ಸ್ತ್ರೀ ವಾರ ಭವಿಷ್ಯ: ಮಿಥುನ ರಾಶಿಯವರಿಗೆ ಹಣದ ವಿಚಾರವಾಗಿ ತಾಯಿ ಜೊತೆ ಭಿನ್ನಾಭಿಪ್ರಾಯ, ಕಟಕ ರಾಶಿಯವರ ಚರ್ಮದ ಸಮಸ್ಯೆ ದೂರವಾಗುತ್ತೆ
ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 18 ರ ಶುಕ್ರವಾರದಿಂದ ಏಪ್ರಿಲ್ 24ರ ಗುರುವಾರದವರೆಗೆ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.
ಮೇಷ ರಾಶಿ
ಮನಸ್ಸಿಲ್ಲದೆ ಹೋದರೂ ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಕೆಲಸದ ಒತ್ತಡದ ಕಾರಣ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಹೆಚ್ಚಾಗುವ ಖರ್ಚುವೆಚ್ಚಗಳನ್ನು ಭರಿಸಲು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವಿರಿ. ಹಣವನ್ನು ಉಳಿಸುವಲ್ಲಿ ಸಫಲರಾಗುವಿರಿ. ಕುಟುಂಬದಲ್ಲಿ ಸಂತೋಷ ನೆಲೆಸಲು ಕಾರಣರಾಗುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ನಿಮ್ಮ ನಿರೀಕ್ಷೆಯಂತೆ ಯಶಸ್ಸು ದೊರೆಯುತ್ತದೆ. ಉದ್ಯೋಗಸ್ಥರಿಗೆ ಹಿರಿಯ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ನೀಡುತ್ತಾರೆ. ಆರೋಗ್ಯದ ಬಗ್ಗೆ ಗಮನ ವಹಿಸುವುದು ಅವಶ್ಯಕ. ಎಲ್ಲರ ವಿಶ್ವಾಸ ಗಳಿಸುವಿರಿ. ಸದಾ ತಾಳ್ಮೆಯಿಂದ ವರ್ತಿಸುವಿರಿ. ಸ್ವಂತ ಉದ್ದಿಮೆ ಇದ್ದಲ್ಲಿ ಉನ್ನತ ಮಟ್ಟದ ಗೌರವ ಗಳಿಸುವಿರಿ. ದೀರ್ಘಕಾಲದ ಪ್ರವಾಸವನ್ನು ಆಯೋಜಿಸುವಿರಿ. ಸೋದರನ ಜೊತೆಯಲ್ಲಿ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಷಭ ರಾಶಿ
ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಯಶಸ್ಸು ಲಭಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಆತ್ಮೀಯರ ನೆರವು ಮತ್ತು ಮಾರ್ಗದರ್ಶನ ದೊರೆಯಲಿದೆ. ಹಣಕಾಸಿನ ಕೊರತೆ ಉಂಟಾಗುವುದಿಲ್ಲ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಜನೆ ರೂಪುಗೊಳ್ಳುತ್ತದೆ. ಉದ್ಯೋಗಸ್ಥರಾಗದಲ್ಲಿ ಹೊಸ ವಾಹನವನ್ನು ಕೊಳ್ಳುವಿರಿ. ಆತ್ಮೀಯರ ವಿವಾಹಕ್ಕೆ ಹಣದ ಸಹಾಯ ಮಾಡಬೇಕಾಗುತ್ತದೆ. ನಿಮ್ಮ ಪತಿಗೆ ನಿಧಾನವಾದರೂ ಉತ್ತಮ ಉದ್ಯೋಗ ದೊರೆಯಲಿದೆ. ಬುದ್ಧಿವಂತಿಕೆಯ ಮಾತಿನಿಂದ ಕುಟುಂಬದ ವಿವಾದಗಳನ್ನು ದೂರ ಮಾಡುವಿರಿ. ನಿಮ್ಮ ತಂದೆ ಅಥವಾ ತಾಯಿಯವರ ಆರೋಗ್ಯದ ಬಗ್ಗೆ ನಿಮ್ಮ ಜವಾಬ್ದಾರಿ ಹೆಚ್ಚುತ್ತದೆ. ಕಫದ ದೋಷವಿರುತ್ತದೆ. ಹೊಟ್ಟೆಗೆ ಸಂಬಂಧಪಟ್ಟ ಅನಾರೋಗ್ಯವು ಕಾಡಲಿದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಮಾರ್ಪಡಿಸುವುದಿಲ್ಲ. ನಿಮ್ಮದೇ ಆದ ಹಾದಿಯಲ್ಲಿ ಜೀವನವನ್ನು ನಡೆಸುವಿರಿ.
ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ಮಿಥುನ ರಾಶಿ
ಧೈರ್ಯ ಸಾಹಸದ ಬುದ್ಧಿ ಬಂಧು-ಬಳಗದವರಲ್ಲಿ ಉತ್ತಮ ಸಂಪರ್ಕ ಬೆಳೆಯಲು ಕಾರಣವಾಗುತ್ತದೆ. ಉದ್ಯೋಗಸ್ಥರಾದಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಅನಗತ್ಯ ವಿಳಂಬವಾಗುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಉಳಿಸಿಕೊಳ್ಳದೆ ಬದಲಿಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಕುಟುಂಬದಲ್ಲಿ ಅನೇಕ ದೇವತಾ ಕಾರ್ಯಗಳನ್ನು ಹಮ್ಮಿಕೊಳ್ಳುವಿರಿ. ಒಳ್ಳೆಯತನದಿಂದ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸುವಿರಿ. ಬುದ್ಧಿವಂತಿಕೆಯಿಂದ ಮಾತನಾಡುವಿರಿ. ಪತಿಗೆ ಶೀತದ ತೊಂದರೆ ಇರುತ್ತದೆ. ಮಕ್ಕಳ ವಿಚಾರದಲ್ಲಿ ತಪ್ಪು ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಕೈಕಾಲುಗಳಲ್ಲಿ ನೋವು ಕಂಡು ಬರುತ್ತದೆ. ಉತ್ತಮ ಆದಾಯವಿದ್ದರೂ ಅನಾವಶ್ಯಕವಾದ ಖರ್ಚುವೆಚ್ಚಗಳು ಎದುರಾಗುತ್ತವೆ. ಯಾರನ್ನೂ ದ್ವೇಷಿಸದೆ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ತಾಯಿಯವರ ಜೊತೆಯಲ್ಲಿ ಹಣದ ಸಂಬಂಧವಾಗಿ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಮಗಳಿಗೆ ಉತ್ತಮ ಸಂಬಂಧದಲ್ಲಿ ವಿವಾಹ ನಿಶ್ಚಯವಾಗುತ್ತದೆ.
ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಕಟಕ ರಾಶಿ
ಗುರು ಹಿರಿಯರ ಜೊತೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಯಾವುದೇ ಕೆಲಸ ಕಾರ್ಯಗಳನ್ನು ಅಂಜದೆ ಯೋಜನಾ ಬದ್ಧರಾಗಿ ಕೆಲಸ ಪೂರ್ಣ ಮಾಡುವಿರಿ. ಚರ್ಮದ ತೊಂದರೆ ದೂರವಾಗುತ್ತದೆ. ಪತಿಯ ಜೊತೆಯಲ್ಲಿ ಇದ್ದ ಮನಸ್ತಾಪವು ಕೊನೆಗೊಳ್ಳುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಜವಾಬ್ದಾರಿ ನಿಮ್ಮದಾಗುತ್ತದೆ. ತಂದೆಯವರಿಗೆ ಆರೋಗ್ಯದ ತೊಂದರೆ ಇರುತ್ತದೆ. ಆದಾಯಕ್ಕೆ ತಕ್ಕಂತಹ ವೆಚ್ಚ ನಿಮಗಿರುತ್ತದೆ. ಉದ್ಯೋಗಸ್ಥರದಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುವಿರಿ. ದೊಡ್ಡ ವಾಹನವನ್ನು ಕೊಳ್ಳುವಿರಿ. ಹೊಸ ಬಟ್ಟೆ ಮತ್ತು ಆಭರಣಕ್ಕೆ ಹೆಚ್ಚು ಹಣ ನೀಡುವಿರಿ. ವಿವೇಕದಿಂದ ನಡೆದುಕೊಳ್ಳುವ ನಿಮ್ಮನ್ನು ಎಲ್ಲರೂ ಮೆಚ್ಚುತ್ತಾರೆ. ಶೀತದ ತೊಂದರೆ ನಿಮ್ಮನ್ನು ಕಾಡುತ್ತದೆ. ಗೆಲ್ಲಲೇಬೇಕೆಂಬ ಆತುರದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ.
ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ