ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ಹಣಕಾಸಿನ ತೊಂದರೆ ಇರಲ್ಲ, ತುಲಾ ರಾಶಿಯ ನವ ವಿವಾಹಿತರಿಗೆ ಸಂತಾನ ಲಾಭವಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ಹಣಕಾಸಿನ ತೊಂದರೆ ಇರಲ್ಲ, ತುಲಾ ರಾಶಿಯ ನವ ವಿವಾಹಿತರಿಗೆ ಸಂತಾನ ಲಾಭವಿದೆ

ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ಹಣಕಾಸಿನ ತೊಂದರೆ ಇರಲ್ಲ, ತುಲಾ ರಾಶಿಯ ನವ ವಿವಾಹಿತರಿಗೆ ಸಂತಾನ ಲಾಭವಿದೆ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ

Women Weekly Horoscope: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಏಪ್ರಿಲ್ 18 ರ ಶುಕ್ರವಾರದಿಂದ ಏಪ್ರಿಲ್ 24ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಸಿಂಹ ರಾಶಿ

ಕುಟುಂಬದ ಹಿರಿಯ ಮಹಿಳಾ ಸದಸ್ಯರ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಎಲ್ಲರಿಗೂ ಸಮಾಧಾನವಾಗುವಂತೆ ನಿಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಉದ್ಯೋಗಸ್ಥರಾದಲ್ಲಿ ನಿಮ್ಮ ಕೆಲಸದ ಬಗ್ಗೆ ಆತ್ಮತೃಪ್ತಿ ಇರುವುದಿಲ್ಲ. ಪತಿಯು ಧೈರ್ಯದಿಂದ ಕುಟುಂಬದ ಸಮಸ್ಯೆಗಳನ್ನು ಬಗೆಹರಿಸಲು ಸಹಾಯ ಮಾಡುತ್ತಾರೆ. ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಲಭಿಸಿದರೆ ಕೋಪದಿಂದ ವರ್ತಿಸುವಿರಿ. ತಪ್ಪನ್ನು ಒಪ್ಪುವುದಿಲ್ಲ. ತಪ್ಪು ಮಾಡಿದವರನ್ನು ಕ್ಷಮಿಸುವುದು ಇಲ್ಲ. ಇದರಿಂದ ಏಕಾಂಗಿಯಾಗಿ ದಿನ ಕಳೆಯಬೇಕಾಗುತ್ತದೆ. ಬಂಧು ಬಳಗದವರಿಂದ ದೂರ ಉಳಿಯುವಿರಿ. ನಿಮಗೆ ರಕ್ತದ ಸಮಸ್ಯೆ ಕಂಡುಬರುತ್ತದೆ. ಬೇರೆಯವರ ಮಾತನ್ನು ಸುಲಭವಾಗಿ ಒಪ್ಪುವುದಿಲ್ಲ. ಮುಂಗೋಪವನ್ನು ಕಡಿಮೆ ಮಾಡಿಕೊಂಡು ಸಹನೆಯಿಂದ ವರ್ತಿಸಲು ಪ್ರಯತ್ನಿಸಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ವಹಿಸಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಕನ್ಯಾ ರಾಶಿ

ಮನಸ್ಸಿಗೆ ಇಷ್ಟವಾದ ವಸ್ತ್ರಗಳನ್ನು ಕೊಳ್ಳಲು ಸಾಧ್ಯವಾಗುತ್ತದೆ. ಉತ್ತಮ ಬಾಂಧವ್ಯ ಇರುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಯಾವುದೇ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಬಲ್ಲಿರಿ. ಕುಟುಂಬದ ಮಹಿಳೆಯರ ನಡುವೆ ಉತ್ತಮ ಅನುಬಂಧ ಇರುವುದಿಲ್ಲ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಕಾರಣರಾಗುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಬಂಧು ಬಳಗದವರಿಗೆ ನಿಮ್ಮ ಬಗ್ಗೆ ವಿಶೇಷ ಅಭಿಮಾನವಿರುತ್ತದೆ. ಪತಿಯ ಆರೋಗ್ಯದಲ್ಲಿ ಅಡೆತಡೆ ಕಂಡು ಬರಬಹುದು. ಮಗನ ಜೊತೆಯಲ್ಲಿ ಅನಾವಶ್ಯಕ ವಿಚಾರಗಳಿಗೆ ಮನಸ್ತಾಪ ಉಂಟಾಗುತ್ತದೆ. ಹಣಕಾಸಿನ ತೊಂದರೆ ಕಂಡುಬರುವುದಿಲ್ಲ. ಸಭೆ ಸಮಾರಂಭಗಳಲ್ಲಿ ನಿಮಗೆ ವಿಶೇಷ ಗೌರವ ದೊರೆಯುತ್ತದೆ. ನೇರ ಮತ್ತು ನಿಷ್ಟುರದ ಮಾತುಕತೆ ನಿಮ್ಮದಾಗಿರುತ್ತದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ ರಾಶಿ

ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಆದರೆ ವಿರೋಧಿಗಳು ತಮ್ಮ ತಪ್ಪನ್ನು ಅರಿತು ನಿಮ್ಮ ಜೊತೆ ಸ್ನೇಹ ಬೆಳೆಸುತ್ತಾರೆ. ನವ ವಿವಾಹಿತರಿಗೆ ಸಂತಾನ ಲಾಭವಿದೆ. ಕುಟುಂಬದ ಆದಾಯ ಉತ್ತಮ ಮಟ್ಟದಲ್ಲಿರುತ್ತದೆ. ಆದರೆ ಅನಗತ್ಯ ವಿಚಾರಗಳಿಗೆ ಹಣ ಖರ್ಚಾಗುತ್ತದೆ. ಅನಾರೋಗ್ಯ ಇರುತ್ತದೆ. ವಿದ್ಯಾರ್ಥಿಗಳು ವಿಶಿಷ್ಟ ಮಟ್ಟದ ಸಾಧನೆ ಮಾಡಲಿದ್ದಾರೆ. ಸೋದರಿಯ ಜೀವನದಲ್ಲಿನ ಸಮಸ್ಯೆಗಳನ್ನು ದೂರ ಮಾಡುವಿರಿ. ಬುದ್ಧಿವಂತಿಕೆಯ ಮಾತುಕತೆ ಸುಖ ಶಾಂತಿಯ ಜೀವನಕ್ಕೆ ದಾರಿಯಾಗುತ್ತದೆ. ಅತಿಯಾಗಿ ಮಾತನಾಡುವ ಕಾರಣ ತಲೆ ನೋವಿನಿಂದ ಬಳಲುವಿರಿ. ಹಣಕಾಸಿನ ವ್ಯವಹಾರದಲ್ಲಿ ವಿಶೇಷವಾದ ಜ್ಞಾನವಿರುತ್ತದೆ. ಬೇರೆಯವರಿಗೆ ಬುದ್ಧಿ ಹೇಳುವುದರಲ್ಲಿ ಸಮಯ ಕಳೆಯುವಿರಿ. ಉದ್ಯೋಗಸ್ಥರಾದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೇರಳಿ ಬಣ್ಣ

ವೃಶ್ಚಿಕ ರಾಶಿ

ಉದ್ಯೋಗಸ್ಥರು ಉನ್ನತ ಮಟ್ಟ ತಲುಪುತ್ತೀರಿ. ಆಪತ್ಕಾಲದಲ್ಲಿಯೂ ಸಹ ಬುದ್ದಿವಂತಿಕೆಯ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಅಜ್ಜಿ ಅಂದರೆ ತಾಯಿಯವರ ತಾಯಿಯಿಂದ ಹಣದ ಸಹಾಯ ದೊರೆಯುತ್ತದೆ. ಸಮಾಜ ಸೇವೆಯಲ್ಲಿ ಆಸಕ್ತಿ ಇರುತ್ತದೆ. ಉದ್ಯೋಗದಲ್ಲಿ ಬಡ್ತಿ ದೊರೆಯುತ್ತದೆ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗವನ್ನು ಬದಲಿಸಬಹುದು. ಹೆಣ್ಣು ಮಕ್ಕಳಿದ್ದಲ್ಲಿ ವಿದ್ಯಾಭ್ಯಾಸದಲ್ಲಿ ಉನ್ನತ ಸಾಧನೆ ಮಾಡಲಿದ್ದಾರೆ. ಹೊಸ ವಾಹನ ಕೊಳ್ಳುವಿರಿ. ಕಾನೂನಿನ ವಿಚಾರದಲ್ಲಿ ನಿಮಗೆ ಜಯ ಲಭಿಸುತ್ತಿದೆ. ನಿಮ್ಮ ಪತಿಗೆ ದರ್ಪದ ಗುಣವಿರುತ್ತದೆ. ನೇರವಾದ ನಡೆ ನುಡಿ ಇರುತ್ತದೆ. ಬಂಗಾರ ಮತ್ತು ಬೆಳ್ಳಿಯ ಆಭರಣವನ್ನು ಕೊಳ್ಳುವಿರಿ. ಮಕ್ಕಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ಪರಿಹಾರ: ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.