ಸ್ತ್ರೀ ವಾರ ಭವಿಷ್ಯ: ಕುಂಭ ರಾಶಿಯವರಿಗೆ ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ, ಮೀನ ರಾಶಿಯವರು ಸಂಬಂಧಿಕರ ಜೊತೆ ಹಣದ ವ್ಯವಹಾರ ಮಾಡಲ್ಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಕುಂಭ ರಾಶಿಯವರಿಗೆ ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ, ಮೀನ ರಾಶಿಯವರು ಸಂಬಂಧಿಕರ ಜೊತೆ ಹಣದ ವ್ಯವಹಾರ ಮಾಡಲ್ಲ

ಸ್ತ್ರೀ ವಾರ ಭವಿಷ್ಯ: ಕುಂಭ ರಾಶಿಯವರಿಗೆ ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ, ಮೀನ ರಾಶಿಯವರು ಸಂಬಂಧಿಕರ ಜೊತೆ ಹಣದ ವ್ಯವಹಾರ ಮಾಡಲ್ಲ

ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.

ಧನು, ಮಕರ, ಕುಂಭ, ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 9 ರ ಶುಕ್ರವಾರದಿಂದ 15ರ ಗುರುವಾರದವರೆಗೆ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಧನು ರಾಶಿ

ಸಮಾಜದಲ್ಲಿ ಜನಪ್ರಿಯತೆ ಗಳಿಸುವಿರಿ. ಸ್ವತಂತ್ರವಾಗಿ ಜೀವನವನ್ನು ನಡೆಸುವಿರಿ. ನಿಮ್ಮಲ್ಲಿರುವ ಕ್ರೀಡಾಮನೋಭಾವನೆ ಮಾನಸಿಕ ನೆಮ್ಮದಿ ನೀಡುತ್ತದೆ. ಪತಿಯ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಎಲ್ಲರಿಗೂ ಮೆಚ್ಚುವಂತಹ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಉತ್ಸಾಹದಿಂದ ಹೊಸತನಕ್ಕೆ ಹೊಂದಿಕೊಂಡು ಬಾಳುವಿರಿ. ಬೇರೆಯವರ ಮೇಲೆ ಸುಲಭವಾಗಿ ಪ್ರಭಾವವನ್ನು ಬೀರಬಲ್ಲಿರಿ. ತಪ್ಪು ಮಾಡಿದವರಿಗೆ ಬುದ್ಧಿವಾದ ಹೇಳುವಿರಿ. ಎಲ್ಲರೂ ನಿಮ್ಮನ್ನು ಗೌರವಿಸಬೇಕೆಂಬ ಭಾವನೆ ಇರುತ್ತದೆ. ನಿಮ್ಮಲ್ಲಿ ಜೈವಿಕ ಗುಣ ಧರ್ಮಗಳು ಕಂಡುಬರುತ್ತವೆ. ಧಾರ್ಮಿಕ ಗುರುಗಳನ್ನು ಭೇಟಿ ಮಾಡುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರಿ. ಕುಟುಂಬದ ಹಿರಿಯರ ಜೊತೆಯಲ್ಲಿ ಮನೆತನದ ಆಸ್ತಿಯ ಬಗ್ಗೆ ಭಿನ್ನಾಭಿಪ್ರಾಯವಿರುತ್ತದೆ. ಅವಿವಾಹಿತರಿಗೆ ಆತ್ಮೀಯರ ಸಹಾಯದಿಂದ ವಿವಾಹ ನಿಶ್ಚಯವಾಗುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಆಹಾರ ಸೇವನೆಯಲ್ಲಿ ಇತಿ ಮಿತಿ ಇರುವುದು ಒಳ್ಳೆಯದು.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ ರಾಶಿ

ಉತ್ತಮ ಆದಾಯವಿರುತ್ತದೆ. ಆದರೆ ಅಶಕ್ತರಿಗೆ ಹಣದ ಸಹಾಯ ಮಾಡುವ ಕಾರಣ ಹಣದ ಕೊರತೆ ಉಂಟಾಗದು. ನೆಮ್ಮದಿಯ ವಾತಾವರಣ ಕುಟುಂಬದಲ್ಲಿ ನೆಲೆಸಿರುತ್ತದೆ. ಕೇಳುಗರಿಗೆ ಬೇಸರವಾಗುವಷ್ಟು ಮಾತನಾಡುವಿರಿ. ಐಷಾರಾಮಿ ಜೀವನವನ್ನು ಇಷ್ಟಪಡುವುದಿಲ್ಲ. ನೋಡಲು ಕಠಿಣ ಹೃದಯದವರಂತೆ ಕಂಡರು ಮಗುವಿನಂತ ಮನಸ್ಸಿರುತ್ತದೆ. ಉದ್ಯೋಗದಲ್ಲಿ ನಿಷ್ಠೆಯಿಂದ ಕೆಲಸ ನಿರ್ವಹಿಸುವಿರಿ. ನಿಮ್ಮ ಮಾತನ್ನು ಒಪ್ಪದ ವೇಳೆ ಅಸಹನೆಯಿಂದ ವರ್ತಿಸುವಿರಿ. ಸಾಮರ್ಥ್ಯಕ್ಕೆ ತಕ್ಕಂತಹ ಉದ್ಯೋಗ ದೊರೆಯುವುದಿಲ್ಲ. ಆತುರದ ಸ್ವಭಾವವಿರುತ್ತದೆ. ಗಂಭೀರದ ಪ್ರಸಂಗದಲ್ಲಿ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಆತ್ಮವಿಶ್ವಾಸದಿಂದ ಬಾಳುವಿರಿ. ಸ್ವಂತ ವ್ಯಾಪಾರ ವ್ಯವಹಾರವಿದ್ದಲ್ಲಿ ಆತ್ಮೀಯರಿಗೆ ಉದ್ಯೋಗ ನೀಡುವಿರಿ. ತವರು ಮನೆಗೆ ಹಣದ ಸಹಾಯ ಮಾಡುವಿರಿ. ಆತುರದ ನಿರ್ಧಾರಗಳು ವಿವಾದಕ್ಕೆ ಕಾರಣವಾಗುತ್ತವೆ. ನಿಮ್ಮ ಜೊತೆಯಲ್ಲಿರುವ ಜನರನ್ನು ಸಹ ವಿಶ್ವಾಸಕ್ಕೆ ತೆಗೆದುಕೊಳ್ಳಿ. ಮಕ್ಕಳನ್ನು ಶಿಸ್ತಿನಿಂದ ಬೆಳೆಸುವಿರಿ. ಸಂಬಂಧಿಕರ ಜೊತೆಯಲ್ಲಿ ಹಣಕಾಸಿನ ವ್ಯವಹಾರ ಮಾಡುವುದಿಲ್ಲ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ ರಾಶಿ

ಮನಸ್ಸಿನ ಯೋಚನೆ ಅಥವಾ ಯೋಜನೆಯಂತೆ ಕೆಲಸವನ್ನು ಮಾಡುವುದಿಲ್ಲ. ನಿಮ್ಮಲ್ಲಿ ನಿಗೂಢವಾದ ವ್ಯಕ್ತಿತ್ವವಿರುತ್ತದೆ. ಉತ್ತಮ ನೆನಪಿನ ಶಕ್ತಿ ಇರುವ ನಿಮಗೆ ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಸಂದಿಗ್ಧತೆಯ ಪರಿಸ್ಥಿತಿಯಲ್ಲಿಯು ದಿಟ್ಟ ಮತ್ತು ಸರಿಯಾದ ನಿರ್ಧಾರ ತೆಗೆದುಕೊಳ್ಳಬಲ್ಲಿರಿ. ಸದಾಕಾಲ ಮಕ್ಕಳ ಪ್ರಗತಿಯ ಬಗ್ಗೆ ಯೋಚಿಸುವಿರಿ. ಪತಿಯೊಂದಿಗೆ ನೆಮ್ಮದಿಯ ಜೀವನ ನಡೆಸುವಿರಿ. ಕೋಪ ಬಂದರು ಬಹುಕಾಲ ನಿಲ್ಲುವುದಿಲ್ಲ. ಬೇರೆಯವರಿಗೆ ತೊಂದರೆ ನೀಡದೆ ಬಾಳುವಿರಿ. ಎಲ್ಲರ ಸಲಹೆ ಸೂಚನೆಯನ್ನು ಆಲಿಸುವಿರಿ. ಆದರೆ ನಿಮ್ಮ ಸ್ವಂತ ನಿಲುವಿಗೆ ಬದ್ಧರಾಗುವಿರಿ. ಕುಟುಂಬದ ಹಣಕಾಸಿನ ಜವಾಬ್ದಾರಿಯು ನಿಮ್ಮದಾಗುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಕಂಡು ಬರಲಿವೆ. ಸೋದರ ಸೋದರಿಯರ ಜೊತೆ ವಿಶೇಷವಾದ ಅನುಬಂಧ ಇರುತ್ತದೆ. ಆರೋಗ್ಯದ ಬಗ್ಗೆ ಗಮನ ನೀಡುವುದಿಲ್ಲ. ವದಂತಿಗಳನ್ನು ನಂಬುವುದಿಲ್ಲ, ಆದರೆ ಸಂಭ್ರಮಿಸುವಿರಿ. ದೇಹದ ತೂಕ ಹೆಚ್ಚುವ ಸಂಭವವಿದೆ.

ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ ರಾಶಿ

ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ವಿಶೇಷ ಗೌರವ ಲಭಿಸುತ್ತದೆ. ನಿಮ್ಮ ಕ್ರಿಯಾಶೀಲ ಭಾವನೆಗಳಿಗೆ ಸವಾಲೆನಿಸುವ ಜವಾಬ್ದಾರಿಗಳು ದೊರೆಯಲಿವೆ. ಅನಾವಶ್ಯಕವಾಗಿ ಸಣ್ಣಪುಟ್ಟ ವಿಚಾರಗಳಿಗೂ ಚಿಂತೆ ಮಾಡುವಿರಿ. ಮಾನಸಿಕ ಒತ್ತಡದಲ್ಲಿ ಎಲ್ಲರೊಂದಿಗೆ ಕಟುವಾಗಿ ಮಾತನಾಡುವಿರಿ. ಭವಿಷ್ಯದ ಬಗ್ಗೆ ನಿಮ್ಮದೇ ಆದ ಯೋಜನೆಗಳನ್ನು ರೂಪಿಸುವಿರಿ. ಕುಟುಂಬದ ಒಳಿತಿಗಾಗಿ ಯಾವುದೇ ತ್ಯಾಗವನ್ನು ಮಾಡಬಲ್ಲಿರಿ. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇಡುವಿರಿ. ಸಂಪ್ರದಾಯದಲ್ಲಿ ನಂಬಿಕೆ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಹೊಸ ವಿಚಾರವನ್ನು ಕಲಿಯುವ ಹವ್ಯಾಸವಿರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಇರುವುದಿಲ್ಲ. ಬಂಧು-ಬಳಗದವರ ಜೊತೆ ಹಣದ ವ್ಯವಹಾರ ಮಾಡುವುದಿಲ್ಲ. ಕೈ ಕಾಲುಗಳಲ್ಲಿ ನೋವಿನ ಅನುಭವವಿರುತ್ತದೆ. ದೈಹಿಕ ವ್ಯಾಯಾಮದಿಂದ ಉತ್ತಮ ಆರೋಗ್ಯ ಗಳಿಸಲು ಪ್ರಯತ್ನಿಸುವಿರಿ. ನಿಮಗೆ ತಿಳಿಯದಂತೆ ಇರುವ ಹಣವೆಲ್ಲ ಖರ್ಚಾಗುತ್ತದೆ. ಬುದ್ಧಿವಂತಿಕೆಯಿಂದ ಅವಶ್ಯಕತೆ ಇದ್ದಷ್ಟು ಹಣವನ್ನು ಸಂಪಾದಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಲಘು ಪ್ರವಾಸ ಕೈಗೊಳ್ಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹಸಿರು ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.