ಕನ್ನಡ ಸುದ್ದಿ  /  Entertainment  /  Ponniyin Selvan First Song Kirunage Released

Ponniyin Selvan Song Released: 'ಪೊನ್ನಿಯಿನ್‌ ಸೆಲ್ವನ್‌‌ 2' ಮೊದಲ ಹಾಡು ರಿಲೀಸ್‌.. ಏಪ್ರಿಲ್‌ನಲ್ಲಿ ಸಿನಿಮಾ ತೆರೆಗೆ

ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ಅಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾ ಬಳಗವಿರುವ ಸಿನಿಮಾ 'ಪೊನ್ನಿಯಿನ್ ಸೆಲ್ವನ್ -2'. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ.

ಕಿರುನಗೆ.. ಹಾಡು ರಿಲೀಸ್
ಕಿರುನಗೆ.. ಹಾಡು ರಿಲೀಸ್

ಕಳೆದ ವರ್ಷ ಸೆಪ್ಟೆಂಬರ್‌ 30 ರಂದು 'ಪೊನ್ನಿಯಿನ್‌ ಸೆಲ್ವನ್‌' ಭಾಗ 1 ತೆರೆ ಕಂಡು ಸಿನಿಪ್ರಿಯರ ಮೆಚ್ಚುಗೆ ಗಳಿಸಿತ್ತು. ಮಣಿರತ್ನಂ ನಿರ್ದೇಶನದಲ್ಲಿ ತಯಾರಾದ ಸಿನಿಮಾ ಬಾಕ್ಸ್‌ ಆಫೀಸಿನಲ್ಲಿ 500 ಕೋಟಿ ರೂಪಾಯಿ ಲಾಭ ಮಾಡಿತ್ತು. ಇದೀಗ ಭಾಗ 2 ತೆರೆಗೆ ಬರಲು ಸಿದ್ದವಾಗಿದೆ.

'ಪೊನ್ನಿಯಿನ್ ಸೆಲ್ವನ್-2' ಏಪ್ರಿಲ್ 28ಕ್ಕೆ ವಿಶ್ವಾದ್ಯಂತ ತೆರೆ ಕಾಣುತ್ತಿದೆ. ಈಗಾಗಲೇ ಟೀಸರ್ ಮೂಲಕ ಸೀಕ್ವೆಲ್ 2 ಮೋಡಿ ಮಾಡಲು ಶುರುವಿಟ್ಟಿದೆ. ಇತ್ತೀಚೆಗೆ ಚಿತ್ರತಂಡ ಕಿರುನಗೆ.. ಹೆಸರಿನ ಮೊದಲ ಲಿರಿಕಲ್ ವೀಡಿಯೋ ಹಾಡು ರಿಲೀಸ್‌ ಮಾಡಿದೆ. ಮ್ಯೂಸಿಕ್ ಮಾಂತ್ರಿಕ ಎ.ಆರ್. ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಕಿರುನಗೆ.. ಹಾಡಿಗೆ ಜಯಂತ್ ಕಾಯ್ಕಿಣಿ ಚೆಂದದ ಸಾಲುಗಳನ್ನು ಪೋಣಿಸಿದ್ದು, ಗಾಯಕಿ ರಕ್ಷಿತಾ ಸುರೇಶ್ ಇಂಪಾದ ದನಿ ನೀಡಿದ್ದಾರೆ. ಈ ಹಾಡು ಕೇಳುಗರ ಮನ ಸೆಳೆಯುತ್ತಿದೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ಅಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾ ಬಳಗವಿರುವ ಸಿನಿಮಾ 'ಪೊನ್ನಿಯಿನ್ ಸೆಲ್ವನ್ -2'. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್. ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿದೆ.

ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ಕಾದಂಬರಿ 'ಪೊನ್ನಿಯಿನ್ ಸೆಲ್ವನ್' ಆಧಾರಿತ ಚಿತ್ರವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಸೀಕ್ವೆಲ್ ವರ್ಲ್ ವೈಡ್ ಅಭೂತ ಪೂರ್ವ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ ಸೀಕ್ವೆಲ್ ದಾಖಲೆ ಸೃಷ್ಟಿ ಮಾಡಲು ಸಿದ್ಧವಾಗಿದೆ. ಏಪ್ರಿಲ್ 28ಕ್ಕೆ 'ಪೊನ್ನಿಯಿನ್ ಸೆಲ್ವನ್' ಯಾವ ರೀತಿ ಮ್ಯಾಜಿಕ್‌ ಸೃಷ್ಟಿಸಲಿದೆ ಅನ್ನೋದನ್ನು ಕಾದು ನೋಡಬೇಕು.

ಇನ್ನಷ್ಟು ಮನರಂಜನೆ ಸುದ್ದಿಗಳು

ಮಾನಸಿ ಸುಧೀರ್‌ ಹೊಸ ಸಿನಿಮಾ ಟ್ರೇಲರ್‌ ರಿಲೀಸ್‌.. ಕಾಂತಾರ ಕಮಲಕ್ಕನ 'ಜುಗಲ್‌ ಬಂದಿ' ಹೇಗಿದೆ ನೋಡಿ

ಮಾನಸಿ ಸುಧೀರ್‌ ತಮ್ಮ ವಿಭಿನ್ನ ಹಾಡುಗಳು ಹಾಗೂ ಅಭಿನಯದ ಮೂಲಕ ಸೋಷಿಯಲ್‌ ಮೀಡಿಯಾ ಬಳಕೆದಾರರಿಗೆ ಬಹಳ ಪರಿಚಯ. ಇದಾದ ನಂತರ ಅವರಿಗೆ 'ಕಾಂತಾರ' ಸಿನಿಮಾದಲ್ಲಿ ನಟಿಸುವ ಅವಕಾಶ ಒಲಿದುಬಂತು. ವಯಸ್ಸು ಚಿಕ್ಕದಾದರೂ ಕಾಂತಾರದಲ್ಲಿ ಮಾನಸಿ, ರಿಷಬ್‌ ಶೆಟ್ಟಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಇದೀಗ ಅವರ ಮತ್ತೊಂದು ಸಿನಿಮಾ 'ಜುಗಲ್ ಬಂದಿ' ಟ್ರೇಲರ್‌ ಬಿಡುಗಡೆ ಆಗಿದೆ. ಪೂರ್ತಿ ಸ್ಟೋರಿ ಓದಲು ಈ ಲಿಂಕ್‌ ಒತ್ತಿ.

ರಾಮ್‌ ಚರಣ್‌, ಜ್ಯೂ. ಎನ್‌ಟಿಆರ್‌ ಫ್ಯಾನ್ಸ್‌ ಬಳಿ ಕ್ಷಮೆ ಕೇಳಿದ ಕೀರವಾಣಿ ಪುತ್ರ.. ಕಾರಣವೇನು?

ಇತ್ತೀಚೆಗೆ ಅಲ್ಲು ಅರ್ಜುನ್‌ ಕೂಡಾ ಆಸ್ಕರ್‌ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದರು. ಆದರೆ ಜ್ಯೂನಿಯರ್‌ ಎನ್‌ಟಿಆರ್‌ ಅವರನ್ನು ತೆಲುಗಿನ ಹೆಮ್ಮೆ ಎಂದಿದ್ದಕ್ಕೆ ರಾಮ್‌ ಚರಣ್‌ ಅಭಿಮಾನಿಗಳು ಕೋಪಗೊಂಡಿದ್ದರು. ಆದರೆ ಅಲ್ಲು ಅರ್ಜುನ್‌ ಈ ಕಮೆಂಟ್‌ಗಳಿಗೆ ತಲೆ ಕೆಡಿಸಿಕೊಂಡಿರಲಿಲ್ಲ. ಇದೀಗ ನಾಟು ನಾಟು ಹಾಡಿನ ಗಾಯಕ, ಸಂಗೀತ ನಿರ್ದೇಶಕ ಎಂ. ಎಂ. ಕೀರವಾಣಿ ಪುತ್ರ ಕಾಲ ಭೈರವ ಹಂಚಿಕೊಂಡಿರುವ ಪೋಸ್ಟ್‌ಗೆ ರಾಮ್‌ ಚರಣ್‌ ಹಾಗೂ ಜ್ಯೂ. ಎನ್‌ಟಿಆರ್‌ ಅಭಿಮಾನಿಗಳು ಗರಂ ಆಗಿದ್ದಾರೆ. ಕಮೆಂಟ್‌ಗಳನ್ನು ನೋಡುತ್ತಿದ್ದಂತೆ ಎಚ್ಚೆತ್ತ ಕಾಲ ಭೈರವ ಮತ್ತೊಂದು ಟ್ವೀಟ್‌ ಮಾಡಿದ್ದಾರೆ. ಏನಿದು ಸುದ್ದಿ, ತಿಳಿಯಲು ಈ ಲಿಂಕ್‌ ಕ್ಲಿಕ್‌ ಮಾಡಿ.

IPL_Entry_Point