ಬಿಡುಗಡೆ ಮುಂದೂಡಿಕೆ ಆಗುತ್ತಿದ್ದ ʻಎಡಗೈಯೇ ಅಪಘಾತಕ್ಕೆ ಕಾರಣʼ ಚಿತ್ರಕ್ಕೆ ಕೈ ಜೋಡಿಸಿದ ಬ್ಲಿಂಕ್, ಶಾಖಾಹಾರಿ ಚಿತ್ರದ ನಿರ್ಮಾಪಕರು
ಕನ್ನಡ ಸುದ್ದಿ  /  ಮನರಂಜನೆ  /  ಬಿಡುಗಡೆ ಮುಂದೂಡಿಕೆ ಆಗುತ್ತಿದ್ದ ʻಎಡಗೈಯೇ ಅಪಘಾತಕ್ಕೆ ಕಾರಣʼ ಚಿತ್ರಕ್ಕೆ ಕೈ ಜೋಡಿಸಿದ ಬ್ಲಿಂಕ್, ಶಾಖಾಹಾರಿ ಚಿತ್ರದ ನಿರ್ಮಾಪಕರು

ಬಿಡುಗಡೆ ಮುಂದೂಡಿಕೆ ಆಗುತ್ತಿದ್ದ ʻಎಡಗೈಯೇ ಅಪಘಾತಕ್ಕೆ ಕಾರಣʼ ಚಿತ್ರಕ್ಕೆ ಕೈ ಜೋಡಿಸಿದ ಬ್ಲಿಂಕ್, ಶಾಖಾಹಾರಿ ಚಿತ್ರದ ನಿರ್ಮಾಪಕರು

ದಿಗಂತ್‌ ಮಂಚಾಲೆ ನಟನೆಯ ʻಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾ ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗುತ್ತಿತ್ತು. ಈಗ ʻಬ್ಲಿಂಕ್ʼ ಸಿನಿಮಾದ ನಿರ್ಮಾಪಕ ರವಿಚಂದ್ರನ್ ಎಜೆ ಹಾಗೂ ʻಶಾಖಾಹಾರಿʼ ಚಿತ್ರದ ನಿರ್ಮಾಪಕ ರಾಜೇಶ್ ಕೀಳಂಬಿ ಈ ಚಿತ್ರವನ್ನು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ.

ʻಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾಗಾಗಿ ಒಂದಾದ ಬ್ಲಿಂಕ್ ಮತ್ತು ಶಾಖಾಹಾರಿ ನಿರ್ಮಾಪಕರು
ʻಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾಗಾಗಿ ಒಂದಾದ ಬ್ಲಿಂಕ್ ಮತ್ತು ಶಾಖಾಹಾರಿ ನಿರ್ಮಾಪಕರು

ದೂದ್‌ಪೇಡ ದಿಗಂತ್‌ ಮಂಚಾಲೆ ನಟನೆಯ ʻಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾ ಸಿದ್ಧವಾಗಿಯೇ ಕೆಲ ತಿಂಗಳುಗಳು ಕಳೆದಿವೆ. ಆದರೂ ಅದ್ಯಾಕೋ ಈ ಸಿನಿಮಾ ಬಿಡುಗಡೆಗೆ ಕಾಲ ಕೂಡಿ ಬಂದಿಲ್ಲ. ಬಿಡುಗಡೆ ಮುಂದೂಡುತ್ತಲೇ ಬಂದಿತ್ತು ಈ ಸಿನಿಮಾತಂಡ. ಇದೀಗ ಈ ಚಿತ್ರ ಬಿಡುಗಡೆ ಆಗುವ ಕಾಲ ಸನ್ನಿಹಿತವಾಗಿದೆ. ಅಂದರೆ, ಇಬ್ಬರು ನಿರ್ಮಾಪಕರು ಆಪತ್ಬಾಂಧವರಾಗಿ ಬಂದಿದ್ದಾರೆ. 2024ರಲ್ಲಿ ರಿಲೀಸ್ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದ್ದ ಬ್ಲಿಂಕ್ ಮತ್ತು ಶಾಖಾಹಾರಿ ಸಿನಿಮಾದ ನಿರ್ಮಾಪಕರು ಒಟ್ಟಿಗೆ ಸೇರಿ ʻಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದಾರೆ.

ಸಮರ್ಥ್ ಕಡ್ಕೊಳ್ ಚೊಚ್ಚಲ ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆಯನ್ನು ಹೊತ್ತಿದ್ದಾರೆ. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ಮುಂದಕ್ಕೆ ಹೋಗುತ್ತಿತ್ತು. ಈಗ ಬ್ಲಿಂಕ್ ಸಿನಿಮಾದ ನಿರ್ಮಾಪಕ ರವಿಚಂದ್ರನ್ ಎಜೆ ಹಾಗೂ ಶಾಖಾಹಾರಿ ಚಿತ್ರದ ನಿರ್ಮಾಪಕ ರಾಜೇಶ್ ಕೀಳಂಬಿ ಈ ಸಿನಿಮಾವನ್ನ ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ. ಬ್ಲಿಂಕ್ ಸಿನಿಮಾದ ನಿರ್ಮಾಪಕ ರವಿಚಂದ್ರ ಈ ಚಿತ್ರಕ್ಕೆ ವಿತರಕರಾಗಿ ಎಂಟ್ರಿಕೊಟ್ಟರೆ ಶಾಖಾಹಾರಿ ನಿರ್ಮಾಪಕರು ಸಹ ನಿರ್ಮಾಪಕರಾಗಿದ್ದಾರೆ.

ಶಾಖಾಹಾರಿ ಸಿನಿಮಾ ಬಳಿಕ ನಿರ್ಮಾಪಕರು ಯಾವುದೇ ಸಿನಿಮಾವನ್ನು ಕೈಗೆತ್ತಿಕೊಂಡಿರಲಿಲ್ಲ. ಆದರೆ ಈಗ ದಿಗಂತ್‌ ʻಎಡಗೈಯೇ ಅಪಘಾತಕ್ಕೆ ಕಾರಣʼ ಸಿನಿಮಾದ ಮೇಲೆ ಕೈ ಇಟ್ಟಿದ್ದಾರೆ. ಚಿತ್ರರಂಗದ ಈಗಿನ ಪರಿಸ್ಥಿತಿಯಲ್ಲಿ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರು ಭಯ ಬೀಳುತ್ತಿದ್ದಾರೆ. ಆದರೆ ಇಂಥ ಸಮಯದಲ್ಲಿ ಇವರಿಬ್ಬರು ಈ ಸಿನಿಮಾ ರಿಲೀಸ್ ಮಾಡುತ್ತಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ.

ನಿರ್ಮಾಪಕರು ಹೇಳುವುದೇನು?

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಖಾಹಾರಿ ಸಿನಿಮಾದ ನಿರ್ಮಾಪಕ ರಾಜೇಶ್ ಕೀಳಂಬಿ, 'ಶಾಖಾಹಾರಿ ಸಿನಿಮಾ ಬಳಿಕ ಚಿತ್ರೀಕರಣ ಆಗಿರುವ ಅಥವಾ ರಿಲೀಸ್‌ಗೆ ರೆಡಿ ಇರುವ ಸಿನಿಮಾಗೆ ಕೋ ಪ್ರೊಡ್ಯೂಸರ್ ಆಗಲು ತಯಾರಿರಲಿಲ್ಲ. ಆದರೆ ಎಡಗೈ ಸಿನಿಮಾದ ಕಂಟೆಂಟ್ ಕ್ವಾಲಿಟಿ ಅದ್ಭುತವಾಗಿದೆ. ಈ ಸಿನಿಮಾದಿಂದ ನನ್ನ ಪ್ರೊಡಕ್ಷನ್ ವ್ಯಾಲ್ಯೂ ಕೂಡ ಜಾಸ್ತಿ ಆಗುತ್ತೆ. ಹಾಗಾಗಿ ಈ ಸಿನಿಮಾ ರಿಲೀಸ್ ಮಾಡಲು ಕೈಜೋಡಿಸಿದ್ದೇನೆ. ಶಾಖಾಹಾರಿ ಮತ್ತು ಬ್ಲಿಂಕ್ ಸಿನಿಮಾ ಮಾಡುವಾಗ ನಾವಿಬ್ಬರು ಹೊಸ ನಿರ್ಮಾಪಕರು. ಆದರೀಗ ಇಬ್ಬರ ಅನುಭವ ಈ ಸಿನಿಮಾಗೆ ಸಹಾಯವಾಗಲಿದೆ' ಎಂದಿದ್ದಾರೆ.

ತಂಡಕ್ಕೆ ಬಲ ಬಂದಿದೆ ಎಂದ ಸಮರ್ಥ್‌

ನಿರ್ದೇಶಕ ಸಮರ್ಥ್ ಈ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಇಬ್ಬರೂ ಸ್ಟ್ರಾಂಗ್ ನಿರ್ಮಾಪಕರ ಸೇರ್ಪಡೆಯಿಂದ ತಂಡಕ್ಕೆ ಮತ್ತಷ್ಟು ಬಲ ಬಂದಂತೆ ಆಗಿದೆ ಎಂದಿದ್ದಾರೆ. ʻಎರಡು ಸೂಪರ್ ಸಕ್ಸಸ್ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನನ್ನ ಸಿನಿಮಾಗೆ ಕೈ ಜೋಡಿಸಿರುವುದು ತುಂಬಾ ಖುಷಿಯಾಗಿದೆ. ಈಗಲೂ ಬ್ಲಿಂಕ್ ಮತ್ತು ಶಾಖಾಹಾರಿ ಸಿನಿಮಾದ ಬಗ್ಗೆ ಜನ ಮಾತಾಡ್ತಾ ಇದ್ದಾರೆ. ಅವರು ಈಗ ಈ ಸಿನಿಮಾ ರಿಲೀಸ್‌ಗೆ ಕೈಜೋಡಿಸಿರುವುದು ಖುಷಿ ತಂದಿದೆ' ಎನ್ನುತ್ತಾರೆ.

ರವಿಚಂದ್ರ ಎಜೆ ಮಾತನಾಡಿ, 'ಕಳೆದ ಆರು ತಿಂಗಳುಗಳಲ್ಲಿ ನನಗೆ ಅನೇಕ ಕನ್ನಡ ಸಿನಿಮಾಗಳನ್ನು ನೋಡುವ ಅವಕಾಶ ಸಿಕ್ಕಿದೆ. ಅವುಗಳಲ್ಲಿ ʻಎಡಗೈಯೇ ಅಪಘಾತಕ್ಕೆ ಕಾರಣʼ ನಿಜವಾಗಿಯೂ ಅತ್ಯುತ್ತಮವಾದ ಚಿತ್ರವಾಗಿದೆ. ನಮ್ಮ ಜನನಿ ಪಿಕ್ಚರ್ಸ್ ಬ್ಯಾನರ್‌ ಅಡಿಯಲ್ಲಿ, ಬಿಟಿಎಸ್‌, ನೋಡಿದವರು ಏನಂತಾರೆ, ಅನಾಮಧೇಯ ಅಶೋಕ್ ಕುಮಾರ್ ಮತ್ತು ಭಾವ ತೀರ ಯಾನ ಸೇರಿದಂತೆ ಹಲವಾರು ಮೆಚ್ಚುಗೆ ಪಡೆದ ಸಿನಿಮಾಗಳನ್ನು ವಿತರಿಸಿದ್ದೇವೆ. ಈಗ ಈ ಸಿನಿಮಾ ಕೈಗೆತ್ತಿಕೊಂಡಿದ್ದೇವೆ ಎಂದಿದ್ದಾರೆ.

ದಿಗಂತ್‌ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಅವರಿಗೆ ನಿಧಿ ಸುಬ್ಬಯ್ಯ ಜೋಡಿಯಾಗಿ ನಟಿಸಿದ್ದಾರೆ. ಧನು ಹರ್ಷ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.