ಕನ್ನಡ ಸುದ್ದಿ  /  Photo Gallery  /  Love 360 Movie Fame Praveen Kumar S New Movie Desai Launched

Desai Muhurtha: ‘ದೇಸಾಯಿ’ ಆದ ‘ಲವ್ 360’ ಚಿತ್ರದ ಹುಡುಗ; ಜಗವೇ ನೀನು ಗೆಳತಿಯೇ.. ಎಂದು ಹಾಡಿದ್ದ ನಾಯಕನ ಎರಡನೇ ಚಿತ್ರವಿದು..

  • Desai Muhurtha: ಉತ್ತರ ಕರ್ನಾಟಕ ಭಾಗದಲ್ಲಿ ಹಿಂದಿನಿಂದಲೂ ‘ದೇಸಾಯಿ’ ಮನೆತನಕ್ಕೆ ಅದರದೇ ಆದ ಪರಂಪರೆಯ ವೈಶಿಷ್ಟ್ಯವಿದೆ. ಇದನ್ನು ಸಿನಿಮಾ ಮೂಲಕ ತೆರೆಗೆ ತರುತ್ತಿದ್ದಾರೆ ನಿರ್ಮಾಪಕ ಮಹಾಂತೇಶ್ ವಿ ಚೊಳಚಗುಡ್ಡ. ‘ಲವ್ 360’ ಚಿತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದ ಪ್ರವೀಣ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ‌. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದೆ.

ಇತ್ತೀಚೆಗೆ ‘ದೇಸಾಯಿ’ ಚಿತ್ರದ ಮುಹೂರ್ತ ಸಮಾರಂಭ ಬಾಗಲಕೋಟೆಯ ಮುಚಖಂಡಿಯ ಶ್ರೀ ವೀರಭದ್ರೇಶ್ವರಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.  
icon

(1 / 7)

ಇತ್ತೀಚೆಗೆ ‘ದೇಸಾಯಿ’ ಚಿತ್ರದ ಮುಹೂರ್ತ ಸಮಾರಂಭ ಬಾಗಲಕೋಟೆಯ ಮುಚಖಂಡಿಯ ಶ್ರೀ ವೀರಭದ್ರೇಶ್ವರಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.  

ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕರಾದ ವೀರಣ್ಣ ಚರಂತಿಮಠ ಆರಂಭ ಫಲಕ ತೋರಿದರು.  ವನಶ್ರೀಮಠ ವಿಜಯಪುರದ ಡಾ. ಜಯಬಸವಕುಮಾರ ಮಹಾಸ್ವಾಮಿಗಳು ಕ್ಯಾಮೆರಾ ಚಾಲನೆ ನೀಡಿದರು.
icon

(2 / 7)

ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕರಾದ ವೀರಣ್ಣ ಚರಂತಿಮಠ ಆರಂಭ ಫಲಕ ತೋರಿದರು.  ವನಶ್ರೀಮಠ ವಿಜಯಪುರದ ಡಾ. ಜಯಬಸವಕುಮಾರ ಮಹಾಸ್ವಾಮಿಗಳು ಕ್ಯಾಮೆರಾ ಚಾಲನೆ ನೀಡಿದರು.

ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಯಿತು. ಗಣ್ಯರು ಚಿತ್ರತಂಡದ ಸದಸ್ಯರು ಮೊದಲಿಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‌
icon

(3 / 7)

ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಯಿತು. ಗಣ್ಯರು ಚಿತ್ರತಂಡದ ಸದಸ್ಯರು ಮೊದಲಿಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‌

ಇದೇ ವೇಳೆ ಮಾತನಾಡಿದ ನಾಯಕ ಪ್ರವೀಣ್‌  ಈ ಚಿತ್ರ ನನ್ನ ನಟನಾ ವೃತ್ತಿಯಲ್ಲಿ ಒಂದು ಹೊಸ ಅಧ್ಯಾಯ ಆಗಲಿದೆ ಅಂತಹ ಚಾಲೆಂಜಿಂಗ್ ಪಾತ್ರ ಇದಾಗಿದೆ. ಚಿತ್ರದ ಕಥೆ ತುಂಬಾ ಇಷ್ಟವಾಯಿತು‌‌ ಎಂದರು.   
icon

(4 / 7)

ಇದೇ ವೇಳೆ ಮಾತನಾಡಿದ ನಾಯಕ ಪ್ರವೀಣ್‌  ಈ ಚಿತ್ರ ನನ್ನ ನಟನಾ ವೃತ್ತಿಯಲ್ಲಿ ಒಂದು ಹೊಸ ಅಧ್ಯಾಯ ಆಗಲಿದೆ ಅಂತಹ ಚಾಲೆಂಜಿಂಗ್ ಪಾತ್ರ ಇದಾಗಿದೆ. ಚಿತ್ರದ ಕಥೆ ತುಂಬಾ ಇಷ್ಟವಾಯಿತು‌‌ ಎಂದರು.   

ಮೈಸೂರು ಮೂಲದ ರಾದ್ಯಾ ದೇಸಾಯಿ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ಕಲಾ ಬಿರಾದಾರ್, ಮಧುಸೂದನ್ ರಾವ್,  ನಟನ  ಪ್ರಶಾಂತ್, ವೀರೇಂದ್ರ, ಹರಿಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. 
icon

(5 / 7)

ಮೈಸೂರು ಮೂಲದ ರಾದ್ಯಾ ದೇಸಾಯಿ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ಕಲಾ ಬಿರಾದಾರ್, ಮಧುಸೂದನ್ ರಾವ್,  ನಟನ  ಪ್ರಶಾಂತ್, ವೀರೇಂದ್ರ, ಹರಿಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. 

ಮಹಾಂತೇಶ್ ವಿ ಚೊಳಚ್ಚಗುಡ್ಡ ನಿರ್ಮಾಣದ, ಯಲ್ಲಪ್ಪ ವಿ ಚೊಳಚಗುಡ್ಡ ಸಹ ನಿರ್ಮಾಪಕರಾಗಿರುವ ಈ ಚಿತ್ರದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಯಲಿದೆ.
icon

(6 / 7)

ಮಹಾಂತೇಶ್ ವಿ ಚೊಳಚ್ಚಗುಡ್ಡ ನಿರ್ಮಾಣದ, ಯಲ್ಲಪ್ಪ ವಿ ಚೊಳಚಗುಡ್ಡ ಸಹ ನಿರ್ಮಾಪಕರಾಗಿರುವ ಈ ಚಿತ್ರದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಯಲಿದೆ.

ಜೈ ಆನಂದ್ ಛಾಯಾಗ್ರಹಣ, ಸಾಯಿಕಾರ್ತಿಕ್ ಸಂಗೀತ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. 
icon

(7 / 7)

ಜೈ ಆನಂದ್ ಛಾಯಾಗ್ರಹಣ, ಸಾಯಿಕಾರ್ತಿಕ್ ಸಂಗೀತ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. 


ಇತರ ಗ್ಯಾಲರಿಗಳು