ಕನ್ನಡ ಸುದ್ದಿ  /  Entertainment  /  Sandalwood Stars Kannada Rajyotsava Wishes

Sandalwood stars Rajyotsava wishes: 67ನೇ ಕನ್ನಡ ರಾಜ್ಯೋತ್ಸವಕ್ಕೆ ಯಾರೆಲ್ಲಾ ಸ್ಟಾರ್‌ಗಳು ಶುಭ ಕೋರಿದ್ದಾರೆ ನೋಡಿ

ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಯಾಂಡಲ್‌ವುಡ್‌ನ ನಟ-ನಟಿಯರು ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ.

ಸ್ಯಾಂಡಲ್‌ವುಡ್‌ ತಾರೆಯರಿಂದ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆ
ಸ್ಯಾಂಡಲ್‌ವುಡ್‌ ತಾರೆಯರಿಂದ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆ

ಇಂದು ರಾಜ್ಯಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. ರಾಜ್ಯದ ಪ್ರತಿ ಊರು, ತಾಲೂಕು, ಜಿಲ್ಲೆಗಳ ಕಚೇರಿ, ಶಾಲೆ, ಕಾಲೇಜು ಸೇರಿದಂತೆ ಎಲ್ಲೆಡೆ ವಿವಿಧ ಕಾರ್ಯಕ್ರಮಗಳ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮಿಸಲಾಗುತ್ತಿದೆ.

ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಒಂದೆಡೆಯಾದರೆ ಸಿನಿಪ್ರಿಯರಿಗೆ ಅಪ್ಪು ಉತ್ಸವದ ಖುಷಿ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಎದುರು ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ತಮಿಳು ಸೂಪರ್‌ ಸ್ಟಾರ್‌ ರಜನಿಕಾಂತ್‌, ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿ, ಖ್ಯಾತ ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್‌ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಸಂಜೆಯ ಕಾರ್ಯಕ್ರಮವನ್ನು ನೋಡಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಯಾಂಡಲ್‌ವುಡ್‌ನ ತಾರೆಯರು ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ.

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್‌ ಟ್ವೀಟ್‌ ಮಾಡಿ, ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ.

ಕಿಚ್ಚ ಸುದೀಪ್‌ ಕನ್ನಡ ಬಾವುಟದೊಂದಿಗೆ "ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ" ಎಂದು ಟ್ವೀಟ್‌ ಮಾಡಿದ್ದಾರೆ.

'ಬೃಂದಾವನ' ಚಿತ್ರದ ನಾನು ಕನ್ನಡಿಗ…ಹಾಡಿನಲ್ಲಿ ಕನ್ನಡದ ಬಾವುಟ ಹಿಡಿದಿರುವ ಫೋಟೋ ಹಂಚಿಕೊಂಡಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್, ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಹಾರೈಸಿದ್ದಾರೆ. ಜೊತೆ 'ಕ್ರಾಂತಿ' ಚಿತ್ರದ ಅಪ್‌ಡೇಟ್‌ ನೀಡಿದ್ದಾರೆ.

ರಾಷ್ಟ್ರಕವಿ ಕುವೆಂಪು ವಿರಚಿತ ಎಲ್ಲಾದರೂ ಇರು..ಹಾಡಿನ ಸಾಲುಗಳ ಮೂಲಕ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌, ಕನ್ನಡ ಮನಸ್ಸುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ರಿಯಲ್‌ ಸ್ಟಾರ್‌ ಉಪೇಂದ್ರ, ಕನ್ನಡಿಗರಿಗೆ ರಾಜ್ಯೋತ್ಸವದ ವಿಶ್‌ ಮಾಡಿದ್ದಾರೆ.

ತಮ್ಮ ಹೊಸ ಸಿನಿಮಾ KD ಚಿತ್ರದ ಪೋಸ್ಟರ್‌ನೊಂದಿಗೆ ನಿರ್ದೇಶಕ ಪ್ರೇಮ್‌, ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ.

IPL_Entry_Point