ʻಮಂಕುತಿಮ್ಮನ ಕಗ್ಗʼ ಚಿತ್ರದ ಟ್ರೇಲರ್‌ ಬಿಡುಗಡೆ; ಮೇ ತಿಂಗಳಲ್ಲಿ ಸಿನಿಮಾ ರೂಪದಲ್ಲಿ ಡಿವಿಜಿ ಬಾಲ್ಯ ಕಥನ
ಕನ್ನಡ ಸುದ್ದಿ  /  ಮನರಂಜನೆ  /  ʻಮಂಕುತಿಮ್ಮನ ಕಗ್ಗʼ ಚಿತ್ರದ ಟ್ರೇಲರ್‌ ಬಿಡುಗಡೆ; ಮೇ ತಿಂಗಳಲ್ಲಿ ಸಿನಿಮಾ ರೂಪದಲ್ಲಿ ಡಿವಿಜಿ ಬಾಲ್ಯ ಕಥನ

ʻಮಂಕುತಿಮ್ಮನ ಕಗ್ಗʼ ಚಿತ್ರದ ಟ್ರೇಲರ್‌ ಬಿಡುಗಡೆ; ಮೇ ತಿಂಗಳಲ್ಲಿ ಸಿನಿಮಾ ರೂಪದಲ್ಲಿ ಡಿವಿಜಿ ಬಾಲ್ಯ ಕಥನ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಿ.ವಿ. ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ ʻಮಂಕುತಿಮ್ಮನ ಕಗ್ಗʼ ಇದೀಗ ಸಿನಿಮಾ ರೂಪದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ರಾಜ ರವಿಶಂಕರ್‌ ಈ ಸಿನಿಮಾ ನಿರ್ದೇಶನ ಮಾಡಿದ್ದು, ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ.

ʻಮಂಕುತಿಮ್ಮನ ಕಗ್ಗʼ ಚಿತ್ರದ ಟ್ರೇಲರ್‌ ಬಿಡುಗಡೆ; ಮೇ ತಿಂಗಳಲ್ಲಿ ಸಿನಿಮಾ ರೂಪದಲ್ಲಿ ಡಿವಿಜಿ ಬಾಲ್ಯ ಕಥನ
ʻಮಂಕುತಿಮ್ಮನ ಕಗ್ಗʼ ಚಿತ್ರದ ಟ್ರೇಲರ್‌ ಬಿಡುಗಡೆ; ಮೇ ತಿಂಗಳಲ್ಲಿ ಸಿನಿಮಾ ರೂಪದಲ್ಲಿ ಡಿವಿಜಿ ಬಾಲ್ಯ ಕಥನ

ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಿ.ವಿ. ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ ʻಮಂಕುತಿಮ್ಮನ ಕಗ್ಗʼ ಇದೀಗ ಸಿನಿಮಾ ರೂಪದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್, ಡಿವಿಜಿ ಅವರ ʻಮಂಕುತಿಮ್ಮನ ಕಗ್ಗʼವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದ್ದು ಮೇ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.

ಚಿತ್ರದ ಬಗ್ಗೆ ನಿರ್ದೇಶಕರ ಮಾತು

"ಈ ಚಿತ್ರದಲ್ಲಿ‌‌ ಡಿವಿಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ಬಾಲ್ಯದಲ್ಲಿ ಡಿವಿಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರ ಮಾವ ತಿಮ್ಮಣ್ಣ ಮೇಷ್ಟ್ರು. ಸೋದರ ಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿವಿಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮೇ ಎರಡನೇ ವಾರ ಸಿನಿಮಾ ತೆರೆಗೆ ಬರಲಿದೆ" ಎಂದರು ನಿರ್ದೇಶಕ ರಾಜ ರವಿಶಂಕರ್.‌

ಹಲವು ವರ್ಷಗಳಿಂದ ಪ್ರಸಾದನ ಕಲಾವಿದನಾಗಿ ಕನ್ನಡ ಚಿತ್ರರಂಗದಲ್ಲಿದ್ದೇನೆ. ಇಪ್ಪತ್ತು ವರ್ಷಗಳ ಹಿಂದೆ ʻಅವಳೆ ನನ್ನ ಗೆಳತಿʼ ಚಿತ್ರ ನಿರ್ಮಾಣ ಮಾಡಿದ್ದೆ. ಇದು ಎರಡನೇ ಚಿತ್ರ. ಡಿವಿಜಿ ಅವರ ಚಿತ್ರ ಮಾಡಿರುವುದಕ್ಕೆ ಹೆಮ್ಮೆ ಇದೆ ಎಂದು ನಿರ್ಮಾಪಕ ಶಿವಕುಮಾರ್ ತಿಳಿಸಿದರು. ತಿಮ್ಮಣ್ಣ ಮೇಷ್ಟ್ರು ಪಾತ್ರ ಮಾಡಿರುವುದು ಬಹಳ ಖುಷಿಯಾಗಿದೆ ಎಂದರು ಹಿರಿಯ ನಟ ರಾಮಕೃಷ್ಣ. ಚಿತ್ರದಲ್ಲಿ ನಟಿಸಿರುವ ಭವ್ಯಶ್ರೀ ರೈ, ರವಿ ನಾರಾಯಣ್, ಓಂ ಸಾಯಿಪ್ರಕಾಶ್, ಮಾಸ್ಟರ್ ರಣವೀರ್ ಹಾಗೂ ಸಂಗೀತ ನಿರ್ದೇಶಕ ಎ.ಟಿ. ರವೀಶ್ ಮುಂತಾದವರು ʻಮಂಕುತಿಮ್ಮನ ಕಗ್ಗʼ ಚಿತ್ರದ ಕುರಿತು ಮಾತನಾಡಿದರು.

ಎನ್ ಎ ಶಿವಕುಮಾರ್ ನಿರ್ಮಿಸಿರುವ ಹಾಗೂ ಮೀನಾ‌ ಶಿವಕುಮಾರ್ ಅವರ ಸಹ ನಿರ್ಮಾಣ ಈ ಚಿತ್ರಕ್ಕಿದೆ. ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ರಾಮೋಹಳ್ಳಿ ಶ್ರೀಗಳು ಸಾನಿಧ್ಯ ವಹಿಸಿದ್ದರು. ಸಾ.ರಾ. ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಕಾರ್ಯದರ್ಶಿ ಪ್ರವೀಣ್ ಕುಮಾರ್, ನಿರ್ದೇಶಕ ಸಾಯಿಪ್ರಕಾಶ್, ನಿರ್ದೇಶಕಿ, ನಟಿ ರೂಪ ಅಯ್ಯರ್, ನಟ ಸುಂದರರಾಜ್, ಸಂಗೀತ ನಿರ್ದೇಶಕ ವಿ.ಮನೋಹರ್, ಸಂಗಮೇಶ್ ಉಪಾಸೆ ಅನೇಕ ಗಣ್ಯರು ಟ್ರೇಲರ್ ಅನಾವರಣ ಕಾರ್ಯಕ್ರಮದಲ್ಲಿದ್ದರು.‌

Manjunath B Kotagunasi

TwittereMail
ಮಂಜುನಾಥ ಕೊಟಗುಣಸಿ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಚೀಫ್‌ ಕಂಟೆಂಟ್‌ ಪ್ರೊಡ್ಯೂಸರ್‌, ಮನರಂಜನೆ ವಿಭಾಗದಲ್ಲಿ ಕಾರ್ಯನಿರ್ವಹಣೆ. ಈ ಮೊದಲು ವಿಜಯವಾಣಿ, ವಿಶ್ವವಾಣಿ ಪತ್ರಿಕೆಗಳು ಮತ್ತು ಟಿವಿ9 ಸುದ್ದಿವಾಹಿನಿಯ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಕೆಲಸ ಮಾಡಿದ ಅನುಭವ. ಸಿನಿಮಾ ಮೋಹಿ, ಕ್ರಿಕೆಟ್‌ ಪ್ರಿಯ. ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ.