆತ್ಮೀಯರ ಆಗಮನದಿಂದ ಕುಟುಂಬದಲ್ಲಿ ಸಂತಸದ ವಾತಾವರಣ ಉಂಟಾಗುತ್ತದೆ. ವೈವಾಹಿಕ ಜೀವನವು ಶುಖ ಸಂತೋಷದಿಂದ ಕೂಡಿರುತ್ತದೆ. ಅತಿ ಭಾವುಕರಾಗಿ ವರ್ತಿಸುವಿರಿ. ತಪ್ಪನ್ನು ಮರೆಮಾಚಿ ಬೇರೆಯವರ ತಪ್ಪನ್ನು ತಿದ್ದಲು ಪ್ರಯತ್ನಿಸುವಿರಿ.
ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ವೃಶ್ಚಿಕ ರಾಶಿ
ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸುವುದಿಲ್ಲ. ಒತ್ತಡದ ಸನ್ನಿವೇಶದಲ್ಲಿಯೂ ದಿಟ್ಟತನವನ್ನು ತೋರುವಿರಿ. ಐಷಾರಾಮಿ ಜೀವನವನ್ನು ಇಷ್ಟ ಪಡುವುದಿಲ್ಲ. ಮನರಂಜನೆಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ಉದ್ಯೋಗದಲ್ಲಿ ಹೆಚ್ಚಿನ ಕಾರ್ಯ ಒತ್ತಡ ಇರುತ್ತದೆ. ಉದ್ಯೋಗ ಬದಲಿಸುವ ಸಾಧ್ಯತೆಗಳು ಕಂಡುಬರುತ್ತವೆ. ಯುವತಿಯರಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಗತಿ ಸಾಧಿಸುವಿರಿ. ವಿದ್ಯಾರ್ಥಿಗಳು ಹತ್ತು ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಶಸ್ವಿಯಾಗುತ್ತಾರೆ. ದಾಂಪತ್ಯ ಜೀವನದಲ್ಲಿ ಅನ್ಯೋನ್ಯತೆ ಕಂಡುಬರುತ್ತದೆ. ಉದ್ಯೋಗಸ್ಥರು ಹಿರಿಯ ಅಧಿಕಾರಿಗಳ ಅವಕೃಪೆಗೆ ಒಳಗಾಗುತ್ತಾರೆ. ಸಮಯ ನೋಡಿ ನಿಮ್ಮ ಕೆಲಸ ಸಾಧಿಸುವಿರಿ. ಒಳ್ಳೆಯದಾಗುತ್ತದೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಲಾಭದಾಯಕವಾಗಿರುತ್ತದೆ. ಬಂದು ಬಳಗದವರ ಜೊತೆಯಲ್ಲಿ ಹಣಕಾಸಿನ ವಿಚಾರದಲ್ಲಿ ಅನಾವಶ್ಯಕ ಮಾತಾಗುತ್ತದೆ. ಆರೋಗ್ಯದಲ್ಲಿ ಏರಿಳಿತ ಇರುತ್ತದೆ.
ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ