ಭಾರತ ಪಾಕಿಸ್ತಾನ ನಡುವೆ ಸಂಘರ್ಷ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ಸ್ಥಗಿತಗೊಳಿಸಿದ ಬಿಸಿಸಿಐ
ಕನ್ನಡ ಸುದ್ದಿ  /  ಕ್ರಿಕೆಟ್  /  ಭಾರತ ಪಾಕಿಸ್ತಾನ ನಡುವೆ ಸಂಘರ್ಷ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ಸ್ಥಗಿತಗೊಳಿಸಿದ ಬಿಸಿಸಿಐ

ಭಾರತ ಪಾಕಿಸ್ತಾನ ನಡುವೆ ಸಂಘರ್ಷ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ಸ್ಥಗಿತಗೊಳಿಸಿದ ಬಿಸಿಸಿಐ

ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಐಪಿಎಲ್ 2025 ಅನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಐಪಿಎಲ್ 2025 ಅನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ
ಐಪಿಎಲ್ 2025 ಅನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷ ಉಲ್ಬಣಗೊಂಡ ನಂತರ ಹೆಚ್ಚುತ್ತಿರುವ ಭದ್ರತಾ ಕಾಳಜಿಗಳ ಮಧ್ಯೆ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಧರ್ಮಶಾಲಾದಲ್ಲಿ ಬುಧವಾರ ನಡೆದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಸುರಕ್ಷತಾ ಸಮಸ್ಯೆಗಳಿಂದಾಗಿ ರದ್ದುಪಡಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಈ ಸ್ಥಳವು ಪಠಾಣ್ಕೋಟ್ ಪ್ರದೇಶದಿಂದ ಸುಮಾರು 100 ಕಿಲೋಮೀಟರ್‌ಗಿಂತಲೂ ಕಡಿಮೆ ದೂರದಲ್ಲಿದೆ, ಅಲ್ಲಿ ವಾಯುದಾಳಿಯ ಎಚ್ಚರಿಕೆಗಳನ್ನು ನೀಡಲಾಗಿದ್ದು, ಇದರಿಮಂದಾಗಿ ಬಿಸಿಸಿಐ ಪಂದ್ಯಗಳನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿದೆ.

ನಾವು ಐಪಿಎಲ್ ಅನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ. ಆಟಗಾರರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ಆದ್ದರಿಂದ ನಾವು ಸದ್ಯಕ್ಕೆ ಪಂದ್ಯಾವಳಿಯನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ. ಪಂದ್ಯಾವಳಿಯನ್ನು ಯಾವಾಗ ಪುನರಾರಂಭಿಸಬಹುದು ಎಂದು ನಾವು ನಂತರ ನಿರ್ಧರಿಸುತ್ತೇವೆ. ಇದೀಗ, ರಾಷ್ಟ್ರೀಯ ಹಿತಾಸಕ್ತಿ ಅತ್ಯಂತ ಮಹತ್ವದ್ದಾಗಿದೆ ಎಂದು ಬಿಸಿಸಿಐ ಹೇಳಿದೆ.

ಮಳೆಯಿಂದಾಗಿ ನಿಗದಿತ ಸಮಯಕ್ಕಿಂತ ತಡವಾಗಿ ಪ್ರಾರಂಭವಾಗಿದ್ದ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಕ್ರೀಡಾಂಗಣದಲ್ಲಿನ ಫ್ಲಡ್ ಲೈಟ್ ಗಳು ಆಫ್ ಆದ ನಂತರ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ಆರಂಭದಲ್ಲಿ ತಾಂತ್ರಿಕ ದೋಷ ಎಂದು ಹೇಳಲಾಗಿತ್ತು, ನಂತರದಲ್ಲಿ ವಾಯು ದಾಳಿ ಎಚ್ಚರಿಕೆಗಳಿಂದ ಉಂಟಾಗುವ ಭದ್ರತಾ ಅಪಾಯಗಳ ಬಗ್ಗೆ ಆಟಗಾರರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಪಂದ್ಯವನ್ನು ತಕ್ಷಣ ರದ್ದುಪಡಿಸಲಾಯಿತು. ಅದಾದ ಬಳಿಕ ಇಂದು ಮತ್ತೆ ಬಿಸಿಸಿಐ ಅಧಿಕಾರಿಗಳ ಸಭೆ ನಡೆಸಿದ್ದು, ಉಳಿದ ಪಂದ್ಯಗಳನ್ನು ಸದ್ಯಕ್ಕೆ ರದ್ದುಪಡಿಸುವ ನಿರ್ಧಾರ ಕೈಗೊಂಡಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in