ಕನ್ನಡ ಸುದ್ದಿ  /  ಮನರಂಜನೆ  /  Rishab Shetty Kannada Speech: ವಿಶ್ವಸಂಸ್ಥೆಯಲ್ಲಿ ಕನ್ನಡ ಮಾತನಾಡಿದ ರಿಷಬ್‌ ಶೆಟ್ಟಿ... ವೈರಲ್‌ ಆಗ್ತಿದೆ ವಿಡಿಯೋ

Rishab Shetty Kannada Speech: ವಿಶ್ವಸಂಸ್ಥೆಯಲ್ಲಿ ಕನ್ನಡ ಮಾತನಾಡಿದ ರಿಷಬ್‌ ಶೆಟ್ಟಿ... ವೈರಲ್‌ ಆಗ್ತಿದೆ ವಿಡಿಯೋ

ರಿಷಬ್‌ ಶೆಟ್ಟಿ ಕನ್ನಡದಲ್ಲಿ ಮಾತನಾಡಿರುವ ಕೆಲವೇ ಸೆಕೆಂಡ್‌ಗಳ ವಿಡಿಯೋ ಮಾತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಪೂರ್ತಿ ಭಾಷಣದ ವಿಡಿಯೋ ಇರಬೇಕಿತ್ತು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿದ ರಿಷಬ್‌ ಶೆಟ್ಟಿ
ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿದ ರಿಷಬ್‌ ಶೆಟ್ಟಿ

ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಸದ್ಯಕ್ಕೆ ಸ್ವಿಟ್ಜರ್ಲೆಂಡ್‌ಲ್ಲಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ರಿಷಬ್‌ ಶೆಟ್ಟಿ ಕೂಡಾ ಭಾಗವಹಿಸಿದ್ದು, ಪರಿಸರ ಸಂರಕ್ಷಣೆ ಕುರಿತಾಗಿ ಕನ್ನಡದಲ್ಲೇ ಮಾತಾಡಿದ್ದಾರೆ. ಈ 18 ಸೆಕೆಂಡ್‌ಗಳ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು ಕನ್ನಡಿಗರು ರಿಷಬ್‌ ಶೆಟ್ಟಿ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

''ಎಲ್ಲರಿಗೂ ನಮಸ್ಕಾರ, ನಾನು ರಿಷಬ್‌ ಶೆಟ್ಟಿ, ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯ ನಿರ್ವಹಿಸುತ್ತಿರುವ ಭಾರತದ ಏಕೋಪಾಸ್‌ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ- ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ಧೇಶ'' ಎಂದು ಹೇಳುವ ಪುಟ್ಟ ವಿಡಿಯೋ ತುಣುಕು ಹರಿದಾಡುತ್ತಿದೆ. ನವೀನ್‌ ಸಾಗರ್‌ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಕನ್ನಡದಲ್ಲಿ ಮಾತನಾಡಿರುವ ಕೆಲವೇ ಸೆಕೆಂಡ್‌ಗಳ ವಿಡಿಯೋ ಮಾತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಪೂರ್ತಿ ಭಾಷಣದ ವಿಡಿಯೋ ಇರಬೇಕಿತ್ತು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೇನೇ ಇರಲಿ, ಕರ್ನಾಟಕದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದು ಕನ್ನಡಿಗರಿಗೆ ಬಹಳ ಹೆಮ್ಮೆಯಾಗುತ್ತಿದೆ. ವೈರಲ್‌ ಆಗುತ್ತಿರುವ ವಿಡಿಯೋಗೆ ತೆಲುಗು ಮಂದಿ ಕೂಡಾ ಕಮೆಂಟ್‌ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಮಾರ್ಚ್‌ 17ಕ್ಕೆ ಜಿನಿವಾದಲ್ಲಿ 'ಕಾಂತಾರ' ಸಿನಿಮಾ ಪ್ರದರ್ಶನ

ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್ ಹಾಗೂ ಕೆಲವು ಅಂತಾರಾಷ್ಟ್ರೀಯ ಸಂಸ್ಥೆಗಳು ಆಯೋಜಿಸಿರುವ ಕಾರ್ಯಕ್ರಮದಲ್ಲಿ 'ಕಾಂತಾರ' ಸಿನಿಮಾ ಪ್ರದರ್ಶನವಾಗಲಿದೆ. ಮಾರ್ಚ್ 17 ರ ಸಂಜೆ ಜಿನಿವಾದ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್‌ನಲ್ಲಿ 'ಕಾಂತಾರ' ಚಿತ್ರ ಪ್ರದರ್ಶನವಾಗಲಿದೆ. ಸಿನಿಮಾ ಪ್ರದರ್ಶನದ ನಂತರ ರಿಷಭ್ ಶೆಟ್ಟಿ, ಔತಣಕೂಟದಲ್ಲಿ ಭಾಗವಹಿಸಿ 'ಕಾಂತಾರ' ಚಿತ್ರದ ಕುರಿತು ಮಾತನಾಡಲಿದ್ದಾರೆ.

ಈ ಚಿತ್ರವನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುವುದಾಗಿ ರಿಷಬ್‌ ಶೆಟ್ಟಿ ಅನೇಕ ಬಾರಿ ಹೇಳಿದ್ದಾರೆ. ಮಾರ್ಚ್ 17 ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಅದೇ ದಿನ ಜಿನಿವಾದಲ್ಲಿ 'ಕಾಂತಾರ' ಸಿನಿಮಾ ಪ್ರದರ್ಶನಗೊಳ್ಳುತ್ತಿರುವುದು ನಿಜಕ್ಕೂ ವಿಶೇಷ. ಈ ಪ್ರದರ್ಶನವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುವುದಾಗಿ ರಿಷಬ್‌ ಶೆಟ್ಟಿ ತಿಳಿಸಿದ್ದಾರೆ.

ಶೂಟಿಂಗ್‌ ಮುಗಿಸಿದ ರಿಷಬ್‌ ಶೆಟ್ಟಿ ನಿರ್ಮಾಣದ ಹೊಸ ಚಿತ್ರ

ರಿಷಬ್‌ ಶೆಟ್ಟಿ , ಕನ್ನಡ ಚಿತ್ರರಂಗದಲ್ಲಿ ನಟನಾಗಿ ಮಾತ್ರವಲ್ಲದೆ ನಿರ್ದೇಶಕನಾಗಿ , ನಿರ್ಮಾಪಕನಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. 2018 ರಲ್ಲಿ ರಿಷಬ್‌ ಶೆಟ್ಟಿ ಮೊದಲ ಬಾರಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡು ಚಿತ್ರದ ಮೂಲಕ ನಿರ್ಮಾಪಕರಾಗಿ ಗುರುತಿಸಿಕೊಂಡರು. ಕಥಾ ಸಂಗಮ, ಹೀರೋ, ಪೆದ್ರೋ, ಶಿವಮ್ಮ ಸಿನಿಮಾಗಳಿಗೆ ಕೂಡಾ ರಿಷಬ್‌ ಶೆಟ್ಟಿ ಬಂಡವಾಳ ಹೂಡಿದ್ದಾರೆ. ಇದೀಗ 'ವಾಘಚಿಪಾಣಿ' ಎಂಬ ಮತ್ತೊಂದು ಸಿನಿಮಾ ಸದ್ದಿಲ್ಲದೆ ಶೂಟಿಂಗ್‌ ಮುಗಿಸಿದೆ. 'ವಾಘಚಿಪಾಣಿ' ಚಿತ್ರವನ್ನು ನಟೇಶ್‌ ಹೆಗಡೆ ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಶಿರಸಿ ಹಾಗೂ ಸುತ್ತಮುತ್ತ ಕಳೆದ 35 ದಿನಗಳಿಂದ ಚಿತ್ರೀಕರಣ ಮಾಡಲಾಗಿದೆ. 'ವಾಘಚಿಪಾಣಿ' ಸಿನಿಮಾ, ರಿಷಬ್‌ ಶೆಟ್ಟಿ ಹಾಗೂ ನಟೇಶ್‌ ಹೆಗ್ಡೆ ಕಾಂಬಿನೇಶನ್‌ನ ಎರಡನೇ ಸಿನಿಮಾ ಆಗಿದೆ.

IPL_Entry_Point