ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾಕ್ಕೆ ಕೊಪ್ಪಳ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ, ಶರಣ ತತ್ತ್ವಕ್ಕೆ ಮನಸೋತ ಕಾಶ್ಮೀರದ ರಾಜನ ಕಥೆ
ಕನ್ನಡ ಸುದ್ದಿ  /  ಮನರಂಜನೆ  /  ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾಕ್ಕೆ ಕೊಪ್ಪಳ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ, ಶರಣ ತತ್ತ್ವಕ್ಕೆ ಮನಸೋತ ಕಾಶ್ಮೀರದ ರಾಜನ ಕಥೆ

ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾಕ್ಕೆ ಕೊಪ್ಪಳ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ, ಶರಣ ತತ್ತ್ವಕ್ಕೆ ಮನಸೋತ ಕಾಶ್ಮೀರದ ರಾಜನ ಕಥೆ

ಶಿವಶರಣ ಮೋಳಿಗೆ ಮಾರಯ್ಯ ಬದುಕಿನ ಕಥೆ ಸಿನಿಮಾವಾಗುತ್ತಿದೆ. ಕೊಪ್ಪಳದ ಶ್ರೀಗವಿ ಸಿದ್ದೇಶ್ವರ ಮಠದಲ್ಲಿ ಈ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಮಧುಸೂದನ್ ಹವಾಲ್ದಾರ್ ನಿರ್ದೇಶನದಲ್ಲಿ ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾ ಮೂಡಿಬರಲಿದೆ.

ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾಕ್ಕೆ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ
ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾಕ್ಕೆ ಶ್ರೀಗವಿ ಸಿದ್ದೇಶ್ವರ ಮಠದ ಶ್ರೀಗಳಿಂದ ಚಾಲನೆ

ಬೆಂಗಳೂರು: ಹೆಸರಾಂತ ಶಿವಶರಣ ಮೋಳಿಗೆ ಮಾರಯ್ಯ ಬದುಕಿನ ಕಥೆ ಸಿನಿಮಾವಾಗುತ್ತಿದೆ. ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ಕೊಪ್ಪಳದ ಶ್ರೀಗವಿ ಸಿದ್ದೇಶ್ವರ ಮಠದಲ್ಲಿ ಈ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಗವಿ ಸಿದ್ದೇಶ್ವರ ಮಠದ ಶ್ರೀಗಳು ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಆನೆಗುಂದಿ, ಕೊಪ್ಪಳ, ಬಾಗಲಕೋಟೆ ಹಾಗೂ ಹಂಪಿಯ ಆಸುಪಾಸಿನಲ್ಲಿ ನಡೆಯಲಿದೆ.

ಮೋಳಿಗೆ ಮಾರಯ್ಯ ಸಿನಿಮಾ ತಂಡದ ವಿವರ

"ಶ್ರೀ ಜಗನ್ನಾಥದಾಸರು", " ಶ್ರೀಪ್ರಸನ್ನವೆಂಕಟದಾಸರು" ಹಾಗೂ ಇತ್ತೀಚಿಗೆ ತೆರೆಕಂಡ "ದಾಸವರೇಣ್ಯ ಶ್ರೀ ವಿಜಯದಾಸರು" ಸೇರಿದಂತೆ ನಾಡಿನ ಹೆಸರಾಂತ ಹರಿದಾಸರ ಚಿತ್ರಗಳಿಗೆ ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶನ ಮಾಡಿದ್ದಾರೆ. ಇದೀಗ ಶಿವಶರಣ ಮೋಳಿಗೆ ಮಾರಯ್ಯ ಸಿನಿಮಾಕ್ಕೂ ಹವಾಲ್ದಾರ್‌ ನಿರ್ದೇಶನ ನೀಡುತ್ತಿದ್ದಾರೆ. ಮಾತಾಂಬುಜ ಮೂವೀಸ್ ಅರ್ಪಿಸುವ ಹಾಗೂ ಹವಾಲ್ದಾರ್ ಫಿಲಂಸ್ ನ ಮೂಲಕ ಮಧುಸೂದನ್ ಹವಾಲ್ದಾರ್ ಅವರೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಸಂಗೀತ ನಿರ್ದೇಶನ ಕೂಡ ಮಧುಸೂದನ್ ಹವಾಲ್ದಾರ್ ಮಧುಸೂದನ್ ಹವಾಲ್ದಾರ್ ಅವರದ್ದೇ.

ಶಿವಶರಣ ಮೋಳಿಗೆ ಮಾರಯ್ಯರ ಕಥೆ

ಈ ಸಿನಿಮಾವು ಶಿವಶರಣ ಮೋಳಿಗೆ ಮಾರಯ್ಯ ಅವರ ಬದುಕಿನ ಕಥೆ, ಆದರ್ಶಗಳನ್ನು ಜನರ ಮುಂದೆ ಇಡಲಿದೆ. ಶಿವಶರಣ ಮೋಳಿಗೆ ಮಾರಯ್ಯ ಅವರು ಕಾಶ್ಮೀರದ ರಾಜರಾಗಿದ್ದವರು. ಕಾಶ್ಮೀರದ ಈ ರಾಜ ಕಲ್ಯಾಣಕ್ಕೆ ಬರುತ್ತಾರೆ. ಇಲ್ಲಿದ್ದ ಶರಣ ತತ್ವಕ್ಕೆ ಮನಸೋತ್ತು ಶಿವಶರಣರಾಗುತ್ತಾರೆ. ತನ್ನ ರಾಜ್ಯವನ್ನು ಮಗನಿಗೆ ಒಪ್ಪಿಸುತ್ತಾರೆ. ದಿನವೂ ಕಟ್ಟಿಗೆ ಮಾರಿ ಅದರಿಂದ ಬಂದ ಹಣದಿಂದ ದಿನ ದಾಸೋಹ ಮಾಡಿಸುತ್ತ ಇರುತ್ತಾರೆ.

"ಈ ರೀತಿ ಮಹಾಮಹಿಮ ಸಾಧಕರ ಬದುಕಿನ ಚರಿತ್ರೆಯನ್ನು ಸಿನಿಮಾ ರೂಪದಲ್ಲಿ ತೆರೆಗೆ ತರಲು ತುಂಬಾ ಸಂತೋಷವಾಗಿದೆ. ನಾನು ಹಾಗೂ ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇವೆ. ಈ ಹಿಂದ ಕೆಲವು ಚಿತ್ರಗಳಲ್ಲಿ ನಟಿಸರುವ ವಿಷ್ಣುವರ್ಧನ್ ಅವರು ಮೋಳಿಗೆ ಮಾರಯ್ಯ ಅವರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ" ಎಂದು ನಿರ್ದೇಶಕ ಮಧುಸೂದನ್‌ ಮಾಹಿತಿ ನೀಡಿದ್ದಾರೆ.

ಈ ಚಿತ್ರದಲ್ಲಿ ಶರತ್ ಕುಮಾರ್ ದಂಡಿನ್, ಇಂಗಳಗಿ ನಾಗರಾಜ್, ಕೆ‌.ಪುರುಷೋತ್ತಮ ರೆಡ್ಡಿ, ನಿಶ್ಚಿತ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. . ಇದೇ ಸಂದರ್ಭದಲ್ಲಿ ನನ್ನ ನಿರ್ದೇಶನದ "ದಾಸವರೇಣ್ಯ ಶ್ರೀವಿಜಯದಾಸರು" ಚಿತ್ರ ಇಪ್ಪತ್ತೈದು ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಮಧುಸೂದನ್ ಹವಾಲ್ದಾರ್ ಮಾಹಿತಿ ನೀಡಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಅವಧಿ, ಬಿಡುಗಡೆ ಸೇರಿದಂತೆ ಹೆಚ್ಚಿನ ವಿವರ ಸದ್ಯ ಲಭ್ಯವಿಲ್ಲ.

Whats_app_banner