ಸ್ತ್ರೀ ವಾರ ಭವಿಷ್ಯ: ಮಕರ ರಾಶಿಯವರಿಗೆ ಹಣಕಾಸಿನ ತೊಂದರೆ ಇರುವುದಿಲ್ಲ, ಕುಂಭ ರಾಶಿಯವರು ಗೌಪ್ಯವಾಗಿ ಕಾರ್ಯ ಸಾಧಿಸುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಮಕರ ರಾಶಿಯವರಿಗೆ ಹಣಕಾಸಿನ ತೊಂದರೆ ಇರುವುದಿಲ್ಲ, ಕುಂಭ ರಾಶಿಯವರು ಗೌಪ್ಯವಾಗಿ ಕಾರ್ಯ ಸಾಧಿಸುತ್ತಾರೆ

ಸ್ತ್ರೀ ವಾರ ಭವಿಷ್ಯ: ಮಕರ ರಾಶಿಯವರಿಗೆ ಹಣಕಾಸಿನ ತೊಂದರೆ ಇರುವುದಿಲ್ಲ, ಕುಂಭ ರಾಶಿಯವರು ಗೌಪ್ಯವಾಗಿ ಕಾರ್ಯ ಸಾಧಿಸುತ್ತಾರೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯ

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 18 ರ ಶುಕ್ರವಾರದಿಂದ ಏಪ್ರಿಲ್ 24ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಧನು ರಾಶಿ

ಸುಖ ಸಂತೋಷದಿಂದ ಜೀವನ ನಡೆಸುವಿರಿ. ಸೋದರರಿಗೆ ಹಣದ ಸಹಾಯ ಮಾಡುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಬೇರೆಯವರ ತಪ್ಪನ್ನು ಮನ್ನಿಸಿ ಸರಿಪಡಿಸುವಿರಿ. ನಿರೀಕ್ಷೆಯಂತೆ ಉತ್ತಮ ಆದಾಯವಿರುತ್ತದೆ. ಸ್ವಂತ ಉದ್ದಿಮೆ ನಡೆಸುವವರಿಗೆ ಸಾಧಾರಣ ಮಟ್ಟದ ಲಾಭ ದೊರೆಯುತ್ತದೆ. ವಿರೋಧಿಗಳನ್ನು ಪ್ರೀತಿಸುವ ದೊಡ್ಡ ಗುಣ ನಿಮಗಿರುತ್ತದೆ. ನಿಮ್ಮ ತಾಯಿಯವರ ಆರೋಗ್ಯದಲ್ಲಿ ಕೊರತೆ ಕಂಡು ಬರುತ್ತದೆ. ಪತಿಯ ಜೊತೆಯಲ್ಲಿ ದೀರ್ಘಕಾಲದ ಪ್ರವಾಸ ಕೈಗೊಳ್ಳುವಿರಿ. ಪ್ರವಾಸದಿಂದ ಲಾಭವಿದೆ. ಭವಿಷ್ಯದ ಬಗ್ಗೆ ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗುವಿರಿ. ಹಣಕಾಸಿನ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಆರೋಗ್ಯದ ಬಗ್ಗೆ ನಿರ್ಲಕ್ಷ ತೋರುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಆಸಕ್ತಿ ತೋರುವಿರಿ. ಸಣ್ಣಪುಟ್ಟ ವಿಚಾರಗಳಿಗೂ ಅತಿಯಾದ ಯೋಚನೆ ಮಾಡುವಿರಿ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ ರಾಶಿ

ಹಣಕಾಸಿನ ತೊಂದರೆ ಇರುವುದಿಲ್ಲ. ಆದರೆ ಸುಲಭವಾಗಿ ಇರುವ ಹಣವನ್ನು ಖರ್ಚು ಮಾಡುವುದಿಲ್ಲ. ಸೋದರಿಗೆ ಹಣಕಾಸಿನ ಸಹಾಯ ಮಾಡುವಿರಿ. ಒಮ್ಮೆ ತೀರ್ಮಾನಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ಉತ್ತಮ ವೇತನ ಲಭಿಸುತ್ತದೆ. ಆತ್ಮೀಯರ ಜೊತೆಗೂಡಿ ಸಣ್ಣ ಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಪತಿಯೊಂದಿಗೆ ಉತ್ತಮ ಹೊಂದಾಣಿಕೆ ಕಂಡುಬರುತ್ತದೆ. ಕುಟುಂಬದ ಎಲ್ಲರ ವಿಶ್ವಾಸವನ್ನು ಗಳಿಸುವಿರಿ. ಮಕ್ಕಳು ತಮ್ಮ ಜವಾಬ್ದಾರಿಯನ್ನು ಹೆಚ್ಚಿನ ಆಸಕ್ತಿಯಿಂದ ಪೂರ್ಣಗೊಳಿಸುತ್ತಾರೆ. ಸಹನೆಯಿಂದ ವರ್ತಿಸಿದ್ದಲ್ಲಿ ವಾದ ವಿವಾದಗಳಿಂದ ದೂರ ಉಳಿಯಬಹುದು. ಸೋಲಿನ ವೇಳೆ ಬೇರೆಯವರನ್ನು ಅನಾವಶ್ಯಕವಾಗಿ ಟೀಕಿಸುವಿರಿ. ಸ್ವಂತ ಭೂಮಿ ಅಥವಾ ಮನೆಕೊಳ್ಳುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಶೀತದ ತೊಂದರೆ ನಿಮ್ಮನ್ನು ಕಾಡಲಿದೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ ರಾಶಿ

ಹಣಕಾಸಿನ ವಿಚಾರದಲ್ಲಿ ತೊಂದರೆ ಇರುವುದಿಲ್ಲ. ಅತಿಯಾದ ನಿರೀಕ್ಷೆಣೆಯಿಲ್ಲದೆ ಹೊಂದಿಕೊಂಡು ಬಾಳುವ ಕಾರಣ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಅಲ್ಪ ಮಟ್ಟದ ಆದಾಯವಿದ್ದರೂ ಹಣವನ್ನು ಉಳಿಸುವಲ್ಲಿ ಸಫಲರಾಗುವಿರಿ. ನಿಮ್ಮ ಮಾತನ್ನು ಅರ್ಥ ಮಾಡಿಕೊಳ್ಳುವ ಜನ ಬಲು ವಿರಳ. ಬೇರೆಯವರಿಗೆ ತಿಳಿಸದೆ ಗೋಪ್ಯವಾಗಿ ನಿಮ್ಮ ಕೆಲಸ ಕಾರ್ಯವನ್ನು ಸಾಧಿಸುವಿರಿ. ಕಷ್ಟ ನಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವುದು ನಿಮ್ಮ ಉದ್ದೇಶವಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಕಣ್ಣಿಗೆ ಸಂಬಂಧಿಸಿದ ತೊಂದರೆ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವರಮಾನವಿರುತ್ತದೆ. ನಿಮ್ಮ ಪತಿಗೆ ಅತಿಯಾದ ಆತ್ಮಭಿಮಾನ ಇರುತ್ತದೆ. ಇದರಿಂದ ಜೀವನದಲ್ಲಿ ಕೊಂಚ ಹಿನ್ನಡೆ ಲಭಿಸುತ್ತದೆ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ಜ್ಞಾನ ಇರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ದಂಪತಿ ನಡುವೆ ಹೆಚ್ಚಿನ ಅನುಬಂಧ ಉಂಟಾಗಲಿದೆ. ಆಧುನಿಕತೆಗೆ ಮಾರುಹೋಗುವಿರಿ. ಕುಟುಂಬದ ಮುಖ್ಯ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗುವಿರಿ. ಕಫದ ತೊಂದರೆ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ದುಡುಕಿದಲ್ಲಿ ಮೋಸ ಹೋಗುವ ಸಾಧ್ಯತೆ ಇದೆ. ಸ್ವಂತ ವಾಹನ ಇರುತ್ತದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯದಕ್ಷತೆಯನ್ನು ಎಲ್ಲರೂ ಮೆಚ್ಚುತ್ತಾರೆ. ಸ್ಥಿರವಾದ ಬುದ್ದಿ ಇರುವುದಿಲ್ಲ. ಪತಿಗೆ ಮನೆತನದಲ್ಲಿ ಉನ್ನತ ಗೌರವ ಲಭಿಸುತ್ತದೆ. ಧೈರ್ಯ ಸಾಹಸದ ಗುಣ ಕುಟುಂಬವನ್ನು ಆಪತ್ತಿನಿಂದ ಪಾರು ಮಾಡುತ್ತದೆ. ಸ್ವಂತ ಮನೆಯನ್ನು ಕೊಳ್ಳಲು ತಂದೆ ತಾಯಿಯಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಿದ್ದಲ್ಲಿ ಉತ್ತಮ ಲಾಭವಿರುತ್ತದೆ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.