Sarath Babu: ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ
ಕನ್ನಡದ ʼಅಮೃತವರ್ಷಿಣಿʼ ಸಿನಿಮಾ ಖ್ಯಾತಿಯ ನಟ ಶರತ್ಬಾಬು ಆರೋಗ್ಯ ವಿಷಮಿಸಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದಾರೆ.
'ಅಮೃತವರ್ಷಿಣಿʼ ಸಿನಿಮಾ ಖ್ಯಾತಿಯ ನಟ ಶರತ್ಬಾಬು ಆರೋಗ್ಯ ವಿಷಮಿಸಿದೆ. ಹೈದರಾಬಾದ್ನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ದಕ್ಷಿಣ ಭಾರತ ಸಿನಿಮಾರಂಗದಲ್ಲಿ ಹೆಸರು ಗಳಿಸಿದ್ದ ಇವರು ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದರು. ಇವರಿಗೆ 72 ವರ್ಷ ವಯಸ್ಸಾಗಿದೆ.
ಶರತ್ ಬಾಬು ಅವರಿಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಭಿಮಾನಿಗಳಿದ್ದಾರೆ. ಅನಾರೋಗ್ಯದ ಕಾರಣದಿಂದ ಏಪ್ರಿಲ್ ಮೊದಲ ವಾರ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಂದ ಹೈದರಾಬಾದಿಗೆ ಕರೆದೊಯ್ಯಲಾಗಿತ್ತು. ಹಲವು ದಿನಗಳಿಂದ ಶರತ್ಬಾಬು ಅವರನ್ನು ಐಸಿಯುನಲ್ಲಿ ಇರಿಸಲಾಗಿದೆ.
1973ರಲ್ಲಿ ಸಿನಿಮಾ ರಂಗ ಪ್ರವೇಶಿಸಿದ ಈ ನಟ ತಮಿಳು, ತೆಲುಗು, ಕನ್ನಡ, ಹಿಂದಿ, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು 1973ರಲ್ಲಿ ತೆಲುಗಿನ ರಾಮರಾಜ್ಯಂ ಚಿತ್ರ ಮೂಲಕ ಸಿನಿಮಾ ರಂಗಕ್ಕೆ ಕಾಲಿರಿಸಿದ್ದರು.
ಕನ್ನಡದಲ್ಲಿ ಇವರು ನಟಿಸಿದ್ದ ಅಮೃತವರ್ಷಿಣಿ ಚಿತ್ರ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕನ್ನಡದಲ್ಲಿ ತುಳಸಿದಳ, ರಣಚಂಡಿ, ಶಕ್ತಿ, ಕಂಪನ, ಗಾಯ, ಹೃದಯ-ಹೃದಯ, ನೀಲ, ನಮ್ಮೆಜಮಾನ್ರು ಸಿನಿಮಾಗಳಲ್ಲಿ ಇವರು ನಟಿಸಿದ್ದರು.
ಇವರು ಕೊನೆಯದಾಗಿ ಕಾಣಿಸಿಕೊಂಡ ಸಿನಿಮಾ ತೆಲುಗಿನ ʼವಕೀಲ್ ಸಾಬ್ʼ.
ವಿಭಾಗ