Prashanth Sambargi Statement: ಹಣ ನಮ್ಮತ್ರಾನೂ ಇದೆ, ಹಣಕ್ಕಾಗಿ ನಾನು ಪ್ರಚಾರಕ್ಕೆ ಬಂದಿಲ್ಲ; ಪ್ರಶಾಂತ್ ಸಂಬರ್ಗಿ ಹೇಳಿಕೆಗೆ ಶಿವಣ್ಣ ಗರಂ
Actor Shiva Rajkumar: ಬಿಗ್ಸ್ಪರ್ಧಿ, ಕನ್ನಡಪರ ಹೋರಾಟಗಾರ ಪ್ರಶಾಂತ್ ಸಂಬರ್ಗಿ ತಮ್ಮ ಬಗ್ಗೆ ಹೇಳಿರುವ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್ ʼಅವರು ಈ ರೀತಿ ಹೇಳುವುದು ಸರಿಯಲ್ಲ, ಅವರು ಈ ಮಾತನ್ನು ಹಿಂಪಡೆಯಬೇಕು. ಹಣ ನಮ್ಮತ್ರಾನೂ ಇಲ್ವಾ, ಹಣಕ್ಕಾಗಿ ನಾನು ಪ್ರಚಾರಕ್ಕೆ ಬಂದಿಲ್ಲʼ ಎಂದು ಕಿಡಿಕಾರಿದ್ದಾರೆ.
ಹುಬ್ಬಳ್ಳಿ: ʼನಾನು ಹಣ ಪಡೆದು ಚುನಾವಣಾ ಪ್ರಚಾರಕ್ಕೆ ಬಂದಿಲ್ಲ. ಹೃದಯವಂತಿಕೆಯಿಂದ ಬಂದಿದ್ದೇನೆ. ನಾನಿಲ್ಲಿ ಬಂದಿರುವುದು ಒಬ್ಬ ಮನುಷ್ಯನಾಗಿ, ವ್ಯಾಪಾರಕ್ಕಾಗಿ ಅಲ್ಲ. ಪ್ರೀತಿ, ವಿಶ್ವಾಸ ನಂಬಿಕೆಯಿಂದ ಬಂದಿದ್ದೇನೆ ಹೊರತು, ಇಲ್ಲಿ ಯಾರನ್ನೂ ಟೀಕೆ ಮಾಡುವ ಸಲುವಾಗಿ ಬಂದಿಲ್ಲʼ ಎಂದಿರುವ ನಟ ಶಿವರಾಜ್ಕುಮಾರ್ ಪ್ರಶಾಂತ್ ಸಂಬರ್ಗಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ʼಹಣಕ್ಕಾಗಿ ನಾವ್ಯಾಕೆ ಇಲ್ಲಿಗೆ ಬರಬೇಕು, ಅಲ್ಲ ಬಳಿ ಹಣ ಇಲ್ವಾʼ ಎಂದು ಪ್ರಶ್ನಿಸಿರುವ ಶಿವಣ್ಣ ಸಂಬರ್ಗಿ ಈ ರೀತಿ ಹೇಳಿರುವುದು ಸರಿಯಲ್ಲʼ ಎಂದು ಕಿಡಿಕಾರಿದ್ದಾರೆ.
ಏನಿದು ಘಟನೆ?
ಬಿಗ್ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ನಟ ಶಿವ ರಾಜ್ಕುಮಾರ್ ಅವರ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿ ವಿವಾದಾತ್ಮಕ ಹೇಳಿಕೆಯೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.
ಈ ಪೋಸ್ಟ್ನಲ್ಲಿ ಅವರು ʼಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಚಿತ್ರಕ್ಕೆ ಸೈನ್ ಮಾಡಿಬಿಡುತ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಅಭ್ಯರ್ಥಿ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದುಕೊಂಡಿದ್ದಾರೆ.
ಸಂಬರ್ಗಿ ಅವರ ಈ ಪೋಸ್ಟ್ಗೆ ಹಲವರು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದಾರೆ. ಇನ್ನೂ ಹಲವರು ಸಂಬರ್ಗಿ ವಿರುದ್ಧ ಕಿಡಿಕಾರಿದ್ದಾರೆ.
ಇಂದು ಶಿವಣ್ಣ ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕೆ ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗರಂ ಆದ ಶಿವಣ್ಣ ಸಂಬರ್ಗಿ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಹರಿಹಾಯ್ದಿದ್ದಾರೆ.
ಪ್ರಶಾಂತ್ ಸಂಬರ್ಗಿ ಬಿಜೆಪಿ ಪರ ಎಂದು ಗುರುತಿಸಿಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಶಿವ ರಾಜ್ಕುಮಾರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕೂಡ ಹೇಳಿಕೆ ನೀಡಿ, ನಂತರ ಸಮಜಾಯಿಸಿ ನೀಡಿದ್ದನ್ನು ಇಲ್ಲಿ ಗಮನಿಸಬಹುದಾಗಿದೆ.
ಈ ಸುದ್ದಿಯನ್ನೂ ಓದಿ
Adipurush Trailer: ಮೇ 9ಕ್ಕೆ ಜಗತ್ತಿನ 70 ದೇಶಗಳಲ್ಲಿ ಏಕಕಾಲದಲ್ಲಿ ಆದಿಪುರುಷ್ ಚಿತ್ರದ ಟ್ರೇಲರ್ ರಿಲೀಸ್
ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಕೇವಲ ಭಾರತ ಮಾತ್ರವಲ್ಲದೆ ಜಗತ್ತಿನ 70 ದೇಶಗಳಲ್ಲಿ ಏಕಕಾಲದಲ್ಲಿ ಟ್ರೇಲರ್ ರಿಲೀಸ್ ಆಗಲಿದೆ.
Adipurush Trailer: ತನ್ನವೊಂದು ಟೀಸರ್ ಮೂಲಕವೇ ತೆಗಳಿಕೆಗೆ ಕಾರಣವಾಗಿತ್ತು ಆದಿಪುರುಷ್ (Adipurush) ಚಿತ್ರದ ಮೊದಲ ಟೀಸರ್. ಟೀಸರ್ನಲ್ಲಿ ರಾಮ, ಲಕ್ಷ್ಮಣ, ಹನುಮ ಮತ್ತು ರಾವಣನನ್ನು ತೋರಿಸಿದ ರೀತಿಗೆ, ವಿಎಫ್ಎಕ್ಸ್ ಬಳಕೆಗೆ ತೀವ್ರ ಟೀಕೆಗೆ ಗುರಿಯಾಗಿತ್ತು. ಹಿಂದೂ ಧಾರ್ಮಿಕ ಭಾವನೆ ನೀವು ಧಕ್ಕೆ ತರುತ್ತಿದ್ದೀರಿ ಎಂದು ಚಿತ್ರತಂಡಕ್ಕೂ ಎಚ್ಚರಿಕೆ ಸಂದೇಶಗಳು ರವಾನೆಯಾಗಿದ್ದವು. ಇದೀಗ ಹಿಂದೆ ಆದ ತಪ್ಪು ಮತ್ತೆ ಮರುಕಳಿಸಬಾರದೆಂಬ ಕಾರಣಕ್ಕೆ ಕೊಂಚ ಜಾಗರೂಕತೆಯಿಂದಲೇ ಟ್ರೇಲರ್ ಬಿಡುಗಡೆ ಮಾಡುತ್ತಿದೆ ಆದಿಪುರುಷ್ ಚಿತ್ರತಂಡ.
ವಿಭಾಗ