Kichcha Sudeep: ತಮಿಳು ಭಿಕ್ಷುಕನಿಗೆ ಸಾಥ್ ನೀಡಿದ ಕಿಚ್ಚ ಸುದೀಪ್!
ತಮಿಳಿನ ನಟ ವಿಜಯ್ ಆಂಟೋನಿ ನಿರ್ದೇಶನದಲ್ಲಿ ಮೂಡಿಬಂದ ಭಿಕ್ಷುಕ 2 ಚಿತ್ರದ ಕನ್ನಡ ಟ್ರೇಲರ್ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ.
Kichcha Sudeep: ಕಾಲಿವುಡ್ನ ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕರೂ ಆಗಿರುವ ವಿಜಯ್ ಆಂಟೋನಿ (Vijay Antony) ಭಿಕ್ಷುಕ-2 (Bhikshuka 2) ಸಿನಿಮಾ ಮೂಲಕ ನಿರ್ದೇಶನದ ಅಖಾಡಕ್ಕಿಳಿದಿರುವುದು ಗೊತ್ತೇ ಇದೆ. ಪಿಚೈಕ್ಕಾರನ್ (pichaikkaran) ಸಿನಿಮಾದ ಸೀಕ್ವೆಲ್ ಆಗಿರುವ ಈ ಚಿತ್ರ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ತಯಾರಾಗಿದೆ. ಕನ್ನಡದಲ್ಲಿ ಭಿಕ್ಷುಕ-2 ಎಂಬ ಟೈಟಲ್ ನಡಿ ಮೂಡಿ ಬರ್ತಿದ್ದು, ಈ ಸಿನಿಮಾದ ಕನ್ನಡದ ಟ್ರೇಲರ್ ಅನ್ನು ಕಿಚ್ಚ ಸುದೀಪ್ (Kichcha Sudeep) ಬಿಡುಗಡೆ ಮಾಡಿ ನೆಚ್ಚಿನ ಗೆಳೆಯ ವಿಜಯ್ ಆಂಥೋನಿಗೆ ಶುಭ ಕೋರಿದ್ದಾರೆ.
ಪಿಚೈಕ್ಕಾರನ್ ಮೊದಲ ಭಾಗ ಅಭೂತಪೂರ್ವ ಯಶಸ್ಸು ಕಂಡಿತ್ತು. ಈ ಚಿತ್ರ ವಿಜಯ್ ಅಂಥೋನಿಗೆ ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಪಿಚೈಕ್ಕಾರನ್ ಸೀಕ್ವೆಲ್ ಮೂಲಕ ವಿಜಯ್ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ತಮ್ಮದೇ ವಿಜಯ್ ಆಂಟೋನಿ ಫಿಲ್ಮಂ ಕಾರ್ಪೊರೇಷನ್ಅಡಿ ಅವರೇ ನಿರ್ಮಿಸಿದ್ದು, ಪತ್ನಿ ಫಾತೀಮಾ ವಿಜಯ್ ಆಂಟೋನಿ ಭಿಕ್ಷುಕ-2 ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ.
ಮಲೇಷ್ಯಾದಲ್ಲಿ ಪಿಚೈಕಾರನ್-2 ಶೂಟಿಂಗ್ ನಡೆಯುತ್ತಿದ್ದ ವೇಳೆ ವಿಜಯ್ ಆಂಟೋನಿ ಗಂಭೀರ ಗಾಯಗೊಂಡಿದ್ದರು. ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಕೆ ಕಂಡಿರುವ ಅವರೀಗ ಪ್ರಮೋಷನ್ ಕಾರ್ಯಕ್ಕೆ ಸಜ್ಜಾಗಿದ್ದಾರೆ. ಅದರ ಮೊದಲ ಭಾಗವಾಗಿ ಭಿಕ್ಷುಕ-2 ಟ್ರೇಲರ್ ರಿಲೀಸ್ ಆಗಿದೆ. ಖ್ಯಾತ ಉದ್ಯಮಿ ವಿಜಯ್ ಮೂರ್ತಿಯನ್ನು ಸತ್ಯ ಕೊಲೆ ಮಾಡ್ತಾನೆ. ಕೊಲೆ ನಂತರ ಮುಂದೇನಾಗುತ್ತದೆ ಎಂಬ ಒಂದಷ್ಟು ಟ್ವಿಸ್ಟ್ ಅಂಡ್ ಟರ್ನ್ ಅಂಶಗಳು ಟ್ರೇಲರ್ನ ಹೈಲೆಟ್ಸ್.
ವಿಜಯ್ ಆಂಟೋನಿ ನಿರ್ದೇಶನದ ಈ ಚಿತ್ರದಲ್ಲಿ ದೇವ್ಗಿಲ್, ಹರೀಶ್ ಪೆರಾಡಿ, ಜಾನ್ ವಿಜಯ್, ರಾಧಾ ರವಿ, ಮನ್ಸೂರ್ ಅಲಿ ಖಾನ್, ವೈ ಜಿ ಮಹೇಂದ್ರನ್, ರಾಜಾ ಕೃಷ್ಣಮೂರ್ತಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಾವ್ಯ ಥಾಪರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ವಿಜಯ್ ಆಂಟೋನಿ ನಟನೆ ನಿರ್ದೇಶನದ ಜೊತೆಗೆ ಸಂಗೀತ, ಸಂಕಲನ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮೇ 19 ರಂದು ಕನ್ನಡ ಸೇರಿ ಪಂಚ ಭಾಷೆಯಲ್ಲಿ ಭಿಕ್ಷುಕ-2 ರಿಲೀಸ್ ಆಗಲಿದೆ.
ಈಗ ಈ ಚಿತ್ರದ ಟ್ರೇಲರ್ ರಿಲೀಸ್ ಮಾಡಿರುವ ಕಿಚ್ಚ ಸುದೀಪ್, ಚಿತ್ರದ ಕನ್ನಡದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಇಲ್ಲಿದೆ ನೋಡಿ ಭಿಕ್ಷುಕ ಚಿತ್ರದ ಟ್ರೇಲರ್.
Kichcha Sudeep: ಪ್ರಚಾರದ ನಡುವೆಯೇ ಫ್ಯಾನ್ಸ್ಗೆ ತಮ್ಮ ಮುಂದಿನ ಸಿನಿಮಾ ಬಗ್ಗೆ ಅಚ್ಚರಿಯ ಅಪ್ಡೇಟ್ ನೀಡಿದ ಕಿಚ್ಚ ಸುದೀಪ್
Kichcha Sudeep: ಸ್ಯಾಂಡಲ್ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ (Kichcha Sudeep) ಸದ್ಯ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಚುನಾವಣೆ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. ಬಿಜೆಪಿ (BJP) ಅಭ್ಯರ್ಥಿಗಳ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡುವೆಯೇ, ಅಭಿಮಾನಿಗಳ ಪ್ರೀತಿಯೂ ಕಿಚ್ಚನಿಗೆ ಸಿಕ್ಕಿದೆ. ಹೋದಲೆಲ್ಲ ಅವರನ್ನು ಅಷ್ಟೇ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಪ್ರೀತಿಯಿಂದಲೇ ತಂತಮ್ಮ ಊರಿಗೆ ಬರಮಾಡಿಕೊಂಡಿದ್ದಾರೆ. ಈ ಚುನಾವಣೆ ಗದ್ದಲದ ನಡುವೆಯೇ ತಮ್ಮ ಮುಂದಿನ ಸಿನಿಮಾದ ಅಪ್ಡೇಟ್ ಸಹ ನೀಡಿದ್ದಾರೆ ಸುದೀಪ್! ಪೂರ್ತಿ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ