ಕನ್ನಡದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಗೋವಾ ಸಿಎಂ ಪ್ರಮೋದ್‌ ಸಾವಂತ್‌
ಕನ್ನಡ ಸುದ್ದಿ  /  ಮನರಂಜನೆ  /  ಕನ್ನಡದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಗೋವಾ ಸಿಎಂ ಪ್ರಮೋದ್‌ ಸಾವಂತ್‌

ಕನ್ನಡದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಹಾಡು ಬಿಡುಗಡೆ ಮಾಡಿದ ಗೋವಾ ಸಿಎಂ ಪ್ರಮೋದ್‌ ಸಾವಂತ್‌

ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಹಾಡನ್ನು ಗೋವಾ ಸಿಎಂ ಪ್ರಮೋದ ಸಾವಂತ್ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಹಾಡು ಬಿಡುಗಡೆ
ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಹಾಡು ಬಿಡುಗಡೆ

Samartha Sadguru Sri Sangameshwara Maharajaru: ಸ್ಯಾಂಡಲ್‌ವುಡ್‌ನಲ್ಲಿ ನಿರ್ಮಾಣವಾಗಿರುವ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಹಾಡನ್ನು ಗೋವಾ ಸಿಎಂ ಪ್ರಮೋದ ಸಾವಂತ್ ಇತ್ತೀಚೆಗೆ ಶ್ರೀಮದ್ ಭಾಗವತ್ ಸಪ್ತಾಹ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯ ಶ್ರೀ ಸದ್ಗುರು ಪ್ರಭುಜಿ ಮಹಾರಾಜರ ದಿವ್ಯಸಾನಿಧ್ಯ, ಶ್ರೀ ಸುದರ್ಶನ್ ಮಹಾರಾಜರು ಖಡಕಿಮಠ ಪಂಡರಾಪುರ ರವರ ಉಪಸ್ಥಿತಿಯಲ್ಲಿ KANNADAOTT. ORG ವೆಬ್ಸೈಟ್ ಮೂಲಕ ಬಿಡುಗಡೆಯಾಗಿದೆ.

ಫಳಲೇ ಭಾಗ್ಯ ಮಾಝೆ ಧನ್ಯ..

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಸದ್ಗುರು ಪ್ರಭುಜೀ ಮಹಾರಾಜರ ಮಾರ್ಗದರ್ಶನದಲ್ಲಿ ಮಾಧವಾನಂದ ಯೋ ಶೇಗುಣಸಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು "ಫಳಲೇ ಭಾಗ್ಯ ಮಾಝೆ ಧನ್ಯ ಝಾಲೋ ಸಂಸಾರಿ.. ವಿಠ್ಠಲ ವಿಠ್ಠಲ... ಹರಿಭಕ್ತಿಯ ಮರಾಠಿ ಸಾಲುಗಳ ಈ ಹಾಡನ್ನು ರವೀಂದ್ರ ಸೊರಗಾವಿ, ಎ ಟಿ ರವೀಶ್ ಹಾಡಿದ್ದಾರೆ. ಎ ಟಿ ರವೀಶ್ ಸಂಗೀತ ನೀಡಿದ್ದಾರೆ.

ಕನ್ನಡ ಚಿತ್ರದ ಮರಾಠಿ ಹಾಡು

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೆ ಮೊಟ್ಟ ಮೊದಲ ಬಾರಿಗೆ ಗೋವಾದಲ್ಲಿ ಭಕ್ತಿಪ್ರಧಾನ ಕನ್ನಡ ಚಿತ್ರದ ಮರಾಠಿ ಹಾಡನ್ನು ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಿರಿಕಲ್‌ ವಿಡಿಯೋ ಬಿಡುಗಡೆಗೊಳಿಸಿ, ವೀಕ್ಷಿಸಿದ ಗೋವಾ ಸಿಎಂ ಚಿತ್ರತಂಡಕ್ಕೆ ಶುಭಹಾರೈಸಿದರು. ಸದ್ಗುರು ಪ್ರಭುಜೀ ಮಹಾರಾಜರು, ಸುದರ್ಶನ ಮಹಾರಾಜ ಕಡಕಿ ಪಂಡರಪುರ, ಪ್ರಕಾಶ ಕಾಲತಿಪ್ಪಿ, ಮಲ್ಲಿಕಾರ್ಜುನ ಕಾಲತಿಪ್ಪಿ ಸೇರಿದಂತೆ ಸಾಧು ಸತ್ಪುರುಷರು ಗಣ್ಯರು ಉಪಸ್ಥಿತರಿದ್ದರು.

ಇದು ಕನ್ನಡದ ಚಿತ್ರವಾದರೂ ಕಥೆಯಲ್ಲಿ ಮರಾಠಿ ಕಾಕಡಾರತಿಯ ಸೊಗಡಿದೆ. ಹಾಗಾಗಿ ಪಂಡರಪುರದ ಮಹಾರಾಜರು, ಗೋವಾ ಮುಖ್ಯಮಂತ್ರಿಗಳಿಂದ ಹಾಡನ್ನು ಬಿಡುಗಡೆಗೊಳಿಸಿದೆ ಚಿತ್ರತಂಡ. ಅದರಂತೆ ಗೋವಾ ಸಿಎಂ ಪ್ರಮೋದ್‌ ಸಾವಂತ್‌, ಹರಿಭಕ್ತರಾದ್ದರಿಂದ ತಮ್ಮ ನಿವಾಸದಲ್ಲೇ ಹಾಡನ್ನು ಬಿಡುಗಡೆ ಮಾಡಿದರು. ಎರಡು ವರ್ಷದ ಹಿಂದೆ ಸದ್ಗುರು ಸಂಗಮೇಶ್ವರ ಮಠಕ್ಕೆ, ಅಂದರೆ ಕರ್ನಾಟಕದ ಹಿಪ್ಪರಗಿ ಕ್ಷೇತ್ರಕ್ಕೂ ಭೇಟಿನೀಡಿ ಆಶೀರ್ವಾದ ಪಡೆದಿದ್ದರು.

ಸಂಗಮೇಶ್ವರರ ಪಾತ್ರದಲ್ಲಿ ರವಿ ನಾರಾಯಣ್

ಹೊಸ ಪ್ರತಿಭೆ ರವಿ ನಾರಾಯಣ್ ಶ್ರೀಸಂಗಮೇಶ್ವರರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ವಿಶ್ವಪ್ರಕಾಶ್ ಟಿ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ (ವಿ ರವಿ) ನಿರ್ದೇಶನ, ಸಿ ನಾರಾಯಣ್ ಛಾಯಾಗ್ರಹಣ, ಎ.ಟಿ. ರವೀಶ್ ಸಂಗೀತ, ಡಿ. ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.

Whats_app_banner