ಕನ್ನಡ -ತೆಲುಗಿನಲ್ಲಿ ʻಹರಂ ಓಂʼ ಹಾಡು ಬಿಡುಗಡೆ; ಶೀಘ್ರದಲ್ಲಿ ತೆರೆಗೆ ಬರಲಿದೆ ದೀಕ್ಷಿತ್ ಶೆಟ್ಟಿ ನಟನೆಯ ʻಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀʼ
ಈಗಾಗಲೇ ʻರಂಗಿತರಂಗʼ, ʻಅವನೇ ಶ್ರೀಮನ್ನಾರಾಯಣʼ ಸೇರಿ ಒಂದು ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ ಪ್ರಕಾಶ್ ʻಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿʼ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ, ಬೃಂದಾ ಆಚಾರ್ಯ ಈ ಚಿತ್ರದ ನಾಯಕ, ನಾಯಕಿ. ಇದೀಗ ಇದೇ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ.

ಸ್ಯಾಂಡಲ್ವುಡ್ ಮಾತ್ರವಲ್ಲದೆ, ಪಕ್ಕದ ಟಾಲಿವುಡ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ ದಿಯಾ, ಬ್ಲಿಂಕ್ ಸಿನಿಮಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ. ಇದೀಗ ಇದೇ ದೀಕ್ಷಿತ್ ತಮ್ಮ ಮುಂದಿನ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿರುವ ʻಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿʼ ಸಿನಿಮಾದ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮೊದಲ ಹಾಡು ಎಂಆರ್ಟಿ ಮ್ಯೂಸಿಕ್ ಮೂಲಕ ಬಿಡುಗಡೆ ಆಗಿದೆ.
ಈಗಾಗಲೇ ʻರಂಗಿತರಂಗʼ, ʻಅವನೇ ಶ್ರೀಮನ್ನಾರಾಯಣʼ ಸೇರಿ ಒಂದು ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ ಪ್ರಕಾಶ್ ʻಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿʼ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದೀಕ್ಷಿತ್ ಶೆಟ್ಟಿ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದರೆ, ʻಪ್ರೇಮ ಪೂಜ್ಯಂʼ, ʻಕೌಸಲ್ಯ ಸುಪ್ರಜಾ ರಾಮʼ ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಅಭಿಷೇಕ್ ಎಂ ನಿರ್ದೇಶನ ಮಾಡಿದ್ದಾರೆ. ಇದೀಗ ಇದೇ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ.
ಇದೇ ಚಿತ್ರದ ಮೊದಲ ಹಾಡೀಗ ಬಿಡುಗಡೆ ಆಗಿದೆ. ನಾಗಾರ್ಜುನ ಶರ್ಮ ಬರೆದಿರುವ "ಹರ ಓಂ" ಎಂಬ ಶಿವನ ಕುರಿತಾದ ಚಿತ್ರದ ಹಾಡು ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಮಾಡಿ, ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಕನ್ನಡದಲ್ಲಿ ಶಿಲ್ಪ ಹಾಗೂ ತೆಲುಗಿನಲ್ಲಿ ಖ್ಯಾತ ಗಾಯಕಿ ಮಂಗ್ಲಿ ಹರ ಓಂ ಹಾಡಿಗೆ ಧ್ವನಿಯಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ. ಉಷಾ ಭಂಡಾರಿ ಹಾಗೂ ದರ್ಶನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಚಿತ್ರಕ್ಕಿದೆ.
ಕಳೆದ ವರ್ಷ ಬ್ಲಿಂಕ್.. ಈ ವರ್ಷ ಇದು..
ಕಳೆದ ವರ್ಷ ಇದೇ ಸಮಯಕ್ಕೆ ನನ್ನ ʻಬ್ಲಿಂಕ್ʼ ಚಿತ್ರ ಬಿಡುಗಡೆಯಾಗಿತ್ತು. ಒಂದು ವರ್ಷದ ನಂತರ ನಿಮ್ಮನೆಲ್ಲಾ ಭೇಟಿ ಮಾಡುತ್ತಿದ್ದೇನೆ. ಇದೀಗ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ತುಂಬಾ ಚೆನ್ನಾಗಿದೆ. ವಿಶೇಷವೆಂದರೆ ಈ ಹಾಡಿನಲ್ಲಿ ನನ್ನ ಗುರುಗಳು ಹಾಗೂ ನಾನು ಪಾಠ ಹೇಳಿ ಕೊಟ್ಟಿರುವ ಹುಡುಗರು ಅಭಿನಯಿಸಿದ್ದಾರೆ ಎಂದರು ನಾಯಕ ದೀಕ್ಷಿತ್ ಶೆಟ್ಟಿ.
"ಸಿಂಪಲ್ ಸುನಿ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ನಾನು, ರಕ್ಷಿತ್ ಶೆಟ್ಟಿ ಹಾಗೂ ಸಚಿನ್ ಅವರು ಸೇರಿ ಪಿನಾಕ ಎಂಬ ವಿ.ಎಫ್.ಎಕ್ಸ್ ಸ್ಟುಡಿಯೋ ಸಹ ನಡೆಸುತ್ತಿದ್ದೇವೆ. ನಿರ್ಮಾಪಕ ಪ್ರಕಾಶ್ ಅವರು "ಅವನೇ ಶ್ರೀಮನ್ನಾರಾಯಣ" ಚಿತ್ರದ ಸಮಯದಿಂದಲೂ ಪರಿಚಯ. ಈ ಚಿತ್ರದ ಕಥೆ ಕೇಳಿದ ಅವರು ನಿರ್ಮಾಣಕ್ಕೆ ಮುಂದಾದರು. "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಶೀಘ್ರದಲ್ಲಿ ಚಿತ್ರ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂಬುದು ನಿರ್ದೇಶಕ ಅಭಿಷೇಕ್ ಮಾತು.