ಮತ್ತೊಂದು ಭಾವುಕ ಕಥೆಯ ಮೂಲಕ ಬಂದ ʻನಾನು ಮತ್ತು ಗುಂಡ 2ʼ; ಅಂದು ಶಿವರಾಜ್‌ ಕೆ ಆರ್‌ ಪೇಟೆ, ಇಂದು ರಾಕೇಶ್‌ ಅಡಿಗ
ಕನ್ನಡ ಸುದ್ದಿ  /  ಮನರಂಜನೆ  /  ಮತ್ತೊಂದು ಭಾವುಕ ಕಥೆಯ ಮೂಲಕ ಬಂದ ʻನಾನು ಮತ್ತು ಗುಂಡ 2ʼ; ಅಂದು ಶಿವರಾಜ್‌ ಕೆ ಆರ್‌ ಪೇಟೆ, ಇಂದು ರಾಕೇಶ್‌ ಅಡಿಗ

ಮತ್ತೊಂದು ಭಾವುಕ ಕಥೆಯ ಮೂಲಕ ಬಂದ ʻನಾನು ಮತ್ತು ಗುಂಡ 2ʼ; ಅಂದು ಶಿವರಾಜ್‌ ಕೆ ಆರ್‌ ಪೇಟೆ, ಇಂದು ರಾಕೇಶ್‌ ಅಡಿಗ

ಈ ಹಿಂದೆ ʻನಾನು ಮತ್ತು ಗುಂಡʼ ಸಿನಿಮಾ ತೆರೆಗೆ ಬಂದಿತ್ತು. ಆ ಚಿತ್ರದಲ್ಲಿ ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದರು. ಇದೀಗ ಅದೇ ಚಿತ್ರದ ಮುಂದುವರಿದ ಭಾಗ ʻನಾನು ಮತ್ತು ಗುಂಡ -2 ಮೂಲಕ ತೆರೆಗೆ ಬರಲು ಸಿದ್ದವಾಗಿದೆ. ಸಿದ್ದ ಆ ಚಿತ್ರಕ್ಕೂ ರಘು ಹಾಸನ್ ಆಕ್ಷನ್ ಕಟ್ ಹೇಳಿದ್ದಾರೆ.

ʻನಾನು ಮತ್ತು ಗುಂಡ 2ʼ ಚಿತ್ರದ ಟೀಸರ್‌ ಬಿಡುಗಡೆ
ʻನಾನು ಮತ್ತು ಗುಂಡ 2ʼ ಚಿತ್ರದ ಟೀಸರ್‌ ಬಿಡುಗಡೆ

ಗುಂಡ (ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆ ಇಟ್ಟುಕೊಂಡು ನಿರ್ಮಿಸಿದ್ದ ನಾನು ಮತ್ತು ಗುಂಡ ಚಿತ್ರ ಎರಡೂವರೆ ವರ್ಷಗಳ ಹಿಂದೆ ತೆರೆಕಂಡು ಜನಮನ ಸೂರೆಗೊಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘು ಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾದ ʻನಾನು ಮತ್ತು ಗುಂಡ -2 ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರನ್ನು ಕೆಜಿಎಫ್ ಖ್ಯಾತಿಯ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಪತ್ನಿ ಶೈಲಜಾ ಕಿರಗಂದೂರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ, ನಿರ್ದೇಶಕ ರಘು ಹಾಸನ್, ರಾಕೇಶ್ ಈ ಚಿತ್ರದಲ್ಲಿ ಶಿವರಾಜ್ ಅವರ ಮಗನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಕಾಪಿ ರೆಡಿಯಾಗಿದ್ದು, ಸದ್ಯದಲ್ಲೇ ಸೆನ್ಸಾರ್‌ಗೆ ಹೋಗಲಿದೆ. ಮೊದಲ ಭಾಗ ಮಾಡುವಾಗಲೇ 2ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್ ಕನ್ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದ್ದು, ಮೇ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಪ್ಲಾನಿದೆ ಎಂದರು.

ಪೊಯೆಮ್ ಪಿಕ್ಚರ್ಸ್ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ʻನಾನು ಮತ್ತು ಗುಂಡ-2ʼ ಚಿತ್ರದಲ್ಲಿ 6 ಹಾಡುಗಳಿದ್ದು, ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜಿಸಿದ್ದಾರೆ. ತನ್ವಿಕ್ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದ ಸಂಭಾಷಣೆ ಸಾಹಿತ್ಯವನ್ನು ರೋಹಿತ್ ರಮನ್ ಬರೆದಿದ್ದಾರೆ. ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ ನಿರ್ವಹಿಸಿದ್ದಾರೆ. ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಸೌಂಡ್ ಡಿಸೈನ್ ಮಾಡಿದ್ದಾರೆ.

ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ರಿಲೀಸ್‌ ಆಗಲಿದೆ. ಇನ್ನು ತಾರಾಗಣದಲ್ಲಿ ರಾಕೇಶ್ ಅಡಿಗ, ರಚನಾ ಇಂದರ್, ಜಿಜಿ, ಮಹಂತೇಶ್, ಶಿವರಾಜ್ ಕೆಆರ್ ಪೇಟೆ, ಬಾಲನಟ ಜೀವನ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಸಿಂಬನ ಮಗ ನಟಿಸಿದ್ದಾನೆ. ಸಿಂಬ ನಾಲ್ಕು ದಿನವಷ್ಟೇ ಶೂಟಿಂಗ್‌ನಲ್ಲಿ ಭಾಗವಹಿಸಿ ನಿಧನ ಹೊಂದಿದೆ. ಶಂಕರನ‌ ಮಗ ಹಾಗೂ ಸಿಂಬನ ಮಗನ ಪಾತ್ರದ ಮೂಲಕ ಭಾಗ 2 ಸಿನಿಮಾ ಮುಂದುವರೆಯಲಿದೆ. ಬಂಟಿ ಎಂಬ ನಾಯಿಯೂ ಈ ಚಿತ್ರದಲ್ಲಿದೆ.

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.