ಕನ್ನಡ ನಟ ಉಪೇಂದ್ರ ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ
ಕನ್ನಡ ಸುದ್ದಿ  /  ಮನರಂಜನೆ  /  ಕನ್ನಡ ನಟ ಉಪೇಂದ್ರ ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಕನ್ನಡ ನಟ ಉಪೇಂದ್ರ ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಕನ್ನಡದ ಖ್ಯಾತ ನಟ ಮತ್ತು ನಿರ್ದೇಶಕ ಅವರಿಗೆ ದಿಢೀರ್‌ ಅನಾರೋಗ್ಯ ಕಾಣಿಸಿಕೊಂಡಿದ್ದು ಉಪೇಂದ್ರ ಅವರು ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಸಿಡಿಟಿ ಹೆಚ್ಚಾದ ಬಳಿಕ ನಟ ಅಸ್ವಸ್ಥರಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಕನ್ನಡ ನಟ ಉಪೇಂದ್ರ ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ
ಕನ್ನಡ ನಟ ಉಪೇಂದ್ರ ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಬೆಂಗಳೂರು: ಕನ್ನಡದ ಖ್ಯಾತ ನಟ ಮತ್ತು ನಿರ್ದೇಶಕ ಅವರಿಗೆ ದಿಢೀರ್‌ ಅನಾರೋಗ್ಯ ಕಾಣಿಸಿಕೊಂಡಿದ್ದು ಉಪೇಂದ್ರ ಅವರು ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಆಸಿಡಿಟಿ ಹೆಚ್ಚಾದ ಬಳಿಕ ನಟ ಅಸ್ವಸ್ಥರಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲವೆಂದು ಮೂಲಗಳು ತಿಳಿಸಿವೆ.

ಮೇ 5ರ ಅಪರಾಹ್ನ ಇವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೊಟ್ಟೆಯುರಿಯಿಂದ ಬಳಲುತ್ತಿದ್ದ ಇವರು ತಕ್ಷಣ ಪ್ರಾಥಮಿಕ ಚಿಕಿತ್ಸೆ ತೆಗೆದುಕೊಂಡಿದ್ದಾರೆ. ಸಾಕಷ್ಟು ಸಮಯವಾದರೂ ನೋವು ಶಮನವಾಗದ ಕಾರಣ ಮನೆಯ ಹತ್ತಿರವಿರುವ ಸ್ಪರ್ಶ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಅಪರಾಹ್ನ 3 ಗಂಟೆಯ ಆಸುಪಾಸಿನಲ್ಲಿ ಇವರು ಆಸ್ಪತ್ರೆಗೆ ದಾಖಲಾಗಿದ್ದರು.

ಸ್ಪರ್ಶ್‌ ಆಸ್ಪತ್ರೆಯ ವೈದ್ಯರು ನಟನನ್ನು ಅಮೂಲಾಗ್ರವಾಗಿ ಪರೀಕ್ಷೆ ನಡೆಸಿದ್ದಾರೆ. ಹೈಪರ್‌ ಅಸಿಡಿಟಿಯಿಂದ ಈ ತೊಂದರೆ ಕಾಣಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊಂಚ ಸಮಯ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಈ ಹಿಂದೆಯೂ ಉಪೇಂದ್ರ ಅವರಿಗೆ ಇದೇ ರೀತಿ ಆಗಿತ್ತು. ಯುಐ ಸಿನಿಮಾದ ಶೂಟಿಂಗ್‌ ಸಮಯದಲ್ಲಿ ಇಂತಹದ್ದೇ ಲಕ್ಷಣ ಕಾಣಿಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದಿದ್ದರು.

ಉಪೇಂದ್ರ ನಟಿಸಿ ನಿರ್ದೇಶಿಸಿರುವ ಯುಐ ಸಿನಿಮಾ ಕಳೆದ ವರ್ಷ ಡಿಸೆಂಬರ್‌ ತಿಂಗಳು ಬಿಡುಗಡೆಯಾಗಿತ್ತು. ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ ಸಿನಿಮಾ ಚಿತ್ರಮಂದಿರಗಳಲ್ಲಿ ಉತ್ತಮವಾಗಿಯೇ ಗಳಿಕೆ ಮಾಡಿತ್ತು. ಈ ಚಿತ್ರದಲ್ಲಿ ಭವಿಷ್ಯದ ಜಗತ್ತು ಹೇಗಿರಲಿದೆ ಎಂದು ತನ್ನದೇ ಶೈಲಿಯಲ್ಲಿ ಹೇಳಿದ್ದರು.

ಉಪೇಂದ್ರ , ಶಿವರಾಜ್‌ ಕುಮಾರ್‌ ಮತ್ತು ರಾಜ್‌ ಬಿ ಶೆಟ್ಟಿ ನಟನೆಯ 45 ಎಂಬ ಸಿನಿಮಾ ಈ ಆಗಸ್ಟ್‌ 15ರಂದು ರಿಲೀಸ್‌ ಆಗಲಿದೆ. ಈ ಸಿನಿಮಾಕ್ಕೆ ಸಂಗೀತ ಮಾಂತ್ರಿಕ ಅರ್ಜುನ್‌ ಜನ್ಯ ಆಕ್ಷನ್‌ ಕಟ್‌ ಹೇಳಿದ್ದಾರೆ.

Praveen Chandra B

TwittereMail
ಪ್ರವೀಣ್ ಚಂದ್ರ ಪುತ್ತೂರು: 'ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ'ದಲ್ಲಿ ಸಹಾಯಕ ಸುದ್ದಿ ಸಂಪಾದಕ. ಒನ್‌ ಇಂಡಿಯಾ, ವಿಜಯ ಕರ್ನಾಟಕದಲ್ಲಿ ಒಟ್ಟು 16 ವರ್ಷಗಳ ಅನುಭವ. ಆನ್‌ಲೈನ್‌ ಪತ್ರಿಕೋದ್ಯಮದಲ್ಲಿ ಎತ್ತರದ ಸಾಧನೆ ಮಾಡುವ ಕನಸು. ಡಿಜಿಟಲ್‌ ಜಗತ್ತಿನಲ್ಲಿ ಹೊಸತನ್ನು ಕಲಿಯುವ ಆಸಕ್ತಿ. ಮನರಂಜನೆ, ಶಿಕ್ಷಣ, ಉದ್ಯೋಗ, ತಂತ್ರಜ್ಞಾನ, ವಾಣಿಜ್ಯ, ಕರ್ನಾಟಕ, ದೇಶ- ವಿದೇಶ, ಸಿನಿಮಾ, ಷೇರುಪೇಟೆ, ಜೀವನಶೈಲಿ... ಹಲವು ವಿಚಾರಗಳ ಬಗ್ಗೆ ತಳಸ್ಪರ್ಶಿಯಾಗಿ ಬರೆಯಬಲ್ಲರು. ಎಸ್‌ಇಒ ತಂತ್ರಗಳನ್ನು ಪತ್ರಿಕೋದ್ಯಮದ ಹದಕ್ಕೆ ಪಳಗಿಸುವ ಸಾಮರ್ಥ್ಯ ರೂಢಿಸಿಕೊಂಡವರು. ಇಮೇಲ್: praveen.chandra@htdigital.in