Adhipatra: ‘ಅಧಿಪತ್ರ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಬಿಗ್‌ ಬಾಸ್‌ ಕನ್ನಡ 9ರ ವಿಜೇತ ರೂಪೇಶ್‌ ಶೆಟ್ಟಿ
ಕನ್ನಡ ಸುದ್ದಿ  /  ಮನರಂಜನೆ  /  Adhipatra: ‘ಅಧಿಪತ್ರ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಬಿಗ್‌ ಬಾಸ್‌ ಕನ್ನಡ 9ರ ವಿಜೇತ ರೂಪೇಶ್‌ ಶೆಟ್ಟಿ

Adhipatra: ‘ಅಧಿಪತ್ರ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಬಿಗ್‌ ಬಾಸ್‌ ಕನ್ನಡ 9ರ ವಿಜೇತ ರೂಪೇಶ್‌ ಶೆಟ್ಟಿ

ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರ ವಿಜೇತ ರೂಪೇಶ್‌ ಶೆಟ್ಟಿ, ಈ ವಾರ ಅಧಿಪತ್ರ ಸಿನಿಮಾ ಮೂಲಕ ಚಿತ್ರಮಂದಿರಗಳಿಗೆ ಆಗಮಿಸುತ್ತಿದ್ದಾರೆ. ನಿರೂಪಕಿ ಜಾಹ್ನವಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

‘ಅಧಿಪತ್ರ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಬಿಗ್‌ ಬಾಸ್‌ ವಿಜೇತ ರೂಪೇಶ್‌ ಶೆಟ್ಟಿ,
‘ಅಧಿಪತ್ರ’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗಿಳಿದ ಬಿಗ್‌ ಬಾಸ್‌ ವಿಜೇತ ರೂಪೇಶ್‌ ಶೆಟ್ಟಿ,

Adhipatra: ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರ ವಿಜೇತ ರೂಪೇಶ್‌ ಶೆಟ್ಟಿ, ಸದ್ಯ ಹೊಸ ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದಾರೆ. ಅಧಿಪತ್ರ ಹೆಸರಿನ ಸಿನಿಮಾ ಇನ್ನೇನು ನಾಳೆ (ಫೆ. 7) ಬಿಡುಗಡೆ ಆಗಲಿದೆ. ಕರಾವಳಿ ಭಾಗದ ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯನ್ನು ಆಯ್ದುಕೊಂಡು ಬಂದ ನಿರ್ದೇಶಕ ಚಯನ್ ಶೆಟ್ಟಿ, ಕನ್ನಡ ಸಿನಿಪ್ರೇಮಿಗಳನ್ನು ಅದ್ಯಾವ ರೀತಿಯ ಸೆಳೆಯಲಿದ್ದಾರೆ ಎಂಬುದು ನಾಳೆಗೆ ಗೊತ್ತಾಗಲಿದೆ. ಇತ್ತೀಚೆಗಷ್ಟೇ ಮಾಧ್ಯಮದ ಮುಂದೆ ಬಂದಿದ್ದ ಚಿತ್ರತಂಡ, ಇದೇ ಸಿನಿಮಾ ಬಗ್ಗೆ ಮಾಹಿತಿ ಬಿಚ್ಚಿಟ್ಟಿತು.

ಸಸ್ಪೆನ್ಸ್ ಥ್ರಿಲ್ಲರ್ ಜೊತೆಗೆ ಕರಾವಳಿಯ ಆಟಿ ಕಳೆಂಜ ಕಥೆಗೆ ನಿರ್ದೇಶಕ ಚಯನ್ ಶೆಟ್ಟಿ ದೃಶ್ಯ ರೂಪ ಕೊಟ್ಟಿದ್ದಾರೆ. ಮೊದಲ ಸಿನಿಮಾದಲ್ಲಿಯೇ ಚಯನ್ ಒಂದೊಳ್ಳೆ ಕಥೆಯನ್ನು ಪ್ರೇಕ್ಷಕರ ಮುಂದೆ ಹರವಿಡಲು ಹೊರಟ್ಟಿದ್ದಾರೆ. ಇವರ ವಿಷನ್‌ಗೆ ಕೆ. ಆರ್ ಸಿನಿ ಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮಿ ಗೌಡ ಬಂಡವಾಳ ಹೂಡಿದ್ದಾರೆ. ಬೆಳಕು ಫಿಲಂಸ್ ಅಡಿಯಲ್ಲಿ ಕಾರ್ತಿಕ್ ಶೆಟ್ಟಿ ಮತ್ತು ಸತೀಶ್ ಶೆಟ್ಟಿ, ಶ್ವೇತಾ ರವಿಚಂದ್ರ ಶೆಟ್ಟಿ ಸಹ-ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ಚಿತ್ರದ ಬಗ್ಗೆ ರೂಪೇಶ್‌ ಶೆಟ್ಟಿ ಹೇಳುವುದೇನು?

ಸಿನಿಮಾಗಾಗಿ ನಾವೆಲ್ಲಾ ಪ್ರಯತ್ನ ಹಾಕಿದ್ದೇವೆ. ಜನರ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಈ ಸಿನಿಮಾದ ಭಾಗವಾಗಿರುವುದು ಖುಷಿ ಇದೆ. ಚಯನ್ ಹೇಳಿದ ಕಥೆ ಕೇಳಿ ನಾನು ಅಧಿಪತ್ರ ಸಿನಿಮಾ ಒಪ್ಪಿಕೊಂಡೆ. ತುಂಬಾ ನೀಟಾಗಿ ಚಿತ್ರ ಮಾಡಿದ್ದಾರೆ. ನಾನು ಒಬ್ಬ ಪ್ರೇಕ್ಷಕನಾಗಿ ಸಿನಿಮಾಗಾಗಿ ಕಾಯುತ್ತಿದ್ದೇನೆ. ಇದೊಂದು ಕಂಟೆಂಟ್ ಓರಿಯೆಂಟ್ ಸಿನಿಮಾ. ಅಬ್ಬರ, ಆಕ್ಷನ್, ಬಿಲ್ಡಪ್ ಸಿನಿಮಾವಲ್ಲ. ಈ ಕಥೆ ನಿಮಗೆ ಖಂಡಿತ ಇಷ್ಟವಾಗುತ್ತದೆ ಎಂದರುನ ನಾಯಕ ರೂಪೇಶ್‌ ಶೆಟ್ಟಿ.

ನಿರೂಪಕಿ ಜಾಹ್ನವಿ ವಿಶೇಷ ಪಾತ್ರ

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಜಾಹ್ನವಿ, ಅಧಿಪತ್ರ ಸಿನಿಮಾದ ಟ್ರೇಲರ್‌ಗೆ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. ಈಗಾಗಲೇ 1 ಮಿಲಿಯನ್ ವೀಕ್ಷಣೆ ಕಂಡಿದೆ. ಯಾರೇ ಟ್ರೇಲರ್ ನೋಡಿದ್ರೂ ಅದ್ಭುತ ಮೇಕಿಂಗ್, ಕ್ಯೂರಿಯಾಸಿಟಿ ಇದೆ. ಟ್ವಿಸ್ಟ್ ಅಂಡ್ ಟರ್ನ್ ಇದೆ ಎಂದು ಹೇಳುತ್ತಿದ್ದಾರೆ. ದಿಗ್ಗಜರ ಸಿನಿಮಾದಲ್ಲಿ ನಾನು ನಟಿಸಿರುವುದು ನನಗೆ ಸಿಕ್ಕ ದೊಡ್ಡ ಅವಕಾಶ. ಟ್ರೇಲರ್‌ಗೆ ಸಿಕ್ಕ ರೆಸ್ಪಾನ್ಸ್ ಸಿನಿಮಾಗೂ ಕೊಡಿ ಎಂದರು.

ಫೆ. 7ರಂದು ತೆರೆಗೆ

ಅಧಿಪತ್ರ ಚಿತ್ರದಲ್ಲಿ ರೂಪೇಶ್ ಶೆಟ್ಟಿ, ನಿರೂಪಕಿ ಜಾಹ್ನವಿ ಜೊತೆಯಲ್ಲಿ ಎಂ.ಕೆ.ಮಠ, ಕಾಂತಾರ ಚಿತ್ರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ತಾರಾಬಳಗದಲ್ಲಿದ್ದಾರೆ. ಶ್ರೀಹರಿ ಶ್ರೇಷ್ಠಿ ಸಂಗೀತ, ಶ್ರೀಕಾಂತ್ ಸಂಕಲನ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಟ್ರೇಲರ್ ಮೂಲಕ ಆಮಂತ್ರಣ ಕೊಟ್ಟಿರುವ ಅಧಿಪತ್ರ ಸಿನಿಮಾ ತಂಡ ಫೆಬ್ರವರಿ 7ಕ್ಕೆ ಚಿತ್ರವನ್ನು ತೆರೆಗೆ ತರುತ್ತಿದೆ. ಇತ್ತೀಚೆಗಷ್ಟೇ ಇದೇ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿತ್ತು. ಲಹರಿ ವೇಲು, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ನಿರ್ಮಾಪಕ ಆರ್ ಜೆ ಪ್ರದೀಪ್, ಹೀಗೂ ಉಂಟೆ ಖ್ಯಾತಿಯ ಆರ್. ನಾರಾಯಣಸ್ವಾಮಿ ಸೇರಿ ಹಲವರು ಭಾಗವಹಿಸಿದ್ದರು.

Whats_app_banner