21 ತಿಂಗಳ ಬಳಿಕ ಒಟಿಟಿಗೆ ಬಂದ ಕನ್ನಡದ ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾ; ಎಲ್ಲಿ ಸ್ಟ್ರೀಮಿಂಗ್‌? ಹೀಗಿದೆ ಮಾಹಿತಿ
ಕನ್ನಡ ಸುದ್ದಿ  /  ಮನರಂಜನೆ  /  21 ತಿಂಗಳ ಬಳಿಕ ಒಟಿಟಿಗೆ ಬಂದ ಕನ್ನಡದ ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾ; ಎಲ್ಲಿ ಸ್ಟ್ರೀಮಿಂಗ್‌? ಹೀಗಿದೆ ಮಾಹಿತಿ

21 ತಿಂಗಳ ಬಳಿಕ ಒಟಿಟಿಗೆ ಬಂದ ಕನ್ನಡದ ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾ; ಎಲ್ಲಿ ಸ್ಟ್ರೀಮಿಂಗ್‌? ಹೀಗಿದೆ ಮಾಹಿತಿ

ಪೊಲಿಟಿಕಲ್‌ ಥ್ರಿಲ್ಲರ್‌ ಜಾನರ್‌ನ ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ʻಬಯಲುಸೀಮೆʼ ಸಿನಿಮಾ ಇದೀಗ ಸುದೀರ್ಘ 21 ತಿಂಗಳ ಬಳಿಕ ಒಟಿಟಿಗೆ ಆಗಮಿಸಿದೆ.

21 ತಿಂಗಳ ಬಳಿಕ ಒಟಿಟಿಗೆ ಬಂದ ಕನ್ನಡದ ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾ
21 ತಿಂಗಳ ಬಳಿಕ ಒಟಿಟಿಗೆ ಬಂದ ಕನ್ನಡದ ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾ

ಕನ್ನಡದ ಸಿನಿಮಾವೊಂದು ಚಿತ್ರಮಂದಿರಗಳಲ್ಲಿ ತೆರೆಕಂಡು ಸುದೀರ್ಘ 21 ತಿಂಗಳ ಬಳಿಕ ಒಟಿಟಿಗೆ ಆಗಮಿಸಿದೆ. ಪೊಲಿಟಿಕಲ್‌ ಥ್ರಿಲ್ಲರ್‌ ಜಾನರ್‌ನ ಉತ್ತರ ಕರ್ನಾಟಕದ ಜವಾರಿ ಭಾಷೆಯ ಘಮ ಹೊತ್ತ ʻಬಯಲುಸೀಮೆʼ ಸಿನಿಮಾ ಇದೀಗ ಡಿಜಿಟಲ್‌ ಸ್ಟ್ರೀಮಿಂಗ್‌ಗೆ ಬಂದಿದೆ. ವರುಣ್ ಕಟ್ಟಿಮನಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹೆಸರೇ ಸೂಚಿಸುವಂತೆ, ಇದೊಂದು ಪಕ್ಕಾ ಉತ್ತರ ಕರ್ನಾಟಕ ಸೊಗಡಿರುವ ಚಿತ್ರ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಈ ಚಿತ್ರದ ಕಥಾವಸ್ತು. ಎಂಬತ್ತರ ದಶಕ ಹಾಗೂ ಈಗಿನ ಕಾಲಘಟ್ಟದಲ್ಲಿಯೂ ಈ ಕಥೆ ತೆರೆದುಕೊಳ್ಳಲಿದೆ.

ಇದೀಗ ಇದೇ ಸಿನಿಮಾ ಸುದೀರ್ಘ ದಿನಗಳ ಬಳಿಕ ಒಟಿಟಿಗೆ ಆಗಮಿಸಿದೆ. ನಿರ್ದೇಶನದ ಜತೆಗೆ ನಾಯಕನಾಗಿಯೂ ವರುಣ್‌ ಕಟ್ಟಿಮನಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದರೆ, ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ಲಣ್ಣವರ್, ಪ್ರದೀಪ್ ರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಗಾಯಿತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿಆರ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಲಕ್ಷ್ಮಣ್ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮಿ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್‌ ಮಾಡಲಾಗಿದೆ. ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ.

ಉತ್ತರ ಕರ್ನಾಟಕ ಭಾಗದ ಪೊಲಿಟಿಕಲ್, ಕ್ರೈಂ, ಅಲ್ಲಿನ ಸಂಸ್ಕೃತಿ ಎಲ್ಲವನ್ನು ಬಯಲುಸೀಮೆ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಕಮರ್ಶಿಯಲ್ ಎಲಿಮೆಂಟ್‌ಗಳನ್ನು ಇಟ್ಟುಕೊಂಡು ವಿಭಿನ್ನವಾಗಿ ಕಥೆಯನ್ನು ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ವಿಶೇಷ ಏನೆಂದರೆ ಇಡೀ ಸಿನಿಮಾ ಉತ್ತರಕರ್ನಾಟಕ ಶೈಲಿಯಲ್ಲಿದ್ದು, ಎಲ್ಲ ನಟರು ಆ ಸೊಗಡಿನಲ್ಲಿಯೇ ಚಿತ್ರಕ್ಕೆ ಡಬ್‌ ಮಾಡಿದ್ದಾರೆ.

ಯಾವ ಒಟಿಟಿಯಲ್ಲಿ ಸ್ಟ್ರೀಮಿಂಗ್‌?

'ಬಯಲುಸೀಮೆ' ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಆದರೆ, ಬಾಡಿಗೆ ಆಧಾರದ ಮೂಲಕ ಈ ಮೂವಿ ಸ್ಟ್ರೀಮಿಂಗ್‌ಗೆ ಲಗ್ಗೆ ಇಟ್ಟಿದೆ. ಪ್ರೈಮ್ ವಿಡಿಯೋದಲ್ಲಿ ರೂ.99 ಬಾಡಿಗೆ ಪಾವತಿಸಿ ಈ ಚಿತ್ರವನ್ನು ನೋಡಬಹುದು.

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.